Homeಕರ್ನಾಟಕಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

ಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

- Advertisement -
- Advertisement -

|ತುಂಟ |

ಅದು ಕಂಠೀರವ ಸ್ಟೂಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿ. ರಾತ್ರಿ ಹನ್ನೆರಡೂವರೆ ಒಂದು ಗಂಟೆ ಸಮಯವಿರಬಹುದು. ಬಿಳಿ ಪಂಚೆ, ಬಿಳಿ ಶರ್ಟು ಹಾಕಿದ, ತಲೆಗೆ ಮಫ್ಲರಿನಂತೆ ಟವೆಲ್ ಸುತ್ತಿಕೊಂಡ  ವಯಸ್ಸಾದ ಹಿರಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಸಮಾಧಿ ಮುಂದೆ ನಿಂತು ಸಣ್ಣಗೆ ಕಣ್ಣೀರು ಮಿಡಿಯುತ್ತಿದ್ದರು. ಕುತೂಹಲಗೊಂಡು ಹತ್ತಿರ ಹೋಗಿ ನೋಡಿದೆ. ಏನಾಶ್ಚರ್ಯ, ಅದು ನಮ್ಮ ಮಾಜಿ ಪ್ರಧಾನಿ ದೇವೇಗೌಡರು!

ಆ ಭಾವನಾತ್ಮಕ ವಾತಾವರಣ ಕದಡಲು ಇಷ್ಟವಾಗಲಿಲ್ಲ. ಸದ್ದು ಮಾಡದೆ, ದೇವೇಗೌಡರ ಪಕ್ಕಕ್ಕೆ ಹೋಗಿ ನಿಂತೆ. ನನ್ನತ್ತ ತಿರುಗಿ ನೋಡಿದ ಗೌಡರ ಕಣ್ಣುಗಳಲ್ಲಿ ಆ ಕ್ಷಣಕ್ಕೆ ಕಿಂಚಿತ್ತೂ ಕಪಟತೆ ಇರಲಿಲ್ಲ. ಮತ್ತೆ ಸಮಾಧಿಯತ್ತ ತಿರುಗಿದ ಅವರು ಅಂಬಿ ಸಮಾಧಿ ಜೊತೆ ಮಾತು ಮುಂದುವರೆಸಿದರು,

“ಅಂಬಿ, ನೀನು ನನ್ನ ಪಕ್ಷದಲ್ಲಿ ಇರಲಿ, ಇಲ್ಲದಿರಲಿ ಯಾವತ್ತೂ ನೀನು ನನ್ನ ಹುಡುಗನಾಗಿದ್ದೆ. ಅದೇ ಒರಟು ಭಾಷೆಯ, ಬೆಣ್ಣೆ ಹೃದಯದ ಹುಡುಗ. ನೀನು ಇಷ್ಟು ಬೇಗ ನಮ್ಮನ್ನೆಲ್ಲ ಅಗಲಿ ಹೋಗುತ್ತೀಯ ಅಂದುಕೊಂಡಿರಲಿಲ್ಲ. ನನ್ನ ಕಣ್ಣಮುಂದೆ ಆಡಿ ಬೆಳೆದ, ಸಿನಿಮಾ ಮಾಡಿದ ಹುಡುಗ ಕೊನೆಗೆ ನನ್ನ ಕಣ್ಣ ಮುಂದೆಯೇ ಅಗಲಿಹೋದದ್ದನ್ನು ನೆನೆಸಿಕೊಂಡರೆ ದುಃಖ ಉಕ್ಕಿ ಬರುತ್ತೆ. ನಿನ್ನ ಇಪ್ಪತ್ತೆರಡನೇ ವಯಸ್ಸಲ್ಲಿ ಮೊದಲ ಸಿನಿಮಾ ಮಾಡುವ ಹುಮ್ಮಸ್ಸಿನಲ್ಲಿ ನೀನಿದ್ದಾಗ ನಾನಾಗಲೇ ಎಂಎಲ್ಎ ಆಗಿ ಹತ್ತು ವರ್ಷ ಕಳೆದಿದ್ದೆ. ನನಗಿನ್ನೂ ಚೆನ್ನಾಗಿ ನೆನಪಿದೆ, ನಿನ್ನ ನಾಗರಹಾವು ಸಿನಿಮಾ ರಿಲೀಸ್ ಆದಾಗ ಅದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ನಾನು ಸಿನಿಮಾ ನೋಡಿ, ಈ ನಮ್ಮ ಮಂಡ್ಯದ  ಹುಡುಗ ಮುಂದೊಂದು ದಿನ ದೊಡ್ಡ ಸ್ಟಾರ್ ಆಗಿ ಬೆಳೆಯುತ್ತಾನೆ ನೋಡ್ತಾ ಇರಿ ಎಂದು ಎಲ್ಲರೆದುರು ಹೆಮ್ಮೆಯಿಂದ ಹೇಳಿಕೊಂಡು ತಿರುಗಾಡಿದ್ದೆ. ನನ್ನ ಮಾತು ಸುಳ್ಳಾಗಲಿಲ್ಲ. ನೀನು ನಿಜಕ್ಕೂ ಕರ್ಣನಂತವನು ಕಣಪ್ಪಾ…”

ಕ್ಷಣಕಾಲ ಮೌನಕ್ಕೆ ಶರಣಾದ ಗೌಡರು, ಮತ್ತೆ ನನ್ನತ್ತ ತಿರುಗಿ ನೋಡಿದರು. ಕಣ್ಣೀರಿನ ಪ್ರಮಾಣ ಕೊಂಚ ತಗ್ಗಿದಂತೆ ಕಾಣಿಸಿತು. ಬಹುಶಃ ಹೊರಟುಹೋಗುತ್ತಾರೇನೊ ಅಂತ ಭಾವಿಸಿದೆ. ಆದರೆ, ಮತ್ತೆ ಸಮಾಧಿಯತ್ತ ತಿರುಗಿದರು. ಈ ಮೊದಲು ಮೆದುವಾಗಿದ್ದ ಅವರ ದನಿಯಿಂದ ತುಸು ಬಿಗಿಯಾದ ಮಾತುಗಳು ತೇಲಿಬಂದವು. “ಈ ಸಲ ನೀನು ಮತ್ತೆ ಕಾಂಗ್ರೆಸ್ ಮೇಲೆ ಮುನಿಸಿಕೊಂಡೆ. ನನ್ನ ಹುಡುಗನ ಗುಣ ಎಂತದ್ದು ಅಂತ ಗೊತ್ತಿದ್ದರಿಂದ ನಾನು ಮತ್ತೆ ನಿನ್ನನ್ನು ಹತ್ತಿರಕ್ಕೆ ಸೆಳೆದುಕೊಂಡೆ. ಅದಕ್ಕೇ ಅಲ್ಲವೇ, ಕಾಂಗ್ರೆಸ್ ಮೇಲೆ ಬೇಸರಿಸಿಕೊಂಡ ನಿನ್ನನ್ನು ನಾನೇ ಸಂತೈಸಿ ನಮ್ಮ ಬೀಗ ತಮ್ಮಣ್ಣನ ಕಾರಿನಲ್ಲಿ ಮತದಾನ ಮಾಡಲು ಕಳಿಸಿದ್ದು. ನನ್ನ ಲೆಕ್ಕಾಚಾರ ಸರಿ ಇದ್ದಿದ್ದರೆ, ನಿನ್ನನ್ನ ಈ ಸಲ ಮಂಡ್ಯದ ಪಾರ್ಲಿಮೆಂಟ್ ಚುನಾವಣೆಗೆ ನನ್ನ ಪಾರ್ಟಿಯಿಂದ ನಿಲ್ಲಿಸೋಣ ಅಂದುಕೊಂಡಿದ್ದೆ. ಆದರೆ ವಿಧಿಯಾಟ, ನೀನೇ ನಮ್ಮನ್ನೆಲ್ಲ ಬಿಟ್ಟು ಹೋದೆ”. ಮತ್ತೆ ದೇವೇಗೌಡರ ಕಣ್ಣುಗಳು ನೀರಾಡಿದವು.

ಟವೆಲ್ಲಿನಿಂದ ಕಣ್ಣೊರೆಸಿಕೊಂಡ ಅವರು ಕ್ಷಣ ತಡೆದು ಇನ್ನಷ್ಟು ನಿಖರವಾಗಿ ಮಾತು ಮುಂದುವರೆಸಿದರು, “ನೀನು ಅಗಲಿದ ನೋವು ನಮ್ಮನ್ನೆಲ್ಲ ತುಂಬಾ ಕಾಡಿತು. ಕುಮಾರಸ್ವಾಮಿಯವರಂತೂ ಹಾರ್ಟ್ ಪೇಶೆಂಟಾಗಿದ್ದ್ರೂ ಒಡಹುಟ್ಟಿದ ಸೋದರನಂತೆ ಮುಂದೆ ನಿಂತು ಅಂತ್ಯಸಂಸ್ಕಾರ ಮಾಡಿದರು. ನನಗಂತೂ ಮೊಮ್ಮಗ ನಿಖಿಲ್ ರವರ ಮುಖದಲ್ಲಿ ನೀನೇ ಎದ್ದು ಬಂದಂತಾಗುತ್ತಿತ್ತು. ಅವರೂ ನಿನ್ನಂತೆಯೇ ಸಿನಿಮಾ ಸ್ಟಾರು. ನಿಖಿಲ್ ರವರನ್ನು ನೋಡಿದಾಗಲೆಲ್ಲ ನಿನ್ನದೇ ನೆನಪಾಗುತ್ತಿತ್ತು. ಅದಕ್ಕೆ ಅವತ್ತೇ ಡಿಸೈಡ್ ಮಾಡಿದೆ, ನೀನು ಪ್ರತಿನಿಧಿಸುತ್ತಿದ್ದ ಮಂಡ್ಯದಲ್ಲೇ ಅವರನ್ನು ಎಲೆಕ್ಷನ್ನಿಗೆ ನಿಲ್ಲಿಸಿ, ಅಂಬಿ ಇಲ್ಲದ ಕೊರಗು ನೀಗಿಕೊಳ್ಳೋಣ ಅಂತ!”.

ದೇವೇಗೌಡರ ಮಾತು ಕೇಳಿ ನನಗೆ ಶಾಕ್ ಆಯ್ತು! ಹಾಗಾದ್ರೆ, ನಿಖಿಲ್ ನನ್ನು ಮಂಡ್ಯದ ಚಕ್ರವ್ಯೂಹದೊಳಕ್ಕೆ ತಳ್ಳಿದ್ದು ಕುಟುಂಬ ರಾಜಕಾರಣದ ವಿಸ್ತರಣೆಯ ಭಾಗವಾಗಿ ಅಲ್ಲ, ಅಂಬಿ ಇಲ್ಲದ ಕೊರಗನ್ನು ನಿಖಿಲ್ ಮೂಲಕ ತುಂಬಲು..!!!! ಅಯ್ಯಯ್ಯೋ ಇಂಥಾ ಪುಣ್ಯಾತ್ಮನನ್ನ ತಪ್ಪಾಗಿ ತಿಳಿದುಬಿಟ್ಟಿದ್ದೆನ್ನಲ್ಲಾ ಅಂತ ವಿಪರೀತ ಸಂಕಟವಾಯ್ತು. ಜೊತೆಗೆ ದೇವೇಗೌಡರ ಮೇಲೆ ಗೌರವವೂ ಹೆಚ್ಚಾಯ್ತು. ಅಷ್ಟರೊಳಗೆ ಮತ್ತೆ ದೇವೇಗೌಡರ ಮಾತುಗಳು ಶುರುವಾಗಿದ್ದವು, “ಆದ್ರೆ ಇದನ್ನು ನನ್ನ ಮಗಳು ಸುಮಲತಾ ಅರ್ಥಾನೆ ಮಾಡಿಕೊಳ್ಳಲಿಲ್ಲ. ಪಾಪಾ, ಆಕೆಯಾದ್ರು ಏನು ಮಾಡುವಳು. ಸುತ್ತವರೆದಿರುವ ಮೀರ್ ಸಾದಿಕ್.ಗಳ ಮಾತು ಕೇಳಿ ಹಾಗೆ ಮಾಡ್ತಿದಾಳೆ. ನನಗಂತೂ ಸುಮಲತಾ ಮೇಲೆ ಸ್ವಲ್ಪವೂ ಬೇಸರವಿಲ್ಲ. ನನ್ನ ಮಕ್ಕಳಾದ ಕುಮಾರಸ್ವಾಮಿಯವರು ಮತ್ತು ರೇವಣ್ಣನವರ ಮೇಲಿಗಿಂತ ಜಾಸ್ತಿ ಪ್ರೀತಿ ಇದೆ. ಆದರೆ ನಿನಗೇ ಗೊತ್ತಲ್ಲವಾ ಈ ಹಾಳಾದ ರಾಜಕಾರಣದಲ್ಲಿ ಅದನ್ನೆಲ್ಲ ತೋರಿಸಿಕೊಳ್ಳಲು ಆಗುತ್ತಿಲ್ಲ. ಒಂದಲ್ಲ ಒಂದು ದಿನ  ಅರ್ಥವಾಗುತ್ತೆ. ಒಂದಂತೂ ಸತ್ಯ, ನನ್ನ ಮಗ ರೇವಣ್ಣನವರು ಅದ್ಯಾವುದೋ ಆತುರದಲ್ಲಿ ಆ ಮಗಳು ಸುಮಲತಾಗೆ ‘ಗಂಡ ಸತ್ತು ಆರು ತಿಂಗಳು ಕಳೆದಿಲ್ಲ, ಅಷ್ಟರಲ್ಲೇ ರಾಜಕೀಯ ಬೇಕಿತ್ತಾ?’ ಅಂತ ಕೇಳಿದ್ದು ನನಗೆ ತುಂಬಾನೇ ದುಃಖ ಉಂಟುಮಾಡಿದೆ. ಅದಕ್ಕೆ ನಾನೇ ಖುದ್ದಾಗಿ ಕಿವಿಹಿಂಡಿ ಬುದ್ದಿ ಹೇಳಿದೆ ನಮ್ಮ ಪಾರ್ಟಿ ಪ್ರೆಸಿಡೆಂಟು ಎಚ್.ವಿಶ್ವನಾಥರದ್ದು, ಕೊನೆಗೆ ಅವರಿಂದಲೇ ರೇವಣ್ಣನವರ ಪರವಾಗಿ ಕ್ಷಮೆಯನ್ನೂ ಕೇಳಿಸಿದ್ದೇನೆ”.

ನನಗೇ ಗೊತ್ತಿಲ್ಲದೆ ಈಗ ನನ್ನ ಕಣ್ಣಾಲಿಗಳಲ್ಲೂ ನೀರು ಜಿನುಗ ತೊಡಗಿದವು. ದೇವೇಗೌಡರ ಮಮಕಾರ ಕಂಡು ಕರಗಿಹೋದೆ.  ದೇವೇಗೌಡರು ಈಗ ಶಪಥಗೈಯ್ಯುವ ದನಿಯಲ್ಲಿ ಹೂಂಕರಿಸಿದರು, “ಇಲ್ಲಾ ಅಂಬಿ, ನಿನಗಿಂತ ನನ್ನ ಮೊಮ್ಮಗನ ಎಲೆಕ್ಷನ್ ದೊಡ್ಡದಲ್ಲ. ಅದಕ್ಕಿಂತಲೂ ಮುಖ್ಯವಾಗಿ, ಎಷ್ಟೇ ಬಾರಿ ಪಕ್ಷಾಂತರ ಮಾಡಿದರು ಕಾಂಗ್ರೆಸ್-ಜನತಾದಳ ನಡುವೆ ಓಡಾಡಿದೆಯೇ ವಿನಾಃ ಆ ಕೋಮುವಾದಿ ಬಿಜೆಪಿಯತ್ತ ತಲೆ ಹಾಕದ ನಿನ್ನ ಸಿದ್ಧಾಂತ ಕಾಯುವುದು ನನ್ನ ಧರ್ಮ ಅನ್ನಿಸುತ್ತಿದೆ. ಇವತ್ತು ಅದೇ ಬಿಜೆಪಿಯವರು ಮಗಳು ಸುಮಲತಾಗೆ ಬೆಂಬಲ ನೀಡುವ ನೆಪದಲ್ಲಿ ತಮ್ಮ ಕೈಗೊಂಬೆ ಮಾಡಲು ಯತ್ನಿಸುತ್ತಿದ್ದಾರೆ. ಅವರ ಆ ಆಸೆ ಈಡೇರಲು ನಾನು ಬಿಡುವುದಿಲ್ಲ. ನಿನ್ನ ಆತ್ಮ ಪರಿತಪಿಸುವುದನ್ನು ನಾನು ನೋಡಲಾರೆ. ಅದಕ್ಕೇ ಇವತ್ತು ರಾಜಾರೋಷವಾಗಿ ಜನರ ಮುಂದೆ ಘೋಷಿಸಿದ್ದೇನೆ ‘ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮುಗಿಸಿಯೇ ನಾನು ಹೋಗೋದು’ ಅಂತ. ಅದರ ಮೊದಲ ಹೆಜ್ಜೆಯನ್ನು ನಿನ್ನ ಪ್ರೀತಿಯ ಮಂಡ್ಯದಿಂದಲೇ ಶುರು ಮಾಡ್ತೀನಿ ಅಂಬಿ. ನನ್ನ ಮೊಮ್ಮಗನ ನಾಮಪತ್ರವನ್ನ ವಾಪಾಸು ಪಡೆದು, ಮಗಳು ಸುಮಲತಾ ಅವಿರೋಧವಾಗಿ ಆಯ್ಕೆ ಆಗುವಂತೆ ಮಾಡುತ್ತೇನೆ. ಕೋಮುವಾದಿ ಬಿಜೆಪಿಗಳಿಗೆ ಇಲ್ಲಿಂದಲೇ ಶಾಕ್ ಟ್ರೀಟ್ ಮೆಂಟ್ ಶುರು ಮಾಡ್ತೀನಿ. ಮಂಡ್ಯದಂತಹ ಹೊಸ ಜಾಗದಲ್ಲಿ ಬಿಜೆಪಿ ಬೇರೂರಲು ಬಿಡುವುದಿಲ್ಲ. ಇದು ನನ್ನ ಶಪಥ!”

ಗೌಡರ ಶಪಥ ಕೇಳಿ ನನ್ನ ಮೈ ರೋಮಗಳೆಲ್ಲ ಎದ್ದು ನಿಂತವು, ಎದೆ ಬಡಿತ ಅಂಕೆಗೇ  ಸಿಗದಷ್ಟು ಡಬಗುಟ್ಟಲು ಶುರುವಾಯ್ತು, ಮೈಯಲ್ಲೆಲ್ಲ ಬೆವರು ಬಸಿಯತೊಡಗಿತು. ಕಣ್ಮುಚ್ಚಿ, ಜೋರಾಗಿ ಉಸಿರು ಒಳಗೆಳೆದುಕೊಂಡು, ದೇವೇಗೌಡರಿಗೆ ಗಟ್ಟಿಯಾಗಿ ಜೈಕಾರ ಕೂಗಲು ಶುರು ಮಾಡಿದೆ.

ಛಟೀರ್…!

ಕೆನ್ನೆಯ ಮೇಲೆ ಏಟೊಂದು ಬಿತ್ತು. ರಾತ್ರಿ ಮಲಗಿದ ಹಾಸಿಗೆಯಲ್ಲೇ ನಾನಿದ್ದೆ. ಪಕ್ಕದಲ್ಲಿ ಹೆಂಡತಿ ಗೊಣಗುತ್ತಾ ಕೂತಿದ್ದಳು “ಹಗಲೆಲ್ಲ ಕೆಲ್ಸ ಮಾಡಿ ಸುಸ್ತಾಗಿ ರಾತ್ರಿ ನೆಮ್ದಿಯಿಂದ ಮಲಗೋಣ ಅಂದ್ರೆ, ದರಿದ್ರ, ನಿಮ್ಮದೊಂದು ಕಾಟ ನಮಿಗೆ. ನಿಮ್ ಜರ್ನಲಿಸ್ಟ್ ಬುದ್ದೀನ ಅಲ್ಲೇ ಆಫೀಸ್ನಲ್ಲಿ ಬಿಟ್ಟು ಬರೋಕೆ ಆಗಲ್ವಾ. ಹೀಗೆ ಕನಸ್ನಲ್ಲೂ ಕನವರಿಸ್ಕೊಂಡು ಯಾಕ್ರೀ ಪ್ರಾಣ ತಿಂತೀರಾ….?”

“ಹ್ಞಾಂ……!!!!”

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...