Homeಕರ್ನಾಟಕಇದು ಗ್ರಾಮದೇವತೆಗಳ ಭಾರತ: ದೇಶದ ಬಹುತ್ವವೂ ಗ್ರಾಮಗಳ ವೈವಿಧ್ಯ ನಂಬಿಕೆಗಳಲ್ಲಿ ಅಡಗಿದೆ

ಇದು ಗ್ರಾಮದೇವತೆಗಳ ಭಾರತ: ದೇಶದ ಬಹುತ್ವವೂ ಗ್ರಾಮಗಳ ವೈವಿಧ್ಯ ನಂಬಿಕೆಗಳಲ್ಲಿ ಅಡಗಿದೆ

ಊರಿನ ಗ್ರಾಮದೇವತೆ ಊರಿನ ಜನರ ಭಯ ಭಕ್ತಿಗಳಿಗೆ ನೆಲೆಯಾಗಿ ನಿಂತರೆ ಪ್ರತಿಯೊಂದು ಮನೆಯ ಮನೆದೇವರು ಅವರ ನಿತ್ಯದ ಆಗುಹೋಗುಗಳಿಗೆ ಸ್ಪಂದನೆಯ ರೂಪವಾಗಿ ನಿಂತಿವೆ.

- Advertisement -
- Advertisement -

ಭಾರತದ ಪರಂಪರೆಯ ಆಳಕ್ಕಿಳಿದಂತೆಲ್ಲಾ ಗ್ರಾಮದೇವತೆಗಳೊಂದಿಗಿನ ನಂಟು ತಿಳಿಯುತ್ತಾ ಹೋಗುತ್ತದೆ. ಗ್ರಾಮದೇವತೆಗಳಿಗೂ ಈ ದೇಶಕ್ಕೂ ಇರುವ ಸಂಬಂಧ ಅಂತಹುದು. ಪ್ರತಿಯೊಂದು ಊರಿನಲ್ಲೂ ಒಂದಲ್ಲಾ ಒಂದು ಗ್ರಾಮದೇವತೆ ನೆಲೆಸಿರುತ್ತದೆ. ಆ ಇಡೀ ಊರು ಆ ದೇವರಿಗೆ ಭಕ್ತಿಯ ಮಹಾಪೂರವನ್ನೇ ಹರಿಸುವಂತೆ ನಡೆದುಕೊಳ್ಳುತ್ತದೆ. ಇದಕ್ಕೆ ಲಕ್ಷಾಂತರ ಹಳ್ಳಿಗಳಲ್ಲಿ ಇಂದಿಗೂ ನಡೆಯುತ್ತಿರುವ ಜಾತ್ರೆಗಳೇ ಸಾಕ್ಷಿ. ಈ ಜಾತ್ರೆಗಳಲ್ಲಿ ಕೆಲವೊಂದು ಸಸ್ಯಾಹಾರಕ್ಕೆ ಸೀಮಿತವಾದರೆ, ಇನ್ನೂ ಕೆಲವು ಮಾಂಸಾಹಾರಕ್ಕೆ, ಮತ್ತೂ ಕೆಲವು ಸಸ್ಯಾಹಾರ ಮತ್ತು ಮಾಂಸಾಹಾರ ಎರಡನ್ನೂ ಒಳಗೊಂಡಂತವು.

ಊರಿನ ಗ್ರಾಮದೇವತೆ ಊರಿನ ಜನರ ಭಯ ಭಕ್ತಿಗಳಿಗೆ ನೆಲೆಯಾಗಿ ನಿಂತರೆ ಪ್ರತಿಯೊಂದು ಮನೆಯ ಮನೆದೇವರು ಅವರ ನಿತ್ಯದ ಆಗುಹೋಗುಗಳಿಗೆ ಸ್ಪಂದನೆಯ ರೂಪವಾಗಿ ನಿಂತಿವೆ. ವರ್ಷಕ್ಕೊಮ್ಮೆ ಈ ಮನೆದೇವರಿಗೆ ಮುಡಿಯನ್ನು ಕೊಡುವುದರ ಜೊತೆಗೆ ಆ ದೇವರ ಬಳಿ ನಡೆಯುವ ಜಾತ್ರೆಗೋ, ಪರಿಷೆಗೋ ಕುಟುಂಬ ಸಮೇತ ಹೊರಡುವ ಪರಿಪಾಠವನ್ನು ಬೆಳೆಸಿಕೊಳ್ಳುತ್ತಲೇ ಬರುತ್ತಿದ್ದಾರೆ. ಇಷ್ಟೇ ಅಲ್ಲದೆ ಆ ಮನೆದೇವರ ಹೆಸರನ್ನು ತಮ್ಮ ಮಕ್ಕಳಿಗೆ ಇಡುವುದು, ಅಲ್ಲೇ ನಾಮಕರಣದ ವ್ಯವಸ್ಥೆ ಮಾಡುವುದು, ಮದುವೆ ಮಾಡುವುದು, ಗುಡ್ಡ, ಜೋಗಿ ಮುಂತಾದವುಗಳನ್ನು ಬಿಡುವುದು ಎಲ್ಲವೂ ಇಲ್ಲಿಯೇ ನಡೆಯುತ್ತದೆ.

ಗ್ರಾಮದೇವರಿಗಂತೂ ಎಲ್ಲ ಸಮುದಾಯದವರು ಚಂದಾ ಎತ್ತಿ, ಕೊಂಡ ತೋಡಿ, ಹಣ್ಣು ಜವನ ಎಸೆದು ಸಂಭ್ರಮದೋಪಾದಿಯಲ್ಲಿ ಜಾತ್ರೆಯನ್ನು ನೆರವೇರಿಸುತ್ತಾರೆ. ಹತ್ತಾರು ಮನೆಗಳ ನೆಂಟರುಗಳನ್ನು ಕರೆದು ಊಟೋಪಚಾರ ಮಾಡಿ ತಾವೂ ಖುಷಿ ಪಟ್ಟು, ಅವರನ್ನೂ ಖುಷಿಪಡಿಸಿ ನಿರಂತರವಾಗಿ ಈ ಹಬ್ಬಗಳನ್ನು ಮಾಡುತ್ತಾ ಬರುತ್ತಿದ್ದಾರೆ. ಇವೆಲ್ಲವೂ ಸಮುದಾಯದ ಹಬ್ಬಗಳಾಗಿವೆ. ಕೆಲವೊಂದು ಗ್ರಾಮದೇವತೆಗಳಿಗೆ ದೊಡ್ಡದೊಡ್ಡ ಗುಡಿಗಳಿದ್ದರೆ, ಇನ್ನೂ ಕೆಲವು ದೇವರುಗಳಿಗೆ ಸಣ್ಣ ಮಂಟಪವೇ ವಾಸಸ್ಥಾನವಾಗಿದೆ. ಅದರಲ್ಲೂ ಮಾರಮ್ಮನಂತಹ ದೇವರುಗಳು ಒಂದು ಕಲ್ಲಿನ ರೂಪದಲ್ಲಿ ಬೇವಿನ ಮರದ ಕೆಳಗೆ ನಿಂತಿರುವುದಷ್ಟೇ ಆಗಿದೆ. ಈ ಗ್ರಾಮದೇವರುಗಳಲ್ಲಿ ಮಾರಮ್ಮರ ಪಾತ್ರವೇ ದೊಡ್ಡದು. ಭಿನ್ನ ಭಿನ್ನ ಹೆಸರುಗಳಲ್ಲಿ ಕರೆಸಿಕೊಳ್ಳುವ ಇವರುಗಳು ಪ್ರತಿ ಊರಿನ ರಕ್ಷಕಿಯರು ಎನ್ನುವಂತೆ ಬಿಂಬಿತಗೊಂಡು ಪೂಜಿಸಲ್ಪಡುತ್ತಿವೆ. ಮನೆದೇವರಿಗೆ ಹರಕೆಯನ್ನು ಹೊರುವ, ಮುಡಿಯನ್ನು ಕೊಡುವ, ಈ ದೇವರುಗಳ ಹುಂಡಿಗೆ ಅಂತಲೇ ವರ್ಷವಿಡೀ ಮುಡಿಪು ಕಟ್ಟುವ ಒಂದು ವರ್ಗವೇ ಹಲವು ಸಮುದಾಯದಲ್ಲಿ ಇಂದಿಗೂ ಜೀವಂತವಿದೆ. ಇಲ್ಲಿ ಒಂದೊಂದು ದೇವರಿಗೂ ಒಂದೊಂದು ಕಥೆಗಳಿವೆ, ಜನಗಳದ್ದೇ ಆದ ನಂಬಿಕೆಗಳಿವೆ, ಆಚರಣೆಗಳಿವೆ, ಸಂಪ್ರದಾಯಗಳಿವೆ ಮತ್ತು ಹಾಡುಗಳಿವೆ. ನಿರಂತರವಾಗಿ ಇವುಗಳನ್ನು ತಲೆಮಾರಿನಿಂದ ತಲೆಮಾರಿಗೆ ಹೊತ್ತುಕೊಂಡು ರವಾನಿಸುತ್ತಾ ಬರಲಾಗುತ್ತಿದೆ.

ಇನ್ನು ಬುಡಕಟ್ಟುಗಳ ವಿಷಯಕ್ಕೆ ಬಂದರೆ ಅಲ್ಲೂ ಕೂಡ ಅವರು ತಮ್ಮದೇ ಆದ ದೇವರುಗಳನ್ನು ಹೊಂದಿದ್ದಾರೆ. ಹಲವು ಅಲೆಮಾರಿ ಸಮುದಾಯಗಳಿಗೂ ಕೂಡ ತಮ್ಮದೇ ಆದ ದೇವರುಗಳಿವೆ. ಒಂದು ಕಡೆ ನೆಲೆನಿಂತಿರುವ ಎಷ್ಟೋ ಸಮುದಾಯಗಳಿಗೂ ದೇವರುಗಳಿವೆ. ಎಷ್ಟೋ ಸಮುದಾಯಗಳ ಊರಿನ ಹೆಬ್ಬಾಗಲಿಗೆ ಈ ದೇವತೆಗಳು ನೆಲೆನಿಂತಿರುತ್ತವೆ. ಇನ್ನೂ ಮುಂದುವರಿದು ಹೇಳುವುದಾದರೆ ಎಷ್ಟೋ ಸಮುದಾಯಗಳಿಗೆ ಮರಗಳೇ ಪವಿತ್ರ ನೆಲೆಗಳಾಗಿ ನೆಲೆಯೂರಿವೆ. ಬಹುಪಾಲು ಗ್ರಾಮದ ಮುಖಂಡರುಗಳು ಈ ಗ್ರಾಮದೇವತೆಗಳಿಗೆ ಕೈಮುಗಿದೇ ತಮ್ಮ ನಿತ್ಯದ ಕಾಯಕವನ್ನು ಆರಂಭಿಸುತ್ತಾರೆ. ಉಳುವಾಗ, ಬಿತ್ತುವಾಗ, ಬೆಳೆ ಬೆಳೆಯುವಾಗ, ಬೆಳೆದು ಕಣಜಗಳಿಗೆ ತುಂಬುವಾಗ, ಕೇರುವಾಗ, ತೂರುವಾಗ, ಬೀಸುವಾಗ ಎಲ್ಲ ಸಂದರ್ಭಗಳಲ್ಲೂ ಈ ಗ್ರಾಮದೇವತೆಗಳೊಂದಿಗಿನ ನಂಟು ಊರಿನವರಿಗೆ ಇದ್ದೇ ಇರುತ್ತದೆ. ಇಷ್ಟೇ ಅಲ್ಲ ಮದುವೆಯಾದಾಗ, ಮಕ್ಕಳಾದಾಗ, ಅವುಗಳಿಗೆ ಹೆಸರಿಡುವಾಗ, ಸತ್ತಾಗ ಎಲ್ಲ ಶುಭ ಮತ್ತು ಅಶುಭ ಕಾರ್ಯಗಳ ಒಳಗೆ ಈ ದೇವರುಗಳ ನೆನಪು ಅವರಲ್ಲಿ ಸದಾ ಜಾಗೃತವಾಗೇ ಇರುತ್ತದೆ.

ಈ ಗ್ರಾಮದೇವತೆಗಳ ಆಚರಣೆಗಳೇ ಭಾರತದ ಬಹುಸಂಸ್ಕೃತಿಗೆ ಹಿಡಿದ ಕನ್ನಡಿ. ಇದು ಬಗೆಬಗೆಯ ಆಚರಣೆಗಳ ತವರೂರು ಎಂಬುದನ್ನು ಇವುಗಳೇ ತೋರಿಸಿಕೊಡುತ್ತವೆ. ಇದೇ ಭಾರತದ ನೈಜ ಜೀವಾಳ ಎನ್ನುವಂತೆ ಹಿಂದಿನಿಂದ ನಡೆಯುತ್ತಲೇ ಬಂದಿದೆ. ಕರ್ನಾಟಕವನ್ನೇ ಕೇಂದ್ರೀಕರಿಸಿ ಹೇಳುವುದಾದರೆ ಇಲ್ಲಿ ಮಾದಪ್ಪ, ಮಂಟೆಸ್ವಾಮಿ, ಜುಂಜಪ್ಪ, ಮೈಲಾರಲಿಂಗ ಮುಂತಾದ ಜನಪದ ದೇವರುಗಳ ಆಚರಣೆಯೇ ವೈಶಿಷ್ಟ್ಯೆತೆಯಿಂದ ಕೂಡಿದೆ. ಇಲ್ಲಿ ಇವುಗಳಿಗೇ ಆದ ಮಹತ್ವದ ಸ್ಥಾನವೂ ಇದೆ. ಈ ದೇವರುಗಳಿಗೆ ಅಂತನೇ ನಿತ್ಯ ನಡೆದುಕೊಳ್ಳುವ ಒಂದು ದೊಡ್ಡ ಪಡೆಯೇ ಇಲ್ಲಿ ಬೀಡುಬಿಟ್ಟಿದೆ. ಗುಡ್ಡರು, ಸಂತರು, ಜೋಗಿಗಳು, ದಾಸರು, ಜಂಗಮರು ಎನ್ನುವ ಹಲವು ಭಕ್ತಿವಂತರ ದಂಡೇ ಇಲ್ಲಿ ಸುತ್ತುವರೆದಿದೆ. ಇವರುಗಳಿಂದಲೇ ಇಂಡಿಯಾ ಬಹುವೈವಿಧ್ಯತೆಯಿಂದ ಕೂಡಿರುವಂತೆ ಕಾಣುತ್ತಿದೆ ಮತ್ತು ಅದು ಸತ್ಯವೂ ಆಗಿದೆ. ಈ ರೀತಿ ಇರುವುದರಿಂದಲೇ ಇಲ್ಲಿನ ವೈವಿಧ್ಯತೆ ಎಲ್ಲರ ಆಕರ್ಷಣೆಯ ಕೇಂದ್ರವೂ ಆಗಿದೆ.

PC : Sidilaghatta

ಇಂದು ಬಹುಸಂಸ್ಕೃತಿಯೇ ಅಪಾಯದ ಅಂಚಿಗೆ ಬಂದು ನಿಲ್ಲುತ್ತಿದೆಯೇನೋ ಎನ್ನುವಂತಾಗಿದೆ. ಎಲ್ಲೆಲ್ಲೂ ಏಕ ಸಂಸ್ಕೃತಿಯನ್ನು ಬಿತ್ತುವ ಹುನ್ನಾರದಿಂದ ಇವುಗಳನ್ನೆಲ್ಲ ತೆರೆಮರೆಗೆ ಸರಿಸುವ ಪ್ರಯತ್ನ ಮಾಡಲಾಗುತ್ತಿದೆ. ಮೊದಲಿನಿಂದಲೂ ಈ ಗ್ರಾಮದೇವತೆಗಳ ಬಗ್ಗೆ ಒಂದು ತಾತ್ಸಾರ ಇದ್ದೇ ಇದೆ. ಈ ಕಾರಣದಿಂದಲೇ ಗ್ರಾಮಗಳನ್ನು ದಾಟಿ ಗ್ರಾಮದೇವತೆಗಳು ಹೊರಬರಲು ಸಾಧ್ಯವಾಗುತ್ತಿಲ್ಲ. ಆದರೆ ಪ್ರಧಾನ ಸಂಸ್ಕೃತಿ ಎನಿಸಿಕೊಂಡಿರುವ ಮೇಲ್ಜಾತಿಗರು ಪೂಜಿಸುವ ಶ್ರೀಕೃಷ್ಣನ ದೇವಸ್ಥಾನಗಳು ಅಮೆರಿಕದಂತಹ ದೇಶಗಳಲ್ಲೂ ಅಸ್ತಿತ್ವವನ್ನು ಪಡೆದುಕೊಳ್ಳುತ್ತವೆ. ಇಲ್ಲಿ ಆರ್ಥಿಕವಾಗಿಯೂ, ಸಾಮಾಜಿಕವಾಗಿಯೂ ಮುನ್ನಡೆಯನ್ನು ಕಾಯ್ದುಕೊಂಡು ಆ ಮೂಲಕ ರಾಜಕೀಯ ಅಸ್ತಿತ್ವಕ್ಕೂ ಕಾರಣೀಭೂತವಾಗುತ್ತಿವೆ. ರಾಮನನ್ನು ಎಲ್ಲರ ದೇವರೆನ್ನುವ, ಕೃಷ್ಣನೇ ಎಲ್ಲದಕ್ಕು ಮೂಲ ಎನ್ನುವ, ಎಲ್ಲ ಆಗುಹೋಗುಗಳಿಗೆ ತ್ರಿಮೂರ್ತಿಗಳೇ ಕಾರಣ ಎನ್ನುವುದರ ಹಿಂದಿನ ಹುನ್ನಾರ ಈ ಆದಿವಾಸಿ, ಬುಡಕಟ್ಟು, ಅಲೆಮಾರಿ ಮತ್ತು ನೆಲೆ ನಿಂತ ಸಮುದಾಯಗಳ ಗ್ರಾಮದೇವತೆಗಳನ್ನು ತೆರೆಮರೆಗೆ ಸರಿಸುವ ಪ್ರಯತ್ನವೇ ಆಗಿದೆ.

ಇಂದು ಎಲ್ಲ ಮೂಲನೆಲೆಯ ದೇವರುಗಳನ್ನು ಮರೆಮಾಚುವ ನಿಟ್ಟಿನಲ್ಲಿ ಹಳ್ಳಿಹಳ್ಳಿಯಿಂದ ಪಟ್ಟಣಗಳ ಮನೆ ಮನೆಯವರೆಗೂ ವರಮಹಾಲಕ್ಷ್ಮಿ ಹಬ್ಬವನ್ನು ಪರಿಚಯಿಸಲಾಗುತ್ತಿದೆ. ಲಕ್ಷ್ಮಿ ಪೂಜೆಯನ್ನು ಪ್ರತಿ ಶುಕ್ರವಾರ ಮಾಡುವಂತೆ ಹೇಳಲಾಗುತ್ತಿದೆ. ಪ್ರತಿ ಮನೆಯ ಗೃಹ ಪ್ರವೇಶಕ್ಕೆ ಸತ್ಯನಾರಾಯಣ ಪೂಜೆಯನ್ನು ಕಡ್ಡಾಯವಾಗಿ ಮಾಡಿಸುವಂತೆ ಯೋಜನೆ ರೂಪಿಸಲಾಗುತ್ತಿದೆ. ಭೂಮಿ ಪೂಜೆ, ಮದುವೆ ಮುಂತಾದ ಶುಭ ಸಂದರ್ಭಗಳಲ್ಲೂ ಈ ದೇವರುಗಳನ್ನೇ ಮುನ್ನಲೆಗೆ ತರಲಾಗುತ್ತಿದೆ. ಸಂಕಷ್ಠಿ, ಏಕಾದಶಿ, ಭೀಮನ ಅಮವಾಸ್ಯೆ, ಗೊಂಬೆ ಪೂಜೆ, ತುಳಸಿಪೂಜೆ ಮುಂತಾದವುಗಳನ್ನು ಸದ್ದಿಲ್ಲದೆ ಎಲ್ಲರ ಮನೆಯೊಳಗೆ ಪ್ರವೇಶ ಮಾಡುವಂತೆ ಮಾಡಲಾಗಿದೆ. ಹಿಂದೆ ಪ್ರಧಾನ ಸಂಸ್ಕೃತಿ ಮತ್ತು ಅಧೀನ ಸಂಸ್ಕೃತಿ ಎನ್ನುವ ಹೆಸರಿನಲ್ಲಿ ಯಾವ ಚರ್ಚೆಗಳು ನಡೆಯುತ್ತಿದ್ದವೋ ಇಂದು ಅದೇ ಮುಂದುವರಿಯುತ್ತಿದೆ. ಪ್ರಧಾನ ಸಂಸ್ಕೃತಿಯು ಯಾವಾಗಲೂ ತನ್ನದನ್ನೇ ಮೇಲುಗೈ ಸಾಧಿಸಲು ಶ್ರಮಿಸುತ್ತಿರುತ್ತದೆ. ಇದಕ್ಕೆ ಯಾವ ಬಹುತ್ವವೂ ಮುಖ್ಯವಲ್ಲ.

ಇದಕ್ಕಾಗಿ ದಿನನಿತ್ಯ ಟಿವಿಗಳಲ್ಲಿ ಜ್ಯೋತಿಷಿಗಳನ್ನು ಕೂರಿಸಿ ಅವರಿಂದ ಪ್ರವಚನ ಕೊಡಿಸಲಾಗುತ್ತಿದೆ. ಕೆಲವೊಂದು ಚಾನಲ್‍ಗಳನ್ನು ನಿಗದಿತ ದೇವರನ್ನು ವಿಜೃಂಭಿಸಲಿಕ್ಕೇ ರೂಪಿಸಲಾಗಿದೆ. ಅನೇಕ ಪ್ರವಚನಗಳಲ್ಲಿ ಬೆಳಿಗ್ಗೆ ಎದ್ದು ಈ ಸಿರಿವಂತ ಅಥವಾ ಮೇಲ್ಜಾತಿಯವರೇ ಪೂಜಿಸುವ ದೇವರುಗಳನ್ನೇ ಆರಾಧಿಸುವಂತೆ ಪ್ರೇರಣೆ ಕೊಡಲಾಗುತ್ತಿದೆ. ಕೆಲವೊಂದು ದೇವರ ಹೆಸರಿನಲ್ಲಿ ಸಂಘ-ಸಂಸ್ಥೆಗಳನ್ನು ಸ್ಥಾಪಿಸಿ ದಿನಕ್ಕೆ ಐದು ಬಾರಿ ಇಂತಹ ದೇವರುಗಳನ್ನೇ ಆರಾಧಿಸಬೇಕೆಂದು ಹೇಳಿಕೊಡಲಾಗುತ್ತಿದೆ. ಪ್ರತಿನಿತ್ಯ ಒಂದಲ್ಲಾ ಒಂದು ಭಾಷೆಯಲ್ಲಿ ಧಾರಾವಾಹಿಗಳನ್ನು ಸೃಷ್ಟಿಸಿ ರಾಮ, ಕೃಷ್ಣ ಇಂತಹ ದೇವರುಗಳನ್ನೇ ಮತ್ತೆ ಮತ್ತೆ ಮೆರೆಯುವಂತೆ ನೋಡಿಕೊಳ್ಳಲಾಗುತ್ತಿದೆ. ಬಾಲ್ಯದಿಂದಲೂ ಕೂಡ ಇವರ ವಿಚಾರಗಳನ್ನೇ ತಲೆಯಲ್ಲಿ ಹೊತ್ತು ತಿರುಗಬೇಕು. ಆ ನೆಲೆಯಲ್ಲಿ ಎಲ್ಲ ರೀತಿಯ ಯೋಜನೆಗಳು ತಯಾರಾಗಿರುವಂತೆ ಕಾಣಿಸುತ್ತಿದೆ. ಇನ್ನೂ ಮುಂದುವರಿದಂತೆ ಅಲ್ಲಲ್ಲಿನ ಸ್ಥಳೀಯ ಗ್ರಾಮದೇವತೆಗಳ ಇತಿಹಾಸವನ್ನೇ ಬದಲಿಸಿ ಅದಕ್ಕೊಂದು ಹೊಸ ಹೆಸರಿಟ್ಟು ಅದನ್ನು ತಮ್ಮ ಮೇಲ್ ಸಂಸ್ಕೃತಿಯ ನೆಲೆಯಲ್ಲಿ ನಿಲ್ಲಿಸಿ ಆ ಮೂಲಕ ಮತ್ತೊಮ್ಮೆ ಮೇಲು ವರ್ಗದ ಸಂಸ್ಕೃತಿಯನ್ನೇ ಎಲ್ಲರೆದೆಯಲ್ಲಿ ಬಿತ್ತುವಂತೆ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷಿಯೆಂಬಂತೆ ಇತ್ತೀಚೆಗೆ ಉಕ್ಕಡಗಾತಿ ಗ್ರಾಮದೇವತೆ ಇದಕ್ಕಿದ್ದಂತೆ ಅಹಲ್ಯಾದೇವಿ ಎನ್ನುವ ಹೆಸರು ಪಡೆದು ಚಾಲ್ತಿಗೆ ಬರುತ್ತಿದೆ. ಇತ್ತೀಚೆಗೆ ನಡೆದ ಅಯೋಧ್ಯೆಯ ವಿಚಾರವನ್ನುಎಲ್ಲರೂ ಭಾವನಾತ್ಮಕವಾಗಿ ತೆಗೆದುಕೊಳ್ಳುವಂತೆ ಮಾಡಿ ಸ್ಥಳೀಯ ದೇವರುಗಳಿಗಿಂತ ಅದೇ ಮುಖ್ಯ ಎನ್ನುವಂತೆ ಮಾಡಲಾಯಿತು.

ಭಾರತದ ಬಹುತ್ವ ಉಳಿಯಬೇಕಾದರೆ ಈ ಗ್ರಾಮದೇವತೆಗಳೂ ಉಳಿಯಬೇಕು. ಇವುಗಳನ್ನು ರಾಷ್ಟ್ರಮಟ್ಟದಲ್ಲಿ ಪರಿಗಣಿಸುವಂತೆ ಮಾಡಬೇಕು. ಗ್ರಾಮದೇವತೆಗಳನ್ನು ಉಳಿಸಿಕೊಂಡರೆ ಮಾತ್ರ ಬಹುತ್ವದ ಭಾರತವನ್ನು ಉಳಿಸಲು ಸಾಧ್ಯ. ಇಲ್ಲದಿದ್ದರೆ ಇದು ಏಕಸಂಸ್ಕೃತಿಯ ನೆಲೆಗೆ ದೂಡಿ ಇನ್ನಷ್ಟು ಅಸಮಾನತೆಯನ್ನೇ ಹಾಸಿಹೊದ್ದು ಮಲಗಿಬಿಡುವಂತೆ ಮಾಡಿಬಿಡುತ್ತಾರೆ. ಈ ಎಲ್ಲ ಕಾರಣಗಳಿಂದ ಜನರ ಜೀವನಾಡಿಯಾಗಿ ಬಹುತ್ವದ ಪಾಠವನ್ನು ಸದಾ ತಲೆಯಲ್ಲಿ ತುಂಬುತ್ತಿರುವ ಗ್ರಾಮದೇವತೆಗಳು ಉಳಿಯಬೇಕು. ಆ ನಿಟ್ಟಿನಲ್ಲಿ ನಮ್ಮೆಲ್ಲರ ಪ್ರಯತ್ನ ಸಾಗಬೇಕು. ಇದರೊಂದಿಗೆ ಈ ದೇವತೆಗಳೊಂದಿಗೆ ಅಂಟಿರುವ ಜಾತಿ ರೋಗಗಳನ್ನು ಕಿತ್ತು ಮೂಲೆಗೆ ಎಸೆಯಬೇಕು. ಎಲ್ಲ ಸಮುದಾಯದವರು ಇವುಗಳನ್ನು ಮುಟ್ಟಿ ಪೂಜಿಸುವಂತೆ ಮಾಡಬೇಕು. ಜಾತ್ರೆಗಳಲ್ಲಿ ಒಂದಾಗಿ ಒಂದು ಕಡೆ ಸೇರಿ ನಡೆಯುವಂತೆ ಆ ಜಾತ್ರೆಗಳಲ್ಲಿ ನಡೆಯುವ ಊಟೋಪಚಾರದ ವಿಷಯದಲ್ಲೂ ಒಗ್ಗೂಡುವಂತೆ ಮಾಡಬೇಕಿದೆ. ಸಸ್ಯಹಾರ ಮತ್ತು ಮಾಂಸಾಹಾರ ಪದ್ಧತಿಯ ಎಲ್ಲ ಆಚರಣೆಗಳನ್ನು ಒಂದೇ ಎನ್ನುವ ದೃಷ್ಟಿಕೋನದಲ್ಲಿ ನೋಡುವಂತೆ ಮಾಡಬೇಕಿದೆ. ಬಹುತ್ವದ ಅಡಿಪಾಯವಾಗಿರುವ ಈ ಗ್ರಾಮದೇವತೆಗಳನ್ನು ಜಾತಿ, ಕುಲ, ವರ್ಗಗಳಿಂದ ಮುಕ್ತಗೊಳಿಸಿದರೆ ಇನ್ನಷ್ಟು ಜನತೆಗೆ ಹತ್ತಿರವಾಗಿ ಈ ದೇಶದ ಬಹುತ್ವವನ್ನು ಅವುಗಳೇ ಕಾಪಾಡಿಕೊಳ್ಳುತ್ತಾ ಮುಂದುವರೆಸುತ್ತವೆ. ಕಲ್ಲನ್ನು ಪೂಜಿಸುವ, ಮರದಲ್ಲೇ ದೇವರನ್ನು ಕಾಣುವ, ತನ್ನ ಸುತ್ತಲಿನ ಪ್ರತಿಯೊಂದು ವಸ್ತುಗಳಿಗೂ ಪೂಜನೀಯ ಸ್ಥಾನ ಕೊಡುವ, ಪ್ರಕೃತಿಯ ಚರಾಚರ ವಸ್ತುಗಳಿಗೆ ನಮಿಸುವ ಕೈಗಳು ಇಲ್ಲಿ ಇನ್ನೂ ಜೀವಂತವಿವೆ. ಈ ಕೈಗಳನ್ನು ಉಳಿಸಿದಷ್ಟೂ ಇಲ್ಲಿ ಬಹುತ್ವ ಜೀವಂತವಿರುತ್ತದೆ.


ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡಿದ್ದಕ್ಕೆ ಬಹಿಷ್ಕಾರದ ಶಿಕ್ಷೆ: ನಂಜನಗೂಡಿನಲ್ಲೊಂದು ಅಮಾನವೀಯ ಘಟನೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮಾನವನ ಉಪಯೋಗಕ್ಕೆ ಧರ್ಮ ಮತ್ತು ಸಂಕೃತಿಗೆ ವಿವಿಧ ಅರ್ಥ್ಯ ಮತ್ತು ಕಲ್ಪನೆ ನೀಡಿ ದೇವರ ಹೆಸರುಗಳಲ್ಲಿ ಆತ್ಮವಿಶ್ವಾಸವಿಟ್ಟು ಜಾತಿ ಮತ ಎಂದು ಮೂಢನಂಬಿಕೆಗೆ ಮಾರುಹೋಗಿದ್ದಾರೆ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...