Homeಕರೋನಾ ತಲ್ಲಣಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕೊರೋನಾದಿಂದ ಚೇತರಿಸಿಕೊಂಡ ಮಹಿಳೆಗೆ ಆಸ್ಪತ್ರೆಯು ವಾಹನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ 25 ಕಿ.ಮೀ ಕಾಲ್ನಡಿಗೆಯಲ್ಲಿ ಮನೆಗೆ ಹೊರಟ ಮಹಿಳೆಯನ್ನು ಹಿಂಬಾಲಿಸಿದ ಯುವಕರು ಅತ್ಯಾಚಾರಗೈದಿದ್ದಾರೆ..

- Advertisement -
- Advertisement -

ಕೋವಿಡ್ ಮನುಷ್ಯರನ್ನು ಮಾನವೀಯಗೊಳಿಸಬೇಕಿತ್ತು. ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿ ದಾರಿಯಲ್ಲಿ ನಡೆಯಲು ದೊಡ್ಡ ಪಾಠವಾಗಬೇಕಿತ್ತು. ಆದರೆ ಈ ಸಮಾಜ ಅದಕ್ಕೆ ತದ್ವಿರುದ್ಧವಾಗಿಯೇ ವರ್ತಿಸುತ್ತಿದೆ. ಕೋವಿಡ್ ಸಾಂಕ್ರಾಮಿಕದಿಂದ ಜಗತ್ತೆ ತತ್ತರಿಸಿದ್ದರು ಸಹ ಕೆಲವರು ತಮ್ಮ ವಿಕೃತತೆಯನ್ನು ಮುಂದುವರೆಸಿರುವುದು ಈ ಘಟನೆ ಸಾಕ್ಷಿಯಾಗಿದೆ. ಕೊರೋನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಮರಳುತ್ತಿದ್ದ ಮಹಿಳೆಯನ್ನು ಯುವಕರ ಗುಂಪು ಬೆನ್ನತ್ತಿ ಸಾಮೂಹಿಕವಾಗಿ ಅತ್ಯಾಚಾರಗೈದ ಬರ್ಬರ ಘಟನೆ ಅಸ್ಸಾಂನ ಚರೈದಿಯೋ ಜಿಲ್ಲೆಯಲ್ಲಿ 29 ಮೇ ಶನಿವಾರ ಸಂಜೆ ಏಳುಗಂಟೆ ಹೊತ್ತಿಗೆ ನಡೆದಿದೆ.

ಬೊರ್ಹಾತ್ ನಾಗರಮತಿ ಪ್ರದೇಶದ ಚಹ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಐಸೊಲೇಶನ್ ನಲ್ಲಿದ್ದ ಸಂತ್ರಸ್ತೆ, ಆಕೆಯ ಪತಿ ಮತ್ತು ಮಗಳು ಆರೋಗ್ಯ ಬಿಗಡಾಯಿಸಿದ ಪರಿಣಾಮ ಸಾಪೇಕಾತಿ ಮಾಡೆಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯಿಂದ ಗುಣಮುಖರಾದ ಮಹಿಳೆಯ ಪತಿ ಮೇ 27 ಗುರುವಾರದಂದು ಆಸ್ಪತ್ರೆಯಿಂದ ಮರಳಿದ್ದರು. ಶನಿವಾರ ಏಪ್ರಿಲ್ 29 ರಂದು ಮಹಿಳೆ ಮತ್ತು ಮಗಳು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾದರು.

ವ್ಯವಸ್ಥೆಯ ಕ್ರೌರ್ಯವೋ ಅಥವಾ ಮಹಿಳೆಯ ದುರಾದೃಷ್ಟವೋ ಅಸ್ಸಾಂ ನಲ್ಲಿ ಕೊರೋನಾ ಕರ್ಪ್ಯೂ ಜಾರಿಯಿರುವ ಕಾರಣ ಆಸ್ಪತ್ರೆಯಿಂದ ಮಹಿಳೆ ಮತ್ತು ಆಕೆಯ ಮಗಳಿಗೆ ಮನೆಗೆ ಮರಳಲು ಯಾವುದೇ ವಾಹನ ವ್ಯವಸ್ಥೆ ಇರಲಿಲ್ಲ. ಮಹಿಳೆ ಆಸ್ಪತ್ರೆಯವರ ಬಳಿ ತನ್ನ ಮನೆ ಆಸ್ಪತ್ರೆಯಿಂದ 25 ಕಿಲೋ ಮೀಟರ್ ದೂರವಿದೆ. ದಯವಿಟ್ಟು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆದರೆ ಆಸ್ಪತ್ರೆಯವರು ಮಹಿಳೆ ಮನವಿಗೆ ಸ್ಪಂದಿಸದೇ ಅಮಾನವೀಯವಾಗಿ ವರ್ತಿಸಿದರು. ತನ್ನ ಮನೆಗೆ ತೆರಳಲು ಬೇರೆ ಗತಿಯಿಲ್ಲದ ಮಹಿಳೆ ತನ್ನ ಮಗಳ ಜೊತೆ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮಹಿಳೆಯ ಬೆನ್ನತ್ತಿ ಆಕೆಯ ಮಗಳ ಮುಂದೆಯೇ ಬರ್ಬರವಾಗಿ ಅತ್ಯಾಚಾರಗೈದಿದ್ದಾರೆ.

ಶನಿವಾರ, ಮೇ 29 ರ ಸಂಜೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡಿದ ಸಂತ್ರಸ್ತೆಯ ಮಗಳು ಹತ್ತಿರದ ಗ್ರಾಮಸ್ಥರಿಗೆ ವಿಷಯವನ್ನು ತಿಳಿಸಿದ್ದಾಳೆ. ಗ್ರಾಮಸ್ಥರು ಪೊಲೀಸರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.

ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಪೊಲೀಸರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಮಹಿಳೆಯು ಚಿಂತಾಜನಕ ಸ್ಥಿತಿಯನ್ನು ತಲುಪಿದ್ದರು. ಸದ್ಯ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಚರೈದಿಯೋ ಜಿಲ್ಲಾ ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರವಾದ ಶೋಧ ನಡೆಸಿದ್ದಾರೆ. ಈ ನಡುವೆ ಸ್ಥಳೀಯ ಶಾಸಕ ಧರ್ಮೇಶ್ವರ್ ಕೋನ್ವಾರ್ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಬರ್ಬರ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಂತ ಪರಿಸ್ಥಿತಿಯಲ್ಲೂ ಮಹಿಳೆಯ ಮನವಿಗೆ ಸ್ಪಂದಿಸದೇ ಆ್ಯಂಬುಲೆನ್ಸ್ ಅಥವಾ ಯಾವುದೇ ವಾಹನ ವ್ಯವಸ್ಥೆ ಕಲ್ಪಿಸದ ಆಸ್ಪತ್ರೆಯ ಅಮಾನವೀಯ ಕ್ರೌರ್ಯವೇ ಘಟನೆಗೆ ಕಾರಣವೆಂದು ದೂರಿದ್ದಾರೆ. ಜೊತೆಗೆ ಆಸ್ಪತ್ರೆ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೇಶಾದ್ಯಂತ ಜನರು ಕೊರೋನಾ ಸಾಂಕ್ರಾಮಿಕದಿಂದ ಸಾವು ನೋವಿನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬಸ್ಥರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ನಡುವೆ ಕನಿಷ್ಟ ಅಂತಃಕರಣವಿಲ್ಲದ ವ್ಯವಸ್ಥೆ ತನ್ನ ಅಮಾನವೀಯ ಕ್ರೌರ್ಯದಿಂದ ಮಹಿಳೆಯನ್ನು ಇಂತಹ ದುಸ್ಥಿತಿಗೆ ದೂಡಿದೆ. ವ್ಯವಸ್ಥೆಯ ಕ್ರೌರ್ಯದ ನಡುವೆ ಮನುಷ್ಯನ ನೀಚತನ ಸೇರಿ ನಡೆಯುವ ಹೇಯ ಅಮಾನವೀಯ ಕೃತ್ಯಕ್ಕೆ ಅಸ್ಸಾಂ ನ ಮಹಿಳೆ ಒಳಗಾಗಿದ್ದಾರೆ. ಇಂತಹ ನೀಚ ಕೃತ್ಯಕ್ಕೆ ಮುಂದಾದ ಆರೋಪಿಗಳನ್ನು ಬಂಧಿಸಬೇಕು. ವ್ಯವಸ್ಥೆಯ ಕ್ರೌರ್ಯವನ್ನು ನಿಲ್ಲಿಸಲು ಸರ್ಕಾರಗಳು ಮುಂದಾಗಿ ಒಂದಷ್ಟು ಮಾನವೀಯ ಅಂತಃಕರಣದಿಂದ ಜನರ ಜೀವದ ರಕ್ಷಣೆಗೆ ಮುಂದಾಗ ಬೇಕಿದೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...