Homeಕರೋನಾ ತಲ್ಲಣಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕೊರೋನಾದಿಂದ ಚೇತರಿಸಿಕೊಂಡ ಮಹಿಳೆಗೆ ಆಸ್ಪತ್ರೆಯು ವಾಹನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ 25 ಕಿ.ಮೀ ಕಾಲ್ನಡಿಗೆಯಲ್ಲಿ ಮನೆಗೆ ಹೊರಟ ಮಹಿಳೆಯನ್ನು ಹಿಂಬಾಲಿಸಿದ ಯುವಕರು ಅತ್ಯಾಚಾರಗೈದಿದ್ದಾರೆ..

- Advertisement -
- Advertisement -

ಕೋವಿಡ್ ಮನುಷ್ಯರನ್ನು ಮಾನವೀಯಗೊಳಿಸಬೇಕಿತ್ತು. ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿ ದಾರಿಯಲ್ಲಿ ನಡೆಯಲು ದೊಡ್ಡ ಪಾಠವಾಗಬೇಕಿತ್ತು. ಆದರೆ ಈ ಸಮಾಜ ಅದಕ್ಕೆ ತದ್ವಿರುದ್ಧವಾಗಿಯೇ ವರ್ತಿಸುತ್ತಿದೆ. ಕೋವಿಡ್ ಸಾಂಕ್ರಾಮಿಕದಿಂದ ಜಗತ್ತೆ ತತ್ತರಿಸಿದ್ದರು ಸಹ ಕೆಲವರು ತಮ್ಮ ವಿಕೃತತೆಯನ್ನು ಮುಂದುವರೆಸಿರುವುದು ಈ ಘಟನೆ ಸಾಕ್ಷಿಯಾಗಿದೆ. ಕೊರೋನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಮರಳುತ್ತಿದ್ದ ಮಹಿಳೆಯನ್ನು ಯುವಕರ ಗುಂಪು ಬೆನ್ನತ್ತಿ ಸಾಮೂಹಿಕವಾಗಿ ಅತ್ಯಾಚಾರಗೈದ ಬರ್ಬರ ಘಟನೆ ಅಸ್ಸಾಂನ ಚರೈದಿಯೋ ಜಿಲ್ಲೆಯಲ್ಲಿ 29 ಮೇ ಶನಿವಾರ ಸಂಜೆ ಏಳುಗಂಟೆ ಹೊತ್ತಿಗೆ ನಡೆದಿದೆ.

ಬೊರ್ಹಾತ್ ನಾಗರಮತಿ ಪ್ರದೇಶದ ಚಹ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಐಸೊಲೇಶನ್ ನಲ್ಲಿದ್ದ ಸಂತ್ರಸ್ತೆ, ಆಕೆಯ ಪತಿ ಮತ್ತು ಮಗಳು ಆರೋಗ್ಯ ಬಿಗಡಾಯಿಸಿದ ಪರಿಣಾಮ ಸಾಪೇಕಾತಿ ಮಾಡೆಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯಿಂದ ಗುಣಮುಖರಾದ ಮಹಿಳೆಯ ಪತಿ ಮೇ 27 ಗುರುವಾರದಂದು ಆಸ್ಪತ್ರೆಯಿಂದ ಮರಳಿದ್ದರು. ಶನಿವಾರ ಏಪ್ರಿಲ್ 29 ರಂದು ಮಹಿಳೆ ಮತ್ತು ಮಗಳು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾದರು.

ವ್ಯವಸ್ಥೆಯ ಕ್ರೌರ್ಯವೋ ಅಥವಾ ಮಹಿಳೆಯ ದುರಾದೃಷ್ಟವೋ ಅಸ್ಸಾಂ ನಲ್ಲಿ ಕೊರೋನಾ ಕರ್ಪ್ಯೂ ಜಾರಿಯಿರುವ ಕಾರಣ ಆಸ್ಪತ್ರೆಯಿಂದ ಮಹಿಳೆ ಮತ್ತು ಆಕೆಯ ಮಗಳಿಗೆ ಮನೆಗೆ ಮರಳಲು ಯಾವುದೇ ವಾಹನ ವ್ಯವಸ್ಥೆ ಇರಲಿಲ್ಲ. ಮಹಿಳೆ ಆಸ್ಪತ್ರೆಯವರ ಬಳಿ ತನ್ನ ಮನೆ ಆಸ್ಪತ್ರೆಯಿಂದ 25 ಕಿಲೋ ಮೀಟರ್ ದೂರವಿದೆ. ದಯವಿಟ್ಟು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆದರೆ ಆಸ್ಪತ್ರೆಯವರು ಮಹಿಳೆ ಮನವಿಗೆ ಸ್ಪಂದಿಸದೇ ಅಮಾನವೀಯವಾಗಿ ವರ್ತಿಸಿದರು. ತನ್ನ ಮನೆಗೆ ತೆರಳಲು ಬೇರೆ ಗತಿಯಿಲ್ಲದ ಮಹಿಳೆ ತನ್ನ ಮಗಳ ಜೊತೆ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮಹಿಳೆಯ ಬೆನ್ನತ್ತಿ ಆಕೆಯ ಮಗಳ ಮುಂದೆಯೇ ಬರ್ಬರವಾಗಿ ಅತ್ಯಾಚಾರಗೈದಿದ್ದಾರೆ.

ಶನಿವಾರ, ಮೇ 29 ರ ಸಂಜೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡಿದ ಸಂತ್ರಸ್ತೆಯ ಮಗಳು ಹತ್ತಿರದ ಗ್ರಾಮಸ್ಥರಿಗೆ ವಿಷಯವನ್ನು ತಿಳಿಸಿದ್ದಾಳೆ. ಗ್ರಾಮಸ್ಥರು ಪೊಲೀಸರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.

ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಪೊಲೀಸರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಮಹಿಳೆಯು ಚಿಂತಾಜನಕ ಸ್ಥಿತಿಯನ್ನು ತಲುಪಿದ್ದರು. ಸದ್ಯ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಚರೈದಿಯೋ ಜಿಲ್ಲಾ ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರವಾದ ಶೋಧ ನಡೆಸಿದ್ದಾರೆ. ಈ ನಡುವೆ ಸ್ಥಳೀಯ ಶಾಸಕ ಧರ್ಮೇಶ್ವರ್ ಕೋನ್ವಾರ್ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಬರ್ಬರ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಂತ ಪರಿಸ್ಥಿತಿಯಲ್ಲೂ ಮಹಿಳೆಯ ಮನವಿಗೆ ಸ್ಪಂದಿಸದೇ ಆ್ಯಂಬುಲೆನ್ಸ್ ಅಥವಾ ಯಾವುದೇ ವಾಹನ ವ್ಯವಸ್ಥೆ ಕಲ್ಪಿಸದ ಆಸ್ಪತ್ರೆಯ ಅಮಾನವೀಯ ಕ್ರೌರ್ಯವೇ ಘಟನೆಗೆ ಕಾರಣವೆಂದು ದೂರಿದ್ದಾರೆ. ಜೊತೆಗೆ ಆಸ್ಪತ್ರೆ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೇಶಾದ್ಯಂತ ಜನರು ಕೊರೋನಾ ಸಾಂಕ್ರಾಮಿಕದಿಂದ ಸಾವು ನೋವಿನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬಸ್ಥರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ನಡುವೆ ಕನಿಷ್ಟ ಅಂತಃಕರಣವಿಲ್ಲದ ವ್ಯವಸ್ಥೆ ತನ್ನ ಅಮಾನವೀಯ ಕ್ರೌರ್ಯದಿಂದ ಮಹಿಳೆಯನ್ನು ಇಂತಹ ದುಸ್ಥಿತಿಗೆ ದೂಡಿದೆ. ವ್ಯವಸ್ಥೆಯ ಕ್ರೌರ್ಯದ ನಡುವೆ ಮನುಷ್ಯನ ನೀಚತನ ಸೇರಿ ನಡೆಯುವ ಹೇಯ ಅಮಾನವೀಯ ಕೃತ್ಯಕ್ಕೆ ಅಸ್ಸಾಂ ನ ಮಹಿಳೆ ಒಳಗಾಗಿದ್ದಾರೆ. ಇಂತಹ ನೀಚ ಕೃತ್ಯಕ್ಕೆ ಮುಂದಾದ ಆರೋಪಿಗಳನ್ನು ಬಂಧಿಸಬೇಕು. ವ್ಯವಸ್ಥೆಯ ಕ್ರೌರ್ಯವನ್ನು ನಿಲ್ಲಿಸಲು ಸರ್ಕಾರಗಳು ಮುಂದಾಗಿ ಒಂದಷ್ಟು ಮಾನವೀಯ ಅಂತಃಕರಣದಿಂದ ಜನರ ಜೀವದ ರಕ್ಷಣೆಗೆ ಮುಂದಾಗ ಬೇಕಿದೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...