Homeಕರ್ನಾಟಕಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

- Advertisement -
- Advertisement -

‘ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ ₹62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ, ಕೇಂದ್ರ ಸರ್ಕಾರದ ವಿರುದ್ಧ ಫೆ. 7 ರಂದು ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್, ‘ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುತ್ತೇವೆ’ ಎಂದರು.

‘ಪ್ರತಿಭಟನೆ ಸ್ಥಳವಕಾಶ ನೀವುಂತೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

‘2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 45 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ’ ಎಂದರು.

‘ದೇಶದಲ್ಲೇ ಕರ್ನಾಟಕ ರಾಜ್ಯ ಪ್ರಗತಿಪರ ರಾಜ್ಯ; ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ನಿನ್ನೆ ಬಜೆಟ್ ಅನ್ನು ನಾವೆಲ್ಲ ಗಮನಿಸಿದ್ದೇವೆ. ಕೇವಲ ನಿನ್ನೆಯ ಬಜೆಟ್ ಮಾತ್ರವಲ್ಲ. ಕಳೆದ ಐದು ವರ್ಷಗಳ ಬಜೆಟ್ ನೋಡಿದರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ’ ಎಂದು ವಿವರಿಸಿದರು.

‘2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ, ನಮ್ಮ ರಾಜ್ಯದ ಪಾಲಿನಲ್ಲಿ 40ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ. 14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64% ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ ₹62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ’ ಎಂದು ಹೇಳಿದರು.

‘ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು; ಆದರೂ ನಯಾಪೈಸೆ ಹಣ ಬಂದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ನರೇಗಾ ಯೋಜನೆ ಪ್ರಕಾರ ಬರ ಪೀಡಿತ ಪ್ರದೇಶಗಳಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ಕಾನೂನಿನಲ್ಲಿ ಇದೆ. ಯಾವುದೇ ಯೋಜನೆ ತೆಗೆದುಕೊಂಡರೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರದ ಅನುದಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ನಾನು ಹೋಲಿಕೆ ಮಾಡಲು ಹೋಗುವುದಿಲ್ಲ. ಬೇರೆಯವರಿಗೆ ನೀವು ಎಷ್ಟಾದರೂ ನೀಡಿ ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ನಮ್ಮ ಪಾಲನ್ನು ನೀಡಿ ಎಂದು ಕೇಳುತ್ತಿದ್ದೇವೆ’ ಎಂದರು.

‘ಬಿಜೆಪಿ ಸರ್ಕಾರ ಇದ್ದಾಗ ಡಬಲ್ ಇಂಜಿನ್ ಸರ್ಕಾರದಿಂದ ನಮಗೆ ಲಾಭ ಆಗಿರಬಹುದು ಎಂದು ಭಾವಿಸಿದ್ದೆವು. ಆದರೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದಾಗ ನಮ್ಮ ರಾಜ್ಯಕ್ಕೆ ₹62 ಸಾವಿರ ಕೋಟಿ ನಷ್ಟವಾಗಿದೆ. ಇದನ್ನು ಹೇಗೆ ಅರಗಿಸಿಕೊಳ್ಳುವುದು? ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಡಬಲ್ ಆಗಿದ್ದರೂ ರಾಜ್ಯದ ಪಾಲಿನ ಅನುದಾನ ಮಾತ್ರ ಹೆಚ್ಚಳವಾಗಿಲ್ಲ’ ಎಂದು ಹೇಳಿದರು.

ಹುಟ್ಟುತ್ತಾ ಭಾರತೀಯ ಸಾಯುವಾಗಲೂ ಭಾರತೀಯ:

‘ಡಿ.ಕೆ. ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ವಿಚಾರವಾಗಿ ಬಿಜೆಪಿ ನಾಯಕರು ಕ್ಷಮೆಯಾಚನೆಗೆ ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, ‘ನಾನು ಭಾರತೀಯ; ಹುಟ್ಟತ್ತಾ ಭಾರತೀಯನಾಗಿದ್ದೇನೆ. ಸಾಯುವಾಗಲೂ ಭಾರತೀಯನಾಗಿ ಸಾಯುತ್ತೇನೆ. ಭಾರತ ಅಖಂಡ ದೇಶ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಪೂರ್ವದಿಂದ ಪಶ್ಚಿಮದವರೆಗೆ ಭಾರತವೊಂದೆ. ಬಿಜೆಪಿ ಈ ವಿಚಾರ ರಾಜಕೀಯಗೊಳಿಸುತ್ತಿದೆ. ಸಂಸದ ಸುರೇಶ್ ವರು ಬಿಜೆಪಿ ಸರ್ಕಾರದಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿದ್ದಾರೆ. ಹೀಗೆ ಅನ್ಯಾಯ ಮುಂದುವರಿದರೆ ಮುಂದೆ ಇಂತಹ ಆಲೋಚನೆಗಳು ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ’ ಎಂದು ಸಮರ್ಥಿಸಿಕೊಂಡರು.

‘ಸುರೇಶ್ ಕೂಡ ಭಾರತೀಯ; ಕಾಂಗ್ರೆಸಿಗನಾಗಿದ್ದು ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗಟ್ಟಾಗಿಟ್ಟಿದೆ. ಕಾಂಗ್ರೆಸ್ ಪಕ್ಷ ಅಥವಾ ಕಾಂಗ್ರೆಸ್ ಸರ್ಕಾರಗಳು ದೇಶವನ್ನು ಸಮಾನತೆಯಿಂದ ನೋಡಿದೆ. ಬಿಜೆಪಿಯವರು ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಲಾಗದೇ ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. ರಾಜ್ಯದ 27 ಸಂಸದರು ಒಂದು ದಿನವೂ ಪ್ರಧಾನಮಂತ್ರಿ, ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಿತದ ಬಗ್ಗೆ ಚರ್ಚೆ ಮಾಡಿಲ್ಲ. ಬೊಮ್ಮಾಯಿ ಅವರಾಗಲಿ, ಯಡಿಯೂರಪ್ಪ ಅವರಾಗಲಿ ರಾಜ್ಯದ ಬಗ್ಗೆ ತಮ್ಮ ನಾಯಕರ ಜತೆ ಮಾತನಾಡಿಲ್ಲ. ಅವರು ತಮ್ಮ ಸಮಸ್ಯೆಗಳಲ್ಲೇ ಮುಳುಗಿದ್ದಾರೆ. ಇವರ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯವಾಗಿದೆ ಎಂಬುದನ್ನು ದಾಖಲೆಗಳು ಹೇಳುತ್ತಿವೆ’ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ; ಮನರೇಗಾ ಬಾಕಿ ಹಣ ಕೊಡದ ಕೇಂದ್ರ; ಮೋದಿ ಸರ್ಕಾರದ ವಿರುದ್ಧ ಟಿಎಂಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...