Homeಕರೋನಾ ತಲ್ಲಣಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕೊರೋನಾದಿಂದ ಚೇತರಿಸಿಕೊಂಡ ಮಹಿಳೆಗೆ ಆಸ್ಪತ್ರೆಯು ವಾಹನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ 25 ಕಿ.ಮೀ ಕಾಲ್ನಡಿಗೆಯಲ್ಲಿ ಮನೆಗೆ ಹೊರಟ ಮಹಿಳೆಯನ್ನು ಹಿಂಬಾಲಿಸಿದ ಯುವಕರು ಅತ್ಯಾಚಾರಗೈದಿದ್ದಾರೆ..

- Advertisement -
- Advertisement -

ಕೋವಿಡ್ ಮನುಷ್ಯರನ್ನು ಮಾನವೀಯಗೊಳಿಸಬೇಕಿತ್ತು. ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿ ದಾರಿಯಲ್ಲಿ ನಡೆಯಲು ದೊಡ್ಡ ಪಾಠವಾಗಬೇಕಿತ್ತು. ಆದರೆ ಈ ಸಮಾಜ ಅದಕ್ಕೆ ತದ್ವಿರುದ್ಧವಾಗಿಯೇ ವರ್ತಿಸುತ್ತಿದೆ. ಕೋವಿಡ್ ಸಾಂಕ್ರಾಮಿಕದಿಂದ ಜಗತ್ತೆ ತತ್ತರಿಸಿದ್ದರು ಸಹ ಕೆಲವರು ತಮ್ಮ ವಿಕೃತತೆಯನ್ನು ಮುಂದುವರೆಸಿರುವುದು ಈ ಘಟನೆ ಸಾಕ್ಷಿಯಾಗಿದೆ. ಕೊರೋನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಮರಳುತ್ತಿದ್ದ ಮಹಿಳೆಯನ್ನು ಯುವಕರ ಗುಂಪು ಬೆನ್ನತ್ತಿ ಸಾಮೂಹಿಕವಾಗಿ ಅತ್ಯಾಚಾರಗೈದ ಬರ್ಬರ ಘಟನೆ ಅಸ್ಸಾಂನ ಚರೈದಿಯೋ ಜಿಲ್ಲೆಯಲ್ಲಿ 29 ಮೇ ಶನಿವಾರ ಸಂಜೆ ಏಳುಗಂಟೆ ಹೊತ್ತಿಗೆ ನಡೆದಿದೆ.

ಬೊರ್ಹಾತ್ ನಾಗರಮತಿ ಪ್ರದೇಶದ ಚಹ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಐಸೊಲೇಶನ್ ನಲ್ಲಿದ್ದ ಸಂತ್ರಸ್ತೆ, ಆಕೆಯ ಪತಿ ಮತ್ತು ಮಗಳು ಆರೋಗ್ಯ ಬಿಗಡಾಯಿಸಿದ ಪರಿಣಾಮ ಸಾಪೇಕಾತಿ ಮಾಡೆಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯಿಂದ ಗುಣಮುಖರಾದ ಮಹಿಳೆಯ ಪತಿ ಮೇ 27 ಗುರುವಾರದಂದು ಆಸ್ಪತ್ರೆಯಿಂದ ಮರಳಿದ್ದರು. ಶನಿವಾರ ಏಪ್ರಿಲ್ 29 ರಂದು ಮಹಿಳೆ ಮತ್ತು ಮಗಳು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾದರು.

ವ್ಯವಸ್ಥೆಯ ಕ್ರೌರ್ಯವೋ ಅಥವಾ ಮಹಿಳೆಯ ದುರಾದೃಷ್ಟವೋ ಅಸ್ಸಾಂ ನಲ್ಲಿ ಕೊರೋನಾ ಕರ್ಪ್ಯೂ ಜಾರಿಯಿರುವ ಕಾರಣ ಆಸ್ಪತ್ರೆಯಿಂದ ಮಹಿಳೆ ಮತ್ತು ಆಕೆಯ ಮಗಳಿಗೆ ಮನೆಗೆ ಮರಳಲು ಯಾವುದೇ ವಾಹನ ವ್ಯವಸ್ಥೆ ಇರಲಿಲ್ಲ. ಮಹಿಳೆ ಆಸ್ಪತ್ರೆಯವರ ಬಳಿ ತನ್ನ ಮನೆ ಆಸ್ಪತ್ರೆಯಿಂದ 25 ಕಿಲೋ ಮೀಟರ್ ದೂರವಿದೆ. ದಯವಿಟ್ಟು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆದರೆ ಆಸ್ಪತ್ರೆಯವರು ಮಹಿಳೆ ಮನವಿಗೆ ಸ್ಪಂದಿಸದೇ ಅಮಾನವೀಯವಾಗಿ ವರ್ತಿಸಿದರು. ತನ್ನ ಮನೆಗೆ ತೆರಳಲು ಬೇರೆ ಗತಿಯಿಲ್ಲದ ಮಹಿಳೆ ತನ್ನ ಮಗಳ ಜೊತೆ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮಹಿಳೆಯ ಬೆನ್ನತ್ತಿ ಆಕೆಯ ಮಗಳ ಮುಂದೆಯೇ ಬರ್ಬರವಾಗಿ ಅತ್ಯಾಚಾರಗೈದಿದ್ದಾರೆ.

ಶನಿವಾರ, ಮೇ 29 ರ ಸಂಜೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡಿದ ಸಂತ್ರಸ್ತೆಯ ಮಗಳು ಹತ್ತಿರದ ಗ್ರಾಮಸ್ಥರಿಗೆ ವಿಷಯವನ್ನು ತಿಳಿಸಿದ್ದಾಳೆ. ಗ್ರಾಮಸ್ಥರು ಪೊಲೀಸರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.

ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಪೊಲೀಸರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಮಹಿಳೆಯು ಚಿಂತಾಜನಕ ಸ್ಥಿತಿಯನ್ನು ತಲುಪಿದ್ದರು. ಸದ್ಯ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಚರೈದಿಯೋ ಜಿಲ್ಲಾ ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರವಾದ ಶೋಧ ನಡೆಸಿದ್ದಾರೆ. ಈ ನಡುವೆ ಸ್ಥಳೀಯ ಶಾಸಕ ಧರ್ಮೇಶ್ವರ್ ಕೋನ್ವಾರ್ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಬರ್ಬರ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಂತ ಪರಿಸ್ಥಿತಿಯಲ್ಲೂ ಮಹಿಳೆಯ ಮನವಿಗೆ ಸ್ಪಂದಿಸದೇ ಆ್ಯಂಬುಲೆನ್ಸ್ ಅಥವಾ ಯಾವುದೇ ವಾಹನ ವ್ಯವಸ್ಥೆ ಕಲ್ಪಿಸದ ಆಸ್ಪತ್ರೆಯ ಅಮಾನವೀಯ ಕ್ರೌರ್ಯವೇ ಘಟನೆಗೆ ಕಾರಣವೆಂದು ದೂರಿದ್ದಾರೆ. ಜೊತೆಗೆ ಆಸ್ಪತ್ರೆ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೇಶಾದ್ಯಂತ ಜನರು ಕೊರೋನಾ ಸಾಂಕ್ರಾಮಿಕದಿಂದ ಸಾವು ನೋವಿನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬಸ್ಥರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ನಡುವೆ ಕನಿಷ್ಟ ಅಂತಃಕರಣವಿಲ್ಲದ ವ್ಯವಸ್ಥೆ ತನ್ನ ಅಮಾನವೀಯ ಕ್ರೌರ್ಯದಿಂದ ಮಹಿಳೆಯನ್ನು ಇಂತಹ ದುಸ್ಥಿತಿಗೆ ದೂಡಿದೆ. ವ್ಯವಸ್ಥೆಯ ಕ್ರೌರ್ಯದ ನಡುವೆ ಮನುಷ್ಯನ ನೀಚತನ ಸೇರಿ ನಡೆಯುವ ಹೇಯ ಅಮಾನವೀಯ ಕೃತ್ಯಕ್ಕೆ ಅಸ್ಸಾಂ ನ ಮಹಿಳೆ ಒಳಗಾಗಿದ್ದಾರೆ. ಇಂತಹ ನೀಚ ಕೃತ್ಯಕ್ಕೆ ಮುಂದಾದ ಆರೋಪಿಗಳನ್ನು ಬಂಧಿಸಬೇಕು. ವ್ಯವಸ್ಥೆಯ ಕ್ರೌರ್ಯವನ್ನು ನಿಲ್ಲಿಸಲು ಸರ್ಕಾರಗಳು ಮುಂದಾಗಿ ಒಂದಷ್ಟು ಮಾನವೀಯ ಅಂತಃಕರಣದಿಂದ ಜನರ ಜೀವದ ರಕ್ಷಣೆಗೆ ಮುಂದಾಗ ಬೇಕಿದೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...