HomeUncategorizedಗಾಝಾ: ಅಲ್ ಶಿಫಾ ಆಸ್ಪತ್ರೆಯ ಆವರಣದಲ್ಲಿ 179 ಜನರ ಸಾಮೂಹಿಕ ಸಮಾಧಿ

ಗಾಝಾ: ಅಲ್ ಶಿಫಾ ಆಸ್ಪತ್ರೆಯ ಆವರಣದಲ್ಲಿ 179 ಜನರ ಸಾಮೂಹಿಕ ಸಮಾಧಿ

- Advertisement -
- Advertisement -

ಗಾಝಾದ ಅತಿದೊಡ್ಡ ಅಲ್ ಶಿಫಾ ಆಸ್ಪತ್ರೆಯಲ್ಲಿ ಶಿಶುಗಳು ಸೇರಿದಂತೆ 179 ಜನರನ್ನು ಆಸ್ಪತ್ರೆಯ ಆವರಣದೊಳಗೆ ಸಾಮೂಹಿಕ ಸಮಾಧಿ ಮಾಡಲಾಗಿದೆ ಎಂದು ಅಲ್ ಶಿಫಾ ಆಸ್ಪತ್ರೆಯ ಮುಖ್ಯಸ್ಥ ಮೊಹಮ್ಮದ್ ಅಬು ಸಲ್ಮಿಯಾ ಹೇಳಿದ್ದಾರೆ.

ಅಲ್ ಶಿಫಾ ಆಸ್ಪತ್ರೆಯಲ್ಲಿನ ಮಾನವೀಯ ಬಿಕ್ಕಟ್ಟನ್ನು ಅಬು ಸಲ್ಮಿಯಾ ಒತ್ತಿಹೇಳಿದ್ದು, ನಾವು ಅವರನ್ನು ಸಾಮೂಹಿಕವಾಗಿ ಸಮಾಧಿ ಮಾಡಿದ್ದೇವೆಂದು ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಇಂಧನ ಕೊರತೆ ನಂತರ ತೀವ್ರ ನಿಗಾ ಘಟಕದಲ್ಲಿ 7 ಶಿಶುಗಳು ಮತ್ತು 29 ಇತರರು ಮೃತಪಟ್ಟಿದ್ದು ಅವರನ್ನು ಕೂಡ ಆಸ್ಪತ್ರೆ ಕಾಂಪ್ಲೆಕ್ಸ್‌ನಲ್ಲಿ ಸಮಾಧಿ ಮಾಡಲಾಗಿದೆ.

ಪತ್ರಕರ್ತರೊಬ್ಬರು, ಕೊಳೆತ ದೇಹಗಳ ದುರ್ನಾತ ಎಲ್ಲೆಡೆ ಹರಡಿದೆ ಎಂದು ಹೇಳಿದ್ದಾರೆ. ಆಸ್ಪತ್ರೆಯ ವೈದ್ಯರೋರ್ವರು ಅಪರಿಸ್ಥಿತಿಯನ್ನು ಅಮಾನವೀಯ ಎಂದು ಕರೆದಿದ್ದು, ವಿದ್ಯುತ್, ನೀರು, ಆಹಾರ ಸಿಗುತ್ತಿಲ್ಲ ಎಂದು ಹೇಳಿದ್ದಾರೆ.

ಅಲ್ ಶಿಫಾ ಆಸ್ಪತ್ರೆಯು ಗಾಝಾ ನಗರದ ಅತಿದೊಡ್ಡ ಆಸ್ಪತ್ರೆಯಾಗಿದೆ. ಇಸ್ರೇಲ್‌ ಪಡೆ ಇದೀಗ ಆಸ್ಪತ್ರೆಯ ಗೇಟ್‌ನ್ನು ಸುತ್ತುವರಿದಿದೆ. ಆಸ್ಪತ್ರೆಯ ಆವರಣದ ಬಳಿ ಇಸ್ರೇಲ್‌ ದಾಳಿ ಬಳಿಕ ಆಸ್ಪತ್ರೆಗೆ ವಿದ್ಯುತ್‌ ಕೊರತೆ  ಉಂಟಾಗಿದೆ. ಆಮ್ಲಜನಕದ ಕೊರತೆಯಿಂದ ನವಜಾತ ಶಿಶುಗಳ ಸಾವು ಸಂಭವಿಸಿದೆ. ಐಸಿಯು ಘಟಕಗಳ ಸ್ಥಗಿತದಿಂದ ಅಪಾರ ಸಾವುಗಳು ಸಂಭವಿಸಿದೆ.

ರೋಗಿಗಳು, ಸಿಬ್ಬಂದಿ ಮತ್ತು ಸ್ಥಳಾಂತರಗೊಂಡ ನಾಗರಿಕರು ಸೇರಿದಂತೆ 10,000 ಕ್ಕೂ ಹೆಚ್ಚು ಜನರು ಅಲ್ ಶಿಫಾದೊಳಗೆ ಇರಬಹುದು ಎನ್ನಲಾಗಿದೆ. ಆದರೆ ಆಸ್ಪತ್ರೆ ಸುತ್ತ ಇಸ್ರೇಲ್‌ ಪಡೆಗಳು ಆವರಿಸಿದ ಕಾರಣ ತೆರವಿಗೆ ಸಮಸ್ಯೆಯಾಗಿದೆ.

ಆಸ್ಪತ್ರೆಗಳು ಮತ್ತು ವೈದ್ಯಕೀಯ ಸಿಬ್ಬಂದಿಯನ್ನು ಅಂತರಾಷ್ಟ್ರೀಯ ಮಾನವೀಯ ಕಾನೂನಿನ ಅಡಿಯಲ್ಲಿ ರಕ್ಷಿಸಬೇಕಿದೆ ಮತ್ತು ಅವರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು. ರೋಗಿಗಳು, ಸಿಬ್ಬಂದಿ ಮತ್ತು ಇತರ ನಾಗರಿಕರನ್ನು ರಕ್ಷಿಸಬೇಕು ಎಂದು ವಿಶ್ವಸಂಸ್ಥೆಯ ಮಾನವೀಯ ವ್ಯವಹಾರಗಳ ಕಚೇರಿ ತಿಳಿಸಿದೆ.

ಈ ಮಧ್ಯೆ ಶಿಶುಗಳನ್ನು ಸ್ಥಳಾಂತರಿಸಲು ಸಹಾಯ ಮಾಡುವುದಾಗಿ ಇಸ್ರೇಲ್ ವಾಗ್ದಾನ ಮಾಡಿತ್ತು. ಅದು ಇಲ್ಲಿಯವರೆಗೆ  ನಡೆದಿಲ್ಲ.

ಇಂದು ಮುಂಜಾನೆ ಅಲ್ ಶಿಫಾ ಆಸ್ಪತ್ರೆಯಿಂದ ಹೃದಯ ವಿದ್ರಾಹಕ ಚಿತ್ರಗಳು ವೈರಲ್‌ ಆಗಿದೆ. 7 ಶಿಶುಗಳನ್ನು ಒಟ್ಟಿಗೆ  ಹಸಿರು ಬಟ್ಟೆ ಹೊದಿಸಿ ಇರಿಸಲಾಗಿತ್ತು. ಶಿಶುಗಳನ್ನು ಐಸಿಯುನ ಬದಲು ವಿದ್ಯುತ್‌ ಇಲ್ಲದ ಕಾರಣ ಸಾಮಾನ್ಯ ಹಾಸಿಗೆಗಳಲ್ಲಿ ಇರಿಸಿದ ಕಾರಣ ಮೃತಪಟ್ಟಿತ್ತು.

ಗಾಝಾದಲ್ಲಿನ ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಇಸ್ರೇಲ್‌ ಈವರೆಗೆ ನಡೆಸಿದ ದಾಳಿಯಲ್ಲಿ  ಈಗಾಗಲೇ 11,240 ಜನರ ಹತ್ಯೆ ನಡೆದಿದೆ. ಇದರಲ್ಲಿ 40%ದಷ್ಟು ಮಕ್ಕಳು ಇದ್ದಾರೆ. ಹಮಾಸ್‌ ಇಸ್ರೇಲ್‌ ಮೇಲೆ ಅ.7ರಂದು ನಡೆಸಿದ ರಾಕೆಟ್‌ ದಾಳಿಗೆ 1,200 ಮಂದಿ ಮೃತಪಟ್ಟಿದ್ದು, 200 ಮಂದಿಯನ್ನು ಒತ್ತೆಯಾಳುಗಳಾಗಿ ಇರಿಸಲಾಗಿದೆ.

ಇದನ್ನು ಓದಿ: ದಲಿತರಿಗೆ ಬಿಜೆಪಿಯಲ್ಲಿ ಅವಕಾಶ ಸಿಗುವುದಿಲ್ಲ: ಅಸಮಾಧಾನ ಹೊರಹಾಕಿದ ಬಿಜೆಪಿ ಸಂಸದ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...