Homeಕರ್ನಾಟಕಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

ಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

- Advertisement -
- Advertisement -

|ತುಂಟ |

ಅದು ಕಂಠೀರವ ಸ್ಟೂಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿ. ರಾತ್ರಿ ಹನ್ನೆರಡೂವರೆ ಒಂದು ಗಂಟೆ ಸಮಯವಿರಬಹುದು. ಬಿಳಿ ಪಂಚೆ, ಬಿಳಿ ಶರ್ಟು ಹಾಕಿದ, ತಲೆಗೆ ಮಫ್ಲರಿನಂತೆ ಟವೆಲ್ ಸುತ್ತಿಕೊಂಡ  ವಯಸ್ಸಾದ ಹಿರಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಸಮಾಧಿ ಮುಂದೆ ನಿಂತು ಸಣ್ಣಗೆ ಕಣ್ಣೀರು ಮಿಡಿಯುತ್ತಿದ್ದರು. ಕುತೂಹಲಗೊಂಡು ಹತ್ತಿರ ಹೋಗಿ ನೋಡಿದೆ. ಏನಾಶ್ಚರ್ಯ, ಅದು ನಮ್ಮ ಮಾಜಿ ಪ್ರಧಾನಿ ದೇವೇಗೌಡರು!

ಆ ಭಾವನಾತ್ಮಕ ವಾತಾವರಣ ಕದಡಲು ಇಷ್ಟವಾಗಲಿಲ್ಲ. ಸದ್ದು ಮಾಡದೆ, ದೇವೇಗೌಡರ ಪಕ್ಕಕ್ಕೆ ಹೋಗಿ ನಿಂತೆ. ನನ್ನತ್ತ ತಿರುಗಿ ನೋಡಿದ ಗೌಡರ ಕಣ್ಣುಗಳಲ್ಲಿ ಆ ಕ್ಷಣಕ್ಕೆ ಕಿಂಚಿತ್ತೂ ಕಪಟತೆ ಇರಲಿಲ್ಲ. ಮತ್ತೆ ಸಮಾಧಿಯತ್ತ ತಿರುಗಿದ ಅವರು ಅಂಬಿ ಸಮಾಧಿ ಜೊತೆ ಮಾತು ಮುಂದುವರೆಸಿದರು,

“ಅಂಬಿ, ನೀನು ನನ್ನ ಪಕ್ಷದಲ್ಲಿ ಇರಲಿ, ಇಲ್ಲದಿರಲಿ ಯಾವತ್ತೂ ನೀನು ನನ್ನ ಹುಡುಗನಾಗಿದ್ದೆ. ಅದೇ ಒರಟು ಭಾಷೆಯ, ಬೆಣ್ಣೆ ಹೃದಯದ ಹುಡುಗ. ನೀನು ಇಷ್ಟು ಬೇಗ ನಮ್ಮನ್ನೆಲ್ಲ ಅಗಲಿ ಹೋಗುತ್ತೀಯ ಅಂದುಕೊಂಡಿರಲಿಲ್ಲ. ನನ್ನ ಕಣ್ಣಮುಂದೆ ಆಡಿ ಬೆಳೆದ, ಸಿನಿಮಾ ಮಾಡಿದ ಹುಡುಗ ಕೊನೆಗೆ ನನ್ನ ಕಣ್ಣ ಮುಂದೆಯೇ ಅಗಲಿಹೋದದ್ದನ್ನು ನೆನೆಸಿಕೊಂಡರೆ ದುಃಖ ಉಕ್ಕಿ ಬರುತ್ತೆ. ನಿನ್ನ ಇಪ್ಪತ್ತೆರಡನೇ ವಯಸ್ಸಲ್ಲಿ ಮೊದಲ ಸಿನಿಮಾ ಮಾಡುವ ಹುಮ್ಮಸ್ಸಿನಲ್ಲಿ ನೀನಿದ್ದಾಗ ನಾನಾಗಲೇ ಎಂಎಲ್ಎ ಆಗಿ ಹತ್ತು ವರ್ಷ ಕಳೆದಿದ್ದೆ. ನನಗಿನ್ನೂ ಚೆನ್ನಾಗಿ ನೆನಪಿದೆ, ನಿನ್ನ ನಾಗರಹಾವು ಸಿನಿಮಾ ರಿಲೀಸ್ ಆದಾಗ ಅದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ನಾನು ಸಿನಿಮಾ ನೋಡಿ, ಈ ನಮ್ಮ ಮಂಡ್ಯದ  ಹುಡುಗ ಮುಂದೊಂದು ದಿನ ದೊಡ್ಡ ಸ್ಟಾರ್ ಆಗಿ ಬೆಳೆಯುತ್ತಾನೆ ನೋಡ್ತಾ ಇರಿ ಎಂದು ಎಲ್ಲರೆದುರು ಹೆಮ್ಮೆಯಿಂದ ಹೇಳಿಕೊಂಡು ತಿರುಗಾಡಿದ್ದೆ. ನನ್ನ ಮಾತು ಸುಳ್ಳಾಗಲಿಲ್ಲ. ನೀನು ನಿಜಕ್ಕೂ ಕರ್ಣನಂತವನು ಕಣಪ್ಪಾ…”

ಕ್ಷಣಕಾಲ ಮೌನಕ್ಕೆ ಶರಣಾದ ಗೌಡರು, ಮತ್ತೆ ನನ್ನತ್ತ ತಿರುಗಿ ನೋಡಿದರು. ಕಣ್ಣೀರಿನ ಪ್ರಮಾಣ ಕೊಂಚ ತಗ್ಗಿದಂತೆ ಕಾಣಿಸಿತು. ಬಹುಶಃ ಹೊರಟುಹೋಗುತ್ತಾರೇನೊ ಅಂತ ಭಾವಿಸಿದೆ. ಆದರೆ, ಮತ್ತೆ ಸಮಾಧಿಯತ್ತ ತಿರುಗಿದರು. ಈ ಮೊದಲು ಮೆದುವಾಗಿದ್ದ ಅವರ ದನಿಯಿಂದ ತುಸು ಬಿಗಿಯಾದ ಮಾತುಗಳು ತೇಲಿಬಂದವು. “ಈ ಸಲ ನೀನು ಮತ್ತೆ ಕಾಂಗ್ರೆಸ್ ಮೇಲೆ ಮುನಿಸಿಕೊಂಡೆ. ನನ್ನ ಹುಡುಗನ ಗುಣ ಎಂತದ್ದು ಅಂತ ಗೊತ್ತಿದ್ದರಿಂದ ನಾನು ಮತ್ತೆ ನಿನ್ನನ್ನು ಹತ್ತಿರಕ್ಕೆ ಸೆಳೆದುಕೊಂಡೆ. ಅದಕ್ಕೇ ಅಲ್ಲವೇ, ಕಾಂಗ್ರೆಸ್ ಮೇಲೆ ಬೇಸರಿಸಿಕೊಂಡ ನಿನ್ನನ್ನು ನಾನೇ ಸಂತೈಸಿ ನಮ್ಮ ಬೀಗ ತಮ್ಮಣ್ಣನ ಕಾರಿನಲ್ಲಿ ಮತದಾನ ಮಾಡಲು ಕಳಿಸಿದ್ದು. ನನ್ನ ಲೆಕ್ಕಾಚಾರ ಸರಿ ಇದ್ದಿದ್ದರೆ, ನಿನ್ನನ್ನ ಈ ಸಲ ಮಂಡ್ಯದ ಪಾರ್ಲಿಮೆಂಟ್ ಚುನಾವಣೆಗೆ ನನ್ನ ಪಾರ್ಟಿಯಿಂದ ನಿಲ್ಲಿಸೋಣ ಅಂದುಕೊಂಡಿದ್ದೆ. ಆದರೆ ವಿಧಿಯಾಟ, ನೀನೇ ನಮ್ಮನ್ನೆಲ್ಲ ಬಿಟ್ಟು ಹೋದೆ”. ಮತ್ತೆ ದೇವೇಗೌಡರ ಕಣ್ಣುಗಳು ನೀರಾಡಿದವು.

ಟವೆಲ್ಲಿನಿಂದ ಕಣ್ಣೊರೆಸಿಕೊಂಡ ಅವರು ಕ್ಷಣ ತಡೆದು ಇನ್ನಷ್ಟು ನಿಖರವಾಗಿ ಮಾತು ಮುಂದುವರೆಸಿದರು, “ನೀನು ಅಗಲಿದ ನೋವು ನಮ್ಮನ್ನೆಲ್ಲ ತುಂಬಾ ಕಾಡಿತು. ಕುಮಾರಸ್ವಾಮಿಯವರಂತೂ ಹಾರ್ಟ್ ಪೇಶೆಂಟಾಗಿದ್ದ್ರೂ ಒಡಹುಟ್ಟಿದ ಸೋದರನಂತೆ ಮುಂದೆ ನಿಂತು ಅಂತ್ಯಸಂಸ್ಕಾರ ಮಾಡಿದರು. ನನಗಂತೂ ಮೊಮ್ಮಗ ನಿಖಿಲ್ ರವರ ಮುಖದಲ್ಲಿ ನೀನೇ ಎದ್ದು ಬಂದಂತಾಗುತ್ತಿತ್ತು. ಅವರೂ ನಿನ್ನಂತೆಯೇ ಸಿನಿಮಾ ಸ್ಟಾರು. ನಿಖಿಲ್ ರವರನ್ನು ನೋಡಿದಾಗಲೆಲ್ಲ ನಿನ್ನದೇ ನೆನಪಾಗುತ್ತಿತ್ತು. ಅದಕ್ಕೆ ಅವತ್ತೇ ಡಿಸೈಡ್ ಮಾಡಿದೆ, ನೀನು ಪ್ರತಿನಿಧಿಸುತ್ತಿದ್ದ ಮಂಡ್ಯದಲ್ಲೇ ಅವರನ್ನು ಎಲೆಕ್ಷನ್ನಿಗೆ ನಿಲ್ಲಿಸಿ, ಅಂಬಿ ಇಲ್ಲದ ಕೊರಗು ನೀಗಿಕೊಳ್ಳೋಣ ಅಂತ!”.

ದೇವೇಗೌಡರ ಮಾತು ಕೇಳಿ ನನಗೆ ಶಾಕ್ ಆಯ್ತು! ಹಾಗಾದ್ರೆ, ನಿಖಿಲ್ ನನ್ನು ಮಂಡ್ಯದ ಚಕ್ರವ್ಯೂಹದೊಳಕ್ಕೆ ತಳ್ಳಿದ್ದು ಕುಟುಂಬ ರಾಜಕಾರಣದ ವಿಸ್ತರಣೆಯ ಭಾಗವಾಗಿ ಅಲ್ಲ, ಅಂಬಿ ಇಲ್ಲದ ಕೊರಗನ್ನು ನಿಖಿಲ್ ಮೂಲಕ ತುಂಬಲು..!!!! ಅಯ್ಯಯ್ಯೋ ಇಂಥಾ ಪುಣ್ಯಾತ್ಮನನ್ನ ತಪ್ಪಾಗಿ ತಿಳಿದುಬಿಟ್ಟಿದ್ದೆನ್ನಲ್ಲಾ ಅಂತ ವಿಪರೀತ ಸಂಕಟವಾಯ್ತು. ಜೊತೆಗೆ ದೇವೇಗೌಡರ ಮೇಲೆ ಗೌರವವೂ ಹೆಚ್ಚಾಯ್ತು. ಅಷ್ಟರೊಳಗೆ ಮತ್ತೆ ದೇವೇಗೌಡರ ಮಾತುಗಳು ಶುರುವಾಗಿದ್ದವು, “ಆದ್ರೆ ಇದನ್ನು ನನ್ನ ಮಗಳು ಸುಮಲತಾ ಅರ್ಥಾನೆ ಮಾಡಿಕೊಳ್ಳಲಿಲ್ಲ. ಪಾಪಾ, ಆಕೆಯಾದ್ರು ಏನು ಮಾಡುವಳು. ಸುತ್ತವರೆದಿರುವ ಮೀರ್ ಸಾದಿಕ್.ಗಳ ಮಾತು ಕೇಳಿ ಹಾಗೆ ಮಾಡ್ತಿದಾಳೆ. ನನಗಂತೂ ಸುಮಲತಾ ಮೇಲೆ ಸ್ವಲ್ಪವೂ ಬೇಸರವಿಲ್ಲ. ನನ್ನ ಮಕ್ಕಳಾದ ಕುಮಾರಸ್ವಾಮಿಯವರು ಮತ್ತು ರೇವಣ್ಣನವರ ಮೇಲಿಗಿಂತ ಜಾಸ್ತಿ ಪ್ರೀತಿ ಇದೆ. ಆದರೆ ನಿನಗೇ ಗೊತ್ತಲ್ಲವಾ ಈ ಹಾಳಾದ ರಾಜಕಾರಣದಲ್ಲಿ ಅದನ್ನೆಲ್ಲ ತೋರಿಸಿಕೊಳ್ಳಲು ಆಗುತ್ತಿಲ್ಲ. ಒಂದಲ್ಲ ಒಂದು ದಿನ  ಅರ್ಥವಾಗುತ್ತೆ. ಒಂದಂತೂ ಸತ್ಯ, ನನ್ನ ಮಗ ರೇವಣ್ಣನವರು ಅದ್ಯಾವುದೋ ಆತುರದಲ್ಲಿ ಆ ಮಗಳು ಸುಮಲತಾಗೆ ‘ಗಂಡ ಸತ್ತು ಆರು ತಿಂಗಳು ಕಳೆದಿಲ್ಲ, ಅಷ್ಟರಲ್ಲೇ ರಾಜಕೀಯ ಬೇಕಿತ್ತಾ?’ ಅಂತ ಕೇಳಿದ್ದು ನನಗೆ ತುಂಬಾನೇ ದುಃಖ ಉಂಟುಮಾಡಿದೆ. ಅದಕ್ಕೆ ನಾನೇ ಖುದ್ದಾಗಿ ಕಿವಿಹಿಂಡಿ ಬುದ್ದಿ ಹೇಳಿದೆ ನಮ್ಮ ಪಾರ್ಟಿ ಪ್ರೆಸಿಡೆಂಟು ಎಚ್.ವಿಶ್ವನಾಥರದ್ದು, ಕೊನೆಗೆ ಅವರಿಂದಲೇ ರೇವಣ್ಣನವರ ಪರವಾಗಿ ಕ್ಷಮೆಯನ್ನೂ ಕೇಳಿಸಿದ್ದೇನೆ”.

ನನಗೇ ಗೊತ್ತಿಲ್ಲದೆ ಈಗ ನನ್ನ ಕಣ್ಣಾಲಿಗಳಲ್ಲೂ ನೀರು ಜಿನುಗ ತೊಡಗಿದವು. ದೇವೇಗೌಡರ ಮಮಕಾರ ಕಂಡು ಕರಗಿಹೋದೆ.  ದೇವೇಗೌಡರು ಈಗ ಶಪಥಗೈಯ್ಯುವ ದನಿಯಲ್ಲಿ ಹೂಂಕರಿಸಿದರು, “ಇಲ್ಲಾ ಅಂಬಿ, ನಿನಗಿಂತ ನನ್ನ ಮೊಮ್ಮಗನ ಎಲೆಕ್ಷನ್ ದೊಡ್ಡದಲ್ಲ. ಅದಕ್ಕಿಂತಲೂ ಮುಖ್ಯವಾಗಿ, ಎಷ್ಟೇ ಬಾರಿ ಪಕ್ಷಾಂತರ ಮಾಡಿದರು ಕಾಂಗ್ರೆಸ್-ಜನತಾದಳ ನಡುವೆ ಓಡಾಡಿದೆಯೇ ವಿನಾಃ ಆ ಕೋಮುವಾದಿ ಬಿಜೆಪಿಯತ್ತ ತಲೆ ಹಾಕದ ನಿನ್ನ ಸಿದ್ಧಾಂತ ಕಾಯುವುದು ನನ್ನ ಧರ್ಮ ಅನ್ನಿಸುತ್ತಿದೆ. ಇವತ್ತು ಅದೇ ಬಿಜೆಪಿಯವರು ಮಗಳು ಸುಮಲತಾಗೆ ಬೆಂಬಲ ನೀಡುವ ನೆಪದಲ್ಲಿ ತಮ್ಮ ಕೈಗೊಂಬೆ ಮಾಡಲು ಯತ್ನಿಸುತ್ತಿದ್ದಾರೆ. ಅವರ ಆ ಆಸೆ ಈಡೇರಲು ನಾನು ಬಿಡುವುದಿಲ್ಲ. ನಿನ್ನ ಆತ್ಮ ಪರಿತಪಿಸುವುದನ್ನು ನಾನು ನೋಡಲಾರೆ. ಅದಕ್ಕೇ ಇವತ್ತು ರಾಜಾರೋಷವಾಗಿ ಜನರ ಮುಂದೆ ಘೋಷಿಸಿದ್ದೇನೆ ‘ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮುಗಿಸಿಯೇ ನಾನು ಹೋಗೋದು’ ಅಂತ. ಅದರ ಮೊದಲ ಹೆಜ್ಜೆಯನ್ನು ನಿನ್ನ ಪ್ರೀತಿಯ ಮಂಡ್ಯದಿಂದಲೇ ಶುರು ಮಾಡ್ತೀನಿ ಅಂಬಿ. ನನ್ನ ಮೊಮ್ಮಗನ ನಾಮಪತ್ರವನ್ನ ವಾಪಾಸು ಪಡೆದು, ಮಗಳು ಸುಮಲತಾ ಅವಿರೋಧವಾಗಿ ಆಯ್ಕೆ ಆಗುವಂತೆ ಮಾಡುತ್ತೇನೆ. ಕೋಮುವಾದಿ ಬಿಜೆಪಿಗಳಿಗೆ ಇಲ್ಲಿಂದಲೇ ಶಾಕ್ ಟ್ರೀಟ್ ಮೆಂಟ್ ಶುರು ಮಾಡ್ತೀನಿ. ಮಂಡ್ಯದಂತಹ ಹೊಸ ಜಾಗದಲ್ಲಿ ಬಿಜೆಪಿ ಬೇರೂರಲು ಬಿಡುವುದಿಲ್ಲ. ಇದು ನನ್ನ ಶಪಥ!”

ಗೌಡರ ಶಪಥ ಕೇಳಿ ನನ್ನ ಮೈ ರೋಮಗಳೆಲ್ಲ ಎದ್ದು ನಿಂತವು, ಎದೆ ಬಡಿತ ಅಂಕೆಗೇ  ಸಿಗದಷ್ಟು ಡಬಗುಟ್ಟಲು ಶುರುವಾಯ್ತು, ಮೈಯಲ್ಲೆಲ್ಲ ಬೆವರು ಬಸಿಯತೊಡಗಿತು. ಕಣ್ಮುಚ್ಚಿ, ಜೋರಾಗಿ ಉಸಿರು ಒಳಗೆಳೆದುಕೊಂಡು, ದೇವೇಗೌಡರಿಗೆ ಗಟ್ಟಿಯಾಗಿ ಜೈಕಾರ ಕೂಗಲು ಶುರು ಮಾಡಿದೆ.

ಛಟೀರ್…!

ಕೆನ್ನೆಯ ಮೇಲೆ ಏಟೊಂದು ಬಿತ್ತು. ರಾತ್ರಿ ಮಲಗಿದ ಹಾಸಿಗೆಯಲ್ಲೇ ನಾನಿದ್ದೆ. ಪಕ್ಕದಲ್ಲಿ ಹೆಂಡತಿ ಗೊಣಗುತ್ತಾ ಕೂತಿದ್ದಳು “ಹಗಲೆಲ್ಲ ಕೆಲ್ಸ ಮಾಡಿ ಸುಸ್ತಾಗಿ ರಾತ್ರಿ ನೆಮ್ದಿಯಿಂದ ಮಲಗೋಣ ಅಂದ್ರೆ, ದರಿದ್ರ, ನಿಮ್ಮದೊಂದು ಕಾಟ ನಮಿಗೆ. ನಿಮ್ ಜರ್ನಲಿಸ್ಟ್ ಬುದ್ದೀನ ಅಲ್ಲೇ ಆಫೀಸ್ನಲ್ಲಿ ಬಿಟ್ಟು ಬರೋಕೆ ಆಗಲ್ವಾ. ಹೀಗೆ ಕನಸ್ನಲ್ಲೂ ಕನವರಿಸ್ಕೊಂಡು ಯಾಕ್ರೀ ಪ್ರಾಣ ತಿಂತೀರಾ….?”

“ಹ್ಞಾಂ……!!!!”

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...