Homeಮುಖಪುಟಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

- Advertisement -
- Advertisement -

ಇಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮನೋಜ್ ಸೋಂಕರ್ ಅವರು ಆಮ್ ಆದ್ಮಿ ಪಕ್ಷದ (ಎಎಪಿ) ಕುಲದೀಪ್ ಕುಮಾರ್ ಅವರನ್ನು ಸೋಲಿಸಿ ಗೆಲುವು ಸಾಧಿಸಿದ್ದಾರೆ.

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಎನ್‌ಡಿಯ ಸೇರಿದ ಬಳಿಕ, ಇಂಡಿಯಾ ಬಣಕ್ಕೆ ಇದು ಎರಡನೆ ಆಘಾತವಾಗಿದೆ. ಮೇಯರ್ ಚುನಾವಣೆಯಲ್ಲಿ ಬಿಜೆಪಿಯ ಸೋಂಕರ್ 16 ಮತಗಳನ್ನು ಪಡೆದರೆ, ಎಎಪಿಯ ಕುಮಾರ್ 12 ಮತಗಳನ್ನು ಗಳಿಸಿದರು. ಎಂಟು ಮತಗಳನ್ನು ಅಮಾನ್ಯವೆಂದು ಘೋಷಿಸಿದ್ದರಿಂದ ಎಎಪಿ ಮತ್ತು ಕಾಂಗ್ರೆಸ್ ಕೌನ್ಸಿಲರ್‌ಗಳು ಪ್ರತಿಭಟನೆ ನಡೆಸಿದರು. ಬಿಜೆಪಿ 14 ಕೌನ್ಸಿಲರ್‌ಗಳನ್ನು ಹೊಂದಿದ್ದು, 13 ಕೌನ್ಸಿಲರ್‌ಗಳನ್ನು ಹೊಂದಿದ್ದ ಎಎಪಿ ಮತ್ತು ಏಳು ಮಂದಿ ಕಾಂಗ್ರೆಸ್ ಸದಸ್ಯರನ್ನು ಹೊಂದಿದ್ದ ಅಭ್ಯರ್ಥಿಯನ್ನು ಹಿಂದಿಕ್ಕುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.

ಫಲಿತಾಂಶಗಳು ಪ್ರಕಟವಾಗುತ್ತಿದ್ದಂತೆ, ಎಎಪಿ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಿಜೆಪಿಯನ್ನು “ವಂಚನೆ” ಎಂದು ಆರೋಪಿಸಿದ್ದಾರೆ. ಚುನಾವಣಾ ಪ್ರಕ್ರಿಯೆ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

‘ಈ ಜನರು ಮೇಯರ್ ಚುನಾವಣೆಯಲ್ಲಿ ಈ ಮಟ್ಟಕ್ಕೆ ಇಳಿಯಲು ಸಾಧ್ಯವಾದರೆ, ಅವರು ರಾಷ್ಟ್ರೀಯ ಚುನಾವಣೆಯಲ್ಲಿ ಯಾವುದೇ ಮಟ್ಟಕ್ಕೆ ಹೋಗಬಹುದು? ಇದು ತುಂಬಾ ಕಳವಳಕಾರಿಯಾಗಿದೆ’ ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಎಎಪಿ-ಕಾಂಗ್ರೆಸ್ ಮೈತ್ರಿಕೂಟವು ಕಾರ್ಯತಂತ್ರದಿಂದ ವಿವಿಧ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಾಮನಿರ್ದೇಶನ ಮಾಡಿದೆ. ಎಎಪಿಯನ್ನು ಪ್ರತಿನಿಧಿಸುವ ಕುಮಾರ್ ಅವರು ಮೇಯರ್ ಹುದ್ದೆಗೆ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ಹಿರಿಯ ಉಪಮೇಯರ್ ಮತ್ತು ಉಪಮೇಯರ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಹಿರಿಯ ಉಪಮೇಯರ್ ಹುದ್ದೆಗೆ ಬಿಜೆಪಿಯ ಕುಲ್ಜೀತ್ ಸಂಧು ಅವರು ಕಾಂಗ್ರೆಸ್‌ನ ಗುರುಪ್ರೀತ್ ಸಿಂಗ್ ಗಾಬಿ ವಿರುದ್ಧ ಮುಖಾಮುಖಿಯಾಗಿದ್ದು, ಉಪಮೇಯರ್ ಸ್ಥಾನಕ್ಕೆ ಬಿಜೆಪಿಯ ರಾಜಿಂದರ್ ಶರ್ಮಾ ಮತ್ತು ಕಾಂಗ್ರೆಸ್‌ನ ನಿರ್ಮಲಾ ದೇವಿ ನಡುವೆ ಪೈಪೋಟಿ ಮುಂದುವರಿದಿದೆ.

ಇದನ್ನೂ ಓದಿ; ಬಿಹಾರದಲ್ಲಿ ಮುಂದುವರಿದ ಭಾರತ್ ಜೋಡೋ ನ್ಯಾಯ ಯಾತ್ರೆ: ಸಾಮಾಜಿಕ, ಆರ್ಥಿಕ ನ್ಯಾಯವಿಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ; ರಾಹುಲ್‌ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...