Homeಕರೋನಾ ತಲ್ಲಣಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕೊರೋನಾದಿಂದ ಚೇತರಿಸಿಕೊಂಡ ಮಹಿಳೆಗೆ ಆಸ್ಪತ್ರೆಯು ವಾಹನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ 25 ಕಿ.ಮೀ ಕಾಲ್ನಡಿಗೆಯಲ್ಲಿ ಮನೆಗೆ ಹೊರಟ ಮಹಿಳೆಯನ್ನು ಹಿಂಬಾಲಿಸಿದ ಯುವಕರು ಅತ್ಯಾಚಾರಗೈದಿದ್ದಾರೆ..

- Advertisement -
- Advertisement -

ಕೋವಿಡ್ ಮನುಷ್ಯರನ್ನು ಮಾನವೀಯಗೊಳಿಸಬೇಕಿತ್ತು. ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿ ದಾರಿಯಲ್ಲಿ ನಡೆಯಲು ದೊಡ್ಡ ಪಾಠವಾಗಬೇಕಿತ್ತು. ಆದರೆ ಈ ಸಮಾಜ ಅದಕ್ಕೆ ತದ್ವಿರುದ್ಧವಾಗಿಯೇ ವರ್ತಿಸುತ್ತಿದೆ. ಕೋವಿಡ್ ಸಾಂಕ್ರಾಮಿಕದಿಂದ ಜಗತ್ತೆ ತತ್ತರಿಸಿದ್ದರು ಸಹ ಕೆಲವರು ತಮ್ಮ ವಿಕೃತತೆಯನ್ನು ಮುಂದುವರೆಸಿರುವುದು ಈ ಘಟನೆ ಸಾಕ್ಷಿಯಾಗಿದೆ. ಕೊರೋನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಮರಳುತ್ತಿದ್ದ ಮಹಿಳೆಯನ್ನು ಯುವಕರ ಗುಂಪು ಬೆನ್ನತ್ತಿ ಸಾಮೂಹಿಕವಾಗಿ ಅತ್ಯಾಚಾರಗೈದ ಬರ್ಬರ ಘಟನೆ ಅಸ್ಸಾಂನ ಚರೈದಿಯೋ ಜಿಲ್ಲೆಯಲ್ಲಿ 29 ಮೇ ಶನಿವಾರ ಸಂಜೆ ಏಳುಗಂಟೆ ಹೊತ್ತಿಗೆ ನಡೆದಿದೆ.

ಬೊರ್ಹಾತ್ ನಾಗರಮತಿ ಪ್ರದೇಶದ ಚಹ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಐಸೊಲೇಶನ್ ನಲ್ಲಿದ್ದ ಸಂತ್ರಸ್ತೆ, ಆಕೆಯ ಪತಿ ಮತ್ತು ಮಗಳು ಆರೋಗ್ಯ ಬಿಗಡಾಯಿಸಿದ ಪರಿಣಾಮ ಸಾಪೇಕಾತಿ ಮಾಡೆಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯಿಂದ ಗುಣಮುಖರಾದ ಮಹಿಳೆಯ ಪತಿ ಮೇ 27 ಗುರುವಾರದಂದು ಆಸ್ಪತ್ರೆಯಿಂದ ಮರಳಿದ್ದರು. ಶನಿವಾರ ಏಪ್ರಿಲ್ 29 ರಂದು ಮಹಿಳೆ ಮತ್ತು ಮಗಳು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾದರು.

ವ್ಯವಸ್ಥೆಯ ಕ್ರೌರ್ಯವೋ ಅಥವಾ ಮಹಿಳೆಯ ದುರಾದೃಷ್ಟವೋ ಅಸ್ಸಾಂ ನಲ್ಲಿ ಕೊರೋನಾ ಕರ್ಪ್ಯೂ ಜಾರಿಯಿರುವ ಕಾರಣ ಆಸ್ಪತ್ರೆಯಿಂದ ಮಹಿಳೆ ಮತ್ತು ಆಕೆಯ ಮಗಳಿಗೆ ಮನೆಗೆ ಮರಳಲು ಯಾವುದೇ ವಾಹನ ವ್ಯವಸ್ಥೆ ಇರಲಿಲ್ಲ. ಮಹಿಳೆ ಆಸ್ಪತ್ರೆಯವರ ಬಳಿ ತನ್ನ ಮನೆ ಆಸ್ಪತ್ರೆಯಿಂದ 25 ಕಿಲೋ ಮೀಟರ್ ದೂರವಿದೆ. ದಯವಿಟ್ಟು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆದರೆ ಆಸ್ಪತ್ರೆಯವರು ಮಹಿಳೆ ಮನವಿಗೆ ಸ್ಪಂದಿಸದೇ ಅಮಾನವೀಯವಾಗಿ ವರ್ತಿಸಿದರು. ತನ್ನ ಮನೆಗೆ ತೆರಳಲು ಬೇರೆ ಗತಿಯಿಲ್ಲದ ಮಹಿಳೆ ತನ್ನ ಮಗಳ ಜೊತೆ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮಹಿಳೆಯ ಬೆನ್ನತ್ತಿ ಆಕೆಯ ಮಗಳ ಮುಂದೆಯೇ ಬರ್ಬರವಾಗಿ ಅತ್ಯಾಚಾರಗೈದಿದ್ದಾರೆ.

ಶನಿವಾರ, ಮೇ 29 ರ ಸಂಜೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡಿದ ಸಂತ್ರಸ್ತೆಯ ಮಗಳು ಹತ್ತಿರದ ಗ್ರಾಮಸ್ಥರಿಗೆ ವಿಷಯವನ್ನು ತಿಳಿಸಿದ್ದಾಳೆ. ಗ್ರಾಮಸ್ಥರು ಪೊಲೀಸರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.

ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಪೊಲೀಸರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಮಹಿಳೆಯು ಚಿಂತಾಜನಕ ಸ್ಥಿತಿಯನ್ನು ತಲುಪಿದ್ದರು. ಸದ್ಯ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಚರೈದಿಯೋ ಜಿಲ್ಲಾ ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರವಾದ ಶೋಧ ನಡೆಸಿದ್ದಾರೆ. ಈ ನಡುವೆ ಸ್ಥಳೀಯ ಶಾಸಕ ಧರ್ಮೇಶ್ವರ್ ಕೋನ್ವಾರ್ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಬರ್ಬರ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಂತ ಪರಿಸ್ಥಿತಿಯಲ್ಲೂ ಮಹಿಳೆಯ ಮನವಿಗೆ ಸ್ಪಂದಿಸದೇ ಆ್ಯಂಬುಲೆನ್ಸ್ ಅಥವಾ ಯಾವುದೇ ವಾಹನ ವ್ಯವಸ್ಥೆ ಕಲ್ಪಿಸದ ಆಸ್ಪತ್ರೆಯ ಅಮಾನವೀಯ ಕ್ರೌರ್ಯವೇ ಘಟನೆಗೆ ಕಾರಣವೆಂದು ದೂರಿದ್ದಾರೆ. ಜೊತೆಗೆ ಆಸ್ಪತ್ರೆ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೇಶಾದ್ಯಂತ ಜನರು ಕೊರೋನಾ ಸಾಂಕ್ರಾಮಿಕದಿಂದ ಸಾವು ನೋವಿನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬಸ್ಥರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ನಡುವೆ ಕನಿಷ್ಟ ಅಂತಃಕರಣವಿಲ್ಲದ ವ್ಯವಸ್ಥೆ ತನ್ನ ಅಮಾನವೀಯ ಕ್ರೌರ್ಯದಿಂದ ಮಹಿಳೆಯನ್ನು ಇಂತಹ ದುಸ್ಥಿತಿಗೆ ದೂಡಿದೆ. ವ್ಯವಸ್ಥೆಯ ಕ್ರೌರ್ಯದ ನಡುವೆ ಮನುಷ್ಯನ ನೀಚತನ ಸೇರಿ ನಡೆಯುವ ಹೇಯ ಅಮಾನವೀಯ ಕೃತ್ಯಕ್ಕೆ ಅಸ್ಸಾಂ ನ ಮಹಿಳೆ ಒಳಗಾಗಿದ್ದಾರೆ. ಇಂತಹ ನೀಚ ಕೃತ್ಯಕ್ಕೆ ಮುಂದಾದ ಆರೋಪಿಗಳನ್ನು ಬಂಧಿಸಬೇಕು. ವ್ಯವಸ್ಥೆಯ ಕ್ರೌರ್ಯವನ್ನು ನಿಲ್ಲಿಸಲು ಸರ್ಕಾರಗಳು ಮುಂದಾಗಿ ಒಂದಷ್ಟು ಮಾನವೀಯ ಅಂತಃಕರಣದಿಂದ ಜನರ ಜೀವದ ರಕ್ಷಣೆಗೆ ಮುಂದಾಗ ಬೇಕಿದೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...