Homeಮುಖಪುಟರೂ. 32,400 ಕೋಟಿ ಜಿಎಸ್‌ಟಿ ವಂಚನೆ ಆರೋಪ : ಇನ್ಫೋಸಿಸ್‌ಗೆ ಐಟಿ ಇಲಾಖೆ ನೋಟಿಸ್

ರೂ. 32,400 ಕೋಟಿ ಜಿಎಸ್‌ಟಿ ವಂಚನೆ ಆರೋಪ : ಇನ್ಫೋಸಿಸ್‌ಗೆ ಐಟಿ ಇಲಾಖೆ ನೋಟಿಸ್

- Advertisement -
- Advertisement -

ಟೆಕ್ ದೈತ್ಯ ಇನ್ಫೋಸಿಸ್ ಲಿಮಿಟೆಡ್ 32,000 ಕೋಟಿ ರೂಪಾಯಿಗೂ ಹೆಚ್ಚು ಸಮಗ್ರ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಂಚನೆ ಆರೋಪದ ಮೇಲೆ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ)ದಿಂದ ಶೋಕಾಸ್ ನೋಟಿಸ್ ಪಡೆದಿದೆ ಎಂದು ವರದಿಯಾಗಿದೆ.

ಆಪಾದಿತ ವಂಚನೆಯು ಜುಲೈ 2017 ರಿಂದ ಮಾರ್ಚ್ 2022ರ ನಡುವಿನ ಸೇವೆಗಳ ಆಮದಿನ ಮೇಲೆ ಐಜಿಎಸ್‌ಟಿ ಪಾವತಿಸದಿರುವುದಕ್ಕೆ ಸಂಬಂಧಿಸಿದೆ ಎಂದು ವರದಿಗಳು ಹೇಳಿವೆ.

“ಕಂಪನಿಯು ತನ್ನ ಸಾಗರೋತ್ತರ ಶಾಖೆಗಳಿಂದ ಸೇವೆಗಳನ್ನು ಆಮದು ಮಾಡಿಕೊಂಡಿದೆ, ಆದರೆ ಅದರ ಮೇಲೆ ಐಜಿಎಸ್‌ಟಿ ಪಾವತಿಸಿಲ್ಲ” ಎಂದು ತಿಳಿದು ಬಂದಿದೆ.

ಶೋಕಾಸ್‌ ನೋಟಿಸ್‌ ಕುರಿತು ಪ್ರತಿಕ್ರಿಯಿಸಿರುವ ಇನ್ಫೋಸಿಸ್‌, “ಕಂಪನಿಯು 32,403 ಕೋಟಿ ರೂ. ಜಿಎಸ್‌ಟಿ ಪಾವತಿಗೆ ಸಂಬಂಧಿಸಿದಂತೆ ಜಿಎಸ್‌ಟಿ ಇಂಟೆಲಿಜೆನ್ಸ್ ಮಹಾನಿರ್ದೇಶಕರಿಂದ ಪೂರ್ವ ಶೋಕಾಸ್ ನೋಟಿಸ್ ಅನ್ನು ಸ್ವೀಕರಿಸಿದೆ. ಕಂಪನಿಯು ಅದಕ್ಕೆ ಪ್ರತಿಕ್ರಿಯಿಸುವ ಪ್ರಕ್ರಿಯೆಯಲ್ಲಿದೆ” ಎಂದು ಹೇಳಿದೆ.

ಜಿಎಸ್‌ಟಿ ಕೌನ್ಸಿಲ್‌ನ ಶಿಫಾರಸುಗಳ ಮೇಲೆ ಕೇಂದ್ರೀಯ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ (ಸಿಬಿಐಸಿ) ಮಂಡಳಿಯು ಹೊರಡಿಸಿದ ಜೂನ್ 26, 2024ರ ಸುತ್ತೋಲೆಯ ಪ್ರಕಾರ, ಭಾರತೀಯ ಘಟಕಕ್ಕೆ ಸಾಗರೋತ್ತರ ಶಾಖೆಗಳು ಒದಗಿಸುವ ಸೇವೆಗಳು ಜಿಎಸ್‌ಟಿಗೆ ಒಳಪಡುವುದಿಲ್ಲ ಎಂದು ಇನ್ಫೋಸಿಸ್ ಪ್ರತಿಪಾದಿಸಿದೆ.

“ಜಿಎಸ್‌ಟಿ ಪಾವತಿಗಳು ಐಟಿ ಸೇವೆಗಳ ರಫ್ತಿನ ವಿರುದ್ಧ ಕ್ರೆಡಿಟ್ ಅಥವಾ ಮರುಪಾವತಿಗೆ ಅರ್ಹವಾಗಿವೆ ಎಂಬುದನ್ನು ಗಮನಿಸುವುದು ಮುಖ್ಯವಾಗಿದೆ. ಇನ್ಫೋಸಿಸ್ ತನ್ನ ಎಲ್ಲಾ ಜಿಎಸ್‌ಟಿ ಬಾಕಿಗಳನ್ನು ಪಾವತಿಸಿದೆ ಮತ್ತು ಈ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ನಿಯಮಗಳಿಗೆ ಸಂಪೂರ್ಣವಾಗಿ ಅನುಸಾರವಾಗಿದೆ” ಎಂದು ಕಂಪನಿ ಹೇಳಿದೆ.

ಗಮನಾರ್ಹ ಸಂಗತಿ ಎಂದರೆ, ಜಿಎಸ್‌ಟಿ ನೆಟ್‌ವರ್ಕ್ (ಜಿಎಸ್‌ಟಿಎನ್‌) ಅನ್ನು ಇನ್ಫೋಸಿಸ್ ಕಂಪನಿಯೇ ನಿರ್ವಹಿಸುತ್ತಿದೆ. ಈ ಹಣಕಾಸು ವರ್ಷದಲ್ಲಿ ಪರೋಕ್ಷ ತೆರಿಗೆ ಇಲಾಖೆಯೊಂದಿಗೆ ಇನ್ಫೋಸಿಸ್‌ನ ಕಿತ್ತಾಟಕ್ಕಿಳಿದಿರುವುದು ಇದು ಎರಡನೇ ಬಾರಿಯಾಗಿದೆ. ಏಪ್ರಿಲ್‌ನಲ್ಲಿ, ಒಡಿಶಾ ಜಿಎಸ್‌ಟಿ ಪ್ರಾಧಿಕಾರವು 2018-19ರ ಅನರ್ಹ ಇನ್‌ಪುಟ್ ಟ್ಯಾಕ್ಸ್ ಕ್ರೆಡಿಟ್ ಪಡೆಯಲು ಕಂಪನಿಗೆ 1.46 ಲಕ್ಷ ರೂಪಾಯಿ ದಂಡ ವಿಧಿಸಿತ್ತು.

ಇದನ್ನೂ ಓದಿ : ‘ಹೊರಗಡೆ ಪೇಪರ್ ಲೀಕ್, ಒಳಗಡೆ ವಾಟರ್ ಲೀಕ್’ : ಹೊಸ ಸಂಸತ್‌ ಭವನದಲ್ಲಿ ಸೋರಿಕೆಗೆ ಕಾಂಗ್ರೆಸ್ ಲೇವಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...