Homeಮುಖಪುಟಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ದಿನಗೂಲಿ ಕಾರ್ಮಿಕರಾಗಿದ್ದ ಇವರು ಲೂಧಿಯಾನದಿಂದ ಕಳೆದ 15 ದಿನಗಳಿಂದ ನಡೆದುಕೊಂಡು ಹೋಗುತ್ತಿದ್ದಾರೆ.

- Advertisement -
- Advertisement -

ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿಲೋ ಮೀಟರ್ ದೂರದ ತಮ್ಮ ಮನೆಗೆ ಸಾಗುವ ವಲಸೆ ಕಾರ್ಮಿಕ ಕುಟುಂಬದ ಹೃದಯ ವಿದ್ರಾವಕ ದೃಶ್ಯವನ್ನು ಎನ್ಡಿಟಿವಿ ವರದಿ ಮಾಡಿದೆ.

ಹದಿನೇಳು ಮಂದಿಯ ಕುಟುಂಬವೊಂದು ಲೂಧಿಯಾನದಿಂದ 1300 ಕಿ.ಮೀ ದೂರದ ಮಧ್ಯಪ್ರದೇಶದ ಸಿಂಗ್ರೌಲಿಯ ತಮ್ಮ ಮನೆಗೆ ಆಹಾರ, ಹಣ ಹಾಗೂ ಕಾಲಿಗೆ ಚಪ್ಪಲಿ ಇಲ್ಲದೆ ಪ್ರಯಾಣಿಸುತ್ತಿದ್ದರು. ಪ್ರಯಾಣದ ಮಧ್ಯೆ ಅವರು ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಹಾಯ ಪಡೆದರಾದರೂ, ಆ ಹೊತ್ತಿಗೆ 800 ಕಿ.ಮೀ.ಗಿಂತಲೂ ಹೆಚ್ಚು ನಡೆದಿದ್ದರು. ಅಲ್ಲಿಂದ ಅವರಿಗೆ ಪೊಲೀಸರು ಅವರಿಗೆ ಟ್ರಕ್ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದಿನಗೂಲಿ ಕಾರ್ಮಿಕರಾಗಿದ್ದ ಇವರು ಲೂಧಿಯಾನದಿಂದ ಕಳೆದ 15 ದಿನಗಳಿಂದ ನಡೆದುಕೊಂಡು ಹೋಗುತ್ತಿದ್ದಾರೆ.

ಬಾಲಕನ ಕುತ್ತಿಗೆ ಮುರಿದುಹೋಗಿ,  ಕೈಕಾಲುಗಳನ್ನು ಸರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಬಾಲಕನ ಬಗ್ಗೆ ಕುಟುಂಬಿಕರು ಹೇಳುತ್ತಾರೆ. ಗಾಯಗೊಂಡ ಬಾಲಕನನ್ನು ಸ್ಟ್ರೆಚ್ಚರ್ ಮೇಲೆ ಮಲಗಿಸಿ ಹೊತ್ತುಕೊಂಡು ಅವರು ನಡೆಯುತ್ತಿದ್ದರು. ಹಲವಾರು ಮಕ್ಕಳನ್ನು ಒಳಗೊಂಡಿರುವ ಈ ಕುಟುಂಬವು ಪ್ರಯಾಣದ ಸಮಯದಲ್ಲಿ ತಿನ್ನಲು ಸಾಕಷ್ಟು ಆಹಾರ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ.

ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಲಕ್ಷಾಂತರ ವಲಸೆ ಕಾರ್ಮಿಕರು ವಾರಗಟ್ಟಲೆ ಉದ್ಯೋಗ ಮತ್ತು ಹಣವಿಲ್ಲದೆ ಉಳಿದು ತಮ್ಮ ತವರು ರಾಜ್ಯಗಳಿಗೆ ಪ್ರಯಾಣಿಸುತ್ತಿದ್ದಾರೆ. ಈ ವಲಸೆ ಕಾರ್ಮಿಕರು ತಮ್ಮ ಕೆಲಸದ ಸ್ಥಳದಿಂದ ಕಾಲ್ನಡಿಗೆ, ಸೈಕಲ್‌ಗಳಲ್ಲಿ, ಟ್ರಕ್‌ಗಳಲ್ಲಿ ಸಾವಿರಾರು ಕಿ.ಮೀ ದೂರದಲ್ಲಿರುವ ರಾಜ್ಯಗಳಲ್ಲಿ ತಮ್ಮ ಹಳ್ಳಿಗಳಿಗೆ ಹೊಟಿದ್ದಾರೆ.

ಈ ಮಹಾವಲಸೆಯಲ್ಲಿ ಪ್ರಯಾಣದ ಮಧ್ಯೆ ರಸ್ತೆ ಅಪಘಾತ, ಹಸಿವು, ಬಳಲಿಕೆ ಹಾಗೂ ಅನಾರೋಗ್ಯದಿಂದ ಅನೇಕ ವಲಸೆ ಕಾರ್ಮಿಕರು ಮನೆಗೆ ತಲುಪುವ ಮೊದಲೆ ಪ್ರಾಣ ಕಳೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ವಲಸೆ ಕಾರ್ಮಿಕರಿಗೆ ವಿಶೇಷ ರೈಲುಗಳನ್ನು ಅನುಮತಿಸಿದೆಯಾದರೂ ವಲಸೆ ಕಾರ್ಮಿಕರು ಈಗಲೂ ರಸ್ತೆಯಲ್ಲಿ ನಡೆಯುತ್ತಿದ್ದಾರೆ. ಅನೇಕ ವಲಸೆ ಕಾರ್ಮಿಕರು ರೈಲು ಟಿಕೆಟ್‌ಗಳು ತುಂಬಾ ದುಬಾರಿ ಹಾಗೂ ಅದಕ್ಕೆ ಬೇಕಾದ ಕಾಗದಪತ್ರಗಳನ್ನು ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.


ಓದಿ: ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ


ವಿಡಿಯೋ ನೋಡಿ: ಮರೆಯಲೇ ಬಾರದ ಸುದ್ದಿ ಇವು. ಸದ್ದು…ಈ ಸುದ್ದಿಗಳೇನಾಗಿದೆ? 9 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...