Homeಕರ್ನಾಟಕತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ತಾರತಮ್ಯ; 'ಪ್ರತ್ಯೇಕ ರಾಷ್ಟ್ರ'ದ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

ತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ತಾರತಮ್ಯ; ‘ಪ್ರತ್ಯೇಕ ರಾಷ್ಟ್ರ’ದ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

- Advertisement -
- Advertisement -

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಕಟ್ಟುವ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಆಗುತ್ತಿಗೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಹೆಚ್ಚಾಗಿ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥಾವ ಪ್ರತ್ಯೇಕ ದಕ್ಷಿಣ ಭಾರತದ ಕೂಗು ಸಹ ಆಗಾಗ ಕೇಳಿಬರುತ್ತದೆ. ಅನುದಾನ ಹಂಚಿಕೆ ತಾರತಮ್ಯದ ವಿಚಾರದಲ್ಲಿ ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಏಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಸಂಸತ್ತಿನಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ಬಜೆಟ್ಟಿನಲ್ಲಿ ಚುನಾವಣಾ ಪ್ರಚಾರದ ಹೇಳಿಕೆಗಳು ಮಾತ್ರ ಕಾಣುತ್ತಿವೆ. ಮಧ್ಯಂತರ ಬಜೆಟ್ ಎಂದು ಹೇಳಿ ನಾಮ ಫಲಕ ಮಾತ್ರ ಬದಲಿಸಿದ್ದಾರೆ. ಹೊಸಹೊಸ ಪದಗಳನ್ನು ಬಳಸಿ, ಒಂದಷ್ಟ ದೇಶಿಯ ಹೆಸರುಗಳ ಜತೆಗೆ ಸಂಸ್ಕೃತ ಉಪಯೋಗಿಸಿ, ಜನರನ್ನು ದಾರಿ ತಪ್ಪಿಸುವ ಲೇಖಾನುದಾನ ಕೊಟ್ಟಿದ್ದಾರೆ. ಈ ಬಜೆಟ್ಟಿಗೆ ಯಾವುದೇ ಅರ್ಥ ಇಲ್ಲ ಎಂದರು.

‘ಬೆಲೆ ಏರಿಕೆ ಬಗ್ಗೆ ಮತನಾಡಿಲ್ಲ, ಆರ್ಥಿಕ ಸಮೀಕ್ಷೆ ಇರಬೇಕಾಗಿತ್ತು. ಕಳೆದ ವರ್ಷದ ಬಜೆಟ್ ಅವಧಿ ಮುಗಿದಿದ್ದು, ಆರ್ಥಿಕ ಸಮೀಕ್ಷೆ ಜನರ ಮುಂದೆ ಇಟ್ಟಿದ್ದಿದ್ದರೆ ಇವರ ಸಾಧನೆ ಏನು ಎಂಬುದು ಜನರಿಗೆ ಗೊತ್ತಾಗುತ್ತಿತ್ತು. ಅದನ್ನು ಮುಚ್ಚಿಟ್ಟಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಚುನಾವಣೆ ಸಮೀಪ ಇರುವುದರಿಂದ ಒಂದಷ್ಟು ಭರವಸೆ ನೀಡಿದ್ದಾರೆ. ಲೇಖಾನುದಾನ ಎಂದು ಹೇಳುತ್ತಲೆ, ಆದಾಯ ತೆರಿಗೆ ಪಾವತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇದು ಚುನಾವಣೆಗಾಗಿಯೆ ತಯಾರಿಸಿದ ಬಜೆಟ್ಟಿನಂತೆ ಇದೆ’ ಎಂದರು.

ರಾಜ್ಯ ಸರ್ಕಾರಗಳಿಗೆ ಬಡ್ಡಿರಹಿತ ಸಾಲ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನಮ್ಮ ದುಡ್ಡನ್ನು ನಮಗೆ ಕೊಟ್ಟರೆ ಸಾಕಾಗಿದೆ. ಜಿಎಸ್‌ಟಿ ಸಂಗ್ರಹ, ನಮ್ಮ ರಾಜ್ಯದಿಂದ ಕೇಂದ್ರಕ್ಕೆ ಬರುವ ಕಸ್ಟಮ್ಸ್ ಮತ್ತು ಆದಾಯ ತೆರಿಗೆ ಪಾಲನ್ನು ನಮಗೆ ಕೊಡಬೇಕಾಗಿದೆ. ಆದರೆ, ದಕ್ಷಿಣ ಭಾರತಕ್ಕೆ ಈ ವಿಚಾರದಲ್ಲಿ ಬಹಳಷ್ಟು ಅನ್ಯಾಯ ಆಗುತ್ತಿದೆ. ನಮ್ಮ ಪಾಲು ನಮಗೆ ಸಿಗಬೇಕಾಗಿದೆ, ನಮ್ಮ ಅಭಿವೃದ್ಧಿ ಹಣ ಉತ್ತರ ಭಾರತಕ್ಕೆ ಹಂಚಿಕೆ ಮಾಡಲಾಗುತ್ತಿದೆ. ನಮಗೆ ಎಲ್ಲ ವಿಚಾರಗಳಲ್ಲಿ ಅನ್ಯಾಯ ಆಗುತ್ತಿದೆ. ಇದು ಹೀಗೆ ಮುಂದುವರಿದರೆ, ಮುಂದಿನ ದಿನಗಳಲ್ಲಿ ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡುವ ಅನಿವಾರ್ಯತೆಯನ್ನು ಹಿಂದಿ ರಾಜ್ಯಗಳು ನಮ್ಮ ಮೇಲೆ ಹೇರುತ್ತಿವೆ’ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.

‘ಇವತ್ತಿನ ಹಣಕಾಸಿನ ಹಂಚಿಕೆಯನ್ನು ಗಮನಿಸಿದರೆ, ದಕ್ಷಿಣ ರಾಜ್ಯಗಳ ಹಣವನ್ನು ಉತ್ತರ ಭಾರತಕ್ಕೆ ಹೆಚ್ಚು ನೀಡಿ, ನಮಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಮೇಲೆ ಹಿಂದಿ ಹೇರಿಕೆ ಮಾಡಿದ್ದಾರೆ. ನಮ್ಮ ಕನ್ನಡ ಫಲಕ ಹಾಕುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ; ಇದಕ್ಕೆಲ್ಲಾ ಕಾರಣ ಏನು’ ಎಂದು ಸುರೇಶ್ ಪ್ರಶ್ನಿಸಿದರು.

‘ನಮ್ಮಿಂದ ನಾಲ್ಕು ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿನ ತೆರಿಗೆ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ, ನಮಗೆ ಅವರು ಮರಳಿ ಕೊಡುತ್ತಿರುವುದು ಎಷ್ಟು? ಇದನ್ನು ಪ್ರಶ್ನೆ ಮಾಡಬೇಕಾಗುತ್ತದೆ. 16ನೇ ಹಣಕಾಸು ಆಯೋಗ ಪ್ರಾರಂಭ ಆಗುತ್ತಿದೆ. ಅದರಲ್ಲೂ ಸರಿಪಡಿಸದಿದ್ದರೆ, ದಕ್ಷಿಣ ಭಾರತದವರು ಧ್ವನಿ ಏರಿಸುವುದು ಅನಿವಾರ್ಯವಾಗಿದೆ’ ಎಂದರು.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...