Homeಮುಖಪುಟತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

ತಮಿಳುನಾಡಿಗೆ ಅನ್ಯಾಯ; ಮೋದಿ ಇದ್ದ ವೇದಿಕೆಯಲ್ಲೇ ಸ್ಟಾಲಿನ್‌ ಹೇಳಿಕೆ; ಅಣ್ಣಾಮಲೈಗೆ ಬೇಸರ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಇದ್ದ ವೇದಿಕೆಯಲ್ಲೇ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರು ತಮಿಳುನಾಡಿಗೆ ಆಗುತ್ತಿರುವ ಅನ್ಯಾಯಗಳನ್ನು ಪ್ರಸ್ತಾಪಿಸಿದ್ದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬೇಸರಗೊಂಡಿದ್ದಾರೆ.

ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಸಂಜೆ ಚೆನ್ನೈಗೆ ಭೇಟಿ ನೀಡಿದಾಗ ಆಡಳಿತಾರೂಢ ಸರ್ಕಾರ ರಾಜಕೀಯ ನಾಟಕ ನಡೆಸಿದೆ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕಿಡಿಕಾರಿದ್ದಾರೆ.

ನಿನ್ನೆ ಸಂಜೆ ಪ್ರಧಾನಿ ಮೋದಿ ವೇದಿಕೆಯಲ್ಲಿದ್ದಾಗ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮಾಡಿದ ಭಾಷಣವು ರಾಜಕೀಯ ನಾಟಕದಿಂದ ಕೂಡಿತ್ತು ಎಂದು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರಾಷ್ಟ್ರೀಯ ಆರ್ಥಿಕತೆಗೆ ತಮಿಳುನಾಡು ನೀಡುತ್ತಿರುವ ಕೊಡುಗೆ ಜೊತೆಗೆ ಕೇಂದ್ರ ಸರ್ಕಾರದಿಂದ ಪಡೆದ ಪಾಲಿನ ನಡುವಿನ ಅಸಮಾನತೆಯನ್ನು ಸ್ಟಾಲಿನ್ ಪ್ರಸ್ತಾಪಿಸಿದ್ದರು.

ಜಿಡಿಪಿಯಲ್ಲಿ ರಾಜ್ಯದ ಪಾಲು ಶೇ 9.22 ಮತ್ತು ಕೇಂದ್ರ ಸರ್ಕಾರದ ಒಟ್ಟಾರೆ ತೆರಿಗೆ ಆದಾಯದಲ್ಲಿ ರಾಜ್ಯದ ಪಾಲು ಶೇ 6ರಷ್ಟಿದೆ. ಆದರೆ ಕೇಂದ್ರ ಸರ್ಕಾರದಿಂದ ತಮಿಳುನಾಡು ಪಡೆಯುವ ಆದಾಯ ಕೇವಲ ಶೇ 1.23 ಮಾತ್ರ ಎಂದು ಸ್ಟಾಲಿನ್ ಪ್ರಸ್ತಾಪಿಸಿದರು. ಬಾಕಿ ಉಳಿದಿರುವ ಜಿಎಸ್‌ಟಿ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿರಿ: ಸ್ಟಾಲಿನ್‌ ಮುಖ್ಯಮಂತ್ರಿಯಾಗಿ ಒಂದು ವರ್ಷ: ರಾಷ್ಟ್ರ ರಾಜಕಾರಣಕ್ಕೆ ಬೇಕಲ್ಲವೇ ‘ತಮಿಳುನಾಡು ಮಾದರಿ?’

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಣ್ಣಾಮಲೈ, “ರಾಜ್ಯವು ಕೇಂದ್ರ ಸರ್ಕಾರಕ್ಕೆ 25,979 ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದೆ, ಆದರೆ ಕೇಂದ್ರ ಹಣಕಾಸು ಸಚಿವರಾಗಲಿ ಅಥವಾ ಪ್ರಧಾನಿಯಾಗಲಿ ಈ ಬಗ್ಗೆ ಮಾತನಾಡಲಿಲ್ಲ. ಜಿಎಸ್‌ಟಿ ಬಾಕಿಯನ್ನು ಜಿಎಸ್‌ಟಿ ಕೌನ್ಸಿಲ್ ಇತ್ಯರ್ಥಪಡಿಸಬೇಕು. ನಮ್ಮ ಹಣಕಾಸು ಸಚಿವರು ಅವರನ್ನು ತಡೆಯಲು ನಿರ್ಧರಿಸಿದರೂ ಅದು ಸಾಧ್ಯವಿಲ್ಲ. ತಮಿಳುನಾಡಿಗೆ ಬಾಕಿ ಇರುವ ಜಿಎಸ್‌ಟಿ ಬಾಕಿಯನ್ನು ನಿಲ್ಲಿಸುವಲ್ಲಿ ಹಣಕಾಸು ಸಚಿವರ ಪಾತ್ರವಿಲ್ಲ” ಎಂದಿದ್ದಾರೆ.

ಭಾಷಣದಲ್ಲಿ ಸ್ಟಾಲಿನ್ ಗಮನ ಸೆಳೆದ ಅಂಶಗಳು

“ಹಿಂದಿಗೆ ಸಮಾನವಾಗಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಬೇಕು” ಎಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ಟಾಲಿನ್‌ ಒತ್ತಾಯಿಸಿದರು.

ರಾಜ್ಯ ವಿಧಾನಸಭೆಯಲ್ಲಿ ನೀಟ್‌ ವಿರುದ್ಧ ಮಸೂದೆಯನ್ನು ಅಂಗೀಕರಿಸಿದ್ದು, ತಮಿಳುನಾಡಿಗೆ ನೀಟ್‌ನಿಂದ ವಿನಾಯಿತಿ ನೀಡಬೇಕು. ಇತರ ರಾಜ್ಯಗಳಿಗೆ ಹೋಲಿಸಿದರೆ ತಮಿಳುನಾಡು ವಿಶಿಷ್ಟವಾಗಿದೆ. ಸಾಮಾಜಿಕ ನ್ಯಾಯ, ಮಹಿಳಾ ಅಭಿವೃದ್ಧಿ ಮತ್ತು ಸಮಾನತೆಗೆ ಆದ್ಯತೆ ನೀಡಿದೆ ಎಂದು ತಿಳಿಸಿದರು.

“ದ್ರಾವಿಡ ಮಾದರಿಯ ಆಡಳಿತವು ಹಣಕಾಸಿನ ಅಸಮತೋಲನವನ್ನು ಬಹುಮಟ್ಟಿಗೆ ಸರಿಪಡಿಸಿದೆ. ರಾಜ್ಯಗಳಿಗೆ ಹೆಚ್ಚಿನ ಅನುದಾನವನ್ನು ಕೇಂದ್ರ ಸರ್ಕಾರ ಹೆಚ್ಚಿಸಬೇಕು. ಆಗ ಮಾತ್ರ ಸಹಕಾರಿ ಫೆಡರಲಿಸಂನ ನಿಜವಾದ ಮನೋಭಾವವನ್ನು ಎತ್ತಿಹಿಡಿದಂತಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

14,006 ಕೋಟಿ ರೂಪಾಯಿಗಳ ಜಿಎಸ್‌ಟಿ ಪರಿಹಾರದ ಬಾಕಿಯನ್ನು ಬಿಡುಗಡೆ ಮಾಡಬೇಕು. ಜೂನ್ 2022 ರಿಂದ ಪರಿಹಾರದ ಅವಧಿಯನ್ನು ಇನ್ನೂ ಎರಡು ವರ್ಷಗಳವರೆಗೆ ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿರಿ: ಒಕ್ಕೂಟ ಸರ್ಕಾರ ತಿರಸ್ಕರಿಸಿದ ಟ್ಯಾಬ್ಲೊ ತಮಿಳುನಾಡಿನಾದ್ಯಂತ ಪ್ರದರ್ಶನ: ಸಿಎಂ ಸ್ಟಾಲಿನ್‌

ಕಳೆದ ವರ್ಷ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದ ಡಿಎಂಕೆ, ತಮಿಳಿಗೆ “ಅಧಿಕೃತ ಮತ್ತು ಆಡಳಿತಾತ್ಮಕ” ಭಾಷಾ ಸ್ಥಾನಮಾನವನ್ನು ಬಹಳ ಹಿಂದಿನಿಂದಲೂ ಒತ್ತಾಯಿಸುತ್ತಿದೆ. ಕಾಂಗ್ರೆಸ್ ನೇತೃತ್ವದ ಯುಪಿಎ ಅಧಿಕಾರದಲ್ಲಿದ್ದಾಗ ತಮಿಳಿಗೆ “ಶಾಸ್ತ್ರೀಯ ಭಾಷೆ” ಸ್ಥಾನಮಾನ ನೀಡಲಾಗಿತ್ತು.

ಮೋದಿ ಮಾತುಗಳು

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ತಮಿಳು ಭಾಷೆ “ಶಾಶ್ವತ” ಎಂದು ಬಣ್ಣಿಸಿದರು.

ಎನ್‌ಡಿಎ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಭಾರತೀಯ ಭಾಷೆಗಳನ್ನು ಉತ್ತೇಜಿಸಲು ವಿಶೇಷ ಪ್ರಾಮುಖ್ಯತೆಯನ್ನು ನೀಡಿದೆ ಎಂದು ಪ್ರತಿಪಾದಿಸಿದರು.

“ರಾಷ್ಟ್ರೀಯ ಶಿಕ್ಷಣ ನೀತಿಯಿಂದಾಗಿ ತಾಂತ್ರಿಕ ಮತ್ತು ವೈದ್ಯಕೀಯ ಕೋರ್ಸ್‌ಗಳನ್ನು ಸ್ಥಳೀಯ ಭಾಷೆಗಳಲ್ಲಿ ಮಾಡಬಹುದು. ತಮಿಳುನಾಡಿನ ಯುವಕರು ಇದರಿಂದ ಪ್ರಯೋಜನ ಪಡೆಯುತ್ತಾರೆ” ಎಂದು ತಿಳಿಸಿದರು.

ರಾಷ್ಟ್ರೀಯ ಶಿಕ್ಷಣ ನೀತಿಯು ಅಸಮಾನ ಶಿಕ್ಷಣ ವ್ಯವಸ್ಥೆಯನ್ನು ತರಲಿದೆ ಎಂದು ತಮಿಳುನಾಡು ಆತಂಕ ವ್ಯಕ್ತಪಡಿಸುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಎಂ ಜಿ ಆರ್ ಕರುಣಾನಿಧಿ ಜಯಲಲಿತ ಇವತ್ತಿನ ಸ್ಟಾಲಿನ್ ಆಗಲೀ ಅವರ nativity ಉಳಿಸಿಕೊಳ್ಳುವತ್ತ ಪ್ರಾಮಾಣಿಕ ಹೆಜ್ಜೆಹಾಕಿದ್ದಾರೆ…ನಮ್ಮ ರಾಜ್ಯದ ಹಣೆ ಬರಹ ನೋಡಿ ಎಲ್ಲಕ್ಕೂ ದೆಹಲಿಯ ಸುಲ್ತಾನರ ಮುಂದೆ ಮಂಡಿಯೂರಬೇಕು….ಅಲ್ಲಿ ಬಂದವರೆಲ್ಲ ಮುಖ್ಯ ? ಮಂತ್ರಿ ಗಳಾದರೆ ..ನಮ್ಮ ರಾಜ್ಯಕ್ಕೆ ಮಾತ್ರ ಯಾವಾಗಲೂ ಅಮುಖ್ಯ ಮಂತ್ರಿಗಳದೇ I mean ದೆಹಲಿಯ ಗುಲಾಮರ ಸಂತತಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....