Homeಕರೋನಾ ತಲ್ಲಣಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಅಸ್ಸಾಂನಲ್ಲಿ ಅಮಾನವೀಯ ಘಟನೆ: ಕೊರೋನಾದಿಂದ ಚೇತರಿಸಿಕೊಂಡು ಮನೆಗೆ ಹೊರಟ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ

ಕೊರೋನಾದಿಂದ ಚೇತರಿಸಿಕೊಂಡ ಮಹಿಳೆಗೆ ಆಸ್ಪತ್ರೆಯು ವಾಹನ ವ್ಯವಸ್ಥೆ ಮಾಡಿಲ್ಲ. ಹಾಗಾಗಿ 25 ಕಿ.ಮೀ ಕಾಲ್ನಡಿಗೆಯಲ್ಲಿ ಮನೆಗೆ ಹೊರಟ ಮಹಿಳೆಯನ್ನು ಹಿಂಬಾಲಿಸಿದ ಯುವಕರು ಅತ್ಯಾಚಾರಗೈದಿದ್ದಾರೆ..

- Advertisement -
- Advertisement -

ಕೋವಿಡ್ ಮನುಷ್ಯರನ್ನು ಮಾನವೀಯಗೊಳಿಸಬೇಕಿತ್ತು. ತಮ್ಮ ತಪ್ಪುಗಳನ್ನು ತಿದ್ದಿಕೊಂಡು ಸರಿ ದಾರಿಯಲ್ಲಿ ನಡೆಯಲು ದೊಡ್ಡ ಪಾಠವಾಗಬೇಕಿತ್ತು. ಆದರೆ ಈ ಸಮಾಜ ಅದಕ್ಕೆ ತದ್ವಿರುದ್ಧವಾಗಿಯೇ ವರ್ತಿಸುತ್ತಿದೆ. ಕೋವಿಡ್ ಸಾಂಕ್ರಾಮಿಕದಿಂದ ಜಗತ್ತೆ ತತ್ತರಿಸಿದ್ದರು ಸಹ ಕೆಲವರು ತಮ್ಮ ವಿಕೃತತೆಯನ್ನು ಮುಂದುವರೆಸಿರುವುದು ಈ ಘಟನೆ ಸಾಕ್ಷಿಯಾಗಿದೆ. ಕೊರೋನಾ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಮರಳುತ್ತಿದ್ದ ಮಹಿಳೆಯನ್ನು ಯುವಕರ ಗುಂಪು ಬೆನ್ನತ್ತಿ ಸಾಮೂಹಿಕವಾಗಿ ಅತ್ಯಾಚಾರಗೈದ ಬರ್ಬರ ಘಟನೆ ಅಸ್ಸಾಂನ ಚರೈದಿಯೋ ಜಿಲ್ಲೆಯಲ್ಲಿ 29 ಮೇ ಶನಿವಾರ ಸಂಜೆ ಏಳುಗಂಟೆ ಹೊತ್ತಿಗೆ ನಡೆದಿದೆ.

ಬೊರ್ಹಾತ್ ನಾಗರಮತಿ ಪ್ರದೇಶದ ಚಹ ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಐಸೊಲೇಶನ್ ನಲ್ಲಿದ್ದ ಸಂತ್ರಸ್ತೆ, ಆಕೆಯ ಪತಿ ಮತ್ತು ಮಗಳು ಆರೋಗ್ಯ ಬಿಗಡಾಯಿಸಿದ ಪರಿಣಾಮ ಸಾಪೇಕಾತಿ ಮಾಡೆಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯಿಂದ ಗುಣಮುಖರಾದ ಮಹಿಳೆಯ ಪತಿ ಮೇ 27 ಗುರುವಾರದಂದು ಆಸ್ಪತ್ರೆಯಿಂದ ಮರಳಿದ್ದರು. ಶನಿವಾರ ಏಪ್ರಿಲ್ 29 ರಂದು ಮಹಿಳೆ ಮತ್ತು ಮಗಳು ಕೂಡ ಆಸ್ಪತ್ರೆಯಿಂದ ಬಿಡುಗಡೆಯಾದರು.

ವ್ಯವಸ್ಥೆಯ ಕ್ರೌರ್ಯವೋ ಅಥವಾ ಮಹಿಳೆಯ ದುರಾದೃಷ್ಟವೋ ಅಸ್ಸಾಂ ನಲ್ಲಿ ಕೊರೋನಾ ಕರ್ಪ್ಯೂ ಜಾರಿಯಿರುವ ಕಾರಣ ಆಸ್ಪತ್ರೆಯಿಂದ ಮಹಿಳೆ ಮತ್ತು ಆಕೆಯ ಮಗಳಿಗೆ ಮನೆಗೆ ಮರಳಲು ಯಾವುದೇ ವಾಹನ ವ್ಯವಸ್ಥೆ ಇರಲಿಲ್ಲ. ಮಹಿಳೆ ಆಸ್ಪತ್ರೆಯವರ ಬಳಿ ತನ್ನ ಮನೆ ಆಸ್ಪತ್ರೆಯಿಂದ 25 ಕಿಲೋ ಮೀಟರ್ ದೂರವಿದೆ. ದಯವಿಟ್ಟು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡಿ ಎಂದು ಕೇಳಿಕೊಂಡಿದ್ದಾರೆ. ಆದರೆ ಆಸ್ಪತ್ರೆಯವರು ಮಹಿಳೆ ಮನವಿಗೆ ಸ್ಪಂದಿಸದೇ ಅಮಾನವೀಯವಾಗಿ ವರ್ತಿಸಿದರು. ತನ್ನ ಮನೆಗೆ ತೆರಳಲು ಬೇರೆ ಗತಿಯಿಲ್ಲದ ಮಹಿಳೆ ತನ್ನ ಮಗಳ ಜೊತೆ ಕಾಲ್ನಡಿಗೆಯಲ್ಲಿ ತೆರಳಿದ್ದಾರೆ. ಈ ವೇಳೆ ಯುವಕರ ಗುಂಪೊಂದು ಮಹಿಳೆಯ ಬೆನ್ನತ್ತಿ ಆಕೆಯ ಮಗಳ ಮುಂದೆಯೇ ಬರ್ಬರವಾಗಿ ಅತ್ಯಾಚಾರಗೈದಿದ್ದಾರೆ.

ಶನಿವಾರ, ಮೇ 29 ರ ಸಂಜೆ 7 ಗಂಟೆ ಸಮಯಕ್ಕೆ ಈ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಓಡಿದ ಸಂತ್ರಸ್ತೆಯ ಮಗಳು ಹತ್ತಿರದ ಗ್ರಾಮಸ್ಥರಿಗೆ ವಿಷಯವನ್ನು ತಿಳಿಸಿದ್ದಾಳೆ. ಗ್ರಾಮಸ್ಥರು ಪೊಲೀಸರಿಗೆ ಘಟನೆಯ ಕುರಿತು ಮಾಹಿತಿ ನೀಡಿದ್ದಾರೆ.

ತಕ್ಷಣಕ್ಕೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಗ್ರಾಮಸ್ಥರು ಮಹಿಳೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರು. ಪೊಲೀಸರು ಮತ್ತು ಗ್ರಾಮಸ್ಥರು ಸ್ಥಳಕ್ಕೆ ಆಗಮಿಸುವ ಹೊತ್ತಿಗೆ ಮಹಿಳೆಯು ಚಿಂತಾಜನಕ ಸ್ಥಿತಿಯನ್ನು ತಲುಪಿದ್ದರು. ಸದ್ಯ ಸಂತ್ರಸ್ತ ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಚರೈದಿಯೋ ಜಿಲ್ಲಾ ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರವಾದ ಶೋಧ ನಡೆಸಿದ್ದಾರೆ. ಈ ನಡುವೆ ಸ್ಥಳೀಯ ಶಾಸಕ ಧರ್ಮೇಶ್ವರ್ ಕೋನ್ವಾರ್ ಸಂತ್ರಸ್ತ ಮಹಿಳೆಯ ಮನೆಗೆ ಭೇಟಿ ನೀಡಿ ಬರ್ಬರ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸುವುದಾಗಿ ಹೇಳಿದ್ದಾರೆ. ಕೋವಿಡ್ ಚಿಕಿತ್ಸೆಗೆ ಒಳಗಾಗಿ ಚೇತರಿಸಿಕೊಂಡಂತ ಪರಿಸ್ಥಿತಿಯಲ್ಲೂ ಮಹಿಳೆಯ ಮನವಿಗೆ ಸ್ಪಂದಿಸದೇ ಆ್ಯಂಬುಲೆನ್ಸ್ ಅಥವಾ ಯಾವುದೇ ವಾಹನ ವ್ಯವಸ್ಥೆ ಕಲ್ಪಿಸದ ಆಸ್ಪತ್ರೆಯ ಅಮಾನವೀಯ ಕ್ರೌರ್ಯವೇ ಘಟನೆಗೆ ಕಾರಣವೆಂದು ದೂರಿದ್ದಾರೆ. ಜೊತೆಗೆ ಆಸ್ಪತ್ರೆ ಆಡಳಿತದ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೇಶಾದ್ಯಂತ ಜನರು ಕೊರೋನಾ ಸಾಂಕ್ರಾಮಿಕದಿಂದ ಸಾವು ನೋವಿನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕುಟುಂಬಸ್ಥರು ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ. ಈ ನಡುವೆ ಕನಿಷ್ಟ ಅಂತಃಕರಣವಿಲ್ಲದ ವ್ಯವಸ್ಥೆ ತನ್ನ ಅಮಾನವೀಯ ಕ್ರೌರ್ಯದಿಂದ ಮಹಿಳೆಯನ್ನು ಇಂತಹ ದುಸ್ಥಿತಿಗೆ ದೂಡಿದೆ. ವ್ಯವಸ್ಥೆಯ ಕ್ರೌರ್ಯದ ನಡುವೆ ಮನುಷ್ಯನ ನೀಚತನ ಸೇರಿ ನಡೆಯುವ ಹೇಯ ಅಮಾನವೀಯ ಕೃತ್ಯಕ್ಕೆ ಅಸ್ಸಾಂ ನ ಮಹಿಳೆ ಒಳಗಾಗಿದ್ದಾರೆ. ಇಂತಹ ನೀಚ ಕೃತ್ಯಕ್ಕೆ ಮುಂದಾದ ಆರೋಪಿಗಳನ್ನು ಬಂಧಿಸಬೇಕು. ವ್ಯವಸ್ಥೆಯ ಕ್ರೌರ್ಯವನ್ನು ನಿಲ್ಲಿಸಲು ಸರ್ಕಾರಗಳು ಮುಂದಾಗಿ ಒಂದಷ್ಟು ಮಾನವೀಯ ಅಂತಃಕರಣದಿಂದ ಜನರ ಜೀವದ ರಕ್ಷಣೆಗೆ ಮುಂದಾಗ ಬೇಕಿದೆ.


ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕೋವಿಡ್‌ ಮೃತದೇಹಗಳನ್ನು ನದಿಗೆ ಎಸೆಯುತ್ತಿರುವ ಯುವಕರು: ಅಮಾನವೀಯ ಘಟನೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...