Homeಕರ್ನಾಟಕಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ: ಸಿದ್ದರಾಮಯ್ಯ ಎಚ್ಚರಿಕೆ

- Advertisement -
- Advertisement -

“ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸಲ್ಲ,‌ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುತ್ತೇನೆ” ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಮೀಸಲಾತಿ ಕುರಿತು ಆಗುತ್ತಿರುವ ಬೆಳವಣಿಗೆಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಅವರು, “ಹಿಂದುಳಿದ ಸಮುದಾಯದಲ್ಲಿ 102 ಜಾತಿಗಳಿವೆ, ಒಟ್ಟು ಜನಸಂಖ್ಯಾ ಪ್ರಮಾಣ ಶೇಕಡಾ 52ರಷ್ಟಿದ್ದರೂ ಕೇವಲ ಶೇಕಡಾ 27ರಷ್ಟು ಮೀಸಲಾತಿ ನಿಗದಿಪಡಿಸಲಾಗಿದೆ. ಶೇಕಡಾ 4ರಷ್ಟಿರುವವರಿಗೆ ಶೇಕಡಾ 10ರಷ್ಟು ಮೀಸಲಾತಿ ನೀಡಲಾಗಿದೆ, ಇದು ತಪ್ಪು” ಎಂದು ತಿಳಿಸಿದ್ದಾರೆ.

“ಬೇರೆ ರಾಜ್ಯಗಳಲ್ಲಿ ಶೇಕಡಾ 50ರ ಮಿತಿಯನ್ನು ಮೀರಿ ಮೀಸಲಾತಿ ನೀಡಿದರೆ ರದ್ದುಪಡಿಸಲಾಗುತ್ತದೆ. ಆದರೆ ರಾಜ್ಯದ ಬಿಜೆಪಿ ಸರ್ಕಾರ ಎಲ್ಲ ನಿಯಮಾವಳಿಗಳನ್ನು ಮೀರಿ ಮೀಸಲಾತಿ ಹೆಚ್ಚಿಸುವ ಘೋಷಣೆ ಮಾಡುತ್ತಿದ್ದರೂ ಕ್ರಮ ಕೈಗೊಳ್ಳಲಾಗುತ್ತಿಲ್ಲ” ಎಂದಿದ್ದಾರೆ.

“ಹಿಂದುಳಿದ ಜಾತಿಗಳಿಗೆ 2ಎನಲ್ಲಿ ಮೀಸಲಾತಿ ನೀಡಲಾಗಿದ್ದರೂ ಇತ್ತೀಚೆಗೆ ಬೇರೆ ಜಾತಿಗಳು ಈ ಗುಂಪಿಗೆ ಸೇರಿಕೊಳ್ಳಲು ಪ್ರಯತ್ನ‌ ಮಾಡುತ್ತಿವೆ. ಹಿಂದೆ ಲಿಂಗಾಯತ ಸಾದರರು ಹಿಂದೂ ಸಾದರ ಹೆಸರಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಮೀಸಲಾತಿ ಸೌಲಭ್ಯ ಪಡೆಯಲು ಪ್ರಯತ್ನಿಸಿದ್ದರು. ಮೀಸಲಾತಿ ದುರುಪಯೋಗ ತಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಮೀಸಲಾತಿ ಹೋರಾಟ ಪರ್ವ

ರಾಜ್ಯದಲ್ಲಿ ಈಗ ಮೀಸಲಾತಿ ಹೋರಾಟ, ಆಗ್ರಹಗಳ ಪರ್ವ ಆರಂಭವಾಗಿದೆ. ಒಂದಲ್ಲ ಒಂದು ಸಮುದಾಯವು ಮೀಸಲಾತಿ ಸಂಬಂಧ ಹೋರಾಟಕ್ಕೆ ಮುಂದಾಗುತ್ತಿವೆ. ಪರಿಶಿಷ್ಟ ಪಂಗಡ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ನಾಯಕ ಸಮುದಾಯ ಹೋರಾಟ ಮಾಡಿ ತಕ್ಕ ಮಟ್ಟಿನ ಯಶಸ್ಸು ಪಡೆದಿದೆ. ಜಸ್ಟೀಸ್ ಎಚ್.ಎನ್. ನಾಗಮೋಹನದಾಸ್ ವರದಿ ಅನ್ವಯ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ. 15ರಿಂದ 17ಕ್ಕೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ. 3ರಿಂದ 7ಕ್ಕೂ ಹೆಚ್ಚಿಸುವ ಭರವಸೆಯನ್ನು ಸರ್ಕಾರ ನೀಡಿದೆ. ಆದರೆ ಸುಪ್ರೀಂ ಕೋರ್ಟ್‌ನ ತೀರ್ಪು ತಡೆಯಾಗಿರುವುದರಿಂದ ಸರ್ಕಾರ, ‘ಕಾಂತರಾಜ್ ಆಯೋಗದ ವರದಿ’ಯನ್ನು ಬಿಡುಗಡೆ ಮಾಡುತ್ತದೆಯೇ ಎಂಬುದು ಸದ್ಯದ ಕುತೂಹಲವಾಗಿದೆ. ಇದರ ನಡುವೆ ಮೀಸಲಾತಿ ಹೋರಾಟಗಳು ಬಿರುಸು ಪಡೆಯುತ್ತಿವೆ.

1990ರ ಅವಧಿಯಲ್ಲಿ ರಚನೆಯಾದ ಮಂಡಲ್‌ ಆಯೋಗದ ಮೂಲಕ ಹಿಂದುಳಿದ ಸಮುದಾಯಗಳಿಗೂ ಮೀಸಲಾತಿ ಸೌಲಭ್ಯ ಕಲ್ಪಿಸಲಾಯಿತು. ಆದರೆ ಒಟ್ಟು ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಮೀರದಂತೆ ಇಂದಿರಾ ಸಹಾನಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೂಚಿಸಿತು. ಹೀಗಾಗಿ ಶೇ.52ರಷ್ಟು ಮೀಸಲಾತಿಯ ಬದಲು ಕೇವಲ ಶೇ.27ರಷ್ಟು ಮೀಸಲಾತಿ ಪ್ರಾತಿನಿಧ್ಯ ಒಬಿಸಿಗಳಿಗೆ ದೊರಕಿತು.

2019ರಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮೇಲ್ಜಾತಿ ಬಡವರಿಗೆಂದು, ಎಂಟು ಲಕ್ಷ ರೂ. ಆದಾಯ ಮಿತಿಯನ್ನು ವಿಧಿಸಿ ಶೇ.10ರಷ್ಟು ಇಡಬ್ಲ್ಯೂಎಸ್‌ (ಆರ್ಥಿಕವಾಗಿ ಹಿಂದುಳಿದ ವರ್ಗ) ಕೋಟಾವನ್ನು ನೀಡಿತು. ಮೇಲ್ಜಾತಿಗಳಿಗೆ ನೀಡಿರುವ ಅವೈಜ್ಞಾನಿಕ ಮೀಸಲಾತಿಯ ಫಲವೋ ಅಥವಾ ಸಮುದಾಯಗಳಲ್ಲಿ ಮೀಸಲಾತಿ ಕುರಿತು ಹುಟ್ಟಿರುವ ಆಸಕ್ತಿಯ ಕಾರಣವೋ- ಮೀಸಲಾತಿ ಹೋರಾಟಗಳು ಮುನ್ನೆಲೆಗೆ ಬಂದಿವೆ. ರಾಜ್ಯದಲ್ಲೂ ವಿವಿಧ ಸಮುದಾಯಗಳು ಹೋರಾಟಕ್ಕೆ ಧಮುಕಿವೆ. ಚುನಾವಣೆ ಹೊಸ್ತಿಲಲ್ಲಿ ಸರ್ಕಾರದ ಮೇಲೆ ಒತ್ತಡ ತರುವ ಪ್ರಯತ್ನ ಮಾಡುತ್ತಿವೆ. ರಾಜ್ಯದಲ್ಲಿ ನಡೆಯುತ್ತಿರುವ ಮೀಸಲಾತಿ ಹೋರಾಟಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ.

ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ತರಬೇಕೆಂದು ಮೂರು ದಶಕಗಳಿಂದ ನಡೆಯುತ್ತಿರುವ ಹೋರಾಟ ಈಗ ತೀವ್ರವಾಗಿದೆ. ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ನಡೆಯುತ್ತಿದ್ದು, ಪ್ರಸ್ತುತ 3ಬಿಯಲ್ಲಿರುವ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಆಗ್ರಹಿಸಲಾಗಿದೆ.

ಒಕ್ಕಲಿಗ ಉಪಪಂಗಡಗಳನ್ನು ಒಳಗೊಂಡು ರಾಜ್ಯದ ಇತರ ಹಿಂದುಳಿದ ವರ್ಗಗಳ ‘ಪ್ರವರ್ಗ–3ಎ’ಗೆ ನೀಡಲಾಗಿರುವ ಮೀಸಲಾತಿ ಪ್ರಮಾಣವನ್ನು ಮುಂಬರುವ ಜನವರಿ 23ರ ಒಳಗೆ ಶೇ 4 ರಿಂದ ಶೇ 12ಕ್ಕೆ ಹೆಚ್ಚಿಸ ಬೇಕು ಎಂದು ಒಕ್ಕಲಿಗ ಸಮುದಾಯ ಆಗ್ರಹಿಸುತ್ತಿದೆ. ಬೃಹತ್ ಹೋರಾಟದ ಎಚ್ಚರಿಕೆಯನ್ನೂ ನೀಡಿದೆ.

ಪರಿಶಿಷ್ಟ ಜಾತಿ ಪಟ್ಟಿಯೊಳಗೆ ಮಡಿವಾಳ ಸಮುದಾಯವನ್ನು ಸೇರಿಸಬೇಕು ಎಂಬ ಕೂಗು ಎದ್ದಿದೆ. ಸವಿತಾ ಸಮಾಜವೂ ಮೀಸಲಾತಿ ಹೋರಾಟದ ಎಚ್ಚರಿಕೆ ನೀಡಿದೆ. ತಮ್ಮ ಸಮುದಾಯಕ್ಕೆ ಪ್ರವರ್ಗ 1 ಮೀಸಲಾತಿ ನೀಡದಿದ್ದಲ್ಲಿ ರಾಜ್ಯಾದ್ಯಂತ ಕ್ಷೌರದಂಗಡಿ ಮುಚ್ಚಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸವಿತಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ತಮ್ಮನ್ನು ಸೇರಿಸಬೇಕು ಎಂದು ಹಲವು ಸಮುದಾಯಗಳು ಆಗ್ರಹಿಸುತ್ತಿವೆ. ಪ್ರವರ್ಗ 2ಎನಲ್ಲಿ ಇರುವ ಕುರುಬ, ಉಪ್ಪಾರ, ಈಡಿಗ ಸಮುದಾಯಗಳು ತಮ್ಮನ್ನು ಎಸ್‌.ಟಿ. ಸೇರಿಸಬೇಕೆಂದು ಆಗ್ರಹಿಸುತ್ತಿವೆ. ಈ ಸಂಬಂಧ ಹೀಗಾಗಲೇ ಬೃಹತ್ ಹೋರಾಟಗಳೂ ನಡೆದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...