Homeಮುಖಪುಟಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ದಿನಗೂಲಿ ಕಾರ್ಮಿಕರಾಗಿದ್ದ ಇವರು ಲೂಧಿಯಾನದಿಂದ ಕಳೆದ 15 ದಿನಗಳಿಂದ ನಡೆದುಕೊಂಡು ಹೋಗುತ್ತಿದ್ದಾರೆ.

- Advertisement -
- Advertisement -

ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿಲೋ ಮೀಟರ್ ದೂರದ ತಮ್ಮ ಮನೆಗೆ ಸಾಗುವ ವಲಸೆ ಕಾರ್ಮಿಕ ಕುಟುಂಬದ ಹೃದಯ ವಿದ್ರಾವಕ ದೃಶ್ಯವನ್ನು ಎನ್ಡಿಟಿವಿ ವರದಿ ಮಾಡಿದೆ.

ಹದಿನೇಳು ಮಂದಿಯ ಕುಟುಂಬವೊಂದು ಲೂಧಿಯಾನದಿಂದ 1300 ಕಿ.ಮೀ ದೂರದ ಮಧ್ಯಪ್ರದೇಶದ ಸಿಂಗ್ರೌಲಿಯ ತಮ್ಮ ಮನೆಗೆ ಆಹಾರ, ಹಣ ಹಾಗೂ ಕಾಲಿಗೆ ಚಪ್ಪಲಿ ಇಲ್ಲದೆ ಪ್ರಯಾಣಿಸುತ್ತಿದ್ದರು. ಪ್ರಯಾಣದ ಮಧ್ಯೆ ಅವರು ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಹಾಯ ಪಡೆದರಾದರೂ, ಆ ಹೊತ್ತಿಗೆ 800 ಕಿ.ಮೀ.ಗಿಂತಲೂ ಹೆಚ್ಚು ನಡೆದಿದ್ದರು. ಅಲ್ಲಿಂದ ಅವರಿಗೆ ಪೊಲೀಸರು ಅವರಿಗೆ ಟ್ರಕ್ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದಿನಗೂಲಿ ಕಾರ್ಮಿಕರಾಗಿದ್ದ ಇವರು ಲೂಧಿಯಾನದಿಂದ ಕಳೆದ 15 ದಿನಗಳಿಂದ ನಡೆದುಕೊಂಡು ಹೋಗುತ್ತಿದ್ದಾರೆ.

ಬಾಲಕನ ಕುತ್ತಿಗೆ ಮುರಿದುಹೋಗಿ,  ಕೈಕಾಲುಗಳನ್ನು ಸರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಬಾಲಕನ ಬಗ್ಗೆ ಕುಟುಂಬಿಕರು ಹೇಳುತ್ತಾರೆ. ಗಾಯಗೊಂಡ ಬಾಲಕನನ್ನು ಸ್ಟ್ರೆಚ್ಚರ್ ಮೇಲೆ ಮಲಗಿಸಿ ಹೊತ್ತುಕೊಂಡು ಅವರು ನಡೆಯುತ್ತಿದ್ದರು. ಹಲವಾರು ಮಕ್ಕಳನ್ನು ಒಳಗೊಂಡಿರುವ ಈ ಕುಟುಂಬವು ಪ್ರಯಾಣದ ಸಮಯದಲ್ಲಿ ತಿನ್ನಲು ಸಾಕಷ್ಟು ಆಹಾರ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ.

ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಲಕ್ಷಾಂತರ ವಲಸೆ ಕಾರ್ಮಿಕರು ವಾರಗಟ್ಟಲೆ ಉದ್ಯೋಗ ಮತ್ತು ಹಣವಿಲ್ಲದೆ ಉಳಿದು ತಮ್ಮ ತವರು ರಾಜ್ಯಗಳಿಗೆ ಪ್ರಯಾಣಿಸುತ್ತಿದ್ದಾರೆ. ಈ ವಲಸೆ ಕಾರ್ಮಿಕರು ತಮ್ಮ ಕೆಲಸದ ಸ್ಥಳದಿಂದ ಕಾಲ್ನಡಿಗೆ, ಸೈಕಲ್‌ಗಳಲ್ಲಿ, ಟ್ರಕ್‌ಗಳಲ್ಲಿ ಸಾವಿರಾರು ಕಿ.ಮೀ ದೂರದಲ್ಲಿರುವ ರಾಜ್ಯಗಳಲ್ಲಿ ತಮ್ಮ ಹಳ್ಳಿಗಳಿಗೆ ಹೊಟಿದ್ದಾರೆ.

ಈ ಮಹಾವಲಸೆಯಲ್ಲಿ ಪ್ರಯಾಣದ ಮಧ್ಯೆ ರಸ್ತೆ ಅಪಘಾತ, ಹಸಿವು, ಬಳಲಿಕೆ ಹಾಗೂ ಅನಾರೋಗ್ಯದಿಂದ ಅನೇಕ ವಲಸೆ ಕಾರ್ಮಿಕರು ಮನೆಗೆ ತಲುಪುವ ಮೊದಲೆ ಪ್ರಾಣ ಕಳೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ವಲಸೆ ಕಾರ್ಮಿಕರಿಗೆ ವಿಶೇಷ ರೈಲುಗಳನ್ನು ಅನುಮತಿಸಿದೆಯಾದರೂ ವಲಸೆ ಕಾರ್ಮಿಕರು ಈಗಲೂ ರಸ್ತೆಯಲ್ಲಿ ನಡೆಯುತ್ತಿದ್ದಾರೆ. ಅನೇಕ ವಲಸೆ ಕಾರ್ಮಿಕರು ರೈಲು ಟಿಕೆಟ್‌ಗಳು ತುಂಬಾ ದುಬಾರಿ ಹಾಗೂ ಅದಕ್ಕೆ ಬೇಕಾದ ಕಾಗದಪತ್ರಗಳನ್ನು ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.


ಓದಿ: ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ


ವಿಡಿಯೋ ನೋಡಿ: ಮರೆಯಲೇ ಬಾರದ ಸುದ್ದಿ ಇವು. ಸದ್ದು…ಈ ಸುದ್ದಿಗಳೇನಾಗಿದೆ? 9 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...