Homeಕರ್ನಾಟಕಆರ್‌ಬಿಎಎನ್‌ಎಂಎಸ್ ಕಾಲೇಜು ಪ್ರಾಂಶುಪಾಲರಿಂದ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಅನ್ಯಾಯ ಆರೋಪ; ದೀರ್ಘಕಾಲದಿಂದ ಅಮಾನತಿನಲ್ಲಿಟ್ಟು ಮಾನಸಿಕ ಕಿರುಕುಳ

ಆರ್‌ಬಿಎಎನ್‌ಎಂಎಸ್ ಕಾಲೇಜು ಪ್ರಾಂಶುಪಾಲರಿಂದ ದಲಿತ ಸಮುದಾಯದ ಪ್ರಾಧ್ಯಾಪಕರಿಗೆ ಅನ್ಯಾಯ ಆರೋಪ; ದೀರ್ಘಕಾಲದಿಂದ ಅಮಾನತಿನಲ್ಲಿಟ್ಟು ಮಾನಸಿಕ ಕಿರುಕುಳ

- Advertisement -
- Advertisement -

ಜಾತಿ ಮತ್ತು ಭಾಷೆಯ ಕಾರಣಕ್ಕಾಗಿ ಕೆಲಸದ ಸ್ಥಳದಲ್ಲಿ ಮಾನಸಿಕ ಹಾಗೂ ದೈಹಿಕ ಕಿರುಕುಳದ ಪ್ರಕರಣಗಳು ಆಗಾಗ ಕೇಳಿಬರುತ್ತಿವೆ. ಇದನ್ನು ತಡೆಗಟ್ಟಲು ಹಲವು ಕಾನೂನುಗಳು ಇದ್ದರೂ, ಬಂಡವಾಳಶಾಹಿಗಳು ಅದ್ಯಾವುದಕ್ಕೂ ಹೆದರದೆ ತಮ್ಮ ಅಟ್ಟಹಾಸ ಮೆರೆಯುತ್ತಾರೆ. ಬೆಂಗಳೂರಿನ ಅತ್ಯಂತ ಹಳೆಯ ಶಿಕ್ಷಣ ಸಂಸ್ಥೆಯಾದ ಹಲಸೂರಿನ ಆರ್‌ಬಿಎಎನ್‌ಎಂಎಸ್‌ (RBANM’S) ಕಾಲೇಜಿನಲ್ಲಿ ಉತ್ತರ ಭಾರತ ಮೂಲದ ಪ್ರಾಂಶುಪಾಲರಾದ ಡಾ. ಚೇತನ್ ಬಜಾಜ್ ಅವರು ಪ್ರಾದೇಶಿಕತೆ ಹಾಗೂ ಜಾತಿ ಕಾರಣಕ್ಕಾಗಿ ಅಲ್ಲಿನ ಸಿಬ್ಬಂದಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪ್ರಾಂಶುಪಾಲರು ಇಷ್ಟೆಲ್ಲಾ ದೌರ್ಜನ್ಯ, ದಬ್ಬಾಳಿಕೆ ನಡೆಯುತ್ತಿದ್ದರೂ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಮಾತ್ರ ಕಣ್ಣು ಮುಚ್ಚಿ ಕುಳಿತಿದ್ದು, ಹಲವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಮೊಬೈಲ್‌ ಫೋನ್‌ ಬಳಸುತ್ತಿದ್ದನ್ನು ಪ್ರಶ್ನಿಸಿದ ದಲಿತ ಸಮುದಾಯದ ಪ್ರಾಧ್ಯಾಪಕ ಡಾ.  ಅವಿನಾಶ್. ವಿ, ಬೋಧಕೇತರ ಸಿಬ್ಬಂದಿ ದೀಪಾ ಸೇರಿದಂತೆ ಐದು ಜನರನ್ನು ಸಕಾರಣವಿಲ್ಲದೆ ಅಮಾನತು ಮಾಡಿ, ವಿಚಾರಣೆಯನ್ನೇ ನಡೆಸದೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಕಳೆದ ಐದು ತಿಂಗಳಿನಿಂದ ಹಲವು ಸಿಬ್ಬಂದಿಗಳನ್ನು ಅಮಾನತಿನಲ್ಲಿಟ್ಟಿರುವ ಆರ್‌ಬಿಎಎನ್‌ಎಂಎಸ್‌ ಕಾಲೇಜು ಆಡಳಿತ ಮಂಡಳಿ, ದೀರ್ಘಕಾಲದಿಂದ ವಿಚಾರಣೆ ನಡೆಸದೆ ಮಾನಸಿಕ ಕಿರುಕುಳ ನೀಡುತ್ತಿದೆ ಎಂದು ಸಿಬ್ಬಂದಿಗಳು ಅಳಲು ತೋಡಿಕೊಂಡಿದ್ದಾರೆ.

ಪ್ರಾಂಶುಪಾಲರಾದ ಡಾ. ಚೇತನ್ ಬಜಾಜ್

ಈ ಬಗ್ಗೆ ‘ನಾನುಗೌರಿ.ಕಾಂ‘ ಜತೆಗೆ ಮಾತನಾಡಿದ ಡಾ. ಅವಿನಾಶ್, ‘ಕಳೆದ ಆರು ವರ್ಷಗಳಿಂದ ನಾನು ನಿಷ್ಠೆಯಿಂದ ಸಂಸ್ಥೆಗಾಗಿ ಕೆಲಸ ಮಾಡುತ್ತಿದ್ದೇನೆ.. ಈ ಆರು ವರ್ಷಗಳಿಲ್ಲಿ ಹಲವಾರು ಬದಲಾವಣೆಗಳು ಆದರೂ ನನ್ನ ವೃತ್ತಿ ಧರ್ಮವನ್ನು ಪಾಲಿಸಿಕೊಂಡು ಬರುತ್ತಿದ್ದೇನೆ. ನಾನು 2018ರಲ್ಲಿ ಮಂಗಳೂರು ವಿಶ್ವ ವಿದ್ಯಾಲಯದಿಂದ ಡಾಕ್ಟರೇಟ್ ಪದವಿ ಪಡೆದು ಆರ್‌ಬಿಎಎನ್‌ಎಂಎಸ್‌ ಕಾಲೇಜಿಗೆ ಬಂದಾಗ, ಅಲ್ಲಿದ್ದ ಉಪನ್ಯಾಸಕರಿಗೆ ಸಂಶೋಧನೆಯ ಅರಿವೆ ಇರಲಿಲ್ಲ. ಪ್ರಾಂಶುಪಾಲರು ಸಂಶೋಧನೆಯ ಮಹತ್ವದ ಬಗ್ಗೆ ತಿಳಿಸಿರಲಿಲ್ಲ, ಪ್ರಾಧ್ಯಾಪಕರಿಗೂ ಈ ಬಗ್ಗೆ ಆಸಕ್ತಿ ಇರಲಿಲ್ಲ. ನಾನು ಅಲ್ಲಿಗೆ ಹೋದಾಗ ಹಲವಾರು ವೈಮನಸ್ಸು ಇತ್ತು. ಆದರೆ, ನಾನು ಎಲ್ಲವನ್ನೂ ಸರಿದೂಗಿಸಿಕೊಂಡು ಕೆಲಸ ಮಾಡಿದ್ದೇನೆ’ ಎಂದರು.

‘ನಾನು ಅಲ್ಲಿಗೆ ಕೆಲಸಕ್ಕೆ ಸೇರಿದಾಗ ಬಿಎನಲ್ಲಿ ಒಂದಂಕಿ ವಿದ್ಯಾರ್ಥಿಗಳು ಮಾತ್ರ ಇದ್ದರು.. ಪಿಯು ಕಾಲೇಜಿನ ವಿದ್ಯಾರ್ಥಿಗಳ ಮನವೊಲಿಸಿದ ನಾನು, ಸುಮಾರು 29 ವಿದ್ಯಾರ್ಥಿಗಳನ್ನು ಬಿಎ ಪದವಿಗೆ ದಾಖಲಾಗುವಂತೆ ಮಾಡಿದ್ದೆ; ಕೊರೊನಾ ನಂತರವೂ 25 ವಿದ್ಯಾರ್ಥಿಗಳು ಬಿಎಗೆ ದಾಖಲಾಗಿದ್ದರು. ನನ್ನ ಶ್ರಮದಿಂದ ಪ್ರಸ್ತುತ ಈ ಸಾಲಿನಲ್ಲಿ ಬಿಎ ಪದವಿಗೆ ಸುಮಾರು 32 ಜನ ವಿದ್ಯಾರ್ಥಿಗಳು ದಾಖಲಾತಿ ಪಡೆದುಕೊಂಡಿದ್ದಾರೆ. ಕೆಲವರಿಗೆ ಕಲಾ ವಿಭಾಗ ತೆಗೆದುಕೊಳ್ಳುವುದುಕ್ಕೂ ಆಸಕ್ತಿ ಇರಲಿಲ್ಲ. ಆದರೆ, ನಾನು ಸಾಕಷ್ಟು ಶ್ರಮಪಟ್ಟು ದಾಖಲಾತಿ ಹೆಚ್ಚಿಸಿದ್ದೇನೆ. ನಾನು ಹಲವು ವರ್ಷಗಳಿಂದ ಅಲ್ಲಿ ಕೆಲಸ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳ ಕುರಿತು ಪ್ರಾಥಮಿಕ ಮಾಹಿತಿ ತಿಳಿದುಕೊಂಡಿದ್ದೇನೆ; ಆ ಮೂಲಕ ದಾಖಲಾತಿ ಹೆಚ್ಚಿಸಿದ್ದೇನೆ’ ಎಂದು ಹೇಳಿದರು.

‘ನಮ್ಮ ಕಾಲೇಜಿನಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂದು ಬಿಎ ಪದವಿಗೆ ದಾಖಲಾಗಿದ್ದರೆ.. ಅದಕ್ಕೆ ಕಾರಣ ನನ್ನ ಶ್ರಮ ಮಾತ್ರ. ನ್ಯಾಕ್ ಕಮಿಟಿಯವರು ಕೂಡ ನ್ನನ್ನನ್ನು ‘ಮಲ್ಟಿ ಟ್ಯಾಲೆಂಟೆಡ್’ ಎಂದು ನಮ್ಮ ಪ್ರಾಂಶುಪಾಲರಿಗೆ ಹೇಳಿದ್ದಾರೆ; ಸಂಸ್ಥೆ ಬೆಳೆಯಲು ನನ್ನ ಕಡೆಯಿಂದ ಸಾಕಷ್ಟು ಶ್ರಮ ಹಾಕಿದ್ದೇನೆ. ಆದರೆ, ಇಷ್ಟೆಲ್ಲಾ ಕಾಲೇಜಿನ ಬೆಳವಣಿಗೆಗಾಗಿ ಶ್ರಮಿಸಿದ್ದರೂ ನನ್ನನ್ನು ಕಡೆಗಣಿಸುತ್ತಿದ್ದಾರೆ’ ಎಂದು ಅವಿನಾಶ್ ಬೇಸರ ವ್ಯಕ್ತಪಡಿಸಿದರು.

‘ಸಂಸ್ಥೆಗಾಗಿ ಇಷ್ಟೆಲ್ಲಾ ಶ್ರಮಿಸಿರುವ ನಾನು, ಕಾಲೇಜಿಗೆ ಕೆಟ್ಟ ಹೆಸರು ಬರುತ್ತದೆ ಎಂಬ ಕಾರಣಕ್ಕೆ ಅದರ ವಿರುದ್ಧ ಹೋರಾಡಿದ್ದೇನೆ. 2023ರ ಸೆಪ್ಟಂಬರ್ ತಿಂಗಳಲ್ಲಿ ಮಕ್ಕಳು ಸೆಮಿಸ್ಟರ್ ಪರೀಕ್ಷೆ ಬರೆಯುತ್ತಿದ್ದರು; ಅದೇ ಸಮಯದಲ್ಲಿ ಪರೀಕ್ಷಾ ಕೊಠಡಿಯಲ್ಲೆ ಮಹಿಳಾ ಪ್ರಾದ್ಯಾಪಕರು ತಮ್ಮ ಮೊಬೈಲ್‌ ಫೋನಿನಲ್ಲಿ ಮಾತನಾಡುತ್ತಿದ್ದರು. ಅದನ್ನು ಗಮನಿಸಿದ ನಾನು, ಪರೀಕ್ಷಾ ಮುಖ್ಯಸ್ಥರ ಗಮನಕ್ಕೆ ತಂದಿದ್ದೆ. ಆದರೆ, ಆ ಮಹಿಳಾ ಸಿಬ್ಬಂದಿ ನನ್ನ ವಿರುದ್ಧ ಸಂಸ್ಥೆಯ ಕಾರ್ಯದರ್ಶಿಗಳಿಗೆ ದೂರು ನೀಡಿ, ಅನುಮತಿ ಇಲ್ಲದೆ ನಾನು ಫೋಟೋ ತೆಗೆದಿದ್ದೇನೆ ಎಂದು ಆರೋಪ ಮಾಡಿದ್ದಾರೆ’ ಎಂದು ಮಾಹಿತಿ ನೀಡಿದರು.

‘ನಮ್ಮ ಸಂಸ್ಥೆಯ ಕಾರ್ಯದರ್ಶಿಗಳು ಪ್ರಕರಣದ ವಿಚಾರಣೆಯನ್ನೇ ನಡೆಸದೆ ಕಳೆದ ನಾಲ್ಕು ತಿಂಗಳಿಂದ ನನ್ನನ್ನು ಅಮಾನತಿನಲ್ಲಿ ಇಟ್ಟಿದ್ದಾರೆ. ಮಹಿಳಾ ಪ್ರಾಧ್ಯಾಪಕರು ನನ್ನ ವಿರುದ್ಧ ನೀಡಿದ ದೂರಿಗೆ ಸಾಕ್ಷಿ ಇದ್ದಿದ್ದರೆ ನನ್ನ ಮೇಲೆ ಕ್ರಮ ತೆಗೆದುಕೊಳ್ಳಲು ಇಷ್ಟು ದಿನ ಬೇಕಾಗಿತ್ತಾ’ ಎಂದು ಪ್ರಶ್ನಿಸಿದ್ದಾರೆ.

‘ನವೆಂಬರ್ ಆರನೇ ತಾರೀಖಿನಿಂದ ನಾನು ಈವರೆಗೆ ಅಮಾನತಿನಲ್ಲಿ ಇದ್ದೇನೆ. ನಾಲ್ಕು ತಿಂಗಳಿನಿಂದ ನನ್ನ ವಿಚಾರಣೆಯನ್ನೇ ನಡೆಸಿಲ್ಲ; ನನ್ನ ಜೀವನವನ್ನು ಹಾಳು ಮಾಡುವ ಏಕೈಕ ದುರುದ್ದೇಶದಿಂದ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ’ ಎಂದು ಅವಿನಾಶ್ ಆರೋಪಿಸಿದರು.

‘ನಮ್ಮ ಸಂಸ್ಥೆ ದಲಿತ ಅಭ್ಯುದಯಕ್ಕೆ ಎಂದು ಹೇಳುತ್ತಾರೆ. ಆದರೆ, ನಾನು ಕೂಡ ದಲಿತ, ನನ್ನ ಬಗ್ಗೆ ಇಷ್ಟೊಂದು ಅಸಡ್ಡೆ ಏಕೆ? ವಿದೇಶಗಳಲ್ಲಿ ಓದಿಕೊಂಡು ಬಂದಿದ್ದೇವೆ ಎಂದು ಹೇಳುವ ಇವರ ಮನಸ್ಸಿನಲ್ಲಿ ಕೊಳಕು ಇದೆ. ಇಲ್ಲದಿದ್ದರೆ ಇವರು ಇಷ್ಟು ದಿನ ನನ್ನ ವಿಚಾರಣೆ ನಡೆಸಿಲ್ಲ ಯಾಕೆ? ನಮ್ಮ ಕಾಲೇಜಿನ ಎಲ್ಲ ಕಡೆಯೂ ಸಿಸಿಟಿವಿ ಕ್ಯಾಮೆರಾಗಳಿವೆ; ಬೇಕಿದ್ದರೆ ಪರಿಶೀಲನೆ ನಡೆಸಲಿ. ಅದರಿಂದ ಅವರು ಒಂದು ನಿರ್ಧಾರಕ್ಕೆ ಬರುವುದಕ್ಕೆ ಸಾಧ್ಯವಾಗುತ್ತದೆ. ಆದರೆ, ಏನಾದರೂ ಮಾಡಿಕೊಳ್ಳಲಿ ಎಂಬ ಮನಸ್ಥಿಯ ಆಡಳಿತ ಮಂಡಳಿ ನನಗೆ ಅನ್ಯಾಯ ಮಾಡುತ್ತಿದೆ’ ಎಂದು ಬೇಸರ ಹೊರಹಾಕಿದರು.

ಕಳೆದ ಐದು ತಿಂಗಳಿನಿಂದ ಅಮಾನತಿನಲ್ಲಿರುವ ಬೋಧಕೇತರ ಸಿಬ್ಬಂದಿ ದೀಪಾ ಎಂಬುವವರು ಮಾತನಾಡಿ, ‘ಹೊಸದಾಗಿ ಬಂದಿರುವ ಪ್ರಾಂಶುಪಾಲರಿಗೆ ಕಾಲೇಜು ಆಡಳಿತದ ಬಗ್ಗೆ ಗೊತ್ತಿಲ್ಲ; ಅವರನ್ನು ಯಾಕಾಗಿ ನೇಮಕ ಮಾಡಿಕೊಂಡಿದ್ದಾರೆಯೋ ಗೊತ್ತಿಲ್ಲ. ಅವರು ಅತಿಥಿ ಉಪನ್ಯಾಸಕ ಹಾಗೂ ತರಬೇತುದಾರಾಗಿದ್ದವರು, ಶೈಕ್ಷಣಿಕ ಸಂಸ್ಥೆಯಲ್ಲಿ ಕೆಲಸ ಮಾಡಿದ ಅನುಭವ ಇಲ್ಲ. ನಾನು ಇದೇ ಕಾಲೇಜಿನಲ್ಲಿ 18 ವರ್ಷ ಕೆಲಸ ಮಾಡಿದ ಅನುಭವ ಇದೆ, ನನ್ನ ಕೆಲಸದ ಬಗ್ಗೆ ಹಿಂದಿನ ಆಡಳಿತ ಮಂಡಳಿ ಒಳ್ಳೆಯ ಮಾತನಾಡಿದ್ದಾರೆ. ಈವರೆಗೆ ನಾಲ್ಕು ಜನ ಪ್ರಾಂಶುಪಾಲರು ನನ್ನ ಕೆಲಸವನ್ನು ಒಪ್ಪಿಕೊಂಡಿದ್ದಾರೆ’ ಎಂದರು.

‘ಉತ್ತರ ಭಾರತದಿಂದ ಬಂದಿರುವ ಪ್ರಾಂಶುಪಾಲರು ತಮಗೆ ಬೇಕಾದವರನ್ನು ಕೆಲಸಕ್ಕೆ ನೇಮಕ ಮಾಡಿಕೊಂಡು, ಸ್ಥಳೀಯರು ಮತ್ತು ಕನ್ನಡಿಗರನ್ನು ಕೆಲಸದಿಂದ ತೆಗೆಯುವುದಕ್ಕೆ ಪಿತೂರಿ ನಡೆಸುತ್ತಿದ್ದಾರೆ. ನಮ್ಮ ಬಗ್ಗೆ ಕಾರ್ಯದರ್ಶಿಗಳಿಗೆ ತಪ್ಪು ಮಾಹಿತಿ ನೀಡಿ, ಅವರನ್ನು ಭೇಟಿಯಾಗದಂತೆ ಮಾಡಿದ್ದಾರೆ. ಡಾ. ಅವಿನಾಶ್ ಅವರಿಗಿಂತ ಮೊದಲೆ ನನ್ನನ್ನು ಅಮಾನತು ಮಾಡಿದ್ದಾರೆ. ಐದು ತಿಂಗಳಿನಿಂದ ಅಮಾನತಿನಲ್ಲಿಟ್ಟು, ನನಗೆ ಆರು ತಿಂಗಳ ವೇತನವನ್ನೂ ಕೊಡದೆ ಸತಾಯಿಸುತ್ತಿದ್ದಾರೆ. ನಾನು ಕೊಟ್ಟಿರುವ ಲಾಯರ್ ನೋಟಿಸ್‌ಗೂ ಅವರು ಉತ್ತರಿಸಿಲ್ಲ, ಸಂಸ್ಥೆ ವಿಚಾರಣೆ ಆಗುವವರೆಗೂ ಲೇಬರ್ ಕೋರ್ಟಿಗೆ ಹೋಗುವುದಕ್ಕೆ ಸಾಧ್ಯವಿಲ್ಲ’ ಎಂದು ದೀಪಾ ಅಸಹಾಯಕತೆ ವ್ಯಕ್ತಪಡಿಸಿದರು.

‘ಪ್ರಾಂಶುಪಾಲರು ಮತ್ತು ಕಾಲೇಜು ಆಡಳಿತ ಮಂಡಳಿ ನೀಡುವ ಮಾನಸಿಕ ಹಿಂಸೆಯಿಂದ ನಾನು ಅನಾರೋಗ್ಯಕ್ಕೆ ಈಡಾಗಿದ್ದೇನೆ. ಒಟ್ಟು ಐದು ಜನರನ್ನು ಅಮಾನತಿನಲ್ಲಿಟ್ಟಿದ್ದು, 12 ಜನರಿಗೆ ಮಾನಸಿಕ ಹಿಂಸೆ ನೀಡಿ ಕೆಲಸ ಬಿಡಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ಪಡೆಯಲು ಸಂಸ್ಥೆಯ ಕಾರ್ಯದರ್ಶಿಗಳಾದ ಸಂಜೀವ್ ನರೇನ್ ಅವರನ್ನು ಸಂಪರ್ಕಿಸಲಾಯಿತು. ಆದರೆ ಅವರು ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕೂಡಲೇ ಕರೆ ಸ್ಥಗಿತಗೊಳಿಸಿದರು; ಪ್ರಾಂಶುಪಾಲರು ಕರೆ ಸ್ವೀಕರಿಸಲಿಲ್ಲ.

ಇದನ್ನೂ ಓದಿ; ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಜಾಮೀನು ಅರ್ಜಿ ಹಿಂಪಡೆದ ಉಮರ್‌ ಖಾಲಿದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...