Homeಮುಖಪುಟಬೀದಿಯಲ್ಲಿ ಮಲಗಿದ್ದ ಬಾಲಕನ ಮೇಲೆ ಪೇದೆಯಿಂದ ಅಮಾನವೀಯ ಹಲ್ಲೆ: ಪೇದೆ ಅಮಾನತು

ಬೀದಿಯಲ್ಲಿ ಮಲಗಿದ್ದ ಬಾಲಕನ ಮೇಲೆ ಪೇದೆಯಿಂದ ಅಮಾನವೀಯ ಹಲ್ಲೆ: ಪೇದೆ ಅಮಾನತು

- Advertisement -
- Advertisement -

ಅಪ್ರಾಪ್ತ ಬಾಲಕನ ಮೇಲೆ ಮನಸೋಇಚ್ಛೆ ಹಲ್ಲೆ ಮಾಡಿದ್ದ ದೆಹಲಿ ಪೊಲೀಸ್ ಪೇದೆಯನ್ನು ಅಮಾನತು ಮಾಡಿದ್ದು, ಆತನ ವಿರುದ್ಧ ಡಿಪಾರ್ಟ್ಮೆಂಟ್ ವಿಚಾರಣೆ ನಡೆಸಲು ಪೊಲೀಸ್ ಇಲಾಖೆ ಆದೇಶಿಸಿದೆ. ದೆಹಲಿಯ ಆರ್.ಕೆ.ಪುರಂನಲ್ಲಿ ಪೊಲೀಸ್ ಪೇದೆಯೊಬ್ಬರು ಅಪ್ರಾಪ್ತ ಬಾಲಕನ ಮೇಲೆ ಲಾಠಿಯಿಂದ ಹಲ್ಲೆ ನಡೆಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ, ಜನ ಆಕ್ರೋಶ ವ್ಯಕ್ತಪಡಿಸಿದ ಮೇಲೆ ಇಲಾಖೆ ಈ ಕ್ರಮ ಕೈಗೊಂಡಿದೆ.

ಘಟನೆ ನಮ್ಮ ಗಮನಕ್ಕೆ ಬಂದ ಕೂಡಲೇ ಪೇದೆಯನ್ನು ಅಮಾನತು ಮಾಡಿ ಆತನ ಮೇಲೆ ವಿಚಾರಣೆಗೆ ಆದೇಶಸಲಾಗಿದೆ. ತನಿಖೆಯ ಆಧಾರದಲ್ಲಿ ಘಟನೆಯಲ್ಲಿ ಭಾಗಿಯಾದ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಇಂಗಿತ್ ಪ್ರತಾಪ್ ಸಿಂಗ್ ಹೇಳಿದ್ದಾರೆ.

ಆಗಸ್ಟ್ 22ರ ರಾತ್ರಿ 2.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸ್ ಪೇದೆ ರಾತ್ರಿ ಪಾಳಿಯಲ್ಲಿದ್ದಾಗ, ರಸ್ತೆಯಲ್ಲಿ ಮಲಗಿದ್ದ ಬಾಲಕನೊಬ್ಬನನ್ನು ಅಲ್ಲಿಂದ ಹೋಗುವಂತೆ ತಿಳಿಸಿದ್ದಾರೆ. ಆದರೆ, ಅರ್ಧ ಗಂಟೆ ಕಳೆದ ನಂತರವೂ ಆ ಬಾಲಕ ಅಲ್ಲೇ ಇರುವುದನ್ನು ಕಂಡು ಪೇದೆ ಮನಬಂದಂತೆ ಲಾಠಿ ಬೀಸಿದ್ದಾರೆ. ಅದನ್ನು ಪಾದಚಾರಿಯೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಘಟನೆ ನಡೆದ ಸ್ಥಳದಲ್ಲಿ ಕೆಲ ದಿನಗಳಿಂದ ಸುಲಿಗೆ, ಕಳ್ಳತನ ನಡೆಯುತ್ತಿತ್ತು. ಈ ಸ್ಥಳದಲ್ಲೇ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದ ಶಂಕೆ ಕೂಡ ಇತ್ತು. ಈ ಬಗ್ಗೆ ಅನೇಕ ದೂರುಗಳು ಬಂದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ ಪೊಲೀಸ್ ಪೇದೆಯೊಬ್ಬ ಮಾಡಿದ ಅಮಾನವೀಯ ಹಲ್ಲೆಯ ದಿಕ್ಕುತಪ್ಪಿಸಲು ಪೊಲೀಸರು ಯತ್ನಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದು ವರದಿಯ ಪ್ರಕಾರ ಬಾಲಕ ಹಸಿದಿದ್ದನು. ಊಟ ಇಲ್ಲದೇ ರಸ್ತೆಯಲ್ಲಿ ನಿಶಕ್ತನಾಗಿ ಮಲಗಿದ್ದಾಗ ಪೊಲೀಸ್‌ ಪೇದೆ ಹಲ್ಲೆ ಮಾಡಿದ್ದಾರೆ. ಬಾಲಕ ಬೇಡಿಕೊಂಡರು ಬಿಡಲಿಲ್ಲ. ಮತ್ತೊರ್ವ ಪೊಲೀಸ್ ಇದನ್ನು ನೋಡುತ್ತಿದ್ದನು ಎಂದು ಆರೋಪಿಸಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿ ಅಮಿತ್ ಕೌಶಿಕ್ ಮಾತನಾಡಿ, “ಘಟನೆಯ ಕುರಿತು ಸತ್ಯಶೋಧನೆ ನಡೆಸಲಾಗುವುದು. ನಂತರ ಯಾವ ಕ್ರಮ ತೆಗೆದುಕೊಳ್ಳಬೇಕು ಎಂದು ತೀರ್ಮಾನಿಸುತ್ತೇವೆ” ಎಂದಿದ್ದಾರೆ.


ಇದನ್ನೂ ಓದಿ: ಪುಲ್ವಾಮ ದಾಳಿ: ಬರೋಬ್ಬರಿ 18 ತಿಂಗಳ ನಂತರ ಚಾರ್ಜ್‌ಶೀಟ್‌ ಸಲ್ಲಿಸಿದ ಎನ್‌‌ಐಎ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...