Homeಕರ್ನಾಟಕಆರ್‌ಬಿಎಎನ್‌ಎಂಎಸ್ ಕಾಲೇಜು ಪ್ರಾಂಶುಪಾಲರಿಂದ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಅನ್ಯಾಯ ಆರೋಪ; ದೀರ್ಘಕಾಲದಿಂದ ಅಮಾನತಿನಲ್ಲಿಟ್ಟು ಮಾನಸಿಕ ಕಿರುಕುಳ

ಆರ್‌ಬಿಎಎನ್‌ಎಂಎಸ್ ಕಾಲೇಜು ಪ್ರಾಂಶುಪಾಲರಿಂದ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಅನ್ಯಾಯ ಆರೋಪ; ದೀರ್ಘಕಾಲದಿಂದ ಅಮಾನತಿನಲ್ಲಿಟ್ಟು ಮಾನಸಿಕ ಕಿರುಕುಳ

- Advertisement -
- Advertisement -

ಜಾತಿ ಮತ್ತು ಭಾಷೆಯ ಕಾರಣಕ್ಕಾಗಿ ಕೆಲಸದ ಸ್ಥಳದಲ್ಲಿ ಮಾನಸಿಕ ಹಾಗೂ ದೈಹಿಕ ಕಿರುಕುಳದ ಪ್ರಕರಣಗಳು ಆಗಾಗ ಕೇಳಿಬರುತ್ತಿವೆ. ಇದನ್ನು ತಡೆಗಟ್ಟಲು ಹಲವು ಕಾನೂನುಗಳು ಇದ್ದರೂ, ಬಂಡವಾಳಶಾಹಿಗಳು ಅದ್ಯಾವುದಕ್ಕೂ ಹೆದರದೆ ತಮ್ಮ ಅಟ್ಟಹಾಸ ಮೆರೆಯುತ್ತಾರೆ. ಬೆಂಗಳೂರಿನ ಅತ್ಯಂತ ಹಳೆಯ ಶಿಕ್ಷಣ ಸಂಸ್ಥೆಯಾದ ಹಲಸೂರಿನ ಆರ್‌ಬಿಎಎನ್‌ಎಂಎಸ್‌ (RBANM’S) ಕಾಲೇಜಿನಲ್ಲಿ ಉತ್ತರ ಭಾರತ ಮೂಲದ ಪ್ರಾಂಶುಪಾಲರಾದ ಡಾ. ಚೇತನ್ ಬಜಾಜ್ ಅವರು ಪ್ರಾದೇಶಿಕತೆ ಹಾಗೂ ಜಾತಿ ಕಾರಣಕ್ಕಾಗಿ ಅಲ್ಲಿನ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರಾಂಶುಪಾಲರು ಇಷ್ಟೆಲ್ಲಾ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದ್ದರೂ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದು, ಹಲವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್‌ ಫೋನ್‌ ಬಳಸುತ್ತಿದ್ದನ್ನು ಪ್ರಶ್ನಿಸಿದ ದಲಿತ ಸಮುದಾಯದ ಪ್ರಾಧ್ಯಾಪಕ ಡಾ.  ಅವಿನಾಶ್. ವಿ, ಬೋಧಕೇತರ ಸಿಬ್ಬಂದಿ ದೀಪಾ ಸೇರಿದಂತೆ ಐದು ಜನರನ್ನು ಸಕಾರಣವಿಲ್ಲದೆ ಅಮಾನತು ಮಾಡಿ, ವಿಚಾರಣೆಯನ್ನೇ ನಡೆಸದೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಕಳೆದ ಐದು ತಿಂಗಳಿನಿಂದ ಹಲವು ಸಿಬ್ಬಂದಿಗಳನ್ನು ಅಮಾನತಿನಲ್ಲಿಟ್ಟಿರುವ ಆರ್‌ಬಿಎಎನ್‌ಎಂಎಸ್‌ ಕಾಲೇಜು ಆಡಳಿತ ಮಂಡಳಿ, ದೀರ್ಘಕಾಲದಿಂದ ವಿಚಾರಣೆ ನಡೆಸದೆ ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ.

ಪ್ರಾಂಶುಪಾಲರಾದ ಡಾ. ಚೇತನ್ ಬಜಾಜ್

ಈ ಬಗ್ಗೆ ‘ನಾನುಗೌರಿ.ಕಾಂ‘ ಜತೆಗೆ ಮಾತನಾಡಿದ ಡಾ. ಅವಿನಾಶ್, ‘ಕಳೆದ ಆರು ವರ್ಷಗಳಿಂದ ನಾನು ನಿಷ್ಠೆಯಿಂದ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದೇನೆ.. ಈ ಆರು ವರ್ಷಗಳಿಲ್ಲಿ ಹಲವಾರು ಬದಲಾವಣೆಗಳು ಆದರೂ ನನ್ನ ವೃತ್ತಿ ಧರ್ಮವನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ನಾನು 2018ರಲ್ಲಿ ಮಂಗಳೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದು ಆರ್‌ಬಿಎಎನ್‌ಎಂಎಸ್‌ ಕಾಲೇಜಿಗೆ ಬಂದಾಗ, ಅಲ್ಲಿದ್ದ ಉಪನ್ಯಾಸಕರಿಗೆ ಸಂಶೋಧನೆಯ ಅರಿವೆ ಇರಲಿಲ್ಲ. ಪ್ರಾಂಶುಪಾಲರು ಸಂಶೋಧನೆಯ ಮಹತ್ವದ ಬಗ್ಗೆ ತಿಳಿಸಿರಲಿಲ್ಲ, ಪ್ರಾಧ್ಯಾಪಕರಿಗೂ ಈ ಬಗ್ಗೆ ಆಸಕ್ತಿ ಇರಲಿಲ್ಲ. ನಾನು ಅಲ್ಲಿಗೆ ಹೋದಾಗ ಹಲವಾರು ವೈಮನಸ್ಸು ಇತ್ತು. ಆದರೆ, ನಾನು ಎಲ್ಲವನ್ನೂ ಸರಿದೂಗಿಸಿಕೊಂಡು ಕೆಲಸ ಮಾಡಿದ್ದೇನೆ’ ಎಂದರು.

‘ನಾನು ಅಲ್ಲಿಗೆ ಕೆಲಸಕ್ಕೆ ಸೇರಿದಾಗ ಬಿಎನಲ್ಲಿ ಒಂದಂಕಿ ವಿದ್ಯಾರ್ಥಿಗಳು ಮಾತ್ರ ಇದ್ದರು.. ಪಿಯು ಕಾಲೇಜಿನ ವಿದ್ಯಾರ್ಥಿಗಳ ಮನವೊಲಿಸಿದ ನಾನು, ಸುಮಾರು 29 ವಿದ್ಯಾರ್ಥಿಗಳನ್ನು ಬಿಎ ಪದವಿಗೆ ದಾಖಲಾಗುವಂತೆ ಮಾಡಿದ್ದೆ; ಕೊರೊನಾ ನಂತರವೂ 25 ವಿದ್ಯಾರ್ಥಿಗಳು ಬಿಎಗೆ ದಾಖಲಾಗಿದ್ದರು. ನನ್ನ ಶ್ರಮದಿಂದ ಪ್ರಸ್ತುತ ಈ ಸಾಲಿನಲ್ಲಿ ಬಿಎ ಪದವಿಗೆ ಸುಮಾರು 32 ಜನ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ. ಕೆಲವರಿಗೆ ಕಲಾ ವಿಭಾಗ ತೆಗೆದುಕೊಳ್ಳುವುದುಕ್ಕೂ ಆಸಕ್ತಿ ಇರಲಿಲ್ಲ. ಆದರೆ, ನಾನು ಸಾಕಷ್ಟು ಶ್ರಮಪಟ್ಟು ದಾಖಲಾತಿ ಹೆಚ್ಚಿಸಿದ್ದೇನೆ. ನಾನು ಹಲವು ವರ್ಷಗಳಿಂದ ಅಲ್ಲಿ ಕೆಲಸ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳ ಕುರಿತು ಪ್ರಾಥಮಿಕ ಮಾಹಿತಿ ತಿಳಿದುಕೊಂಡಿದ್ದೇನೆ; ಆ ಮೂಲಕ ದಾಖಲಾತಿ ಹೆಚ್ಚಿಸಿದ್ದೇನೆ’ ಎಂದು ಹೇಳಿದರು.

‘ನಮ್ಮ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಬಿಎ ಪದವಿಗೆ ದಾಖಲಾಗಿದ್ದರೆ.. ಅದಕ್ಕೆ ಕಾರಣ ನನ್ನ ಶ್ರಮ ಮಾತ್ರ. ನ್ಯಾಕ್ ಕಮಿಟಿಯವರು ಕೂಡ ನ್ನನ್ನನ್ನು ‘ಮಲ್ಟಿ ಟ್ಯಾಲೆಂಟೆಡ್’ ಎಂದು ನಮ್ಮ ಪ್ರಾಂಶುಪಾಲರಿಗೆ ಹೇಳಿದ್ದಾರೆ; ಸಂಸ್ಥೆ ಬೆಳೆಯಲು ನನ್ನ ಕಡೆಯಿಂದ ಸಾಕಷ್ಟು ಶ್ರಮ ಹಾಕಿದ್ದೇನೆ. ಆದರೆ, ಇಷ್ಟೆಲ್ಲಾ ಕಾಲೇಜಿನ ಬೆಳವಣಿಗೆಗಾಗಿ ಶ್ರಮಿಸಿದ್ದರೂ ನನ್ನನ್ನು ಕಡೆಗಣಿಸುತ್ತಿದ್ದಾರೆ’ ಎಂದು ಅವಿನಾಶ್ ಬೇಸರ ವ್ಯಕ್ತಪಡಿಸಿದರು.

‘ಸಂಸ್ಥೆಗಾಗಿ ಇಷ್ಟೆಲ್ಲಾ ಶ್ರಮಿಸಿರುವ ನಾನು, ಕಾಲೇಜಿಗೆ ಕೆಟ್ಟ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಅದರ ವಿರುದ್ಧ ಹೋರಾಡಿದ್ದೇನೆ. 2023ರ ಸೆಪ್ಟಂಬರ್ ತಿಂಗಳಲ್ಲಿ ಮಕ್ಕಳು ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದರು; ಅದೇ ಸಮಯದಲ್ಲಿ ಪರೀಕ್ಷಾ ಕೊಠಡಿಯಲ್ಲೆ ಮಹಿಳಾ ಪ್ರಾದ್ಯಾಪಕರು ತಮ್ಮ ಮೊಬೈಲ್‌ ಫೋನಿನಲ್ಲಿ ಮಾತನಾಡುತ್ತಿದ್ದರು. ಅದನ್ನು ಗಮನಿಸಿದ ನಾನು, ಪರೀಕ್ಷಾ ಮುಖ್ಯಸ್ಥರ ಗಮನಕ್ಕೆ ತಂದಿದ್ದೆ. ಆದರೆ, ಆ ಮಹಿಳಾ ಸಿಬ್ಬಂದಿ ನನ್ನ ವಿರುದ್ಧ ಸಂಸ್ಥೆಯ ಕಾರ್ಯದರ್ಶಿಗಳಿಗೆ ದೂರು ನೀಡಿ, ಅನುಮತಿ ಇಲ್ಲದೆ ನಾನು ಫೋಟೋ ತೆಗೆದಿದ್ದೇನೆ ಎಂದು ಆರೋಪ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘ನಮ್ಮ ಸಂಸ್ಥೆಯ ಕಾರ್ಯದರ್ಶಿಗಳು ಪ್ರಕರಣದ ವಿಚಾರಣೆಯನ್ನೇ ನಡೆಸದೆ ಕಳೆದ ನಾಲ್ಕು ತಿಂಗಳಿಂದ ನನ್ನನ್ನು ಅಮಾನತಿನಲ್ಲಿ ಇಟ್ಟಿದ್ದಾರೆ. ಮಹಿಳಾ ಪ್ರಾಧ್ಯಾಪಕರು ನನ್ನ ವಿರುದ್ಧ ನೀಡಿದ ದೂರಿಗೆ ಸಾಕ್ಷಿ ಇದ್ದಿದ್ದರೆ ನನ್ನ ಮೇಲೆ ಕ್ರಮ ತೆಗೆದುಕೊಳ್ಳಲು ಇಷ್ಟು ದಿನ ಬೇಕಾಗಿತ್ತಾ’ ಎಂದು ಪ್ರಶ್ನಿಸಿದ್ದಾರೆ.

‘ನವೆಂಬರ್ ಆರನೇ ತಾರೀಖಿನಿಂದ ನಾನು ಈವರೆಗೆ ಅಮಾನತಿನಲ್ಲಿ ಇದ್ದೇನೆ. ನಾಲ್ಕು ತಿಂಗಳಿನಿಂದ ನನ್ನ ವಿಚಾರಣೆಯನ್ನೇ ನಡೆಸಿಲ್ಲ; ನನ್ನ ಜೀವನವನ್ನು ಹಾಳು ಮಾಡುವ ಏಕೈಕ ದುರುದ್ದೇಶದಿಂದ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ’ ಎಂದು ಅವಿನಾಶ್ ಆರೋಪಿಸಿದರು.

‘ನಮ್ಮ ಸಂಸ್ಥೆ ದಲಿತ ಅಭ್ಯುದಯಕ್ಕೆ ಎಂದು ಹೇಳುತ್ತಾರೆ. ಆದರೆ, ನಾನು ಕೂಡ ದಲಿತ, ನನ್ನ ಬಗ್ಗೆ ಇಷ್ಟೊಂದು ಅಸಡ್ಡೆ ಏಕೆ? ವಿದೇಶಗಳಲ್ಲಿ ಓದಿಕೊಂಡು ಬಂದಿದ್ದೇವೆ ಎಂದು ಹೇಳುವ ಇವರ ಮನಸ್ಸಿನಲ್ಲಿ ಕೊಳಕು ಇದೆ. ಇಲ್ಲದಿದ್ದರೆ ಇವರು ಇಷ್ಟು ದಿನ ನನ್ನ ವಿಚಾರಣೆ ನಡೆಸಿಲ್ಲ ಯಾಕೆ? ನಮ್ಮ ಕಾಲೇಜಿನ ಎಲ್ಲ ಕಡೆಯೂ ಸಿಸಿಟಿವಿ ಕ್ಯಾಮೆರಾಗಳಿವೆ; ಬೇಕಿದ್ದರೆ ಪರಿಶೀಲನೆ ನಡೆಸಲಿ. ಅದರಿಂದ ಅವರು ಒಂದು ನಿರ್ಧಾರಕ್ಕೆ ಬರುವುದಕ್ಕೆ ಸಾಧ್ಯವಾಗುತ್ತದೆ. ಆದರೆ, ಏನಾದರೂ ಮಾಡಿಕೊಳ್ಳಲಿ ಎಂಬ ಮನಸ್ಥಿಯ ಆಡಳಿತ ಮಂಡಳಿ ನನಗೆ ಅನ್ಯಾಯ ಮಾಡುತ್ತಿದೆ’ ಎಂದು ಬೇಸರ ಹೊರಹಾಕಿದರು.

ಕಳೆದ ಐದು ತಿಂಗಳಿನಿಂದ ಅಮಾನತಿನಲ್ಲಿರುವ ಬೋಧಕೇತರ ಸಿಬ್ಬಂದಿ ದೀಪಾ ಎಂಬುವವರು ಮಾತನಾಡಿ, ‘ಹೊಸದಾಗಿ ಬಂದಿರುವ ಪ್ರಾಂಶುಪಾಲರಿಗೆ ಕಾಲೇಜು ಆಡಳಿತದ ಬಗ್ಗೆ ಗೊತ್ತಿಲ್ಲ; ಅವರನ್ನು ಯಾಕಾಗಿ ನೇಮಕ ಮಾಡಿಕೊಂಡಿದ್ದಾರೆಯೋ ಗೊತ್ತಿಲ್ಲ. ಅವರು ಅತಿಥಿ ಉಪನ್ಯಾಸಕ ಹಾಗೂ ತರಬೇತುದಾರಾಗಿದ್ದವರು, ಶೈಕ್ಷಣಿಕ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ಇಲ್ಲ. ನಾನು ಇದೇ ಕಾಲೇಜಿನಲ್ಲಿ 18 ವರ್ಷ ಕೆಲಸ ಮಾಡಿದ ಅನುಭವ ಇದೆ, ನನ್ನ ಕೆಲಸದ ಬಗ್ಗೆ ಹಿಂದಿನ ಆಡಳಿತ ಮಂಡಳಿ ಒಳ್ಳೆಯ ಮಾತನಾಡಿದ್ದಾರೆ. ಈವರೆಗೆ ನಾಲ್ಕು ಜನ ಪ್ರಾಂಶುಪಾಲರು ನನ್ನ ಕೆಲಸವನ್ನು ಒಪ್ಪಿಕೊಂಡಿದ್ದಾರೆ’ ಎಂದರು.

‘ಉತ್ತರ ಭಾರತದಿಂದ ಬಂದಿರುವ ಪ್ರಾಂಶುಪಾಲರು ತಮಗೆ ಬೇಕಾದವರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡು, ಸ್ಥಳೀಯರು ಮತ್ತು ಕನ್ನಡಿಗರನ್ನು ಕೆಲಸದಿಂದ ತೆಗೆಯುವುದಕ್ಕೆ ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಬಗ್ಗೆ ಕಾರ್ಯದರ್ಶಿಗಳಿಗೆ ತಪ್ಪು ಮಾಹಿತಿ ನೀಡಿ, ಅವರನ್ನು ಭೇಟಿಯಾಗದಂತೆ ಮಾಡಿದ್ದಾರೆ. ಡಾ. ಅವಿನಾಶ್ ಅವರಿಗಿಂತ ಮೊದಲೆ ನನ್ನನ್ನು ಅಮಾನತು ಮಾಡಿದ್ದಾರೆ. ಐದು ತಿಂಗಳಿನಿಂದ ಅಮಾನತಿನಲ್ಲಿಟ್ಟು, ನನಗೆ ಆರು ತಿಂಗಳ ವೇತನವನ್ನೂ ಕೊಡದೆ ಸತಾಯಿಸುತ್ತಿದ್ದಾರೆ. ನಾನು ಕೊಟ್ಟಿರುವ ಲಾಯರ್ ನೋಟಿಸ್‌ಗೂ ಅವರು ಉತ್ತರಿಸಿಲ್ಲ, ಸಂಸ್ಥೆ ವಿಚಾರಣೆ ಆಗುವವರೆಗೂ ಲೇಬರ್ ಕೋರ್ಟಿಗೆ ಹೋಗುವುದಕ್ಕೆ ಸಾಧ್ಯವಿಲ್ಲ’ ಎಂದು ದೀಪಾ ಅಸಹಾಯಕತೆ ವ್ಯಕ್ತಪಡಿಸಿದರು.

‘ಪ್ರಾಂಶುಪಾಲರು ಮತ್ತು ಕಾಲೇಜು ಆಡಳಿತ ಮಂಡಳಿ ನೀಡುವ ಮಾನಸಿಕ ಹಿಂಸೆಯಿಂದ ನಾನು ಅನಾರೋಗ್ಯಕ್ಕೆ ಈಡಾಗಿದ್ದೇನೆ. ಒಟ್ಟು ಐದು ಜನರನ್ನು ಅಮಾನತಿನಲ್ಲಿಟ್ಟಿದ್ದು, 12 ಜನರಿಗೆ ಮಾನಸಿಕ ಹಿಂಸೆ ನೀಡಿ ಕೆಲಸ ಬಿಡಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆಯಲು ಸಂಸ್ಥೆಯ ಕಾರ್ಯದರ್ಶಿಗಳಾದ ಸಂಜೀವ್ ನರೇನ್ ಅವರನ್ನು ಸಂಪರ್ಕಿಸಲಾಯಿತು. ಆದರೆ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೂಡಲೇ ಕರೆ ಸ್ಥಗಿತಗೊಳಿಸಿದರು; ಪ್ರಾಂಶುಪಾಲರು ಕರೆ ಸ್ವೀಕರಿಸಲಿಲ್ಲ.

ಇದನ್ನೂ ಓದಿ; ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದ ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...