Homeಕರೋನಾ ತಲ್ಲಣಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕೊರೋನಾದಿಂದ ಚೇತರಿಸಿಕೊಂಡ ಮಹಿಳೆಗೆ ಆಸ್ಪತ್ರೆಯು ವಾಹನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ 25 ಕಿ.ಮೀ ಕಾಲ್ನಡಿಗೆಯಲ್ಲಿ ಮನೆಗೆ ಹೊರಟ ಮಹಿಳೆಯನ್ನು ಹಿಂಬಾಲಿಸಿದ ಯುವಕರು ಅತ್ಯಾಚಾರಗೈದಿದ್ದಾರೆ..

- Advertisement -
- Advertisement -

ಕೋವಿಡ್ ಮನುಷ್ಯರನ್ನು ಮಾನವೀಯಗೊಳಿಸಬೇಕಿತ್ತು. ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿ ದಾರಿಯಲ್ಲಿ ನಡೆಯಲು ದೊಡ್ಡ ಪಾಠವಾಗಬೇಕಿತ್ತು. ಆದರೆ ಈ ಸಮಾಜ ಅದಕ್ಕೆ ತದ್ವಿರುದ್ಧವಾಗಿಯೇ ವರ್ತಿಸುತ್ತಿದೆ. ಕೋವಿಡ್ ಸಾಂಕ್ರಾಮಿಕದಿಂದ ಜಗತ್ತೆ ತತ್ತರಿಸಿದ್ದರು ಸಹ ಕೆಲವರು ತಮ್ಮ ವಿಕೃತತೆಯನ್ನು ಮುಂದುವರೆಸಿರುವುದು ಈ ಘಟನೆ ಸಾಕ್ಷಿಯಾಗಿದೆ. ಕೊರೋನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಮರಳುತ್ತಿದ್ದ ಮಹಿಳೆಯನ್ನು ಯುವಕರ ಗುಂಪು ಬೆನ್ನತ್ತಿ ಸಾಮೂಹಿಕವಾಗಿ ಅತ್ಯಾಚಾರಗೈದ ಬರ್ಬರ ಘಟನೆ ಅಸ್ಸಾಂನ ಚರೈದಿಯೋ ಜಿಲ್ಲೆಯಲ್ಲಿ 29 ಮೇ ಶನಿವಾರ ಸಂಜೆ ಏಳುಗಂಟೆ ಹೊತ್ತಿಗೆ ನಡೆದಿದೆ.

ಬೊರ್ಹಾತ್ ನಾಗರಮತಿ ಪ್ರದೇಶದ ಚಹ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಐಸೊಲೇಶನ್ ನಲ್ಲಿದ್ದ ಸಂತ್ರಸ್ತೆ, ಆಕೆಯ ಪತಿ ಮತ್ತು ಮಗಳು ಆರೋಗ್ಯ ಬಿಗಡಾಯಿಸಿದ ಪರಿಣಾಮ ಸಾಪೇಕಾತಿ ಮಾಡೆಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯಿಂದ ಗುಣಮುಖರಾದ ಮಹಿಳೆಯ ಪತಿ ಮೇ 27 ಗುರುವಾರದಂದು ಆಸ್ಪತ್ರೆಯಿಂದ ಮರಳಿದ್ದರು. ಶನಿವಾರ ಏಪ್ರಿಲ್ 29 ರಂದು ಮಹಿಳೆ ಮತ್ತು ಮಗಳು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾದರು.

ವ್ಯವಸ್ಥೆಯ ಕ್ರೌರ್ಯವೋ ಅಥವಾ ಮಹಿಳೆಯ ದುರಾದೃಷ್ಟವೋ ಅಸ್ಸಾಂ ನಲ್ಲಿ ಕೊರೋನಾ ಕರ್ಪ್ಯೂ ಜಾರಿಯಿರುವ ಕಾರಣ ಆಸ್ಪತ್ರೆಯಿಂದ ಮಹಿಳೆ ಮತ್ತು ಆಕೆಯ ಮಗಳಿಗೆ ಮನೆಗೆ ಮರಳಲು ಯಾವುದೇ ವಾಹನ ವ್ಯವಸ್ಥೆ ಇರಲಿಲ್ಲ. ಮಹಿಳೆ ಆಸ್ಪತ್ರೆಯವರ ಬಳಿ ತನ್ನ ಮನೆ ಆಸ್ಪತ್ರೆಯಿಂದ 25 ಕಿಲೋ ಮೀಟರ್ ದೂರವಿದೆ. ದಯವಿಟ್ಟು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆದರೆ ಆಸ್ಪತ್ರೆಯವರು ಮಹಿಳೆ ಮನವಿಗೆ ಸ್ಪಂದಿಸದೇ ಅಮಾನವೀಯವಾಗಿ ವರ್ತಿಸಿದರು. ತನ್ನ ಮನೆಗೆ ತೆರಳಲು ಬೇರೆ ಗತಿಯಿಲ್ಲದ ಮಹಿಳೆ ತನ್ನ ಮಗಳ ಜೊತೆ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮಹಿಳೆಯ ಬೆನ್ನತ್ತಿ ಆಕೆಯ ಮಗಳ ಮುಂದೆಯೇ ಬರ್ಬರವಾಗಿ ಅತ್ಯಾಚಾರಗೈದಿದ್ದಾರೆ.

ಶನಿವಾರ, ಮೇ 29 ರ ಸಂಜೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡಿದ ಸಂತ್ರಸ್ತೆಯ ಮಗಳು ಹತ್ತಿರದ ಗ್ರಾಮಸ್ಥರಿಗೆ ವಿಷಯವನ್ನು ತಿಳಿಸಿದ್ದಾಳೆ. ಗ್ರಾಮಸ್ಥರು ಪೊಲೀಸರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.

ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಪೊಲೀಸರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಮಹಿಳೆಯು ಚಿಂತಾಜನಕ ಸ್ಥಿತಿಯನ್ನು ತಲುಪಿದ್ದರು. ಸದ್ಯ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಚರೈದಿಯೋ ಜಿಲ್ಲಾ ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರವಾದ ಶೋಧ ನಡೆಸಿದ್ದಾರೆ. ಈ ನಡುವೆ ಸ್ಥಳೀಯ ಶಾಸಕ ಧರ್ಮೇಶ್ವರ್ ಕೋನ್ವಾರ್ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಬರ್ಬರ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಂತ ಪರಿಸ್ಥಿತಿಯಲ್ಲೂ ಮಹಿಳೆಯ ಮನವಿಗೆ ಸ್ಪಂದಿಸದೇ ಆ್ಯಂಬುಲೆನ್ಸ್ ಅಥವಾ ಯಾವುದೇ ವಾಹನ ವ್ಯವಸ್ಥೆ ಕಲ್ಪಿಸದ ಆಸ್ಪತ್ರೆಯ ಅಮಾನವೀಯ ಕ್ರೌರ್ಯವೇ ಘಟನೆಗೆ ಕಾರಣವೆಂದು ದೂರಿದ್ದಾರೆ. ಜೊತೆಗೆ ಆಸ್ಪತ್ರೆ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೇಶಾದ್ಯಂತ ಜನರು ಕೊರೋನಾ ಸಾಂಕ್ರಾಮಿಕದಿಂದ ಸಾವು ನೋವಿನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬಸ್ಥರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ನಡುವೆ ಕನಿಷ್ಟ ಅಂತಃಕರಣವಿಲ್ಲದ ವ್ಯವಸ್ಥೆ ತನ್ನ ಅಮಾನವೀಯ ಕ್ರೌರ್ಯದಿಂದ ಮಹಿಳೆಯನ್ನು ಇಂತಹ ದುಸ್ಥಿತಿಗೆ ದೂಡಿದೆ. ವ್ಯವಸ್ಥೆಯ ಕ್ರೌರ್ಯದ ನಡುವೆ ಮನುಷ್ಯನ ನೀಚತನ ಸೇರಿ ನಡೆಯುವ ಹೇಯ ಅಮಾನವೀಯ ಕೃತ್ಯಕ್ಕೆ ಅಸ್ಸಾಂ ನ ಮಹಿಳೆ ಒಳಗಾಗಿದ್ದಾರೆ. ಇಂತಹ ನೀಚ ಕೃತ್ಯಕ್ಕೆ ಮುಂದಾದ ಆರೋಪಿಗಳನ್ನು ಬಂಧಿಸಬೇಕು. ವ್ಯವಸ್ಥೆಯ ಕ್ರೌರ್ಯವನ್ನು ನಿಲ್ಲಿಸಲು ಸರ್ಕಾರಗಳು ಮುಂದಾಗಿ ಒಂದಷ್ಟು ಮಾನವೀಯ ಅಂತಃಕರಣದಿಂದ ಜನರ ಜೀವದ ರಕ್ಷಣೆಗೆ ಮುಂದಾಗ ಬೇಕಿದೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...