Homeಕರ್ನಾಟಕತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ತಾರತಮ್ಯ; 'ಪ್ರತ್ಯೇಕ ರಾಷ್ಟ್ರ'ದ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

ತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ತಾರತಮ್ಯ; ‘ಪ್ರತ್ಯೇಕ ರಾಷ್ಟ್ರ’ದ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

- Advertisement -
- Advertisement -

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಕಟ್ಟುವ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಆಗುತ್ತಿಗೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಹೆಚ್ಚಾಗಿ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥಾವ ಪ್ರತ್ಯೇಕ ದಕ್ಷಿಣ ಭಾರತದ ಕೂಗು ಸಹ ಆಗಾಗ ಕೇಳಿಬರುತ್ತದೆ. ಅನುದಾನ ಹಂಚಿಕೆ ತಾರತಮ್ಯದ ವಿಚಾರದಲ್ಲಿ ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಏಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಸಂಸತ್ತಿನಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ಬಜೆಟ್ಟಿನಲ್ಲಿ ಚುನಾವಣಾ ಪ್ರಚಾರದ ಹೇಳಿಕೆಗಳು ಮಾತ್ರ ಕಾಣುತ್ತಿವೆ. ಮಧ್ಯಂತರ ಬಜೆಟ್ ಎಂದು ಹೇಳಿ ನಾಮ ಫಲಕ ಮಾತ್ರ ಬದಲಿಸಿದ್ದಾರೆ. ಹೊಸಹೊಸ ಪದಗಳನ್ನು ಬಳಸಿ, ಒಂದಷ್ಟ ದೇಶಿಯ ಹೆಸರುಗಳ ಜತೆಗೆ ಸಂಸ್ಕೃತ ಉಪಯೋಗಿಸಿ, ಜನರನ್ನು ದಾರಿ ತಪ್ಪಿಸುವ ಲೇಖಾನುದಾನ ಕೊಟ್ಟಿದ್ದಾರೆ. ಈ ಬಜೆಟ್ಟಿಗೆ ಯಾವುದೇ ಅರ್ಥ ಇಲ್ಲ ಎಂದರು.

‘ಬೆಲೆ ಏರಿಕೆ ಬಗ್ಗೆ ಮತನಾಡಿಲ್ಲ, ಆರ್ಥಿಕ ಸಮೀಕ್ಷೆ ಇರಬೇಕಾಗಿತ್ತು. ಕಳೆದ ವರ್ಷದ ಬಜೆಟ್ ಅವಧಿ ಮುಗಿದಿದ್ದು, ಆರ್ಥಿಕ ಸಮೀಕ್ಷೆ ಜನರ ಮುಂದೆ ಇಟ್ಟಿದ್ದಿದ್ದರೆ ಇವರ ಸಾಧನೆ ಏನು ಎಂಬುದು ಜನರಿಗೆ ಗೊತ್ತಾಗುತ್ತಿತ್ತು. ಅದನ್ನು ಮುಚ್ಚಿಟ್ಟಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಚುನಾವಣೆ ಸಮೀಪ ಇರುವುದರಿಂದ ಒಂದಷ್ಟು ಭರವಸೆ ನೀಡಿದ್ದಾರೆ. ಲೇಖಾನುದಾನ ಎಂದು ಹೇಳುತ್ತಲೆ, ಆದಾಯ ತೆರಿಗೆ ಪಾವತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇದು ಚುನಾವಣೆಗಾಗಿಯೆ ತಯಾರಿಸಿದ ಬಜೆಟ್ಟಿನಂತೆ ಇದೆ’ ಎಂದರು.

ರಾಜ್ಯ ಸರ್ಕಾರಗಳಿಗೆ ಬಡ್ಡಿರಹಿತ ಸಾಲ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನಮ್ಮ ದುಡ್ಡನ್ನು ನಮಗೆ ಕೊಟ್ಟರೆ ಸಾಕಾಗಿದೆ. ಜಿಎಸ್‌ಟಿ ಸಂಗ್ರಹ, ನಮ್ಮ ರಾಜ್ಯದಿಂದ ಕೇಂದ್ರಕ್ಕೆ ಬರುವ ಕಸ್ಟಮ್ಸ್ ಮತ್ತು ಆದಾಯ ತೆರಿಗೆ ಪಾಲನ್ನು ನಮಗೆ ಕೊಡಬೇಕಾಗಿದೆ. ಆದರೆ, ದಕ್ಷಿಣ ಭಾರತಕ್ಕೆ ಈ ವಿಚಾರದಲ್ಲಿ ಬಹಳಷ್ಟು ಅನ್ಯಾಯ ಆಗುತ್ತಿದೆ. ನಮ್ಮ ಪಾಲು ನಮಗೆ ಸಿಗಬೇಕಾಗಿದೆ, ನಮ್ಮ ಅಭಿವೃದ್ಧಿ ಹಣ ಉತ್ತರ ಭಾರತಕ್ಕೆ ಹಂಚಿಕೆ ಮಾಡಲಾಗುತ್ತಿದೆ. ನಮಗೆ ಎಲ್ಲ ವಿಚಾರಗಳಲ್ಲಿ ಅನ್ಯಾಯ ಆಗುತ್ತಿದೆ. ಇದು ಹೀಗೆ ಮುಂದುವರಿದರೆ, ಮುಂದಿನ ದಿನಗಳಲ್ಲಿ ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡುವ ಅನಿವಾರ್ಯತೆಯನ್ನು ಹಿಂದಿ ರಾಜ್ಯಗಳು ನಮ್ಮ ಮೇಲೆ ಹೇರುತ್ತಿವೆ’ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.

‘ಇವತ್ತಿನ ಹಣಕಾಸಿನ ಹಂಚಿಕೆಯನ್ನು ಗಮನಿಸಿದರೆ, ದಕ್ಷಿಣ ರಾಜ್ಯಗಳ ಹಣವನ್ನು ಉತ್ತರ ಭಾರತಕ್ಕೆ ಹೆಚ್ಚು ನೀಡಿ, ನಮಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಮೇಲೆ ಹಿಂದಿ ಹೇರಿಕೆ ಮಾಡಿದ್ದಾರೆ. ನಮ್ಮ ಕನ್ನಡ ಫಲಕ ಹಾಕುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ; ಇದಕ್ಕೆಲ್ಲಾ ಕಾರಣ ಏನು’ ಎಂದು ಸುರೇಶ್ ಪ್ರಶ್ನಿಸಿದರು.

‘ನಮ್ಮಿಂದ ನಾಲ್ಕು ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿನ ತೆರಿಗೆ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ, ನಮಗೆ ಅವರು ಮರಳಿ ಕೊಡುತ್ತಿರುವುದು ಎಷ್ಟು? ಇದನ್ನು ಪ್ರಶ್ನೆ ಮಾಡಬೇಕಾಗುತ್ತದೆ. 16ನೇ ಹಣಕಾಸು ಆಯೋಗ ಪ್ರಾರಂಭ ಆಗುತ್ತಿದೆ. ಅದರಲ್ಲೂ ಸರಿಪಡಿಸದಿದ್ದರೆ, ದಕ್ಷಿಣ ಭಾರತದವರು ಧ್ವನಿ ಏರಿಸುವುದು ಅನಿವಾರ್ಯವಾಗಿದೆ’ ಎಂದರು.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...