Homeಕರ್ನಾಟಕಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

ಅಂಬಿ ಸಮಾಧಿ ಮುಂದೆ ದೇವೇಗೌಡರ ಸೆಕ್ಯುಲರ್ ಶಪಥ!

- Advertisement -
- Advertisement -

|ತುಂಟ |

ಅದು ಕಂಠೀರವ ಸ್ಟೂಡಿಯೋದಲ್ಲಿರುವ ಅಂಬರೀಶ್ ಅವರ ಸಮಾಧಿ. ರಾತ್ರಿ ಹನ್ನೆರಡೂವರೆ ಒಂದು ಗಂಟೆ ಸಮಯವಿರಬಹುದು. ಬಿಳಿ ಪಂಚೆ, ಬಿಳಿ ಶರ್ಟು ಹಾಕಿದ, ತಲೆಗೆ ಮಫ್ಲರಿನಂತೆ ಟವೆಲ್ ಸುತ್ತಿಕೊಂಡ  ವಯಸ್ಸಾದ ಹಿರಿ ವ್ಯಕ್ತಿಯೊಬ್ಬರು ಏಕಾಂಗಿಯಾಗಿ ಸಮಾಧಿ ಮುಂದೆ ನಿಂತು ಸಣ್ಣಗೆ ಕಣ್ಣೀರು ಮಿಡಿಯುತ್ತಿದ್ದರು. ಕುತೂಹಲಗೊಂಡು ಹತ್ತಿರ ಹೋಗಿ ನೋಡಿದೆ. ಏನಾಶ್ಚರ್ಯ, ಅದು ನಮ್ಮ ಮಾಜಿ ಪ್ರಧಾನಿ ದೇವೇಗೌಡರು!

ಆ ಭಾವನಾತ್ಮಕ ವಾತಾವರಣ ಕದಡಲು ಇಷ್ಟವಾಗಲಿಲ್ಲ. ಸದ್ದು ಮಾಡದೆ, ದೇವೇಗೌಡರ ಪಕ್ಕಕ್ಕೆ ಹೋಗಿ ನಿಂತೆ. ನನ್ನತ್ತ ತಿರುಗಿ ನೋಡಿದ ಗೌಡರ ಕಣ್ಣುಗಳಲ್ಲಿ ಆ ಕ್ಷಣಕ್ಕೆ ಕಿಂಚಿತ್ತೂ ಕಪಟತೆ ಇರಲಿಲ್ಲ. ಮತ್ತೆ ಸಮಾಧಿಯತ್ತ ತಿರುಗಿದ ಅವರು ಅಂಬಿ ಸಮಾಧಿ ಜೊತೆ ಮಾತು ಮುಂದುವರೆಸಿದರು,

“ಅಂಬಿ, ನೀನು ನನ್ನ ಪಕ್ಷದಲ್ಲಿ ಇರಲಿ, ಇಲ್ಲದಿರಲಿ ಯಾವತ್ತೂ ನೀನು ನನ್ನ ಹುಡುಗನಾಗಿದ್ದೆ. ಅದೇ ಒರಟು ಭಾಷೆಯ, ಬೆಣ್ಣೆ ಹೃದಯದ ಹುಡುಗ. ನೀನು ಇಷ್ಟು ಬೇಗ ನಮ್ಮನ್ನೆಲ್ಲ ಅಗಲಿ ಹೋಗುತ್ತೀಯ ಅಂದುಕೊಂಡಿರಲಿಲ್ಲ. ನನ್ನ ಕಣ್ಣಮುಂದೆ ಆಡಿ ಬೆಳೆದ, ಸಿನಿಮಾ ಮಾಡಿದ ಹುಡುಗ ಕೊನೆಗೆ ನನ್ನ ಕಣ್ಣ ಮುಂದೆಯೇ ಅಗಲಿಹೋದದ್ದನ್ನು ನೆನೆಸಿಕೊಂಡರೆ ದುಃಖ ಉಕ್ಕಿ ಬರುತ್ತೆ. ನಿನ್ನ ಇಪ್ಪತ್ತೆರಡನೇ ವಯಸ್ಸಲ್ಲಿ ಮೊದಲ ಸಿನಿಮಾ ಮಾಡುವ ಹುಮ್ಮಸ್ಸಿನಲ್ಲಿ ನೀನಿದ್ದಾಗ ನಾನಾಗಲೇ ಎಂಎಲ್ಎ ಆಗಿ ಹತ್ತು ವರ್ಷ ಕಳೆದಿದ್ದೆ. ನನಗಿನ್ನೂ ಚೆನ್ನಾಗಿ ನೆನಪಿದೆ, ನಿನ್ನ ನಾಗರಹಾವು ಸಿನಿಮಾ ರಿಲೀಸ್ ಆದಾಗ ಅದೇ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗಿದ್ದ ನಾನು ಸಿನಿಮಾ ನೋಡಿ, ಈ ನಮ್ಮ ಮಂಡ್ಯದ  ಹುಡುಗ ಮುಂದೊಂದು ದಿನ ದೊಡ್ಡ ಸ್ಟಾರ್ ಆಗಿ ಬೆಳೆಯುತ್ತಾನೆ ನೋಡ್ತಾ ಇರಿ ಎಂದು ಎಲ್ಲರೆದುರು ಹೆಮ್ಮೆಯಿಂದ ಹೇಳಿಕೊಂಡು ತಿರುಗಾಡಿದ್ದೆ. ನನ್ನ ಮಾತು ಸುಳ್ಳಾಗಲಿಲ್ಲ. ನೀನು ನಿಜಕ್ಕೂ ಕರ್ಣನಂತವನು ಕಣಪ್ಪಾ…”

ಕ್ಷಣಕಾಲ ಮೌನಕ್ಕೆ ಶರಣಾದ ಗೌಡರು, ಮತ್ತೆ ನನ್ನತ್ತ ತಿರುಗಿ ನೋಡಿದರು. ಕಣ್ಣೀರಿನ ಪ್ರಮಾಣ ಕೊಂಚ ತಗ್ಗಿದಂತೆ ಕಾಣಿಸಿತು. ಬಹುಶಃ ಹೊರಟುಹೋಗುತ್ತಾರೇನೊ ಅಂತ ಭಾವಿಸಿದೆ. ಆದರೆ, ಮತ್ತೆ ಸಮಾಧಿಯತ್ತ ತಿರುಗಿದರು. ಈ ಮೊದಲು ಮೆದುವಾಗಿದ್ದ ಅವರ ದನಿಯಿಂದ ತುಸು ಬಿಗಿಯಾದ ಮಾತುಗಳು ತೇಲಿಬಂದವು. “ಈ ಸಲ ನೀನು ಮತ್ತೆ ಕಾಂಗ್ರೆಸ್ ಮೇಲೆ ಮುನಿಸಿಕೊಂಡೆ. ನನ್ನ ಹುಡುಗನ ಗುಣ ಎಂತದ್ದು ಅಂತ ಗೊತ್ತಿದ್ದರಿಂದ ನಾನು ಮತ್ತೆ ನಿನ್ನನ್ನು ಹತ್ತಿರಕ್ಕೆ ಸೆಳೆದುಕೊಂಡೆ. ಅದಕ್ಕೇ ಅಲ್ಲವೇ, ಕಾಂಗ್ರೆಸ್ ಮೇಲೆ ಬೇಸರಿಸಿಕೊಂಡ ನಿನ್ನನ್ನು ನಾನೇ ಸಂತೈಸಿ ನಮ್ಮ ಬೀಗ ತಮ್ಮಣ್ಣನ ಕಾರಿನಲ್ಲಿ ಮತದಾನ ಮಾಡಲು ಕಳಿಸಿದ್ದು. ನನ್ನ ಲೆಕ್ಕಾಚಾರ ಸರಿ ಇದ್ದಿದ್ದರೆ, ನಿನ್ನನ್ನ ಈ ಸಲ ಮಂಡ್ಯದ ಪಾರ್ಲಿಮೆಂಟ್ ಚುನಾವಣೆಗೆ ನನ್ನ ಪಾರ್ಟಿಯಿಂದ ನಿಲ್ಲಿಸೋಣ ಅಂದುಕೊಂಡಿದ್ದೆ. ಆದರೆ ವಿಧಿಯಾಟ, ನೀನೇ ನಮ್ಮನ್ನೆಲ್ಲ ಬಿಟ್ಟು ಹೋದೆ”. ಮತ್ತೆ ದೇವೇಗೌಡರ ಕಣ್ಣುಗಳು ನೀರಾಡಿದವು.

ಟವೆಲ್ಲಿನಿಂದ ಕಣ್ಣೊರೆಸಿಕೊಂಡ ಅವರು ಕ್ಷಣ ತಡೆದು ಇನ್ನಷ್ಟು ನಿಖರವಾಗಿ ಮಾತು ಮುಂದುವರೆಸಿದರು, “ನೀನು ಅಗಲಿದ ನೋವು ನಮ್ಮನ್ನೆಲ್ಲ ತುಂಬಾ ಕಾಡಿತು. ಕುಮಾರಸ್ವಾಮಿಯವರಂತೂ ಹಾರ್ಟ್ ಪೇಶೆಂಟಾಗಿದ್ದ್ರೂ ಒಡಹುಟ್ಟಿದ ಸೋದರನಂತೆ ಮುಂದೆ ನಿಂತು ಅಂತ್ಯಸಂಸ್ಕಾರ ಮಾಡಿದರು. ನನಗಂತೂ ಮೊಮ್ಮಗ ನಿಖಿಲ್ ರವರ ಮುಖದಲ್ಲಿ ನೀನೇ ಎದ್ದು ಬಂದಂತಾಗುತ್ತಿತ್ತು. ಅವರೂ ನಿನ್ನಂತೆಯೇ ಸಿನಿಮಾ ಸ್ಟಾರು. ನಿಖಿಲ್ ರವರನ್ನು ನೋಡಿದಾಗಲೆಲ್ಲ ನಿನ್ನದೇ ನೆನಪಾಗುತ್ತಿತ್ತು. ಅದಕ್ಕೆ ಅವತ್ತೇ ಡಿಸೈಡ್ ಮಾಡಿದೆ, ನೀನು ಪ್ರತಿನಿಧಿಸುತ್ತಿದ್ದ ಮಂಡ್ಯದಲ್ಲೇ ಅವರನ್ನು ಎಲೆಕ್ಷನ್ನಿಗೆ ನಿಲ್ಲಿಸಿ, ಅಂಬಿ ಇಲ್ಲದ ಕೊರಗು ನೀಗಿಕೊಳ್ಳೋಣ ಅಂತ!”.

ದೇವೇಗೌಡರ ಮಾತು ಕೇಳಿ ನನಗೆ ಶಾಕ್ ಆಯ್ತು! ಹಾಗಾದ್ರೆ, ನಿಖಿಲ್ ನನ್ನು ಮಂಡ್ಯದ ಚಕ್ರವ್ಯೂಹದೊಳಕ್ಕೆ ತಳ್ಳಿದ್ದು ಕುಟುಂಬ ರಾಜಕಾರಣದ ವಿಸ್ತರಣೆಯ ಭಾಗವಾಗಿ ಅಲ್ಲ, ಅಂಬಿ ಇಲ್ಲದ ಕೊರಗನ್ನು ನಿಖಿಲ್ ಮೂಲಕ ತುಂಬಲು..!!!! ಅಯ್ಯಯ್ಯೋ ಇಂಥಾ ಪುಣ್ಯಾತ್ಮನನ್ನ ತಪ್ಪಾಗಿ ತಿಳಿದುಬಿಟ್ಟಿದ್ದೆನ್ನಲ್ಲಾ ಅಂತ ವಿಪರೀತ ಸಂಕಟವಾಯ್ತು. ಜೊತೆಗೆ ದೇವೇಗೌಡರ ಮೇಲೆ ಗೌರವವೂ ಹೆಚ್ಚಾಯ್ತು. ಅಷ್ಟರೊಳಗೆ ಮತ್ತೆ ದೇವೇಗೌಡರ ಮಾತುಗಳು ಶುರುವಾಗಿದ್ದವು, “ಆದ್ರೆ ಇದನ್ನು ನನ್ನ ಮಗಳು ಸುಮಲತಾ ಅರ್ಥಾನೆ ಮಾಡಿಕೊಳ್ಳಲಿಲ್ಲ. ಪಾಪಾ, ಆಕೆಯಾದ್ರು ಏನು ಮಾಡುವಳು. ಸುತ್ತವರೆದಿರುವ ಮೀರ್ ಸಾದಿಕ್.ಗಳ ಮಾತು ಕೇಳಿ ಹಾಗೆ ಮಾಡ್ತಿದಾಳೆ. ನನಗಂತೂ ಸುಮಲತಾ ಮೇಲೆ ಸ್ವಲ್ಪವೂ ಬೇಸರವಿಲ್ಲ. ನನ್ನ ಮಕ್ಕಳಾದ ಕುಮಾರಸ್ವಾಮಿಯವರು ಮತ್ತು ರೇವಣ್ಣನವರ ಮೇಲಿಗಿಂತ ಜಾಸ್ತಿ ಪ್ರೀತಿ ಇದೆ. ಆದರೆ ನಿನಗೇ ಗೊತ್ತಲ್ಲವಾ ಈ ಹಾಳಾದ ರಾಜಕಾರಣದಲ್ಲಿ ಅದನ್ನೆಲ್ಲ ತೋರಿಸಿಕೊಳ್ಳಲು ಆಗುತ್ತಿಲ್ಲ. ಒಂದಲ್ಲ ಒಂದು ದಿನ  ಅರ್ಥವಾಗುತ್ತೆ. ಒಂದಂತೂ ಸತ್ಯ, ನನ್ನ ಮಗ ರೇವಣ್ಣನವರು ಅದ್ಯಾವುದೋ ಆತುರದಲ್ಲಿ ಆ ಮಗಳು ಸುಮಲತಾಗೆ ‘ಗಂಡ ಸತ್ತು ಆರು ತಿಂಗಳು ಕಳೆದಿಲ್ಲ, ಅಷ್ಟರಲ್ಲೇ ರಾಜಕೀಯ ಬೇಕಿತ್ತಾ?’ ಅಂತ ಕೇಳಿದ್ದು ನನಗೆ ತುಂಬಾನೇ ದುಃಖ ಉಂಟುಮಾಡಿದೆ. ಅದಕ್ಕೆ ನಾನೇ ಖುದ್ದಾಗಿ ಕಿವಿಹಿಂಡಿ ಬುದ್ದಿ ಹೇಳಿದೆ ನಮ್ಮ ಪಾರ್ಟಿ ಪ್ರೆಸಿಡೆಂಟು ಎಚ್.ವಿಶ್ವನಾಥರದ್ದು, ಕೊನೆಗೆ ಅವರಿಂದಲೇ ರೇವಣ್ಣನವರ ಪರವಾಗಿ ಕ್ಷಮೆಯನ್ನೂ ಕೇಳಿಸಿದ್ದೇನೆ”.

ನನಗೇ ಗೊತ್ತಿಲ್ಲದೆ ಈಗ ನನ್ನ ಕಣ್ಣಾಲಿಗಳಲ್ಲೂ ನೀರು ಜಿನುಗ ತೊಡಗಿದವು. ದೇವೇಗೌಡರ ಮಮಕಾರ ಕಂಡು ಕರಗಿಹೋದೆ.  ದೇವೇಗೌಡರು ಈಗ ಶಪಥಗೈಯ್ಯುವ ದನಿಯಲ್ಲಿ ಹೂಂಕರಿಸಿದರು, “ಇಲ್ಲಾ ಅಂಬಿ, ನಿನಗಿಂತ ನನ್ನ ಮೊಮ್ಮಗನ ಎಲೆಕ್ಷನ್ ದೊಡ್ಡದಲ್ಲ. ಅದಕ್ಕಿಂತಲೂ ಮುಖ್ಯವಾಗಿ, ಎಷ್ಟೇ ಬಾರಿ ಪಕ್ಷಾಂತರ ಮಾಡಿದರು ಕಾಂಗ್ರೆಸ್-ಜನತಾದಳ ನಡುವೆ ಓಡಾಡಿದೆಯೇ ವಿನಾಃ ಆ ಕೋಮುವಾದಿ ಬಿಜೆಪಿಯತ್ತ ತಲೆ ಹಾಕದ ನಿನ್ನ ಸಿದ್ಧಾಂತ ಕಾಯುವುದು ನನ್ನ ಧರ್ಮ ಅನ್ನಿಸುತ್ತಿದೆ. ಇವತ್ತು ಅದೇ ಬಿಜೆಪಿಯವರು ಮಗಳು ಸುಮಲತಾಗೆ ಬೆಂಬಲ ನೀಡುವ ನೆಪದಲ್ಲಿ ತಮ್ಮ ಕೈಗೊಂಬೆ ಮಾಡಲು ಯತ್ನಿಸುತ್ತಿದ್ದಾರೆ. ಅವರ ಆ ಆಸೆ ಈಡೇರಲು ನಾನು ಬಿಡುವುದಿಲ್ಲ. ನಿನ್ನ ಆತ್ಮ ಪರಿತಪಿಸುವುದನ್ನು ನಾನು ನೋಡಲಾರೆ. ಅದಕ್ಕೇ ಇವತ್ತು ರಾಜಾರೋಷವಾಗಿ ಜನರ ಮುಂದೆ ಘೋಷಿಸಿದ್ದೇನೆ ‘ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಮುಗಿಸಿಯೇ ನಾನು ಹೋಗೋದು’ ಅಂತ. ಅದರ ಮೊದಲ ಹೆಜ್ಜೆಯನ್ನು ನಿನ್ನ ಪ್ರೀತಿಯ ಮಂಡ್ಯದಿಂದಲೇ ಶುರು ಮಾಡ್ತೀನಿ ಅಂಬಿ. ನನ್ನ ಮೊಮ್ಮಗನ ನಾಮಪತ್ರವನ್ನ ವಾಪಾಸು ಪಡೆದು, ಮಗಳು ಸುಮಲತಾ ಅವಿರೋಧವಾಗಿ ಆಯ್ಕೆ ಆಗುವಂತೆ ಮಾಡುತ್ತೇನೆ. ಕೋಮುವಾದಿ ಬಿಜೆಪಿಗಳಿಗೆ ಇಲ್ಲಿಂದಲೇ ಶಾಕ್ ಟ್ರೀಟ್ ಮೆಂಟ್ ಶುರು ಮಾಡ್ತೀನಿ. ಮಂಡ್ಯದಂತಹ ಹೊಸ ಜಾಗದಲ್ಲಿ ಬಿಜೆಪಿ ಬೇರೂರಲು ಬಿಡುವುದಿಲ್ಲ. ಇದು ನನ್ನ ಶಪಥ!”

ಗೌಡರ ಶಪಥ ಕೇಳಿ ನನ್ನ ಮೈ ರೋಮಗಳೆಲ್ಲ ಎದ್ದು ನಿಂತವು, ಎದೆ ಬಡಿತ ಅಂಕೆಗೇ  ಸಿಗದಷ್ಟು ಡಬಗುಟ್ಟಲು ಶುರುವಾಯ್ತು, ಮೈಯಲ್ಲೆಲ್ಲ ಬೆವರು ಬಸಿಯತೊಡಗಿತು. ಕಣ್ಮುಚ್ಚಿ, ಜೋರಾಗಿ ಉಸಿರು ಒಳಗೆಳೆದುಕೊಂಡು, ದೇವೇಗೌಡರಿಗೆ ಗಟ್ಟಿಯಾಗಿ ಜೈಕಾರ ಕೂಗಲು ಶುರು ಮಾಡಿದೆ.

ಛಟೀರ್…!

ಕೆನ್ನೆಯ ಮೇಲೆ ಏಟೊಂದು ಬಿತ್ತು. ರಾತ್ರಿ ಮಲಗಿದ ಹಾಸಿಗೆಯಲ್ಲೇ ನಾನಿದ್ದೆ. ಪಕ್ಕದಲ್ಲಿ ಹೆಂಡತಿ ಗೊಣಗುತ್ತಾ ಕೂತಿದ್ದಳು “ಹಗಲೆಲ್ಲ ಕೆಲ್ಸ ಮಾಡಿ ಸುಸ್ತಾಗಿ ರಾತ್ರಿ ನೆಮ್ದಿಯಿಂದ ಮಲಗೋಣ ಅಂದ್ರೆ, ದರಿದ್ರ, ನಿಮ್ಮದೊಂದು ಕಾಟ ನಮಿಗೆ. ನಿಮ್ ಜರ್ನಲಿಸ್ಟ್ ಬುದ್ದೀನ ಅಲ್ಲೇ ಆಫೀಸ್ನಲ್ಲಿ ಬಿಟ್ಟು ಬರೋಕೆ ಆಗಲ್ವಾ. ಹೀಗೆ ಕನಸ್ನಲ್ಲೂ ಕನವರಿಸ್ಕೊಂಡು ಯಾಕ್ರೀ ಪ್ರಾಣ ತಿಂತೀರಾ….?”

“ಹ್ಞಾಂ……!!!!”

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...