Homeಕರ್ನಾಟಕಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

- Advertisement -
- Advertisement -

‘ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ ₹62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ, ಕೇಂದ್ರ ಸರ್ಕಾರದ ವಿರುದ್ಧ ಫೆ. 7 ರಂದು ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್, ‘ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುತ್ತೇವೆ’ ಎಂದರು.

‘ಪ್ರತಿಭಟನೆ ಸ್ಥಳವಕಾಶ ನೀವುಂತೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

‘2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 45 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ’ ಎಂದರು.

‘ದೇಶದಲ್ಲೇ ಕರ್ನಾಟಕ ರಾಜ್ಯ ಪ್ರಗತಿಪರ ರಾಜ್ಯ; ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ನಿನ್ನೆ ಬಜೆಟ್ ಅನ್ನು ನಾವೆಲ್ಲ ಗಮನಿಸಿದ್ದೇವೆ. ಕೇವಲ ನಿನ್ನೆಯ ಬಜೆಟ್ ಮಾತ್ರವಲ್ಲ. ಕಳೆದ ಐದು ವರ್ಷಗಳ ಬಜೆಟ್ ನೋಡಿದರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ’ ಎಂದು ವಿವರಿಸಿದರು.

‘2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ, ನಮ್ಮ ರಾಜ್ಯದ ಪಾಲಿನಲ್ಲಿ 40ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ. 14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64% ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ ₹62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ’ ಎಂದು ಹೇಳಿದರು.

‘ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು; ಆದರೂ ನಯಾಪೈಸೆ ಹಣ ಬಂದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ನರೇಗಾ ಯೋಜನೆ ಪ್ರಕಾರ ಬರ ಪೀಡಿತ ಪ್ರದೇಶಗಳಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ಕಾನೂನಿನಲ್ಲಿ ಇದೆ. ಯಾವುದೇ ಯೋಜನೆ ತೆಗೆದುಕೊಂಡರೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರದ ಅನುದಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ನಾನು ಹೋಲಿಕೆ ಮಾಡಲು ಹೋಗುವುದಿಲ್ಲ. ಬೇರೆಯವರಿಗೆ ನೀವು ಎಷ್ಟಾದರೂ ನೀಡಿ ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ನಮ್ಮ ಪಾಲನ್ನು ನೀಡಿ ಎಂದು ಕೇಳುತ್ತಿದ್ದೇವೆ’ ಎಂದರು.

‘ಬಿಜೆಪಿ ಸರ್ಕಾರ ಇದ್ದಾಗ ಡಬಲ್ ಇಂಜಿನ್ ಸರ್ಕಾರದಿಂದ ನಮಗೆ ಲಾಭ ಆಗಿರಬಹುದು ಎಂದು ಭಾವಿಸಿದ್ದೆವು. ಆದರೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದಾಗ ನಮ್ಮ ರಾಜ್ಯಕ್ಕೆ ₹62 ಸಾವಿರ ಕೋಟಿ ನಷ್ಟವಾಗಿದೆ. ಇದನ್ನು ಹೇಗೆ ಅರಗಿಸಿಕೊಳ್ಳುವುದು? ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಡಬಲ್ ಆಗಿದ್ದರೂ ರಾಜ್ಯದ ಪಾಲಿನ ಅನುದಾನ ಮಾತ್ರ ಹೆಚ್ಚಳವಾಗಿಲ್ಲ’ ಎಂದು ಹೇಳಿದರು.

ಹುಟ್ಟುತ್ತಾ ಭಾರತೀಯ ಸಾಯುವಾಗಲೂ ಭಾರತೀಯ:

‘ಡಿ.ಕೆ. ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ವಿಚಾರವಾಗಿ ಬಿಜೆಪಿ ನಾಯಕರು ಕ್ಷಮೆಯಾಚನೆಗೆ ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, ‘ನಾನು ಭಾರತೀಯ; ಹುಟ್ಟತ್ತಾ ಭಾರತೀಯನಾಗಿದ್ದೇನೆ. ಸಾಯುವಾಗಲೂ ಭಾರತೀಯನಾಗಿ ಸಾಯುತ್ತೇನೆ. ಭಾರತ ಅಖಂಡ ದೇಶ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಪೂರ್ವದಿಂದ ಪಶ್ಚಿಮದವರೆಗೆ ಭಾರತವೊಂದೆ. ಬಿಜೆಪಿ ಈ ವಿಚಾರ ರಾಜಕೀಯಗೊಳಿಸುತ್ತಿದೆ. ಸಂಸದ ಸುರೇಶ್ ವರು ಬಿಜೆಪಿ ಸರ್ಕಾರದಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿದ್ದಾರೆ. ಹೀಗೆ ಅನ್ಯಾಯ ಮುಂದುವರಿದರೆ ಮುಂದೆ ಇಂತಹ ಆಲೋಚನೆಗಳು ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ’ ಎಂದು ಸಮರ್ಥಿಸಿಕೊಂಡರು.

‘ಸುರೇಶ್ ಕೂಡ ಭಾರತೀಯ; ಕಾಂಗ್ರೆಸಿಗನಾಗಿದ್ದು ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗಟ್ಟಾಗಿಟ್ಟಿದೆ. ಕಾಂಗ್ರೆಸ್ ಪಕ್ಷ ಅಥವಾ ಕಾಂಗ್ರೆಸ್ ಸರ್ಕಾರಗಳು ದೇಶವನ್ನು ಸಮಾನತೆಯಿಂದ ನೋಡಿದೆ. ಬಿಜೆಪಿಯವರು ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಲಾಗದೇ ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. ರಾಜ್ಯದ 27 ಸಂಸದರು ಒಂದು ದಿನವೂ ಪ್ರಧಾನಮಂತ್ರಿ, ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಿತದ ಬಗ್ಗೆ ಚರ್ಚೆ ಮಾಡಿಲ್ಲ. ಬೊಮ್ಮಾಯಿ ಅವರಾಗಲಿ, ಯಡಿಯೂರಪ್ಪ ಅವರಾಗಲಿ ರಾಜ್ಯದ ಬಗ್ಗೆ ತಮ್ಮ ನಾಯಕರ ಜತೆ ಮಾತನಾಡಿಲ್ಲ. ಅವರು ತಮ್ಮ ಸಮಸ್ಯೆಗಳಲ್ಲೇ ಮುಳುಗಿದ್ದಾರೆ. ಇವರ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯವಾಗಿದೆ ಎಂಬುದನ್ನು ದಾಖಲೆಗಳು ಹೇಳುತ್ತಿವೆ’ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ; ಮನರೇಗಾ ಬಾಕಿ ಹಣ ಕೊಡದ ಕೇಂದ್ರ; ಮೋದಿ ಸರ್ಕಾರದ ವಿರುದ್ಧ ಟಿಎಂಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...