Homeಕರ್ನಾಟಕಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

“ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ,‌ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುತ್ತೇನೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮೀಸಲಾತಿ ಕುರಿತು ಆಗುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಹಿಂದುಳಿದ ಸಮುದಾಯದಲ್ಲಿ 102 ಜಾತಿಗಳಿವೆ, ಒಟ್ಟು ಜನಸಂಖ್ಯಾ ಪ್ರಮಾಣ ಶೇಕಡಾ 52ರಷ್ಟಿದ್ದರೂ ಕೇವಲ ಶೇಕಡಾ 27ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಶೇಕಡಾ 4ರಷ್ಟಿರುವವರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಲಾಗಿದೆ, ಇದು ತಪ್ಪು” ಎಂದು ತಿಳಿಸಿದ್ದಾರೆ.

“ಬೇರೆ ರಾಜ್ಯಗಳಲ್ಲಿ ಶೇಕಡಾ 50ರ ಮಿತಿಯನ್ನು ಮೀರಿ ಮೀಸಲಾತಿ ನೀಡಿದರೆ ರದ್ದುಪಡಿಸಲಾಗುತ್ತದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಎಲ್ಲ ನಿಯಮಾವಳಿಗಳನ್ನು ಮೀರಿ ಮೀಸಲಾತಿ ಹೆಚ್ಚಿಸುವ ಘೋಷಣೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ” ಎಂದಿದ್ದಾರೆ.

“ಹಿಂದುಳಿದ ಜಾತಿಗಳಿಗೆ 2ಎನಲ್ಲಿ ಮೀಸಲಾತಿ ನೀಡಲಾಗಿದ್ದರೂ ಇತ್ತೀಚೆಗೆ ಬೇರೆ ಜಾತಿಗಳು ಈ ಗುಂಪಿಗೆ ಸೇರಿಕೊಳ್ಳಲು ಪ್ರಯತ್ನ‌ ಮಾಡುತ್ತಿವೆ. ಹಿಂದೆ ಲಿಂಗಾಯತ ಸಾದರರು ಹಿಂದೂ ಸಾದರ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಸೌಲಭ್ಯ ಪಡೆಯಲು ಪ್ರಯತ್ನಿಸಿದ್ದರು. ಮೀಸಲಾತಿ ದುರುಪಯೋಗ ತಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮೀಸಲಾತಿ ಹೋರಾಟ ಪರ್ವ

ರಾಜ್ಯದಲ್ಲಿ ಈಗ ಮೀಸಲಾತಿ ಹೋರಾಟ, ಆಗ್ರಹಗಳ ಪರ್ವ ಆರಂಭವಾಗಿದೆ. ಒಂದಲ್ಲ ಒಂದು ಸಮುದಾಯವು ಮೀಸಲಾತಿ ಸಂಬಂಧ ಹೋರಾಟಕ್ಕೆ ಮುಂದಾಗುತ್ತಿವೆ. ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ನಾಯಕ ಸಮುದಾಯ ಹೋರಾಟ ಮಾಡಿ ತಕ್ಕ ಮಟ್ಟಿನ ಯಶಸ್ಸು ಪಡೆದಿದೆ. ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್ ವರದಿ ಅನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3ರಿಂದ 7ಕ್ಕೂ ಹೆಚ್ಚಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ನ ತೀರ್ಪು ತಡೆಯಾಗಿರುವುದರಿಂದ ಸರ್ಕಾರ, ‘ಕಾಂತರಾಜ್ ಆಯೋಗದ ವರದಿ’ಯನ್ನು ಬಿಡುಗಡೆ ಮಾಡುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ. ಇದರ ನಡುವೆ ಮೀಸಲಾತಿ ಹೋರಾಟಗಳು ಬಿರುಸು ಪಡೆಯುತ್ತಿವೆ.

1990ರ ಅವಧಿಯಲ್ಲಿ ರಚನೆಯಾದ ಮಂಡಲ್‌ ಆಯೋಗದ ಮೂಲಕ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಲಾಯಿತು. ಆದರೆ ಒಟ್ಟು ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಮೀರದಂತೆ ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೂಚಿಸಿತು. ಹೀಗಾಗಿ ಶೇ.52ರಷ್ಟು ಮೀಸಲಾತಿಯ ಬದಲು ಕೇವಲ ಶೇ.27ರಷ್ಟು ಮೀಸಲಾತಿ ಪ್ರಾತಿನಿಧ್ಯ ಒಬಿಸಿಗಳಿಗೆ ದೊರಕಿತು.

2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೇಲ್ಜಾತಿ ಬಡವರಿಗೆಂದು, ಎಂಟು ಲಕ್ಷ ರೂ. ಆದಾಯ ಮಿತಿಯನ್ನು ವಿಧಿಸಿ ಶೇ.10ರಷ್ಟು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಕೋಟಾವನ್ನು ನೀಡಿತು. ಮೇಲ್ಜಾತಿಗಳಿಗೆ ನೀಡಿರುವ ಅವೈಜ್ಞಾನಿಕ ಮೀಸಲಾತಿಯ ಫಲವೋ ಅಥವಾ ಸಮುದಾಯಗಳಲ್ಲಿ ಮೀಸಲಾತಿ ಕುರಿತು ಹುಟ್ಟಿರುವ ಆಸಕ್ತಿಯ ಕಾರಣವೋ- ಮೀಸಲಾತಿ ಹೋರಾಟಗಳು ಮುನ್ನೆಲೆಗೆ ಬಂದಿವೆ. ರಾಜ್ಯದಲ್ಲೂ ವಿವಿಧ ಸಮುದಾಯಗಳು ಹೋರಾಟಕ್ಕೆ ಧಮುಕಿವೆ. ಚುನಾವಣೆ ಹೊಸ್ತಿಲಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡುತ್ತಿವೆ. ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ತರಬೇಕೆಂದು ಮೂರು ದಶಕಗಳಿಂದ ನಡೆಯುತ್ತಿರುವ ಹೋರಾಟ ಈಗ ತೀವ್ರವಾಗಿದೆ. ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ನಡೆಯುತ್ತಿದ್ದು, ಪ್ರಸ್ತುತ 3ಬಿಯಲ್ಲಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಲಾಗಿದೆ.

ಒಕ್ಕಲಿಗ ಉಪಪಂಗಡಗಳನ್ನು ಒಳಗೊಂಡು ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು ಎಂದು ಒಕ್ಕಲಿಗ ಸಮುದಾಯ ಆಗ್ರಹಿಸುತ್ತಿದೆ. ಬೃಹತ್ ಹೋರಾಟದ ಎಚ್ಚರಿಕೆಯನ್ನೂ ನೀಡಿದೆ.

ಪರಿಶಿಷ್ಟ ಜಾತಿ ಪಟ್ಟಿಯೊಳಗೆ ಮಡಿವಾಳ ಸಮುದಾಯವನ್ನು ಸೇರಿಸಬೇಕು ಎಂಬ ಕೂಗು ಎದ್ದಿದೆ. ಸವಿತಾ ಸಮಾಜವೂ ಮೀಸಲಾತಿ ಹೋರಾಟದ ಎಚ್ಚರಿಕೆ ನೀಡಿದೆ. ತಮ್ಮ ಸಮುದಾಯಕ್ಕೆ ಪ್ರವರ್ಗ 1 ಮೀಸಲಾತಿ ನೀಡದಿದ್ದಲ್ಲಿ ರಾಜ್ಯಾದ್ಯಂತ ಕ್ಷೌರದಂಗಡಿ ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸವಿತಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ತಮ್ಮನ್ನು ಸೇರಿಸಬೇಕು ಎಂದು ಹಲವು ಸಮುದಾಯಗಳು ಆಗ್ರಹಿಸುತ್ತಿವೆ. ಪ್ರವರ್ಗ 2ಎನಲ್ಲಿ ಇರುವ ಕುರುಬ, ಉಪ್ಪಾರ, ಈಡಿಗ ಸಮುದಾಯಗಳು ತಮ್ಮನ್ನು ಎಸ್‌.ಟಿ. ಸೇರಿಸಬೇಕೆಂದು ಆಗ್ರಹಿಸುತ್ತಿವೆ. ಈ ಸಂಬಂಧ ಹೀಗಾಗಲೇ ಬೃಹತ್ ಹೋರಾಟಗಳೂ ನಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...