Homeಕರ್ನಾಟಕಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

ಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

- Advertisement -
- Advertisement -

|ತುಂಟ |

ಅದು ಕಂಠೀರವ ಸ್ಟೂಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿ. ರಾತ್ರಿ ಹನ್ನೆರಡೂವರೆ ಒಂದು ಗಂಟೆ ಸಮಯವಿರಬಹುದು. ಬಿಳಿ ಪಂಚೆ, ಬಿಳಿ ಶರ್ಟು ಹಾಕಿದ, ತಲೆಗೆ ಮಫ್ಲರಿನಂತೆ ಟವೆಲ್ ಸುತ್ತಿಕೊಂಡ  ವಯಸ್ಸಾದ ಹಿರಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಸಮಾಧಿ ಮುಂದೆ ನಿಂತು ಸಣ್ಣಗೆ ಕಣ್ಣೀರು ಮಿಡಿಯುತ್ತಿದ್ದರು. ಕುತೂಹಲಗೊಂಡು ಹತ್ತಿರ ಹೋಗಿ ನೋಡಿದೆ. ಏನಾಶ್ಚರ್ಯ, ಅದು ನಮ್ಮ ಮಾಜಿ ಪ್ರಧಾನಿ ದೇವೇಗೌಡರು!

ಆ ಭಾವನಾತ್ಮಕ ವಾತಾವರಣ ಕದಡಲು ಇಷ್ಟವಾಗಲಿಲ್ಲ. ಸದ್ದು ಮಾಡದೆ, ದೇವೇಗೌಡರ ಪಕ್ಕಕ್ಕೆ ಹೋಗಿ ನಿಂತೆ. ನನ್ನತ್ತ ತಿರುಗಿ ನೋಡಿದ ಗೌಡರ ಕಣ್ಣುಗಳಲ್ಲಿ ಆ ಕ್ಷಣಕ್ಕೆ ಕಿಂಚಿತ್ತೂ ಕಪಟತೆ ಇರಲಿಲ್ಲ. ಮತ್ತೆ ಸಮಾಧಿಯತ್ತ ತಿರುಗಿದ ಅವರು ಅಂಬಿ ಸಮಾಧಿ ಜೊತೆ ಮಾತು ಮುಂದುವರೆಸಿದರು,

“ಅಂಬಿ, ನೀನು ನನ್ನ ಪಕ್ಷದಲ್ಲಿ ಇರಲಿ, ಇಲ್ಲದಿರಲಿ ಯಾವತ್ತೂ ನೀನು ನನ್ನ ಹುಡುಗನಾಗಿದ್ದೆ. ಅದೇ ಒರಟು ಭಾಷೆಯ, ಬೆಣ್ಣೆ ಹೃದಯದ ಹುಡುಗ. ನೀನು ಇಷ್ಟು ಬೇಗ ನಮ್ಮನ್ನೆಲ್ಲ ಅಗಲಿ ಹೋಗುತ್ತೀಯ ಅಂದುಕೊಂಡಿರಲಿಲ್ಲ. ನನ್ನ ಕಣ್ಣಮುಂದೆ ಆಡಿ ಬೆಳೆದ, ಸಿನಿಮಾ ಮಾಡಿದ ಹುಡುಗ ಕೊನೆಗೆ ನನ್ನ ಕಣ್ಣ ಮುಂದೆಯೇ ಅಗಲಿಹೋದದ್ದನ್ನು ನೆನೆಸಿಕೊಂಡರೆ ದುಃಖ ಉಕ್ಕಿ ಬರುತ್ತೆ. ನಿನ್ನ ಇಪ್ಪತ್ತೆರಡನೇ ವಯಸ್ಸಲ್ಲಿ ಮೊದಲ ಸಿನಿಮಾ ಮಾಡುವ ಹುಮ್ಮಸ್ಸಿನಲ್ಲಿ ನೀನಿದ್ದಾಗ ನಾನಾಗಲೇ ಎಂಎಲ್ಎ ಆಗಿ ಹತ್ತು ವರ್ಷ ಕಳೆದಿದ್ದೆ. ನನಗಿನ್ನೂ ಚೆನ್ನಾಗಿ ನೆನಪಿದೆ, ನಿನ್ನ ನಾಗರಹಾವು ಸಿನಿಮಾ ರಿಲೀಸ್ ಆದಾಗ ಅದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ನಾನು ಸಿನಿಮಾ ನೋಡಿ, ಈ ನಮ್ಮ ಮಂಡ್ಯದ  ಹುಡುಗ ಮುಂದೊಂದು ದಿನ ದೊಡ್ಡ ಸ್ಟಾರ್ ಆಗಿ ಬೆಳೆಯುತ್ತಾನೆ ನೋಡ್ತಾ ಇರಿ ಎಂದು ಎಲ್ಲರೆದುರು ಹೆಮ್ಮೆಯಿಂದ ಹೇಳಿಕೊಂಡು ತಿರುಗಾಡಿದ್ದೆ. ನನ್ನ ಮಾತು ಸುಳ್ಳಾಗಲಿಲ್ಲ. ನೀನು ನಿಜಕ್ಕೂ ಕರ್ಣನಂತವನು ಕಣಪ್ಪಾ…”

ಕ್ಷಣಕಾಲ ಮೌನಕ್ಕೆ ಶರಣಾದ ಗೌಡರು, ಮತ್ತೆ ನನ್ನತ್ತ ತಿರುಗಿ ನೋಡಿದರು. ಕಣ್ಣೀರಿನ ಪ್ರಮಾಣ ಕೊಂಚ ತಗ್ಗಿದಂತೆ ಕಾಣಿಸಿತು. ಬಹುಶಃ ಹೊರಟುಹೋಗುತ್ತಾರೇನೊ ಅಂತ ಭಾವಿಸಿದೆ. ಆದರೆ, ಮತ್ತೆ ಸಮಾಧಿಯತ್ತ ತಿರುಗಿದರು. ಈ ಮೊದಲು ಮೆದುವಾಗಿದ್ದ ಅವರ ದನಿಯಿಂದ ತುಸು ಬಿಗಿಯಾದ ಮಾತುಗಳು ತೇಲಿಬಂದವು. “ಈ ಸಲ ನೀನು ಮತ್ತೆ ಕಾಂಗ್ರೆಸ್ ಮೇಲೆ ಮುನಿಸಿಕೊಂಡೆ. ನನ್ನ ಹುಡುಗನ ಗುಣ ಎಂತದ್ದು ಅಂತ ಗೊತ್ತಿದ್ದರಿಂದ ನಾನು ಮತ್ತೆ ನಿನ್ನನ್ನು ಹತ್ತಿರಕ್ಕೆ ಸೆಳೆದುಕೊಂಡೆ. ಅದಕ್ಕೇ ಅಲ್ಲವೇ, ಕಾಂಗ್ರೆಸ್ ಮೇಲೆ ಬೇಸರಿಸಿಕೊಂಡ ನಿನ್ನನ್ನು ನಾನೇ ಸಂತೈಸಿ ನಮ್ಮ ಬೀಗ ತಮ್ಮಣ್ಣನ ಕಾರಿನಲ್ಲಿ ಮತದಾನ ಮಾಡಲು ಕಳಿಸಿದ್ದು. ನನ್ನ ಲೆಕ್ಕಾಚಾರ ಸರಿ ಇದ್ದಿದ್ದರೆ, ನಿನ್ನನ್ನ ಈ ಸಲ ಮಂಡ್ಯದ ಪಾರ್ಲಿಮೆಂಟ್ ಚುನಾವಣೆಗೆ ನನ್ನ ಪಾರ್ಟಿಯಿಂದ ನಿಲ್ಲಿಸೋಣ ಅಂದುಕೊಂಡಿದ್ದೆ. ಆದರೆ ವಿಧಿಯಾಟ, ನೀನೇ ನಮ್ಮನ್ನೆಲ್ಲ ಬಿಟ್ಟು ಹೋದೆ”. ಮತ್ತೆ ದೇವೇಗೌಡರ ಕಣ್ಣುಗಳು ನೀರಾಡಿದವು.

ಟವೆಲ್ಲಿನಿಂದ ಕಣ್ಣೊರೆಸಿಕೊಂಡ ಅವರು ಕ್ಷಣ ತಡೆದು ಇನ್ನಷ್ಟು ನಿಖರವಾಗಿ ಮಾತು ಮುಂದುವರೆಸಿದರು, “ನೀನು ಅಗಲಿದ ನೋವು ನಮ್ಮನ್ನೆಲ್ಲ ತುಂಬಾ ಕಾಡಿತು. ಕುಮಾರಸ್ವಾಮಿಯವರಂತೂ ಹಾರ್ಟ್ ಪೇಶೆಂಟಾಗಿದ್ದ್ರೂ ಒಡಹುಟ್ಟಿದ ಸೋದರನಂತೆ ಮುಂದೆ ನಿಂತು ಅಂತ್ಯಸಂಸ್ಕಾರ ಮಾಡಿದರು. ನನಗಂತೂ ಮೊಮ್ಮಗ ನಿಖಿಲ್ ರವರ ಮುಖದಲ್ಲಿ ನೀನೇ ಎದ್ದು ಬಂದಂತಾಗುತ್ತಿತ್ತು. ಅವರೂ ನಿನ್ನಂತೆಯೇ ಸಿನಿಮಾ ಸ್ಟಾರು. ನಿಖಿಲ್ ರವರನ್ನು ನೋಡಿದಾಗಲೆಲ್ಲ ನಿನ್ನದೇ ನೆನಪಾಗುತ್ತಿತ್ತು. ಅದಕ್ಕೆ ಅವತ್ತೇ ಡಿಸೈಡ್ ಮಾಡಿದೆ, ನೀನು ಪ್ರತಿನಿಧಿಸುತ್ತಿದ್ದ ಮಂಡ್ಯದಲ್ಲೇ ಅವರನ್ನು ಎಲೆಕ್ಷನ್ನಿಗೆ ನಿಲ್ಲಿಸಿ, ಅಂಬಿ ಇಲ್ಲದ ಕೊರಗು ನೀಗಿಕೊಳ್ಳೋಣ ಅಂತ!”.

ದೇವೇಗೌಡರ ಮಾತು ಕೇಳಿ ನನಗೆ ಶಾಕ್ ಆಯ್ತು! ಹಾಗಾದ್ರೆ, ನಿಖಿಲ್ ನನ್ನು ಮಂಡ್ಯದ ಚಕ್ರವ್ಯೂಹದೊಳಕ್ಕೆ ತಳ್ಳಿದ್ದು ಕುಟುಂಬ ರಾಜಕಾರಣದ ವಿಸ್ತರಣೆಯ ಭಾಗವಾಗಿ ಅಲ್ಲ, ಅಂಬಿ ಇಲ್ಲದ ಕೊರಗನ್ನು ನಿಖಿಲ್ ಮೂಲಕ ತುಂಬಲು..!!!! ಅಯ್ಯಯ್ಯೋ ಇಂಥಾ ಪುಣ್ಯಾತ್ಮನನ್ನ ತಪ್ಪಾಗಿ ತಿಳಿದುಬಿಟ್ಟಿದ್ದೆನ್ನಲ್ಲಾ ಅಂತ ವಿಪರೀತ ಸಂಕಟವಾಯ್ತು. ಜೊತೆಗೆ ದೇವೇಗೌಡರ ಮೇಲೆ ಗೌರವವೂ ಹೆಚ್ಚಾಯ್ತು. ಅಷ್ಟರೊಳಗೆ ಮತ್ತೆ ದೇವೇಗೌಡರ ಮಾತುಗಳು ಶುರುವಾಗಿದ್ದವು, “ಆದ್ರೆ ಇದನ್ನು ನನ್ನ ಮಗಳು ಸುಮಲತಾ ಅರ್ಥಾನೆ ಮಾಡಿಕೊಳ್ಳಲಿಲ್ಲ. ಪಾಪಾ, ಆಕೆಯಾದ್ರು ಏನು ಮಾಡುವಳು. ಸುತ್ತವರೆದಿರುವ ಮೀರ್ ಸಾದಿಕ್.ಗಳ ಮಾತು ಕೇಳಿ ಹಾಗೆ ಮಾಡ್ತಿದಾಳೆ. ನನಗಂತೂ ಸುಮಲತಾ ಮೇಲೆ ಸ್ವಲ್ಪವೂ ಬೇಸರವಿಲ್ಲ. ನನ್ನ ಮಕ್ಕಳಾದ ಕುಮಾರಸ್ವಾಮಿಯವರು ಮತ್ತು ರೇವಣ್ಣನವರ ಮೇಲಿಗಿಂತ ಜಾಸ್ತಿ ಪ್ರೀತಿ ಇದೆ. ಆದರೆ ನಿನಗೇ ಗೊತ್ತಲ್ಲವಾ ಈ ಹಾಳಾದ ರಾಜಕಾರಣದಲ್ಲಿ ಅದನ್ನೆಲ್ಲ ತೋರಿಸಿಕೊಳ್ಳಲು ಆಗುತ್ತಿಲ್ಲ. ಒಂದಲ್ಲ ಒಂದು ದಿನ  ಅರ್ಥವಾಗುತ್ತೆ. ಒಂದಂತೂ ಸತ್ಯ, ನನ್ನ ಮಗ ರೇವಣ್ಣನವರು ಅದ್ಯಾವುದೋ ಆತುರದಲ್ಲಿ ಆ ಮಗಳು ಸುಮಲತಾಗೆ ‘ಗಂಡ ಸತ್ತು ಆರು ತಿಂಗಳು ಕಳೆದಿಲ್ಲ, ಅಷ್ಟರಲ್ಲೇ ರಾಜಕೀಯ ಬೇಕಿತ್ತಾ?’ ಅಂತ ಕೇಳಿದ್ದು ನನಗೆ ತುಂಬಾನೇ ದುಃಖ ಉಂಟುಮಾಡಿದೆ. ಅದಕ್ಕೆ ನಾನೇ ಖುದ್ದಾಗಿ ಕಿವಿಹಿಂಡಿ ಬುದ್ದಿ ಹೇಳಿದೆ ನಮ್ಮ ಪಾರ್ಟಿ ಪ್ರೆಸಿಡೆಂಟು ಎಚ್.ವಿಶ್ವನಾಥರದ್ದು, ಕೊನೆಗೆ ಅವರಿಂದಲೇ ರೇವಣ್ಣನವರ ಪರವಾಗಿ ಕ್ಷಮೆಯನ್ನೂ ಕೇಳಿಸಿದ್ದೇನೆ”.

ನನಗೇ ಗೊತ್ತಿಲ್ಲದೆ ಈಗ ನನ್ನ ಕಣ್ಣಾಲಿಗಳಲ್ಲೂ ನೀರು ಜಿನುಗ ತೊಡಗಿದವು. ದೇವೇಗೌಡರ ಮಮಕಾರ ಕಂಡು ಕರಗಿಹೋದೆ.  ದೇವೇಗೌಡರು ಈಗ ಶಪಥಗೈಯ್ಯುವ ದನಿಯಲ್ಲಿ ಹೂಂಕರಿಸಿದರು, “ಇಲ್ಲಾ ಅಂಬಿ, ನಿನಗಿಂತ ನನ್ನ ಮೊಮ್ಮಗನ ಎಲೆಕ್ಷನ್ ದೊಡ್ಡದಲ್ಲ. ಅದಕ್ಕಿಂತಲೂ ಮುಖ್ಯವಾಗಿ, ಎಷ್ಟೇ ಬಾರಿ ಪಕ್ಷಾಂತರ ಮಾಡಿದರು ಕಾಂಗ್ರೆಸ್-ಜನತಾದಳ ನಡುವೆ ಓಡಾಡಿದೆಯೇ ವಿನಾಃ ಆ ಕೋಮುವಾದಿ ಬಿಜೆಪಿಯತ್ತ ತಲೆ ಹಾಕದ ನಿನ್ನ ಸಿದ್ಧಾಂತ ಕಾಯುವುದು ನನ್ನ ಧರ್ಮ ಅನ್ನಿಸುತ್ತಿದೆ. ಇವತ್ತು ಅದೇ ಬಿಜೆಪಿಯವರು ಮಗಳು ಸುಮಲತಾಗೆ ಬೆಂಬಲ ನೀಡುವ ನೆಪದಲ್ಲಿ ತಮ್ಮ ಕೈಗೊಂಬೆ ಮಾಡಲು ಯತ್ನಿಸುತ್ತಿದ್ದಾರೆ. ಅವರ ಆ ಆಸೆ ಈಡೇರಲು ನಾನು ಬಿಡುವುದಿಲ್ಲ. ನಿನ್ನ ಆತ್ಮ ಪರಿತಪಿಸುವುದನ್ನು ನಾನು ನೋಡಲಾರೆ. ಅದಕ್ಕೇ ಇವತ್ತು ರಾಜಾರೋಷವಾಗಿ ಜನರ ಮುಂದೆ ಘೋಷಿಸಿದ್ದೇನೆ ‘ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮುಗಿಸಿಯೇ ನಾನು ಹೋಗೋದು’ ಅಂತ. ಅದರ ಮೊದಲ ಹೆಜ್ಜೆಯನ್ನು ನಿನ್ನ ಪ್ರೀತಿಯ ಮಂಡ್ಯದಿಂದಲೇ ಶುರು ಮಾಡ್ತೀನಿ ಅಂಬಿ. ನನ್ನ ಮೊಮ್ಮಗನ ನಾಮಪತ್ರವನ್ನ ವಾಪಾಸು ಪಡೆದು, ಮಗಳು ಸುಮಲತಾ ಅವಿರೋಧವಾಗಿ ಆಯ್ಕೆ ಆಗುವಂತೆ ಮಾಡುತ್ತೇನೆ. ಕೋಮುವಾದಿ ಬಿಜೆಪಿಗಳಿಗೆ ಇಲ್ಲಿಂದಲೇ ಶಾಕ್ ಟ್ರೀಟ್ ಮೆಂಟ್ ಶುರು ಮಾಡ್ತೀನಿ. ಮಂಡ್ಯದಂತಹ ಹೊಸ ಜಾಗದಲ್ಲಿ ಬಿಜೆಪಿ ಬೇರೂರಲು ಬಿಡುವುದಿಲ್ಲ. ಇದು ನನ್ನ ಶಪಥ!”

ಗೌಡರ ಶಪಥ ಕೇಳಿ ನನ್ನ ಮೈ ರೋಮಗಳೆಲ್ಲ ಎದ್ದು ನಿಂತವು, ಎದೆ ಬಡಿತ ಅಂಕೆಗೇ  ಸಿಗದಷ್ಟು ಡಬಗುಟ್ಟಲು ಶುರುವಾಯ್ತು, ಮೈಯಲ್ಲೆಲ್ಲ ಬೆವರು ಬಸಿಯತೊಡಗಿತು. ಕಣ್ಮುಚ್ಚಿ, ಜೋರಾಗಿ ಉಸಿರು ಒಳಗೆಳೆದುಕೊಂಡು, ದೇವೇಗೌಡರಿಗೆ ಗಟ್ಟಿಯಾಗಿ ಜೈಕಾರ ಕೂಗಲು ಶುರು ಮಾಡಿದೆ.

ಛಟೀರ್…!

ಕೆನ್ನೆಯ ಮೇಲೆ ಏಟೊಂದು ಬಿತ್ತು. ರಾತ್ರಿ ಮಲಗಿದ ಹಾಸಿಗೆಯಲ್ಲೇ ನಾನಿದ್ದೆ. ಪಕ್ಕದಲ್ಲಿ ಹೆಂಡತಿ ಗೊಣಗುತ್ತಾ ಕೂತಿದ್ದಳು “ಹಗಲೆಲ್ಲ ಕೆಲ್ಸ ಮಾಡಿ ಸುಸ್ತಾಗಿ ರಾತ್ರಿ ನೆಮ್ದಿಯಿಂದ ಮಲಗೋಣ ಅಂದ್ರೆ, ದರಿದ್ರ, ನಿಮ್ಮದೊಂದು ಕಾಟ ನಮಿಗೆ. ನಿಮ್ ಜರ್ನಲಿಸ್ಟ್ ಬುದ್ದೀನ ಅಲ್ಲೇ ಆಫೀಸ್ನಲ್ಲಿ ಬಿಟ್ಟು ಬರೋಕೆ ಆಗಲ್ವಾ. ಹೀಗೆ ಕನಸ್ನಲ್ಲೂ ಕನವರಿಸ್ಕೊಂಡು ಯಾಕ್ರೀ ಪ್ರಾಣ ತಿಂತೀರಾ….?”

“ಹ್ಞಾಂ……!!!!”

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...