Homeಕರ್ನಾಟಕತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ತಾರತಮ್ಯ; 'ಪ್ರತ್ಯೇಕ ರಾಷ್ಟ್ರ'ದ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

ತೆರಿಗೆ ಹಂಚಿಕೆಯಲ್ಲಿ ದಕ್ಷಿಣ ಭಾರತಕ್ಕೆ ತಾರತಮ್ಯ; ‘ಪ್ರತ್ಯೇಕ ರಾಷ್ಟ್ರ’ದ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

- Advertisement -
- Advertisement -

ದೇಶದಲ್ಲೇ ಅತೀ ಹೆಚ್ಚು ತೆರಿಗೆ ಹಣ ಕಟ್ಟುವ ದಕ್ಷಿಣ ಭಾರತದ ರಾಜ್ಯಗಳಿಗೆ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ ಆಗುತ್ತಿಗೆ ಎಂಬ ಕೂಗು ಕಳೆದ ಹತ್ತು ವರ್ಷಗಳಿಂದಲೂ ಹೆಚ್ಚಾಗಿ ಕೇಳಿಬರುತ್ತಿದೆ. ಈ ವಿಷಯವಾಗಿ ಪ್ರತ್ಯೇಕ ದೇಶ ಅಥಾವ ಪ್ರತ್ಯೇಕ ದಕ್ಷಿಣ ಭಾರತದ ಕೂಗು ಸಹ ಆಗಾಗ ಕೇಳಿಬರುತ್ತದೆ. ಅನುದಾನ ಹಂಚಿಕೆ ತಾರತಮ್ಯದ ವಿಚಾರದಲ್ಲಿ ಸಂಸದ ಡಿ.ಕೆ ಸುರೇಶ್ ಪ್ರತ್ಯೇಕ ರಾಷ್ಟ್ರದ ಕೂಗು ಏಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ಸಂಸತ್ತಿನಲ್ಲಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಧ್ಯಂತರ ಬಜೆಟ್ ಮಂಡಿಸಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

‘ಬಜೆಟ್ಟಿನಲ್ಲಿ ಚುನಾವಣಾ ಪ್ರಚಾರದ ಹೇಳಿಕೆಗಳು ಮಾತ್ರ ಕಾಣುತ್ತಿವೆ. ಮಧ್ಯಂತರ ಬಜೆಟ್ ಎಂದು ಹೇಳಿ ನಾಮ ಫಲಕ ಮಾತ್ರ ಬದಲಿಸಿದ್ದಾರೆ. ಹೊಸಹೊಸ ಪದಗಳನ್ನು ಬಳಸಿ, ಒಂದಷ್ಟ ದೇಶಿಯ ಹೆಸರುಗಳ ಜತೆಗೆ ಸಂಸ್ಕೃತ ಉಪಯೋಗಿಸಿ, ಜನರನ್ನು ದಾರಿ ತಪ್ಪಿಸುವ ಲೇಖಾನುದಾನ ಕೊಟ್ಟಿದ್ದಾರೆ. ಈ ಬಜೆಟ್ಟಿಗೆ ಯಾವುದೇ ಅರ್ಥ ಇಲ್ಲ ಎಂದರು.

‘ಬೆಲೆ ಏರಿಕೆ ಬಗ್ಗೆ ಮತನಾಡಿಲ್ಲ, ಆರ್ಥಿಕ ಸಮೀಕ್ಷೆ ಇರಬೇಕಾಗಿತ್ತು. ಕಳೆದ ವರ್ಷದ ಬಜೆಟ್ ಅವಧಿ ಮುಗಿದಿದ್ದು, ಆರ್ಥಿಕ ಸಮೀಕ್ಷೆ ಜನರ ಮುಂದೆ ಇಟ್ಟಿದ್ದಿದ್ದರೆ ಇವರ ಸಾಧನೆ ಏನು ಎಂಬುದು ಜನರಿಗೆ ಗೊತ್ತಾಗುತ್ತಿತ್ತು. ಅದನ್ನು ಮುಚ್ಚಿಟ್ಟಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಚುನಾವಣೆ ಸಮೀಪ ಇರುವುದರಿಂದ ಒಂದಷ್ಟು ಭರವಸೆ ನೀಡಿದ್ದಾರೆ. ಲೇಖಾನುದಾನ ಎಂದು ಹೇಳುತ್ತಲೆ, ಆದಾಯ ತೆರಿಗೆ ಪಾವತಿ ವಿಚಾರದಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇದು ಚುನಾವಣೆಗಾಗಿಯೆ ತಯಾರಿಸಿದ ಬಜೆಟ್ಟಿನಂತೆ ಇದೆ’ ಎಂದರು.

ರಾಜ್ಯ ಸರ್ಕಾರಗಳಿಗೆ ಬಡ್ಡಿರಹಿತ ಸಾಲ ನೀಡುವ ಕುರಿತು ಪ್ರತಿಕ್ರಿಯಿಸಿದ ಅವರು, ‘ನಮ್ಮ ದುಡ್ಡನ್ನು ನಮಗೆ ಕೊಟ್ಟರೆ ಸಾಕಾಗಿದೆ. ಜಿಎಸ್‌ಟಿ ಸಂಗ್ರಹ, ನಮ್ಮ ರಾಜ್ಯದಿಂದ ಕೇಂದ್ರಕ್ಕೆ ಬರುವ ಕಸ್ಟಮ್ಸ್ ಮತ್ತು ಆದಾಯ ತೆರಿಗೆ ಪಾಲನ್ನು ನಮಗೆ ಕೊಡಬೇಕಾಗಿದೆ. ಆದರೆ, ದಕ್ಷಿಣ ಭಾರತಕ್ಕೆ ಈ ವಿಚಾರದಲ್ಲಿ ಬಹಳಷ್ಟು ಅನ್ಯಾಯ ಆಗುತ್ತಿದೆ. ನಮ್ಮ ಪಾಲು ನಮಗೆ ಸಿಗಬೇಕಾಗಿದೆ, ನಮ್ಮ ಅಭಿವೃದ್ಧಿ ಹಣ ಉತ್ತರ ಭಾರತಕ್ಕೆ ಹಂಚಿಕೆ ಮಾಡಲಾಗುತ್ತಿದೆ. ನಮಗೆ ಎಲ್ಲ ವಿಚಾರಗಳಲ್ಲಿ ಅನ್ಯಾಯ ಆಗುತ್ತಿದೆ. ಇದು ಹೀಗೆ ಮುಂದುವರಿದರೆ, ಮುಂದಿನ ದಿನಗಳಲ್ಲಿ ಪ್ರತ್ಯೇಕ ರಾಷ್ಟ್ರಕ್ಕೆ ಬೇಡಿಕೆ ಇಡುವ ಅನಿವಾರ್ಯತೆಯನ್ನು ಹಿಂದಿ ರಾಜ್ಯಗಳು ನಮ್ಮ ಮೇಲೆ ಹೇರುತ್ತಿವೆ’ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.

‘ಇವತ್ತಿನ ಹಣಕಾಸಿನ ಹಂಚಿಕೆಯನ್ನು ಗಮನಿಸಿದರೆ, ದಕ್ಷಿಣ ರಾಜ್ಯಗಳ ಹಣವನ್ನು ಉತ್ತರ ಭಾರತಕ್ಕೆ ಹೆಚ್ಚು ನೀಡಿ, ನಮಗೆ ಅನ್ಯಾಯ ಮಾಡುತ್ತಿದ್ದಾರೆ. ನಮ್ಮ ಮೇಲೆ ಹಿಂದಿ ಹೇರಿಕೆ ಮಾಡಿದ್ದಾರೆ. ನಮ್ಮ ಕನ್ನಡ ಫಲಕ ಹಾಕುವ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ; ಇದಕ್ಕೆಲ್ಲಾ ಕಾರಣ ಏನು’ ಎಂದು ಸುರೇಶ್ ಪ್ರಶ್ನಿಸಿದರು.

‘ನಮ್ಮಿಂದ ನಾಲ್ಕು ಲಕ್ಷ ಕೋಟಿ ರೂಪಾಯಿಗೂ ಹೆಚ್ಚಿನ ತೆರಿಗೆ ಹಣವನ್ನು ಪಡೆದುಕೊಳ್ಳುತ್ತಿದ್ದಾರೆ. ಆದರೆ, ನಮಗೆ ಅವರು ಮರಳಿ ಕೊಡುತ್ತಿರುವುದು ಎಷ್ಟು? ಇದನ್ನು ಪ್ರಶ್ನೆ ಮಾಡಬೇಕಾಗುತ್ತದೆ. 16ನೇ ಹಣಕಾಸು ಆಯೋಗ ಪ್ರಾರಂಭ ಆಗುತ್ತಿದೆ. ಅದರಲ್ಲೂ ಸರಿಪಡಿಸದಿದ್ದರೆ, ದಕ್ಷಿಣ ಭಾರತದವರು ಧ್ವನಿ ಏರಿಸುವುದು ಅನಿವಾರ್ಯವಾಗಿದೆ’ ಎಂದರು.

ಇದನ್ನೂ ಓದಿ; ಚಂಡೀಗಢ ಮೇಯರ್ ಚುನಾವಣೆ: ತೀರ್ಪಿಗೆ ತಡೆ ನಿರಾಕರಿಸಿದ ಹೈಕೋರ್ಟ್, ಸುಪ್ರೀಂ ಕದ ತಟ್ಟಿದ ಎಎಪಿ ಕೌನ್ಸಿಲರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...