Homeಕರ್ನಾಟಕಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

“ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ,‌ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುತ್ತೇನೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮೀಸಲಾತಿ ಕುರಿತು ಆಗುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಹಿಂದುಳಿದ ಸಮುದಾಯದಲ್ಲಿ 102 ಜಾತಿಗಳಿವೆ, ಒಟ್ಟು ಜನಸಂಖ್ಯಾ ಪ್ರಮಾಣ ಶೇಕಡಾ 52ರಷ್ಟಿದ್ದರೂ ಕೇವಲ ಶೇಕಡಾ 27ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಶೇಕಡಾ 4ರಷ್ಟಿರುವವರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಲಾಗಿದೆ, ಇದು ತಪ್ಪು” ಎಂದು ತಿಳಿಸಿದ್ದಾರೆ.

“ಬೇರೆ ರಾಜ್ಯಗಳಲ್ಲಿ ಶೇಕಡಾ 50ರ ಮಿತಿಯನ್ನು ಮೀರಿ ಮೀಸಲಾತಿ ನೀಡಿದರೆ ರದ್ದುಪಡಿಸಲಾಗುತ್ತದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಎಲ್ಲ ನಿಯಮಾವಳಿಗಳನ್ನು ಮೀರಿ ಮೀಸಲಾತಿ ಹೆಚ್ಚಿಸುವ ಘೋಷಣೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ” ಎಂದಿದ್ದಾರೆ.

“ಹಿಂದುಳಿದ ಜಾತಿಗಳಿಗೆ 2ಎನಲ್ಲಿ ಮೀಸಲಾತಿ ನೀಡಲಾಗಿದ್ದರೂ ಇತ್ತೀಚೆಗೆ ಬೇರೆ ಜಾತಿಗಳು ಈ ಗುಂಪಿಗೆ ಸೇರಿಕೊಳ್ಳಲು ಪ್ರಯತ್ನ‌ ಮಾಡುತ್ತಿವೆ. ಹಿಂದೆ ಲಿಂಗಾಯತ ಸಾದರರು ಹಿಂದೂ ಸಾದರ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಸೌಲಭ್ಯ ಪಡೆಯಲು ಪ್ರಯತ್ನಿಸಿದ್ದರು. ಮೀಸಲಾತಿ ದುರುಪಯೋಗ ತಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮೀಸಲಾತಿ ಹೋರಾಟ ಪರ್ವ

ರಾಜ್ಯದಲ್ಲಿ ಈಗ ಮೀಸಲಾತಿ ಹೋರಾಟ, ಆಗ್ರಹಗಳ ಪರ್ವ ಆರಂಭವಾಗಿದೆ. ಒಂದಲ್ಲ ಒಂದು ಸಮುದಾಯವು ಮೀಸಲಾತಿ ಸಂಬಂಧ ಹೋರಾಟಕ್ಕೆ ಮುಂದಾಗುತ್ತಿವೆ. ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ನಾಯಕ ಸಮುದಾಯ ಹೋರಾಟ ಮಾಡಿ ತಕ್ಕ ಮಟ್ಟಿನ ಯಶಸ್ಸು ಪಡೆದಿದೆ. ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್ ವರದಿ ಅನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3ರಿಂದ 7ಕ್ಕೂ ಹೆಚ್ಚಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ನ ತೀರ್ಪು ತಡೆಯಾಗಿರುವುದರಿಂದ ಸರ್ಕಾರ, ‘ಕಾಂತರಾಜ್ ಆಯೋಗದ ವರದಿ’ಯನ್ನು ಬಿಡುಗಡೆ ಮಾಡುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ. ಇದರ ನಡುವೆ ಮೀಸಲಾತಿ ಹೋರಾಟಗಳು ಬಿರುಸು ಪಡೆಯುತ್ತಿವೆ.

1990ರ ಅವಧಿಯಲ್ಲಿ ರಚನೆಯಾದ ಮಂಡಲ್‌ ಆಯೋಗದ ಮೂಲಕ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಲಾಯಿತು. ಆದರೆ ಒಟ್ಟು ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಮೀರದಂತೆ ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೂಚಿಸಿತು. ಹೀಗಾಗಿ ಶೇ.52ರಷ್ಟು ಮೀಸಲಾತಿಯ ಬದಲು ಕೇವಲ ಶೇ.27ರಷ್ಟು ಮೀಸಲಾತಿ ಪ್ರಾತಿನಿಧ್ಯ ಒಬಿಸಿಗಳಿಗೆ ದೊರಕಿತು.

2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೇಲ್ಜಾತಿ ಬಡವರಿಗೆಂದು, ಎಂಟು ಲಕ್ಷ ರೂ. ಆದಾಯ ಮಿತಿಯನ್ನು ವಿಧಿಸಿ ಶೇ.10ರಷ್ಟು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಕೋಟಾವನ್ನು ನೀಡಿತು. ಮೇಲ್ಜಾತಿಗಳಿಗೆ ನೀಡಿರುವ ಅವೈಜ್ಞಾನಿಕ ಮೀಸಲಾತಿಯ ಫಲವೋ ಅಥವಾ ಸಮುದಾಯಗಳಲ್ಲಿ ಮೀಸಲಾತಿ ಕುರಿತು ಹುಟ್ಟಿರುವ ಆಸಕ್ತಿಯ ಕಾರಣವೋ- ಮೀಸಲಾತಿ ಹೋರಾಟಗಳು ಮುನ್ನೆಲೆಗೆ ಬಂದಿವೆ. ರಾಜ್ಯದಲ್ಲೂ ವಿವಿಧ ಸಮುದಾಯಗಳು ಹೋರಾಟಕ್ಕೆ ಧಮುಕಿವೆ. ಚುನಾವಣೆ ಹೊಸ್ತಿಲಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡುತ್ತಿವೆ. ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ತರಬೇಕೆಂದು ಮೂರು ದಶಕಗಳಿಂದ ನಡೆಯುತ್ತಿರುವ ಹೋರಾಟ ಈಗ ತೀವ್ರವಾಗಿದೆ. ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ನಡೆಯುತ್ತಿದ್ದು, ಪ್ರಸ್ತುತ 3ಬಿಯಲ್ಲಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಲಾಗಿದೆ.

ಒಕ್ಕಲಿಗ ಉಪಪಂಗಡಗಳನ್ನು ಒಳಗೊಂಡು ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು ಎಂದು ಒಕ್ಕಲಿಗ ಸಮುದಾಯ ಆಗ್ರಹಿಸುತ್ತಿದೆ. ಬೃಹತ್ ಹೋರಾಟದ ಎಚ್ಚರಿಕೆಯನ್ನೂ ನೀಡಿದೆ.

ಪರಿಶಿಷ್ಟ ಜಾತಿ ಪಟ್ಟಿಯೊಳಗೆ ಮಡಿವಾಳ ಸಮುದಾಯವನ್ನು ಸೇರಿಸಬೇಕು ಎಂಬ ಕೂಗು ಎದ್ದಿದೆ. ಸವಿತಾ ಸಮಾಜವೂ ಮೀಸಲಾತಿ ಹೋರಾಟದ ಎಚ್ಚರಿಕೆ ನೀಡಿದೆ. ತಮ್ಮ ಸಮುದಾಯಕ್ಕೆ ಪ್ರವರ್ಗ 1 ಮೀಸಲಾತಿ ನೀಡದಿದ್ದಲ್ಲಿ ರಾಜ್ಯಾದ್ಯಂತ ಕ್ಷೌರದಂಗಡಿ ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸವಿತಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ತಮ್ಮನ್ನು ಸೇರಿಸಬೇಕು ಎಂದು ಹಲವು ಸಮುದಾಯಗಳು ಆಗ್ರಹಿಸುತ್ತಿವೆ. ಪ್ರವರ್ಗ 2ಎನಲ್ಲಿ ಇರುವ ಕುರುಬ, ಉಪ್ಪಾರ, ಈಡಿಗ ಸಮುದಾಯಗಳು ತಮ್ಮನ್ನು ಎಸ್‌.ಟಿ. ಸೇರಿಸಬೇಕೆಂದು ಆಗ್ರಹಿಸುತ್ತಿವೆ. ಈ ಸಂಬಂಧ ಹೀಗಾಗಲೇ ಬೃಹತ್ ಹೋರಾಟಗಳೂ ನಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...