Homeಕರ್ನಾಟಕಕೇಂದ್ರದ ಅಂಗಳಕ್ಕೆ ಒಳ ಮೀಸಲಾತಿ ಚೆಂಡು; 341(3)ನೇ ವಿಧಿ ತಿದ್ದುಪಡಿಗೆ ರಾಜ್ಯ ಸರ್ಕಾರ ಶಿಫಾರಸು

ಕೇಂದ್ರದ ಅಂಗಳಕ್ಕೆ ಒಳ ಮೀಸಲಾತಿ ಚೆಂಡು; 341(3)ನೇ ವಿಧಿ ತಿದ್ದುಪಡಿಗೆ ರಾಜ್ಯ ಸರ್ಕಾರ ಶಿಫಾರಸು

- Advertisement -
- Advertisement -

ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಸಮುದಾಯಗಳಿಗೆ, ಸಾಮಾಜಿಕ ನ್ಯಾಯದಡಿ ಒಳಮೀಸಲಾತಿ ನೀಡುವ ನಿಟ್ಟಿನಲ್ಲಿ ಸಂವಿಧಾನದ 341(3) ನೇ ವಿಧಿಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದ್ದು, ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುವ ವಿಚಾರದಲ್ಲಿ ಸಾಕಷ್ಟು ಗೊಂದಲ ಸೃಷ್ಟಿಸಿತ್ತು. ಅಂದಿನ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದ ಜೆಸಿ ಮಾಧುಸ್ವಾಮಿ ನೇತೃತ್ವದಲ್ಲಿ ಉಪ ಸಮಿತಿ ರಚಿಸಿ, ಮೀಸಲಾತಿ ವರ್ಗೀಕರಣ ಮಾಡಲಾಗಿತ್ತು. ಆದರೆ, ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿದ್ದ ನ್ಯಾ. ಸದಾಶಿವ ಆಯೋಗದ ವರದಿಗೆ ಬಿಜೆಪಿ ಹೆಚ್ಚಿನ ಮಹತ್ವ ನೀಡಿರಲಿಲ್ಲ.

ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಲೇಬೇಕು ಎಂದು ಪರಿಶಿಷ್ಟ ಬಲಗೈ ಸಮುದಾಯದ ಸಚಿವರು ಮತ್ತು ಶಾಸಕರು ಪಟ್ಟು ಹಿಡಿದಿದ್ದರು ಎನ್ನಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಳ ಮೀಸಲಾತಿ ವಿವಾದ ಮುನ್ನೆಲೆಗೆ ಬಂದಿದ್ದಾಗ, ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಒಳಮೀಸಲಾತಿ ಜಾರಿಗೊಳಿಸಲಾಗುವುದು’ ಎಂದು ಕೈ ಮುಖಂಡರು ಭರವಸೆಯನ್ನು ನೀಡಿದ್ದರು.
ಅಂತಿಮವಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಬರುವ ವಿವಿಧ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಇನ್ನು ಒಳ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ಹೇಳಿಕೆ ನೀಡಿದ್ದು, ‘ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಬಗ್ಗೆ ಒಂದು ಅಂತಿಮ ನಿರ್ಣಯ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ನಮ್ಮ ಹಿಂದಿನ ಸರ್ಕಾರದಲ್ಲಿ ಚಿತ್ರದುರ್ಗ ಸಮಾವೇಶದಲ್ಲಿ ಸದಾಶಿವ ಆಯೋಗ ಬಗ್ಗೆ ನಿರ್ಣಯ ಕೈಗೊಳ್ಳಲು ತೀರ್ಮಾನ ಮಾಡಿದ್ದೆವು. ನಂತರ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ಸದಾಶಿವ ಆಯೋಗದ ವರದಿಯನ್ನೇ ತಿರಸ್ಕಾರ ಮಾಡಿದ್ರು. ಕಾನೂನಾತ್ಮಕವಾಗಿ ಒಳ ಮೀಸಲಾತಿ ಕೊಡಬೇಕಾಗುತ್ತದೆ. ನಾವೇ ಸಂವಿಧಾನಕ್ಕೆ ತಿದ್ದುಪಡಿ ತರಲು ಆಗಲ್ಲ. ಹಾಗಾಗಿ ಕೇಂದ್ರಕ್ಕೆ ಸಂವಿಧಾನ ತಿದ್ದುಪಡಿ ಮಾಡಲು ಶಿಫಾರಸು ಕಳಿಸುವ ಬಗ್ಗೆ ಇವತ್ತಿನ ಸಂಪುಟ ಸಭೆಯಲ್ಲಿ ಚರ್ಚಿಸ್ತೇವೆ’ ಎಂದು ಸಭೆಗೂ ಮುನ್ನ ಹೇಳಿದ್ದರು.

ಸಂಪುಟ ಸಭೆ ನಂತರ ಮಾತನಾಡಿದ ಸಚಿವ ಡಾ. ಎಚ್.ಸಿ. ಮಹದೇವಪ್ಪ, ‘ಕಳೆದ ಎರಡು ದಶಕಗಳಿಂದ ದಲಿತ ಸಮುದಾಯದ ಒಳಪಂಗಡಗಳು ಒಳಮೀಸಲಾತಿಗೆ ಬೇಡಿಕೆ ಇಟ್ಟಿದ್ದವು. ಚಿತ್ರದುರ್ಗದಲ್ಲಿ ಎಸ್‌ಸಿ-ಎಸ್‌ಟಿ ಸಮಾವೇಶದಲ್ಲಿ ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದೆವು. ಆದರೆ, ಬಿಜೆಪಿ ಸರ್ಕಾರ ತರಾತುರಿಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡಿ ಸದಾಶಿವ ಆಯೋಗದ ವರದಿ ಅಪ್ರಸ್ತುತ ಎಂದು ಶಿಫಾರಸು ಮಾಡಿತ್ತು’ ಎಂದು ಹೇಳಿದರು.

‘ಪರಿಶಿಷ್ಟ ಸಮುದಾಯದ 101 ಜಾತಿಗಳ ಹಿತ ಕಾಪಾಡಲು ಯಾರನ್ನು ಹೊರಗಡೆ ಬಿಡುವ ಪ್ರಶ್ನೆ ಇಲ್ಲ. ಈ ನಿಟ್ಟಿನಲ್ಲಿ 341(3) ಗೆ ತಿದ್ದುಪಡಿ ಮಾಡದೆ ಒಳಮೀಸಲಾತಿ ಕೊಡಲು ಸಾಧ್ಯ ಇಲ್ಲ. ಆದ್ದರಿಂದ, ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ನಿರ್ಧರಿಸಿದೆ ಎಂದು ತಿಳಿಸಿದರು.

ಒಳ ಮೀಸಲಾತಿ ಜಾರಿ ಕಾಂಗ್ರೆಸ್-ಬಿಜೆಪಿ ಜವಾಬ್ದಾರಿ:

ಹಲವು ವರ್ಷಗಳಿಂದ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ ಹೋರಾಟವನ್ನು ಮುನ್ನಡೆಸುತ್ತಿರುವ ಅಂಬಣ್ಣ ಅರೋಲಿಕರ್ ನಾನುಗೌರಿ.ಕಾಂ ಜತೆ ಮಾತನಾಡಿ, ‘ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ, ಒಳ ಮೀಸಲಾತಿ ಜಾರಿ ಮಾಡಿಸುವ ಜವಾಬ್ದಾರಿ ಆಡಳಿ ಪಕ್ಷ ಕಾಂಗ್ರೆಸ್ ಹಾಗೂ ವಿರೋಧ ಪಕ್ಷವಾದ ಬಿಜೆಪಿ ಎರಡರ ಮೇಲೂ ಇದೆ’ ಎಂದು ಹೇಳಿದರು.

‘ಬಿಜೆಪಿ ಸರ್ಕಾರ ಕಳೆದ ಮಾರ್ಚ್ ತಿಂಗಳಲ್ಲಿ ಒಳ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೇವೆ ಎಂದು ಸುಳ್ಳು ಹೇಳಿತ್ತು. ನ್ಯಾ. ಸದಾಶಿವ ಆಯೋಗದ ವರದಿಯನ್ನು ಬದಿಗೆ ಸರಿಸಿ, ಸಂಪುಟ ಉಪ ಸಮಿತಿ ರಚಿಸಿತ್ತು. ಒಳ ಮೀಸಲಾತಿ ಜಾರಿಗೆ ಮುಂದಾಗಿರುವ ಪಂಜಾಬ್, ಆಂಧ್ರಪ್ರದೇಶ ಯಾವ ರಾಜ್ಯದಲ್ಲೂ ಈ ರೀತಿ ಮಾಡಿರಲಿಲ್ಲ. ಆಯೋಗ ನೀಡಿದ ವರದಿಯನ್ನೇ ಪರಿಗಣಿಸಿದ್ದವು’ ಎಂದರು.

‘ಬಿಜೆಪಿಯ ಈ ತಪ್ಪನ್ನು ಸರಿಪಡಿಸುವ ಭರವಸೆ ನೀಡಿದ್ದ ಕಾಂಗ್ರೆಸ್ ಸರ್ಕಾರ, ನಮ್ಮ ಒತ್ತಡ ಹೆಚ್ಚಾದ ನಂತರ ನ್ಯಾ. ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಪರಸು ಮಾಡಿದೆ. ಈ ವಿಚಾರದಲ್ಲಿ ಆಡಳಿತ ಹಾಗೂ ವಿಪಕ್ಷಗಳೆರಡರ ಪಾತ್ರ ಬಹಳ ಮುಖ್ಯವಾಗಿದೆ. ಕಾಂಗ್ರೆಸ್-ಬಿಜೆಪಿ ಸೇರಿ ಸಂಸತ್ತಿನಲ್ಲಿ ಅಂಗೀಕಾರ ಆಗುವಂತೆ ಮಾಡಬೇಕು. ಸುಪ್ರೀಂಕೋರ್ಟಿನಲ್ಲಿ ಅರ್ಜಿ ಬಾಕಿ ಇವೆ ಎಂದು ಹೇಳುತ್ತಾರೆ; ಆದರೆ, ನಮ್ಮ ದೇಶದ ಸಂಸತ್ತಿಗೆ ಪರಮಾಧಿಕಾರ ಇದೆ. ಅಲ್ಲಿ ನಿರ್ಧಾರ ಮಾಡಲೇಬೇಕು. ಆರ್ಥಿಕ ಹಿಂದುಳಿದ ವರ್ಗ (ಇಡಬ್ಲ್ಯೂಎಸ್)ಕ್ಕೆ ಮೀಸಲಾತಿ ಜಾರಿ ಮಾಡಿದಂತೆ ಒಳ ಮೀಸಲಾತಿಯೂ ಜಾರಿಯಾಗಬೇಕು. ಯಾವುದೇ ಹೋರಾಟ, ಬೇಡಿಕೆ, ಕಾಯುವಿಕೆ ಏನೂ ಇಲ್ಲದೆ ಅವರಿಗೆ ಮೀಸಲಾತಿ ನೀಡಲಾಗಿದೆ’ ಎಂದರು.

ಒಳ ಮೀಸಲಾತಿ ಜಾರಿಗೆ ಮೂರು ದಿನ.. ಮೂರು ತಿಂಗಳ ಮಾಡಬಾರದು. ಈಗಾಗಲೇ 30 ವರ್ಷಗಳಿಂದ ಸಮುದಾಯದ ಒಂದಿಡೀ ತಲೆಮಾರು ಸರ್ಕಾರಿ ಉದ್ಯೋಗದಿಂದ ಹಿಡಿದು, ಹಲವು ರೀತಿಯಲ್ಲಿ ವಂಚಿತವಾಗಿದೆ. ಆದ್ದರಿಂದ ವಿಪಕ್ಷವಾದ ಬಿಜೆಪಿ ಮತ್ತು ಆಡಳಿತ ಪಕ್ಷವಾದ ಕಾಂಗ್ರೆಸ್ ಮುತುವರ್ಜಿ ತೆಗದುಕೊಂಡು, ಕೇಂದ್ರ ಸರ್ಕಾರ ಒಳ ಮೀಸಲಾತಿ ಜಾರಿಗೆ ತಿದ್ದುಪಡಿ ತರುವಂತೆ ನೋಡಿಕೊಳ್ಳಬೇಕು’ ಎಂದು ಅಂಬಣ್ಣ ಆಗ್ರಹಿಸಿದರು.

ಇದನ್ನೂ ಓದಿ; ‘ಅನ್ನಪೂರ್ಣಿ’ ವಿವಾದ: ಹಿಂದುತ್ವವಾದಿಗಳ ಒತ್ತಡಕ್ಕೆ ಮಣಿದ ನಯನತಾರಾ, ಬಹಿರಂಗ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...