Homeಮುಖಪುಟಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿ.ಮಿ. ಹೊರಟ ವಲಸೆ ಕಾರ್ಮಿಕರು

ದಿನಗೂಲಿ ಕಾರ್ಮಿಕರಾಗಿದ್ದ ಇವರು ಲೂಧಿಯಾನದಿಂದ ಕಳೆದ 15 ದಿನಗಳಿಂದ ನಡೆದುಕೊಂಡು ಹೋಗುತ್ತಿದ್ದಾರೆ.

- Advertisement -
- Advertisement -

ಗಂಭೀರವಾಗಿ ಗಾಯಗೊಂಡ ಬಾಲಕನನ್ನು ಸ್ಟ್ರೆಚರ್‌ನಲ್ಲಿ ಹೊತ್ತುಕೊಂಡು 1300 ಕಿಲೋ ಮೀಟರ್ ದೂರದ ತಮ್ಮ ಮನೆಗೆ ಸಾಗುವ ವಲಸೆ ಕಾರ್ಮಿಕ ಕುಟುಂಬದ ಹೃದಯ ವಿದ್ರಾವಕ ದೃಶ್ಯವನ್ನು ಎನ್ಡಿಟಿವಿ ವರದಿ ಮಾಡಿದೆ.

ಹದಿನೇಳು ಮಂದಿಯ ಕುಟುಂಬವೊಂದು ಲೂಧಿಯಾನದಿಂದ 1300 ಕಿ.ಮೀ ದೂರದ ಮಧ್ಯಪ್ರದೇಶದ ಸಿಂಗ್ರೌಲಿಯ ತಮ್ಮ ಮನೆಗೆ ಆಹಾರ, ಹಣ ಹಾಗೂ ಕಾಲಿಗೆ ಚಪ್ಪಲಿ ಇಲ್ಲದೆ ಪ್ರಯಾಣಿಸುತ್ತಿದ್ದರು. ಪ್ರಯಾಣದ ಮಧ್ಯೆ ಅವರು ಉತ್ತರ ಪ್ರದೇಶದ ಕಾನ್ಪುರದಲ್ಲಿ ಸಹಾಯ ಪಡೆದರಾದರೂ, ಆ ಹೊತ್ತಿಗೆ 800 ಕಿ.ಮೀ.ಗಿಂತಲೂ ಹೆಚ್ಚು ನಡೆದಿದ್ದರು. ಅಲ್ಲಿಂದ ಅವರಿಗೆ ಪೊಲೀಸರು ಅವರಿಗೆ ಟ್ರಕ್ ವ್ಯವಸ್ಥೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ದಿನಗೂಲಿ ಕಾರ್ಮಿಕರಾಗಿದ್ದ ಇವರು ಲೂಧಿಯಾನದಿಂದ ಕಳೆದ 15 ದಿನಗಳಿಂದ ನಡೆದುಕೊಂಡು ಹೋಗುತ್ತಿದ್ದಾರೆ.

ಬಾಲಕನ ಕುತ್ತಿಗೆ ಮುರಿದುಹೋಗಿ,  ಕೈಕಾಲುಗಳನ್ನು ಸರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಬಾಲಕನ ಬಗ್ಗೆ ಕುಟುಂಬಿಕರು ಹೇಳುತ್ತಾರೆ. ಗಾಯಗೊಂಡ ಬಾಲಕನನ್ನು ಸ್ಟ್ರೆಚ್ಚರ್ ಮೇಲೆ ಮಲಗಿಸಿ ಹೊತ್ತುಕೊಂಡು ಅವರು ನಡೆಯುತ್ತಿದ್ದರು. ಹಲವಾರು ಮಕ್ಕಳನ್ನು ಒಳಗೊಂಡಿರುವ ಈ ಕುಟುಂಬವು ಪ್ರಯಾಣದ ಸಮಯದಲ್ಲಿ ತಿನ್ನಲು ಸಾಕಷ್ಟು ಆಹಾರ ಹೊಂದಿರಲಿಲ್ಲ ಎಂದು ತಿಳಿದುಬಂದಿದೆ.

ಕೊರೊನಾ ವೈರಸ್ ಲಾಕ್‌ಡೌನ್‌ನಿಂದಾಗಿ ದೇಶಾದ್ಯಂತ ಲಕ್ಷಾಂತರ ವಲಸೆ ಕಾರ್ಮಿಕರು ವಾರಗಟ್ಟಲೆ ಉದ್ಯೋಗ ಮತ್ತು ಹಣವಿಲ್ಲದೆ ಉಳಿದು ತಮ್ಮ ತವರು ರಾಜ್ಯಗಳಿಗೆ ಪ್ರಯಾಣಿಸುತ್ತಿದ್ದಾರೆ. ಈ ವಲಸೆ ಕಾರ್ಮಿಕರು ತಮ್ಮ ಕೆಲಸದ ಸ್ಥಳದಿಂದ ಕಾಲ್ನಡಿಗೆ, ಸೈಕಲ್‌ಗಳಲ್ಲಿ, ಟ್ರಕ್‌ಗಳಲ್ಲಿ ಸಾವಿರಾರು ಕಿ.ಮೀ ದೂರದಲ್ಲಿರುವ ರಾಜ್ಯಗಳಲ್ಲಿ ತಮ್ಮ ಹಳ್ಳಿಗಳಿಗೆ ಹೊಟಿದ್ದಾರೆ.

ಈ ಮಹಾವಲಸೆಯಲ್ಲಿ ಪ್ರಯಾಣದ ಮಧ್ಯೆ ರಸ್ತೆ ಅಪಘಾತ, ಹಸಿವು, ಬಳಲಿಕೆ ಹಾಗೂ ಅನಾರೋಗ್ಯದಿಂದ ಅನೇಕ ವಲಸೆ ಕಾರ್ಮಿಕರು ಮನೆಗೆ ತಲುಪುವ ಮೊದಲೆ ಪ್ರಾಣ ಕಳೆದುಕೊಂಡಿದ್ದಾರೆ.

ಕೇಂದ್ರ ಸರ್ಕಾರ ವಲಸೆ ಕಾರ್ಮಿಕರಿಗೆ ವಿಶೇಷ ರೈಲುಗಳನ್ನು ಅನುಮತಿಸಿದೆಯಾದರೂ ವಲಸೆ ಕಾರ್ಮಿಕರು ಈಗಲೂ ರಸ್ತೆಯಲ್ಲಿ ನಡೆಯುತ್ತಿದ್ದಾರೆ. ಅನೇಕ ವಲಸೆ ಕಾರ್ಮಿಕರು ರೈಲು ಟಿಕೆಟ್‌ಗಳು ತುಂಬಾ ದುಬಾರಿ ಹಾಗೂ ಅದಕ್ಕೆ ಬೇಕಾದ ಕಾಗದಪತ್ರಗಳನ್ನು ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದಾರೆ.


ಓದಿ: ಉತ್ತರ ಪ್ರದೇಶ: ಟ್ರಕ್ ಅಫಘಾತದಲ್ಲಿ 23 ವಲಸೆ ಕಾರ್ಮಿಕರು ಮೃತ


ವಿಡಿಯೋ ನೋಡಿ: ಮರೆಯಲೇ ಬಾರದ ಸುದ್ದಿ ಇವು. ಸದ್ದು…ಈ ಸುದ್ದಿಗಳೇನಾಗಿದೆ? 9 ನೇ ಸಂಚಿಕೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...