Homeಕರ್ನಾಟಕತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ತಾರತಮ್ಯ; 'ಪ್ರತ್ಯೇಕ ರಾಷ್ಟ್ರ'ದ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

ತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ತಾರತಮ್ಯ; ‘ಪ್ರತ್ಯೇಕ ರಾಷ್ಟ್ರ’ದ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

- Advertisement -
- Advertisement -

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಕಟ್ಟುವ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಆಗುತ್ತಿಗೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಹೆಚ್ಚಾಗಿ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥಾವ ಪ್ರತ್ಯೇಕ ದಕ್ಷಿಣ ಭಾರತದ ಕೂಗು ಸಹ ಆಗಾಗ ಕೇಳಿಬರುತ್ತದೆ. ಅನುದಾನ ಹಂಚಿಕೆ ತಾರತಮ್ಯದ ವಿಚಾರದಲ್ಲಿ ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಏಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಸಂಸತ್ತಿನಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ಬಜೆಟ್ಟಿನಲ್ಲಿ ಚುನಾವಣಾ ಪ್ರಚಾರದ ಹೇಳಿಕೆಗಳು ಮಾತ್ರ ಕಾಣುತ್ತಿವೆ. ಮಧ್ಯಂತರ ಬಜೆಟ್ ಎಂದು ಹೇಳಿ ನಾಮ ಫಲಕ ಮಾತ್ರ ಬದಲಿಸಿದ್ದಾರೆ. ಹೊಸಹೊಸ ಪದಗಳನ್ನು ಬಳಸಿ, ಒಂದಷ್ಟ ದೇಶಿಯ ಹೆಸರುಗಳ ಜತೆಗೆ ಸಂಸ್ಕೃತ ಉಪಯೋಗಿಸಿ, ಜನರನ್ನು ದಾರಿ ತಪ್ಪಿಸುವ ಲೇಖಾನುದಾನ ಕೊಟ್ಟಿದ್ದಾರೆ. ಈ ಬಜೆಟ್ಟಿಗೆ ಯಾವುದೇ ಅರ್ಥ ಇಲ್ಲ ಎಂದರು.

‘ಬೆಲೆ ಏರಿಕೆ ಬಗ್ಗೆ ಮತನಾಡಿಲ್ಲ, ಆರ್ಥಿಕ ಸಮೀಕ್ಷೆ ಇರಬೇಕಾಗಿತ್ತು. ಕಳೆದ ವರ್ಷದ ಬಜೆಟ್ ಅವಧಿ ಮುಗಿದಿದ್ದು, ಆರ್ಥಿಕ ಸಮೀಕ್ಷೆ ಜನರ ಮುಂದೆ ಇಟ್ಟಿದ್ದಿದ್ದರೆ ಇವರ ಸಾಧನೆ ಏನು ಎಂಬುದು ಜನರಿಗೆ ಗೊತ್ತಾಗುತ್ತಿತ್ತು. ಅದನ್ನು ಮುಚ್ಚಿಟ್ಟಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಚುನಾವಣೆ ಸಮೀಪ ಇರುವುದರಿಂದ ಒಂದಷ್ಟು ಭರವಸೆ ನೀಡಿದ್ದಾರೆ. ಲೇಖಾನುದಾನ ಎಂದು ಹೇಳುತ್ತಲೆ, ಆದಾಯ ತೆರಿಗೆ ಪಾವತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇದು ಚುನಾವಣೆಗಾಗಿಯೆ ತಯಾರಿಸಿದ ಬಜೆಟ್ಟಿನಂತೆ ಇದೆ’ ಎಂದರು.

ರಾಜ್ಯ ಸರ್ಕಾರಗಳಿಗೆ ಬಡ್ಡಿರಹಿತ ಸಾಲ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನಮ್ಮ ದುಡ್ಡನ್ನು ನಮಗೆ ಕೊಟ್ಟರೆ ಸಾಕಾಗಿದೆ. ಜಿಎಸ್‌ಟಿ ಸಂಗ್ರಹ, ನಮ್ಮ ರಾಜ್ಯದಿಂದ ಕೇಂದ್ರಕ್ಕೆ ಬರುವ ಕಸ್ಟಮ್ಸ್ ಮತ್ತು ಆದಾಯ ತೆರಿಗೆ ಪಾಲನ್ನು ನಮಗೆ ಕೊಡಬೇಕಾಗಿದೆ. ಆದರೆ, ದಕ್ಷಿಣ ಭಾರತಕ್ಕೆ ಈ ವಿಚಾರದಲ್ಲಿ ಬಹಳಷ್ಟು ಅನ್ಯಾಯ ಆಗುತ್ತಿದೆ. ನಮ್ಮ ಪಾಲು ನಮಗೆ ಸಿಗಬೇಕಾಗಿದೆ, ನಮ್ಮ ಅಭಿವೃದ್ಧಿ ಹಣ ಉತ್ತರ ಭಾರತಕ್ಕೆ ಹಂಚಿಕೆ ಮಾಡಲಾಗುತ್ತಿದೆ. ನಮಗೆ ಎಲ್ಲ ವಿಚಾರಗಳಲ್ಲಿ ಅನ್ಯಾಯ ಆಗುತ್ತಿದೆ. ಇದು ಹೀಗೆ ಮುಂದುವರಿದರೆ, ಮುಂದಿನ ದಿನಗಳಲ್ಲಿ ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡುವ ಅನಿವಾರ್ಯತೆಯನ್ನು ಹಿಂದಿ ರಾಜ್ಯಗಳು ನಮ್ಮ ಮೇಲೆ ಹೇರುತ್ತಿವೆ’ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.

‘ಇವತ್ತಿನ ಹಣಕಾಸಿನ ಹಂಚಿಕೆಯನ್ನು ಗಮನಿಸಿದರೆ, ದಕ್ಷಿಣ ರಾಜ್ಯಗಳ ಹಣವನ್ನು ಉತ್ತರ ಭಾರತಕ್ಕೆ ಹೆಚ್ಚು ನೀಡಿ, ನಮಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಮೇಲೆ ಹಿಂದಿ ಹೇರಿಕೆ ಮಾಡಿದ್ದಾರೆ. ನಮ್ಮ ಕನ್ನಡ ಫಲಕ ಹಾಕುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ; ಇದಕ್ಕೆಲ್ಲಾ ಕಾರಣ ಏನು’ ಎಂದು ಸುರೇಶ್ ಪ್ರಶ್ನಿಸಿದರು.

‘ನಮ್ಮಿಂದ ನಾಲ್ಕು ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿನ ತೆರಿಗೆ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ, ನಮಗೆ ಅವರು ಮರಳಿ ಕೊಡುತ್ತಿರುವುದು ಎಷ್ಟು? ಇದನ್ನು ಪ್ರಶ್ನೆ ಮಾಡಬೇಕಾಗುತ್ತದೆ. 16ನೇ ಹಣಕಾಸು ಆಯೋಗ ಪ್ರಾರಂಭ ಆಗುತ್ತಿದೆ. ಅದರಲ್ಲೂ ಸರಿಪಡಿಸದಿದ್ದರೆ, ದಕ್ಷಿಣ ಭಾರತದವರು ಧ್ವನಿ ಏರಿಸುವುದು ಅನಿವಾರ್ಯವಾಗಿದೆ’ ಎಂದರು.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...