Homeಕರೋನಾ ತಲ್ಲಣಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕೊರೋನಾದಿಂದ ಚೇತರಿಸಿಕೊಂಡ ಮಹಿಳೆಗೆ ಆಸ್ಪತ್ರೆಯು ವಾಹನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ 25 ಕಿ.ಮೀ ಕಾಲ್ನಡಿಗೆಯಲ್ಲಿ ಮನೆಗೆ ಹೊರಟ ಮಹಿಳೆಯನ್ನು ಹಿಂಬಾಲಿಸಿದ ಯುವಕರು ಅತ್ಯಾಚಾರಗೈದಿದ್ದಾರೆ..

- Advertisement -
- Advertisement -

ಕೋವಿಡ್ ಮನುಷ್ಯರನ್ನು ಮಾನವೀಯಗೊಳಿಸಬೇಕಿತ್ತು. ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿ ದಾರಿಯಲ್ಲಿ ನಡೆಯಲು ದೊಡ್ಡ ಪಾಠವಾಗಬೇಕಿತ್ತು. ಆದರೆ ಈ ಸಮಾಜ ಅದಕ್ಕೆ ತದ್ವಿರುದ್ಧವಾಗಿಯೇ ವರ್ತಿಸುತ್ತಿದೆ. ಕೋವಿಡ್ ಸಾಂಕ್ರಾಮಿಕದಿಂದ ಜಗತ್ತೆ ತತ್ತರಿಸಿದ್ದರು ಸಹ ಕೆಲವರು ತಮ್ಮ ವಿಕೃತತೆಯನ್ನು ಮುಂದುವರೆಸಿರುವುದು ಈ ಘಟನೆ ಸಾಕ್ಷಿಯಾಗಿದೆ. ಕೊರೋನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಮರಳುತ್ತಿದ್ದ ಮಹಿಳೆಯನ್ನು ಯುವಕರ ಗುಂಪು ಬೆನ್ನತ್ತಿ ಸಾಮೂಹಿಕವಾಗಿ ಅತ್ಯಾಚಾರಗೈದ ಬರ್ಬರ ಘಟನೆ ಅಸ್ಸಾಂನ ಚರೈದಿಯೋ ಜಿಲ್ಲೆಯಲ್ಲಿ 29 ಮೇ ಶನಿವಾರ ಸಂಜೆ ಏಳುಗಂಟೆ ಹೊತ್ತಿಗೆ ನಡೆದಿದೆ.

ಬೊರ್ಹಾತ್ ನಾಗರಮತಿ ಪ್ರದೇಶದ ಚಹ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಐಸೊಲೇಶನ್ ನಲ್ಲಿದ್ದ ಸಂತ್ರಸ್ತೆ, ಆಕೆಯ ಪತಿ ಮತ್ತು ಮಗಳು ಆರೋಗ್ಯ ಬಿಗಡಾಯಿಸಿದ ಪರಿಣಾಮ ಸಾಪೇಕಾತಿ ಮಾಡೆಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯಿಂದ ಗುಣಮುಖರಾದ ಮಹಿಳೆಯ ಪತಿ ಮೇ 27 ಗುರುವಾರದಂದು ಆಸ್ಪತ್ರೆಯಿಂದ ಮರಳಿದ್ದರು. ಶನಿವಾರ ಏಪ್ರಿಲ್ 29 ರಂದು ಮಹಿಳೆ ಮತ್ತು ಮಗಳು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾದರು.

ವ್ಯವಸ್ಥೆಯ ಕ್ರೌರ್ಯವೋ ಅಥವಾ ಮಹಿಳೆಯ ದುರಾದೃಷ್ಟವೋ ಅಸ್ಸಾಂ ನಲ್ಲಿ ಕೊರೋನಾ ಕರ್ಪ್ಯೂ ಜಾರಿಯಿರುವ ಕಾರಣ ಆಸ್ಪತ್ರೆಯಿಂದ ಮಹಿಳೆ ಮತ್ತು ಆಕೆಯ ಮಗಳಿಗೆ ಮನೆಗೆ ಮರಳಲು ಯಾವುದೇ ವಾಹನ ವ್ಯವಸ್ಥೆ ಇರಲಿಲ್ಲ. ಮಹಿಳೆ ಆಸ್ಪತ್ರೆಯವರ ಬಳಿ ತನ್ನ ಮನೆ ಆಸ್ಪತ್ರೆಯಿಂದ 25 ಕಿಲೋ ಮೀಟರ್ ದೂರವಿದೆ. ದಯವಿಟ್ಟು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆದರೆ ಆಸ್ಪತ್ರೆಯವರು ಮಹಿಳೆ ಮನವಿಗೆ ಸ್ಪಂದಿಸದೇ ಅಮಾನವೀಯವಾಗಿ ವರ್ತಿಸಿದರು. ತನ್ನ ಮನೆಗೆ ತೆರಳಲು ಬೇರೆ ಗತಿಯಿಲ್ಲದ ಮಹಿಳೆ ತನ್ನ ಮಗಳ ಜೊತೆ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮಹಿಳೆಯ ಬೆನ್ನತ್ತಿ ಆಕೆಯ ಮಗಳ ಮುಂದೆಯೇ ಬರ್ಬರವಾಗಿ ಅತ್ಯಾಚಾರಗೈದಿದ್ದಾರೆ.

ಶನಿವಾರ, ಮೇ 29 ರ ಸಂಜೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡಿದ ಸಂತ್ರಸ್ತೆಯ ಮಗಳು ಹತ್ತಿರದ ಗ್ರಾಮಸ್ಥರಿಗೆ ವಿಷಯವನ್ನು ತಿಳಿಸಿದ್ದಾಳೆ. ಗ್ರಾಮಸ್ಥರು ಪೊಲೀಸರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.

ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಪೊಲೀಸರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಮಹಿಳೆಯು ಚಿಂತಾಜನಕ ಸ್ಥಿತಿಯನ್ನು ತಲುಪಿದ್ದರು. ಸದ್ಯ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಚರೈದಿಯೋ ಜಿಲ್ಲಾ ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರವಾದ ಶೋಧ ನಡೆಸಿದ್ದಾರೆ. ಈ ನಡುವೆ ಸ್ಥಳೀಯ ಶಾಸಕ ಧರ್ಮೇಶ್ವರ್ ಕೋನ್ವಾರ್ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಬರ್ಬರ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಂತ ಪರಿಸ್ಥಿತಿಯಲ್ಲೂ ಮಹಿಳೆಯ ಮನವಿಗೆ ಸ್ಪಂದಿಸದೇ ಆ್ಯಂಬುಲೆನ್ಸ್ ಅಥವಾ ಯಾವುದೇ ವಾಹನ ವ್ಯವಸ್ಥೆ ಕಲ್ಪಿಸದ ಆಸ್ಪತ್ರೆಯ ಅಮಾನವೀಯ ಕ್ರೌರ್ಯವೇ ಘಟನೆಗೆ ಕಾರಣವೆಂದು ದೂರಿದ್ದಾರೆ. ಜೊತೆಗೆ ಆಸ್ಪತ್ರೆ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೇಶಾದ್ಯಂತ ಜನರು ಕೊರೋನಾ ಸಾಂಕ್ರಾಮಿಕದಿಂದ ಸಾವು ನೋವಿನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬಸ್ಥರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ನಡುವೆ ಕನಿಷ್ಟ ಅಂತಃಕರಣವಿಲ್ಲದ ವ್ಯವಸ್ಥೆ ತನ್ನ ಅಮಾನವೀಯ ಕ್ರೌರ್ಯದಿಂದ ಮಹಿಳೆಯನ್ನು ಇಂತಹ ದುಸ್ಥಿತಿಗೆ ದೂಡಿದೆ. ವ್ಯವಸ್ಥೆಯ ಕ್ರೌರ್ಯದ ನಡುವೆ ಮನುಷ್ಯನ ನೀಚತನ ಸೇರಿ ನಡೆಯುವ ಹೇಯ ಅಮಾನವೀಯ ಕೃತ್ಯಕ್ಕೆ ಅಸ್ಸಾಂ ನ ಮಹಿಳೆ ಒಳಗಾಗಿದ್ದಾರೆ. ಇಂತಹ ನೀಚ ಕೃತ್ಯಕ್ಕೆ ಮುಂದಾದ ಆರೋಪಿಗಳನ್ನು ಬಂಧಿಸಬೇಕು. ವ್ಯವಸ್ಥೆಯ ಕ್ರೌರ್ಯವನ್ನು ನಿಲ್ಲಿಸಲು ಸರ್ಕಾರಗಳು ಮುಂದಾಗಿ ಒಂದಷ್ಟು ಮಾನವೀಯ ಅಂತಃಕರಣದಿಂದ ಜನರ ಜೀವದ ರಕ್ಷಣೆಗೆ ಮುಂದಾಗ ಬೇಕಿದೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...