Homeಕರ್ನಾಟಕಒಳಮೀಸಲಾತಿ: ಸರ್ಕಾರದ ನಿರ್ಲಕ್ಷ್ಯ, ಇಂದು ಮಧ್ಯರಾತ್ರಿಯಿಂದ ಹೋರಾಟಗಾರರ ಅಮರಣಾಂತ ಉಪವಾಸ ಸತ್ಯಾಗ್ರಹ

ಒಳಮೀಸಲಾತಿ: ಸರ್ಕಾರದ ನಿರ್ಲಕ್ಷ್ಯ, ಇಂದು ಮಧ್ಯರಾತ್ರಿಯಿಂದ ಹೋರಾಟಗಾರರ ಅಮರಣಾಂತ ಉಪವಾಸ ಸತ್ಯಾಗ್ರಹ

- Advertisement -
- Advertisement -

ಸರ್ಕಾರಕ್ಕೆ ಎಚ್ಚರಿಕೆ, ಜನತೆಗೆ ಕರೆ

ಬೆಂಗಳೂರು: ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿಯೂ ಸಾಮಾಜಿಕ ನ್ಯಾಯಕ್ಕಾಗಿ ಹಂಬಲಿಸುತ್ತಿರುವ ಶೋಷಿತ ಸಮುದಾಯಗಳಿಗೆ ಇನ್ನೂ ಸಮಾನ ಹಕ್ಕುಗಳು ದಕ್ಕಿಲ್ಲ ಎಂದು ಆರೋಪಿಸಿ, ಒಳಮೀಸಲಾತಿ ಹೋರಾಟಗಾರರು ಆಗಸ್ಟ್ 14ರ ಮಧ್ಯರಾತ್ರಿಯಿಂದಲೇ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಲಿದ್ದಾರೆ ಎಂದು ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ದಶಕಗಳಿಂದಲೂ ಕೇಳಿ ಬರುತ್ತಿರುವ ಒಳಮೀಸಲಾತಿಯ ಬೇಡಿಕೆಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯ ಅನ್ವಯ ಜಾರಿಗೆ ತರುವವರೆಗೂ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೋರಾಟಗಾರ ಅಂಬಣ್ಣ ಅರೋಲಿಕರ್ ಸ್ಪಷ್ಟಪಡಿಸಿದ್ದಾರೆ.

ಮೂರು ದಶಕಗಳ ಕಾಲ ನಡೆದ ಈ ಹೋರಾಟ ಆಯೋಗ ರಚನೆ, ಅದರ ಅಧ್ಯಯನ, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಸಮರ ಮತ್ತು ವರದಿ ಜಾರಿಗೆ ನಿರಂತರವಾಗಿ ನಡೆದಿದೆ. ಇದು ಆಳುವ ಸರ್ಕಾರಗಳ ಮಲತಾಯಿ ಧೋರಣೆಗೆ ಸ್ಪಷ್ಟ ನಿದರ್ಶನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. “ಹೋರಾಟವೇ ನಮ್ಮ ಜೀವನ, ಹೋರಾಟದಿಂದಲೇ ಪ್ರಗತಿ ಸಾಧನ” ಎಂದು ಅವರು ಘೋಷಿಸಿದರು.

ಹೋರಾಟದ ಸ್ವರೂಪ ಮತ್ತು ಸಿದ್ಧತೆಗಳು

ಈ ಹೋರಾಟಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ. ಮೊದಲ ತಂಡದಲ್ಲಿ ಕರಿಯಪ್ಪ ಗುಡಿಮನಿ, ದಾನಪ್ಪ ನಿಲೋಗಲ್, ಜೆ.ಬಿ. ರಾಜು, ಅಂಬಣ್ಣ ಅರೋಲಿಕರ್, ಲೋಕೇಶ್ ಗೋಸಂಘಿ, ಮತ್ತು ಉಮಾದೇವಿ ಅವರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಇವರಿಗೆ ಏನಾದರೂ ಆರೋಗ್ಯ ಸಮಸ್ಯೆ ಉಂಟಾದರೆ, ಎರಡನೇ ತಂಡದ ಸದಸ್ಯರಾದ ಚಂದ್ರು ತರಹುಣಿಸೆ, ಗಣೇಶ್, ಡೇವಿಡ್, ಮಂಜುನಾಥ್ ಮರಾಟ, ಮತ್ತು ವೇಣುಗೋಪಾಲ್ ಮೌರ್ಯ ಅವರು ಉಪವಾಸವನ್ನು ಮುಂದುವರೆಸಲಿದ್ದಾರೆ. ಈ ಮೂಲಕ ನಿರಂತರವಾಗಿ ಹೋರಾಟವನ್ನು ಜೀವಂತವಾಗಿ ಇಡಲು ನಿರ್ಧರಿಸಲಾಗಿದೆ ಎಂದರು.

ಹೋರಾಟದ ತೀವ್ರತೆಯನ್ನು ವಿವರಿಸಿದ ಅಂಬಣ್ಣ ಅರೋಲಿಕರ್, ಬ್ರಿಟಿಷರು ರಾತ್ರೋರಾತ್ರಿ ಭಾರತವನ್ನು ಬಿಟ್ಟು ಹೋಗಲು ಗಾಂಧೀಜಿಯವರ ಸತ್ಯಾಗ್ರಹ ಮಾತ್ರವಲ್ಲ, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್, ಸುಖದೇವ್ ಅವರಂತಹ ಕ್ರಾಂತಿಕಾರಿಗಳ ಬಲಿದಾನವೂ ಕಾರಣ ಎಂದು ನೆನಪಿಸಿಕೊಂಡರು.

ಈ ಸರ್ಕಾರವು ಕಾಲಹರಣ ಮಾಡುತ್ತಿದೆ, ಇದು ಕಾನೂನುಬಾಹಿರ, ಸಂವಿಧಾನಬಾಹಿರ, ಮತ್ತು ಪ್ರಜಾಪ್ರಭುತ್ವ ವಿರೋಧಿ ನಿಲುವನ್ನು ತಳೆದಿದೆ ಎಂದು ಅವರು ಹೇಳಿದರು. ಆದ್ದರಿಂದ, ಸ್ವಾತಂತ್ರ್ಯ ಸಿಗದ ನಮಗೆ “ಅನ್ನವೂ ಬೇಡ, ನೀರೂ ಬೇಡ” ಎಂದು ಘೋಷಿಸಿದ ಅವರು, ನಾಗಮೋಹನ್ ದಾಸ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಸರ್ಕಾರವು ಇದಕ್ಕೆ “ಕುಂಟು ನೆಪಗಳನ್ನು ಹೇಳಿದರೆ ನಮ್ಮ ಆಕ್ರೋಶ, ನಮ್ಮ ಸಹನೆಯ ಕಟ್ಟೆ ಒಡೆಯುತ್ತದೆ” ಎಂದು ಎಚ್ಚರಿಸಿದರು.

ಸಮತಾ ಸೈನಿಕ ದಳದ ಮಾದರಿಯಲ್ಲಿ ಹೋರಾಟ

ಉಪವಾಸ ಸತ್ಯಾಗ್ರಹದ ಸ್ಥಳದಲ್ಲಿ ಹೋರಾಟಗಾರರನ್ನು ರಕ್ಷಿಸಲು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಮತಾ ಸೈನಿಕ ದಳದ ಪರಿಕಲ್ಪನೆಯಂತೆ ಉಳಿದ ಹೋರಾಟಗಾರರು ‘ರಕ್ಷಾ ಕವಚ’ದಂತೆ ಇರಬೇಕು ಎಂದು ಅಂಬಣ್ಣ ಕರೆ ನೀಡಿದರು.

ಅಂಬೇಡ್ಕರ್ ಅವರಿಗೆ ಭಾರತದ ಪ್ರಭುತ್ವವು ಬ್ರಿಟಿಷರಷ್ಟೇ ಕ್ರೂರವಾಗಿರುತ್ತದೆ ಎಂಬುದು ಗೊತ್ತಿತ್ತು, ಆದ್ದರಿಂದಲೇ ಅವರು ತಮ್ಮದೇ ಆದ ಸೈನ್ಯವನ್ನು ಕಟ್ಟಿದ್ದರು ಎಂದು ಅವರು ವಿವರಿಸಿದರು. ಈ ದಳಕ್ಕೆ ಬಿಳಿ ಮತ್ತು ಕಪ್ಪು ಬಣ್ಣದ ಡ್ರೆಸ್‌ಕೋಡ್ ಇತ್ತು, ಕೈಯಲ್ಲಿ ಲಾಠಿ ಮತ್ತು ಚಕ್ರದ ಚಿತ್ರಣವಿತ್ತು. ಈ ಹೋರಾಟಗಾರರು ನಿದ್ದೆಗೆಟ್ಟು ಹಗಲು ರಾತ್ರಿ ಟೆಂಟ್‌ ಸುತ್ತ ಕಾವಲು ಕಾಯಬೇಕು. ಉಪವಾಸದಲ್ಲಿರುವವರನ್ನು ಸರ್ಕಾರ ಎತ್ತಿಕೊಂಡು ಹೋಗಲು ಪ್ರಯತ್ನಿಸಿದರೆ, ಅದನ್ನು ಪ್ರತಿರೋಧಿಸಬೇಕು ಎಂದು ಸೂಚಿಸಿದರು. ಇದು ವ್ಯಕ್ತಿಗತ ಹೋರಾಟವಲ್ಲ, ಸಾಮೂಹಿಕ ಹೋರಾಟ ಎಂದು ಅವರು ಸ್ಪಷ್ಟಪಡಿಸಿದರು.

ರಾಜಧಾನಿ ರಸ್ತೆಗಳು ರಣಾಂಗಣವಾಗಲಿ

“ನಾವು ಅ. 16ರಂದು ಒಳಮೀಸಲಾತಿ ಜಾರಿಯಾಗಲಿದೆ ಎಂದು ಸಂತೋಷದಿಂದ ಇಲ್ಲಿಂದ ಹೋಗುತ್ತೇವೆ ಎಂದುಕೊಂಡಿದ್ದೆವು. ಆದರೆ ಸರ್ಕಾರವು ’16ರಲ್ಲ, 26ರಲ್ಲ, 46 ಮಾಡುತ್ತೇವೆ’ ಎಂದು ಹೊರಟಿದೆ” ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇಂತಹ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಹೇಳಿದ ಅವರು, “ಯಾವುದೇ ಕ್ಷಣದಲ್ಲಿಯೂ ಈ ರಾಜಧಾನಿಯ ರಸ್ತೆ ರಣಾಂಗಣವಾಗಲಿಕ್ಕೆ ಸಿದ್ಧರಾಗಬೇಕು” ಎಂದು ಕರೆ ನೀಡಿದರು. ಇದು ಒಂದು ಅಗ್ನಿಪರೀಕ್ಷೆ ಎಂದು ಹೋರಾಟಗಾರರಿಗೆ ಹೇಳಿದರು.

ಸುಪ್ರೀಂ ಕೋರ್ಟ್ ಒಪ್ಪಿದ ಒಳಮೀಸಲಾತಿಯನ್ನು ಜಾರಿಗೆ ತರದಿರುವುದು ನ್ಯಾಯಾಲಯದ ತೀರ್ಮಾನಕ್ಕೆ ಅಗೌರವ ಮತ್ತು ಸಂವಿಧಾನ ವಿರೋಧಿ ನಡೆ. ಇದು 101 ಜಾತಿಗಳನ್ನು ಮತ್ತಷ್ಟು ತಾತ್ಸಾರ ಮಾಡುವ ದುರಹಂಕಾರದ ಪ್ರತೀಕ ಎಂದು ಅವರು ಗುಡುಗಿದರು.

ಹುಟ್ಟುಹಬ್ಬವನ್ನು ತ್ಯಾಗ ಮಾಡಿದ ಹೋರಾಟಗಾರ

ಇದೇ ಸಂದರ್ಭದಲ್ಲಿ, ಅಂಬಣ್ಣ ಅರೋಲಿಕರ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದು, ಒಳಮೀಸಲಾತಿ ಹೋರಾಟಕ್ಕೆ ಅದನ್ನು ಸಮರ್ಪಿಸಿದ್ದಾರೆ. ದೇವನೂರು ಮಹಾದೇವ ಅವರು ಕೂಡಲೇ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ ಬರೆದಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿ, ಅವರಿಗೆ ತಂಡದ ಪರವಾಗಿ ಅಭಿನಂದನೆ ಸಲ್ಲಿಸಿದರು.

ಒಳಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದ್ದರೂ ಅದನ್ನು ಜಾರಿಗೊಳಿಸದಿರುವುದು ಸಂವಿಧಾನ ವಿರೋಧಿ ಮತ್ತು ಕೋರ್ಟ್ ತೀರ್ಪಿಗೆ ಅಗೌರವ ಎಂದು ಅರೋಲಿಕರ್ ಗುಡುಗಿದರು. ಇದು 101 ಜಾತಿಗಳನ್ನು ಮತ್ತಷ್ಟು ತಾತ್ಸಾರ ಮಾಡುವ ದುರಹಂಕಾರದ ಪರಮಾಧಿಕಾರ ಎಂದು ಆಕ್ರೋಶ ಹೊರಹಾಕಿದರು.

ಇದು ಅಂತಿಮ ಯುದ್ಧ: ಸರ್ಕಾರದ ನಿಲುವಿಗೆ ಸ್ಪಷ್ಟ ಸಂದೇಶ

“ಉಪವಾಸ ಸತ್ಯಾಗ್ರಹಿಗಳಿಗೆ ಸಾಯುವ ಪರಿಸ್ಥಿತಿ ಬಂದರೆ, ನಾವು ಸಾಯಲಿಕ್ಕೂ ಸಿದ್ಧ” ಎಂದು ಹೇಳಿದ ಅರೋಲಿಕರ್, ಇದು ಅಂತಿಮ ಯುದ್ಧ ಎಂದು ಘೋಷಿಸಿದರು.

ಎಲ್ಲರೂ ಈ ಹೋರಾಟದಲ್ಲಿ ಸೈನಿಕರಂತೆ ಭಾಗವಹಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸಬೇಕು. ಆದರೆ, ಅನಗತ್ಯ ವಾದ-ವಿವಾದಗಳಲ್ಲಿ ತೊಡಗಬಾರದು. ಜಾಲತಾಣಿಗರ ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ ತಮ್ಮ ಕೆಲಸವನ್ನು ಮಾಡಬೇಕು ಎಂದು ಅವರು ಸಲಹೆ ನೀಡಿದರು.

“ನಮ್ಮ ಮನವಿ ಮತ್ತೊಂದು ಏನೂ ಇಲ್ಲ. ಸಾವಿರಕ್ಕೂ ಹೆಚ್ಚಿರುವ ಸಮಗ್ರ ಒಳಮೀಸಲಾತಿ ವರದಿ ಜಾರಿ ಮಾಡಬೇಕೆಂಬುದೇ ನಮ್ಮ ಬೇಡಿಕೆಯಾಗಿದೆ” ಎಂದರು. ಯಾವುದೇ ರಾಜಕಾರಣಿಗಳು ಟೆಂಟ್‌ಗೆ ಬರುವುದಾದರೆ, ಒಳಮೀಸಲಾತಿಯನ್ನು ಅಂಗೀಕಾರ ಮಾಡುವ ಆದೇಶ ಪತ್ರದೊಂದಿಗೆ ಬರಬೇಕು ಎಂದು ಸ್ಪಷ್ಟಪಡಿಸಿದರು. ಹೋರಾಟಕ್ಕೆ ಬೆಂಬಲವಾಗಿ ರಾತ್ರಿ 8 ಗಂಟೆಗೆ ಸಾಂಸ್ಕೃತಿಕ ಪ್ರತಿರೋಧ ಆರಂಭವಾಗುತ್ತದೆ ಎಂದು ತಿಳಿಸಿ, “ಜೈ ಭೀಮ್” ಎಂದು ಘೋಷಿಸಿದರು.

ಸರ್ಕಾರಕ್ಕೆ ಎಚ್ಚರಿಕೆ ಮತ್ತು ಬೆಂಬಲದ ಮಾತುಗಳು

ಇಂತಹ ಹೋರಾಟಕ್ಕೆ ಸರ್ಕಾರ ಅವಕಾಶ ನೀಡಬಾರದಿತ್ತು ಎಂದು ಜಾಗೃತ ಕರ್ನಾಟಕದ ಮುತ್ತುರಾಜ್ ಹೇಳಿದ್ದಾರೆ. ಇಷ್ಟು ದಿನ ಹಸಿವಿನಿಂದ ಬಳಲಿದವರು ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ನಡೆಸುವುದನ್ನು ನೋಡಿ ನೋವಾಗುತ್ತಿದೆ ಎಂದ ಅವರು, ಸರ್ಕಾರವು ಹೋರಾಟಗಾರರನ್ನು ಕರೆದು ಮಾತನಾಡಿ, ಉಪವಾಸ ಕೈಬಿಡುವಂತೆ ಮನವಿ ಮಾಡುವ ಮೂಲಕ ತನ್ನ ದೊಡ್ಡತನ ತೋರಬೇಕು ಎಂದು ಆಶಿಸಿದರು.

ಸಾಮಾಜಿಕ ಅನ್ಯಾಯದ ವಿರುದ್ಧ ಹೋರಾಟದಲ್ಲಿ ಎಲ್ಲರಿಗೂ ಶಕ್ತಿ ತುಂಬುವ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಒಳಮೀಸಲಾತಿ ಹೋರಾಟಗಾರ ಪ್ರಶಾಂತ್ ದಾನಪ್ಪ ಅವರು, “ಸಾಮಾಜಿಕ ಅನ್ಯಾಯದ ಜಿಡ್ಡುಗಟ್ಟಿದ ಮೌಲ್ಯಗಳಿಂದ ಸ್ವಾತಂತ್ರ್ಯವು ವಂಚಿತ ದುರ್ಬಲ ಸಮುದಾಯಗಳಿಗೆಲ್ಲಾ ಸಿಗಲಿ… ಬಾಬಾಸಾಹೇಬರ ಸಂವಿಧಾನದ ಆಶಯಗಳು ಚಿರಾಯುವಾಗಲಿ” ಎಂದು ಹಾರೈಸಿದರು.

“ನನ್ನ ಸಮುದಾಯವನ್ನು ಅತ್ಯಂತ ನಿಕೃಷ್ಟವಾಗಿ ಬೀದಿಗೆ ಬರುವಂತೆ ಮಾಡಿಬಿಟ್ಟರು, ನಾವು ಯಾವುದನ್ನು ನಂಬಿದ್ದೆವೋ ಅದೆಲ್ಲವೂ ಉರುಳುತ್ತಿದೆ, ಸಂವಿಧಾನದ ಕಣ್ಣುಮುಚ್ಚುವ ಪ್ರಯತ್ನ ಮಾಡುತ್ತಿದ್ದಾರೆ, ಅದರೂ ನನ್ನ ಸಮುದಾಯದ ಸ್ಥಿತಿಯನ್ನು ನೆನಸಿಕೊಂಡರೆ ನಿಜಕ್ಕೂ ಬಹಳ ದುಃಖವೆನಿಸುತ್ತದೆ” ಎಂದು ಅವರು ತಮ್ಮ ಅಂತರಾಳದ ನೋವನ್ನು ಹಂಚಿಕೊಂಡರು.

ಒಳಮೀಸಲಾತಿ ತಕ್ಷಣ ಜಾರಿಗೆ ಆಗ್ರಹ: ಮುಖ್ಯಮಂತ್ರಿಯವರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...