Homeಕರ್ನಾಟಕಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ: ಡಿ.ಕೆ. ಶಿವಕುಮಾರ್

- Advertisement -
- Advertisement -

‘ಕೇಂದ್ರ ಬಜೆಟ್ನಲ್ಲಿ ಕರ್ನಾಟಕ ರಾಜ್ಯಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಕೇಂದ್ರದ ಮಲತಾಯಿ ಧೋರಣೆಯಿಂದ ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ ₹62 ಸಾವಿರ ಕೋಟಿ ಹಣ ನಷ್ಟವಾಗಿದೆ. ಹೀಗಾಗಿ, ಕೇಂದ್ರ ಸರ್ಕಾರದ ವಿರುದ್ಧ ಫೆ. 7 ರಂದು ಕರ್ನಾಟಕ ಸರ್ಕಾರವು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ’ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಶಿವಕುಮಾರ್, ‘ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಾನು ಸೇರಿದಂತೆ ರಾಜ್ಯದ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಭಾಗವಹಿಸುತ್ತೇವೆ’ ಎಂದರು.

‘ಪ್ರತಿಭಟನೆ ಸ್ಥಳವಕಾಶ ನೀವುಂತೆ ಕೆಂದ್ರಕ್ಕೆ ಪತ್ರ ಬರೆದಿದ್ದು, ಅನುಮತಿ ಸಿಕ್ಕ ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಪ್ರತಿಭಟನೆ ನಮ್ಮ ಮೂಲಭೂತ ಹಕ್ಕು. ಕಾಂಗ್ರೆಸ್ ಜನಪ್ರತಿನಿಧಿಗಳು ಭಾಗವಹಿಸಲಿರುವ ಈ ಪ್ರತಿಭಟನೆಯಲ್ಲಿ ಪ್ರತಿಪಕ್ಷದ ಸಂಸದರು. ಶಾಸಕರು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

‘2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ 24.5 ಲಕ್ಷ ಕೋಟಿ ಇತ್ತು. 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದು 45 ಲಕ್ಷ ಕೋಟಿಯಾಗಿದೆ. 2018-19ರಲ್ಲಿ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ 46 ಸಾವಿರ ಕೋಟಿ ಅನುದಾನ ಸಿಕ್ಕಿತ್ತು. ಆದರೆ 2024-25ನೇ ಸಾಲಿನಲ್ಲಿ ರಾಜ್ಯಕ್ಕೆ ಬಂದಿರುವ ಅನುದಾನ ಕೇವಲ 50 ಸಾವಿರ ಕೋಟಿ ಮಾತ್ರ. ಕೇಂದ್ರ ಸರ್ಕಾರದ ಬಜೆಟ್ ಗಾತ್ರ ದುಪ್ಪಟ್ಟಾಗಿದ್ದರೂ ರಾಜ್ಯಕ್ಕೆ ಬರುವ ಅನುದಾನದ ಪ್ರಮಾಣದಲ್ಲಿ ಅತ್ಯಲ್ಪ ಏರಿಕೆ ಮಾತ್ರವಾಗಿದೆ’ ಎಂದರು.

‘ದೇಶದಲ್ಲೇ ಕರ್ನಾಟಕ ರಾಜ್ಯ ಪ್ರಗತಿಪರ ರಾಜ್ಯ; ಮಹಾರಾಷ್ಟ್ರ ಬಿಟ್ಟರೆ ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ಪಾವತಿ ಮಾಡುತ್ತಿರುವ ರಾಜ್ಯ ಕರ್ನಾಟಕ. ನಿನ್ನೆ ಬಜೆಟ್ ಅನ್ನು ನಾವೆಲ್ಲ ಗಮನಿಸಿದ್ದೇವೆ. ಕೇವಲ ನಿನ್ನೆಯ ಬಜೆಟ್ ಮಾತ್ರವಲ್ಲ. ಕಳೆದ ಐದು ವರ್ಷಗಳ ಬಜೆಟ್ ನೋಡಿದರೆ ನಮಗೆ ನಮ್ಮ ಪಾಲು ನ್ಯಾಯುತವಾಗಿ ಸಿಕ್ಕಿಲ್ಲ. ರಾಜ್ಯದ 28 ಸಂಸದರ ಪೈಕಿ 27 ಸಂಸದರು ಎನ್‌ಡಿಎ ಮೈತ್ರಿಕೂಟದವರೇ ಆಗಿದ್ದರೂ ನಮಗೆ ಸೂಕ್ತ ನ್ಯಾಯ ಸಿಗುತ್ತಿಲ್ಲ’ ಎಂದು ವಿವರಿಸಿದರು.

‘2018-19ರಿಂದ ಈಗಿನವರೆಗೂ ಕೇಂದ್ರ ಬಜೆಟ್ ಗಮನಿಸಿದರೆ, ನಮ್ಮ ರಾಜ್ಯದ ಪಾಲಿನಲ್ಲಿ 40ರಿಂದ 45% ಪಾಲು ಕಡಿಮೆಯಾಗಿದೆ. ಇದರಿಂದಾಗಿ ನಮ್ಮ ರಾಜ್ಯದ ಮೇಲೆ ಸಾಲದ ಹೊರೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ನಡೆಸಿದ ಸಮೀಕ್ಷೆಯಲ್ಲಿ ಪ್ರತಿ ವರ್ಷ 7-10 ಸಾವಿರ ಕೋಟಿ ಅನುದಾನ ಕಡಿಮೆಯಾಗುತ್ತಾ ಬರುತ್ತಿದೆ. 14ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯಕ್ಕೆ 4.71% ಪಾಲು ನೀಡಲಾಗಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲನ್ನು 3.64% ಗೆ ಇಳಿಸಲಾಗಿದೆ. ಇದರಿಂದಾಗಿ ನಮಗೆ ಐದು ವರ್ಷಕ್ಕೆ ₹62 ಸಾವಿರ ಕೋಟಿಯಷ್ಟು ಹಣ ಕಡಿಮೆಯಾಗಿದೆ. ಇನ್ನು ವಿವಿಧ ರೀತಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಘೋಷಣೆ ಮಾಡಿದ್ದ ಅನುದಾನ ಕೂಡ ಸರಿಯಾಗಿ ನೀಡಿಲ್ಲ’ ಎಂದು ಹೇಳಿದರು.

‘ನಮಗೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು. ನಮ್ಮ ರಾಜ್ಯದಲ್ಲಿ ಬರಗಾಲ ಎದುರಾಗಿದೆ. ರಾಜ್ಯದ ಇತಿಹಾಸದಲ್ಲೇ ಅತಿ ಹೆಚ್ಚು ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರ ಬರ ನಿಯಮಾನುಸಾರ ನಾವು ಘೋಷಣೆ ಮಾಡಿದ್ದೇವೆ. ನಮ್ಮ ಹಣಕಾಸು ಹಾಗೂ ಕೃಷಿ ಸಚಿವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ನೀಡಿದ್ದರು. ಸಂಸದರು ಕೂಡ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯಕ್ಕೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದೆವು; ಆದರೂ ನಯಾಪೈಸೆ ಹಣ ಬಂದಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ನರೇಗಾ ಯೋಜನೆ ಪ್ರಕಾರ ಬರ ಪೀಡಿತ ಪ್ರದೇಶಗಳಲ್ಲಿ ಮಾನವ ಕೂಲಿ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಳ ಮಾಡಬೇಕು ಎಂದು ಕಾನೂನಿನಲ್ಲಿ ಇದೆ. ಯಾವುದೇ ಯೋಜನೆ ತೆಗೆದುಕೊಂಡರೂ ಕರ್ನಾಟಕ ರಾಜ್ಯಕ್ಕೆ ಅನ್ಯಾಯವಾಗಿದೆ. ಕೇಂದ್ರದ ಅನುದಾನದಲ್ಲಿ ಕರ್ನಾಟಕ ಮತ್ತು ಗುಜರಾತ್ ನಡುವೆ ನಾನು ಹೋಲಿಕೆ ಮಾಡಲು ಹೋಗುವುದಿಲ್ಲ. ಬೇರೆಯವರಿಗೆ ನೀವು ಎಷ್ಟಾದರೂ ನೀಡಿ ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ನಮ್ಮ ಪಾಲನ್ನು ನೀಡಿ ಎಂದು ಕೇಳುತ್ತಿದ್ದೇವೆ’ ಎಂದರು.

‘ಬಿಜೆಪಿ ಸರ್ಕಾರ ಇದ್ದಾಗ ಡಬಲ್ ಇಂಜಿನ್ ಸರ್ಕಾರದಿಂದ ನಮಗೆ ಲಾಭ ಆಗಿರಬಹುದು ಎಂದು ಭಾವಿಸಿದ್ದೆವು. ಆದರೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿದಾಗ ನಮ್ಮ ರಾಜ್ಯಕ್ಕೆ ₹62 ಸಾವಿರ ಕೋಟಿ ನಷ್ಟವಾಗಿದೆ. ಇದನ್ನು ಹೇಗೆ ಅರಗಿಸಿಕೊಳ್ಳುವುದು? ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಡಬಲ್ ಆಗಿದ್ದರೂ ರಾಜ್ಯದ ಪಾಲಿನ ಅನುದಾನ ಮಾತ್ರ ಹೆಚ್ಚಳವಾಗಿಲ್ಲ’ ಎಂದು ಹೇಳಿದರು.

ಹುಟ್ಟುತ್ತಾ ಭಾರತೀಯ ಸಾಯುವಾಗಲೂ ಭಾರತೀಯ:

‘ಡಿ.ಕೆ. ಸುರೇಶ್ ಅವರ ಪ್ರತ್ಯೇಕ ರಾಷ್ಟ್ರ ಹೇಳಿಕೆ ವಿಚಾರವಾಗಿ ಬಿಜೆಪಿ ನಾಯಕರು ಕ್ಷಮೆಯಾಚನೆಗೆ ಆಗ್ರಹಿಸುತ್ತಿರುವ ಬಗ್ಗೆ ಕೇಳಿದಾಗ, ‘ನಾನು ಭಾರತೀಯ; ಹುಟ್ಟತ್ತಾ ಭಾರತೀಯನಾಗಿದ್ದೇನೆ. ಸಾಯುವಾಗಲೂ ಭಾರತೀಯನಾಗಿ ಸಾಯುತ್ತೇನೆ. ಭಾರತ ಅಖಂಡ ದೇಶ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಪೂರ್ವದಿಂದ ಪಶ್ಚಿಮದವರೆಗೆ ಭಾರತವೊಂದೆ. ಬಿಜೆಪಿ ಈ ವಿಚಾರ ರಾಜಕೀಯಗೊಳಿಸುತ್ತಿದೆ. ಸಂಸದ ಸುರೇಶ್ ವರು ಬಿಜೆಪಿ ಸರ್ಕಾರದಿಂದ ಕರ್ನಾಟಕ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿದ್ದಾರೆ. ಹೀಗೆ ಅನ್ಯಾಯ ಮುಂದುವರಿದರೆ ಮುಂದೆ ಇಂತಹ ಆಲೋಚನೆಗಳು ಬರಬಹುದು ಎಂದು ಎಚ್ಚರಿಕೆ ನೀಡಿದ್ದಾರೆ’ ಎಂದು ಸಮರ್ಥಿಸಿಕೊಂಡರು.

‘ಸುರೇಶ್ ಕೂಡ ಭಾರತೀಯ; ಕಾಂಗ್ರೆಸಿಗನಾಗಿದ್ದು ಕಾಂಗ್ರೆಸ್ ಪಕ್ಷ ಈ ದೇಶವನ್ನು ಒಗ್ಗಟ್ಟಾಗಿಟ್ಟಿದೆ. ಕಾಂಗ್ರೆಸ್ ಪಕ್ಷ ಅಥವಾ ಕಾಂಗ್ರೆಸ್ ಸರ್ಕಾರಗಳು ದೇಶವನ್ನು ಸಮಾನತೆಯಿಂದ ನೋಡಿದೆ. ಬಿಜೆಪಿಯವರು ಬಜೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಲಾಗದೇ ಈ ವಿಚಾರವನ್ನು ರಾಜಕೀಯಗೊಳಿಸುತ್ತಿದ್ದಾರೆ. ರಾಜ್ಯದ 27 ಸಂಸದರು ಒಂದು ದಿನವೂ ಪ್ರಧಾನಮಂತ್ರಿ, ಕೇಂದ್ರ ವಿತ್ತ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಿತದ ಬಗ್ಗೆ ಚರ್ಚೆ ಮಾಡಿಲ್ಲ. ಬೊಮ್ಮಾಯಿ ಅವರಾಗಲಿ, ಯಡಿಯೂರಪ್ಪ ಅವರಾಗಲಿ ರಾಜ್ಯದ ಬಗ್ಗೆ ತಮ್ಮ ನಾಯಕರ ಜತೆ ಮಾತನಾಡಿಲ್ಲ. ಅವರು ತಮ್ಮ ಸಮಸ್ಯೆಗಳಲ್ಲೇ ಮುಳುಗಿದ್ದಾರೆ. ಇವರ ಅವಧಿಯಲ್ಲೇ ರಾಜ್ಯಕ್ಕೆ ಹೆಚ್ಚು ಅನ್ಯಾಯವಾಗಿದೆ ಎಂಬುದನ್ನು ದಾಖಲೆಗಳು ಹೇಳುತ್ತಿವೆ’ ಎಂದು ಸ್ಪಷ್ಟನೆ ನೀಡಿದರು.

ಇದನ್ನೂ ಓದಿ; ಮನರೇಗಾ ಬಾಕಿ ಹಣ ಕೊಡದ ಕೇಂದ್ರ; ಮೋದಿ ಸರ್ಕಾರದ ವಿರುದ್ಧ ಟಿಎಂಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...