Homeಮುಖಪುಟಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ದಿನಗೂಲಿ ಕಾರ್ಮಿಕರಾಗಿದ್ದ ಇವರು ಲೂಧಿಯಾನದಿಂದ ಕಳೆದ 15 ದಿನಗಳಿಂದ ನಡೆದುಕೊಂಡು ಹೋಗುತ್ತಿದ್ದಾರೆ.

- Advertisement -
- Advertisement -

ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿಲೋ ಮೀಟರ್ ದೂರದ ತಮ್ಮ ಮನೆಗೆ ಸಾಗುವ ವಲಸೆ ಕಾರ್ಮಿಕ ಕುಟುಂಬದ ಹೃದಯ ವಿದ್ರಾವಕ ದೃಶ್ಯವನ್ನು ಎನ್ಡಿಟಿವಿ ವರದಿ ಮಾಡಿದೆ.

ಹದಿನೇಳು ಮಂದಿಯ ಕುಟುಂಬವೊಂದು ಲೂಧಿಯಾನದಿಂದ 1300 ಕಿ.ಮೀ ದೂರದ ಮಧ್ಯಪ್ರದೇಶದ ಸಿಂಗ್ರೌಲಿಯ ತಮ್ಮ ಮನೆಗೆ ಆಹಾರ, ಹಣ ಹಾಗೂ ಕಾಲಿಗೆ ಚಪ್ಪಲಿ ಇಲ್ಲದೆ ಪ್ರಯಾಣಿಸುತ್ತಿದ್ದರು. ಪ್ರಯಾಣದ ಮಧ್ಯೆ ಅವರು ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಹಾಯ ಪಡೆದರಾದರೂ, ಆ ಹೊತ್ತಿಗೆ 800 ಕಿ.ಮೀ.ಗಿಂತಲೂ ಹೆಚ್ಚು ನಡೆದಿದ್ದರು. ಅಲ್ಲಿಂದ ಅವರಿಗೆ ಪೊಲೀಸರು ಅವರಿಗೆ ಟ್ರಕ್ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದಿನಗೂಲಿ ಕಾರ್ಮಿಕರಾಗಿದ್ದ ಇವರು ಲೂಧಿಯಾನದಿಂದ ಕಳೆದ 15 ದಿನಗಳಿಂದ ನಡೆದುಕೊಂಡು ಹೋಗುತ್ತಿದ್ದಾರೆ.

ಬಾಲಕನ ಕುತ್ತಿಗೆ ಮುರಿದುಹೋಗಿ,  ಕೈಕಾಲುಗಳನ್ನು ಸರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಬಾಲಕನ ಬಗ್ಗೆ ಕುಟುಂಬಿಕರು ಹೇಳುತ್ತಾರೆ. ಗಾಯಗೊಂಡ ಬಾಲಕನನ್ನು ಸ್ಟ್ರೆಚ್ಚರ್ ಮೇಲೆ ಮಲಗಿಸಿ ಹೊತ್ತುಕೊಂಡು ಅವರು ನಡೆಯುತ್ತಿದ್ದರು. ಹಲವಾರು ಮಕ್ಕಳನ್ನು ಒಳಗೊಂಡಿರುವ ಈ ಕುಟುಂಬವು ಪ್ರಯಾಣದ ಸಮಯದಲ್ಲಿ ತಿನ್ನಲು ಸಾಕಷ್ಟು ಆಹಾರ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ.

ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಲಕ್ಷಾಂತರ ವಲಸೆ ಕಾರ್ಮಿಕರು ವಾರಗಟ್ಟಲೆ ಉದ್ಯೋಗ ಮತ್ತು ಹಣವಿಲ್ಲದೆ ಉಳಿದು ತಮ್ಮ ತವರು ರಾಜ್ಯಗಳಿಗೆ ಪ್ರಯಾಣಿಸುತ್ತಿದ್ದಾರೆ. ಈ ವಲಸೆ ಕಾರ್ಮಿಕರು ತಮ್ಮ ಕೆಲಸದ ಸ್ಥಳದಿಂದ ಕಾಲ್ನಡಿಗೆ, ಸೈಕಲ್‌ಗಳಲ್ಲಿ, ಟ್ರಕ್‌ಗಳಲ್ಲಿ ಸಾವಿರಾರು ಕಿ.ಮೀ ದೂರದಲ್ಲಿರುವ ರಾಜ್ಯಗಳಲ್ಲಿ ತಮ್ಮ ಹಳ್ಳಿಗಳಿಗೆ ಹೊಟಿದ್ದಾರೆ.

ಈ ಮಹಾವಲಸೆಯಲ್ಲಿ ಪ್ರಯಾಣದ ಮಧ್ಯೆ ರಸ್ತೆ ಅಪಘಾತ, ಹಸಿವು, ಬಳಲಿಕೆ ಹಾಗೂ ಅನಾರೋಗ್ಯದಿಂದ ಅನೇಕ ವಲಸೆ ಕಾರ್ಮಿಕರು ಮನೆಗೆ ತಲುಪುವ ಮೊದಲೆ ಪ್ರಾಣ ಕಳೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ವಲಸೆ ಕಾರ್ಮಿಕರಿಗೆ ವಿಶೇಷ ರೈಲುಗಳನ್ನು ಅನುಮತಿಸಿದೆಯಾದರೂ ವಲಸೆ ಕಾರ್ಮಿಕರು ಈಗಲೂ ರಸ್ತೆಯಲ್ಲಿ ನಡೆಯುತ್ತಿದ್ದಾರೆ. ಅನೇಕ ವಲಸೆ ಕಾರ್ಮಿಕರು ರೈಲು ಟಿಕೆಟ್‌ಗಳು ತುಂಬಾ ದುಬಾರಿ ಹಾಗೂ ಅದಕ್ಕೆ ಬೇಕಾದ ಕಾಗದಪತ್ರಗಳನ್ನು ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.


ಓದಿ: ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ


ವಿಡಿಯೋ ನೋಡಿ: ಮರೆಯಲೇ ಬಾರದ ಸುದ್ದಿ ಇವು. ಸದ್ದು…ಈ ಸುದ್ದಿಗಳೇನಾಗಿದೆ? 9 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...