Homeಕರ್ನಾಟಕಒಳಮೀಸಲಾತಿ: ಸರ್ಕಾರದ ನಿರ್ಲಕ್ಷ್ಯ, ಇಂದು ಮಧ್ಯರಾತ್ರಿಯಿಂದ ಹೋರಾಟಗಾರರ ಅಮರಣಾಂತ ಉಪವಾಸ ಸತ್ಯಾಗ್ರಹ

ಒಳಮೀಸಲಾತಿ: ಸರ್ಕಾರದ ನಿರ್ಲಕ್ಷ್ಯ, ಇಂದು ಮಧ್ಯರಾತ್ರಿಯಿಂದ ಹೋರಾಟಗಾರರ ಅಮರಣಾಂತ ಉಪವಾಸ ಸತ್ಯಾಗ್ರಹ

- Advertisement -
- Advertisement -

ಸರ್ಕಾರಕ್ಕೆ ಎಚ್ಚರಿಕೆ, ಜನತೆಗೆ ಕರೆ

ಬೆಂಗಳೂರು: ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿಯೂ ಸಾಮಾಜಿಕ ನ್ಯಾಯಕ್ಕಾಗಿ ಹಂಬಲಿಸುತ್ತಿರುವ ಶೋಷಿತ ಸಮುದಾಯಗಳಿಗೆ ಇನ್ನೂ ಸಮಾನ ಹಕ್ಕುಗಳು ದಕ್ಕಿಲ್ಲ ಎಂದು ಆರೋಪಿಸಿ, ಒಳಮೀಸಲಾತಿ ಹೋರಾಟಗಾರರು ಆಗಸ್ಟ್ 14ರ ಮಧ್ಯರಾತ್ರಿಯಿಂದಲೇ ಅಮರಣಾಂತ ಉಪವಾಸ ಸತ್ಯಾಗ್ರಹವನ್ನು ಆರಂಭಿಸಲಿದ್ದಾರೆ ಎಂದು ಒಳಮೀಸಲಾತಿ ಹೋರಾಟಗಾರ ಅಂಬಣ್ಣ ಅರೋಲಿಕರ್‌ ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ದಶಕಗಳಿಂದಲೂ ಕೇಳಿ ಬರುತ್ತಿರುವ ಒಳಮೀಸಲಾತಿಯ ಬೇಡಿಕೆಯನ್ನು ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿಯ ಅನ್ವಯ ಜಾರಿಗೆ ತರುವವರೆಗೂ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ಹೋರಾಟಗಾರ ಅಂಬಣ್ಣ ಅರೋಲಿಕರ್ ಸ್ಪಷ್ಟಪಡಿಸಿದ್ದಾರೆ.

ಮೂರು ದಶಕಗಳ ಕಾಲ ನಡೆದ ಈ ಹೋರಾಟ ಆಯೋಗ ರಚನೆ, ಅದರ ಅಧ್ಯಯನ, ಸುಪ್ರೀಂ ಕೋರ್ಟ್‌ನಲ್ಲಿ ಕಾನೂನು ಸಮರ ಮತ್ತು ವರದಿ ಜಾರಿಗೆ ನಿರಂತರವಾಗಿ ನಡೆದಿದೆ. ಇದು ಆಳುವ ಸರ್ಕಾರಗಳ ಮಲತಾಯಿ ಧೋರಣೆಗೆ ಸ್ಪಷ್ಟ ನಿದರ್ಶನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. “ಹೋರಾಟವೇ ನಮ್ಮ ಜೀವನ, ಹೋರಾಟದಿಂದಲೇ ಪ್ರಗತಿ ಸಾಧನ” ಎಂದು ಅವರು ಘೋಷಿಸಿದರು.

ಹೋರಾಟದ ಸ್ವರೂಪ ಮತ್ತು ಸಿದ್ಧತೆಗಳು

ಈ ಹೋರಾಟಕ್ಕೆ ಎರಡು ತಂಡಗಳನ್ನು ರಚಿಸಲಾಗಿದೆ. ಮೊದಲ ತಂಡದಲ್ಲಿ ಕರಿಯಪ್ಪ ಗುಡಿಮನಿ, ದಾನಪ್ಪ ನಿಲೋಗಲ್, ಜೆ.ಬಿ. ರಾಜು, ಅಂಬಣ್ಣ ಅರೋಲಿಕರ್, ಲೋಕೇಶ್ ಗೋಸಂಘಿ, ಮತ್ತು ಉಮಾದೇವಿ ಅವರು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಇವರಿಗೆ ಏನಾದರೂ ಆರೋಗ್ಯ ಸಮಸ್ಯೆ ಉಂಟಾದರೆ, ಎರಡನೇ ತಂಡದ ಸದಸ್ಯರಾದ ಚಂದ್ರು ತರಹುಣಿಸೆ, ಗಣೇಶ್, ಡೇವಿಡ್, ಮಂಜುನಾಥ್ ಮರಾಟ, ಮತ್ತು ವೇಣುಗೋಪಾಲ್ ಮೌರ್ಯ ಅವರು ಉಪವಾಸವನ್ನು ಮುಂದುವರೆಸಲಿದ್ದಾರೆ. ಈ ಮೂಲಕ ನಿರಂತರವಾಗಿ ಹೋರಾಟವನ್ನು ಜೀವಂತವಾಗಿ ಇಡಲು ನಿರ್ಧರಿಸಲಾಗಿದೆ ಎಂದರು.

ಹೋರಾಟದ ತೀವ್ರತೆಯನ್ನು ವಿವರಿಸಿದ ಅಂಬಣ್ಣ ಅರೋಲಿಕರ್, ಬ್ರಿಟಿಷರು ರಾತ್ರೋರಾತ್ರಿ ಭಾರತವನ್ನು ಬಿಟ್ಟು ಹೋಗಲು ಗಾಂಧೀಜಿಯವರ ಸತ್ಯಾಗ್ರಹ ಮಾತ್ರವಲ್ಲ, ಚಂದ್ರಶೇಖರ್ ಆಜಾದ್, ಭಗತ್ ಸಿಂಗ್, ಸುಖದೇವ್ ಅವರಂತಹ ಕ್ರಾಂತಿಕಾರಿಗಳ ಬಲಿದಾನವೂ ಕಾರಣ ಎಂದು ನೆನಪಿಸಿಕೊಂಡರು.

ಈ ಸರ್ಕಾರವು ಕಾಲಹರಣ ಮಾಡುತ್ತಿದೆ, ಇದು ಕಾನೂನುಬಾಹಿರ, ಸಂವಿಧಾನಬಾಹಿರ, ಮತ್ತು ಪ್ರಜಾಪ್ರಭುತ್ವ ವಿರೋಧಿ ನಿಲುವನ್ನು ತಳೆದಿದೆ ಎಂದು ಅವರು ಹೇಳಿದರು. ಆದ್ದರಿಂದ, ಸ್ವಾತಂತ್ರ್ಯ ಸಿಗದ ನಮಗೆ “ಅನ್ನವೂ ಬೇಡ, ನೀರೂ ಬೇಡ” ಎಂದು ಘೋಷಿಸಿದ ಅವರು, ನಾಗಮೋಹನ್ ದಾಸ್ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಸರ್ಕಾರವು ಇದಕ್ಕೆ “ಕುಂಟು ನೆಪಗಳನ್ನು ಹೇಳಿದರೆ ನಮ್ಮ ಆಕ್ರೋಶ, ನಮ್ಮ ಸಹನೆಯ ಕಟ್ಟೆ ಒಡೆಯುತ್ತದೆ” ಎಂದು ಎಚ್ಚರಿಸಿದರು.

ಸಮತಾ ಸೈನಿಕ ದಳದ ಮಾದರಿಯಲ್ಲಿ ಹೋರಾಟ

ಉಪವಾಸ ಸತ್ಯಾಗ್ರಹದ ಸ್ಥಳದಲ್ಲಿ ಹೋರಾಟಗಾರರನ್ನು ರಕ್ಷಿಸಲು ಬಾಬಾಸಾಹೇಬ್ ಅಂಬೇಡ್ಕರ್ ಅವರ ಸಮತಾ ಸೈನಿಕ ದಳದ ಪರಿಕಲ್ಪನೆಯಂತೆ ಉಳಿದ ಹೋರಾಟಗಾರರು ‘ರಕ್ಷಾ ಕವಚ’ದಂತೆ ಇರಬೇಕು ಎಂದು ಅಂಬಣ್ಣ ಕರೆ ನೀಡಿದರು.

ಅಂಬೇಡ್ಕರ್ ಅವರಿಗೆ ಭಾರತದ ಪ್ರಭುತ್ವವು ಬ್ರಿಟಿಷರಷ್ಟೇ ಕ್ರೂರವಾಗಿರುತ್ತದೆ ಎಂಬುದು ಗೊತ್ತಿತ್ತು, ಆದ್ದರಿಂದಲೇ ಅವರು ತಮ್ಮದೇ ಆದ ಸೈನ್ಯವನ್ನು ಕಟ್ಟಿದ್ದರು ಎಂದು ಅವರು ವಿವರಿಸಿದರು. ಈ ದಳಕ್ಕೆ ಬಿಳಿ ಮತ್ತು ಕಪ್ಪು ಬಣ್ಣದ ಡ್ರೆಸ್‌ಕೋಡ್ ಇತ್ತು, ಕೈಯಲ್ಲಿ ಲಾಠಿ ಮತ್ತು ಚಕ್ರದ ಚಿತ್ರಣವಿತ್ತು. ಈ ಹೋರಾಟಗಾರರು ನಿದ್ದೆಗೆಟ್ಟು ಹಗಲು ರಾತ್ರಿ ಟೆಂಟ್‌ ಸುತ್ತ ಕಾವಲು ಕಾಯಬೇಕು. ಉಪವಾಸದಲ್ಲಿರುವವರನ್ನು ಸರ್ಕಾರ ಎತ್ತಿಕೊಂಡು ಹೋಗಲು ಪ್ರಯತ್ನಿಸಿದರೆ, ಅದನ್ನು ಪ್ರತಿರೋಧಿಸಬೇಕು ಎಂದು ಸೂಚಿಸಿದರು. ಇದು ವ್ಯಕ್ತಿಗತ ಹೋರಾಟವಲ್ಲ, ಸಾಮೂಹಿಕ ಹೋರಾಟ ಎಂದು ಅವರು ಸ್ಪಷ್ಟಪಡಿಸಿದರು.

ರಾಜಧಾನಿ ರಸ್ತೆಗಳು ರಣಾಂಗಣವಾಗಲಿ

“ನಾವು ಅ. 16ರಂದು ಒಳಮೀಸಲಾತಿ ಜಾರಿಯಾಗಲಿದೆ ಎಂದು ಸಂತೋಷದಿಂದ ಇಲ್ಲಿಂದ ಹೋಗುತ್ತೇವೆ ಎಂದುಕೊಂಡಿದ್ದೆವು. ಆದರೆ ಸರ್ಕಾರವು ’16ರಲ್ಲ, 26ರಲ್ಲ, 46 ಮಾಡುತ್ತೇವೆ’ ಎಂದು ಹೊರಟಿದೆ” ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಇಂತಹ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಹೇಳಿದ ಅವರು, “ಯಾವುದೇ ಕ್ಷಣದಲ್ಲಿಯೂ ಈ ರಾಜಧಾನಿಯ ರಸ್ತೆ ರಣಾಂಗಣವಾಗಲಿಕ್ಕೆ ಸಿದ್ಧರಾಗಬೇಕು” ಎಂದು ಕರೆ ನೀಡಿದರು. ಇದು ಒಂದು ಅಗ್ನಿಪರೀಕ್ಷೆ ಎಂದು ಹೋರಾಟಗಾರರಿಗೆ ಹೇಳಿದರು.

ಸುಪ್ರೀಂ ಕೋರ್ಟ್ ಒಪ್ಪಿದ ಒಳಮೀಸಲಾತಿಯನ್ನು ಜಾರಿಗೆ ತರದಿರುವುದು ನ್ಯಾಯಾಲಯದ ತೀರ್ಮಾನಕ್ಕೆ ಅಗೌರವ ಮತ್ತು ಸಂವಿಧಾನ ವಿರೋಧಿ ನಡೆ. ಇದು 101 ಜಾತಿಗಳನ್ನು ಮತ್ತಷ್ಟು ತಾತ್ಸಾರ ಮಾಡುವ ದುರಹಂಕಾರದ ಪ್ರತೀಕ ಎಂದು ಅವರು ಗುಡುಗಿದರು.

ಹುಟ್ಟುಹಬ್ಬವನ್ನು ತ್ಯಾಗ ಮಾಡಿದ ಹೋರಾಟಗಾರ

ಇದೇ ಸಂದರ್ಭದಲ್ಲಿ, ಅಂಬಣ್ಣ ಅರೋಲಿಕರ್ ಅವರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದು, ಒಳಮೀಸಲಾತಿ ಹೋರಾಟಕ್ಕೆ ಅದನ್ನು ಸಮರ್ಪಿಸಿದ್ದಾರೆ. ದೇವನೂರು ಮಹಾದೇವ ಅವರು ಕೂಡಲೇ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಬಹಿರಂಗ ಪತ್ರ ಬರೆದಿರುವುದಕ್ಕೆ ಅವರು ಸಂತೋಷ ವ್ಯಕ್ತಪಡಿಸಿ, ಅವರಿಗೆ ತಂಡದ ಪರವಾಗಿ ಅಭಿನಂದನೆ ಸಲ್ಲಿಸಿದರು.

ಒಳಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದ್ದರೂ ಅದನ್ನು ಜಾರಿಗೊಳಿಸದಿರುವುದು ಸಂವಿಧಾನ ವಿರೋಧಿ ಮತ್ತು ಕೋರ್ಟ್ ತೀರ್ಪಿಗೆ ಅಗೌರವ ಎಂದು ಅರೋಲಿಕರ್ ಗುಡುಗಿದರು. ಇದು 101 ಜಾತಿಗಳನ್ನು ಮತ್ತಷ್ಟು ತಾತ್ಸಾರ ಮಾಡುವ ದುರಹಂಕಾರದ ಪರಮಾಧಿಕಾರ ಎಂದು ಆಕ್ರೋಶ ಹೊರಹಾಕಿದರು.

ಇದು ಅಂತಿಮ ಯುದ್ಧ: ಸರ್ಕಾರದ ನಿಲುವಿಗೆ ಸ್ಪಷ್ಟ ಸಂದೇಶ

“ಉಪವಾಸ ಸತ್ಯಾಗ್ರಹಿಗಳಿಗೆ ಸಾಯುವ ಪರಿಸ್ಥಿತಿ ಬಂದರೆ, ನಾವು ಸಾಯಲಿಕ್ಕೂ ಸಿದ್ಧ” ಎಂದು ಹೇಳಿದ ಅರೋಲಿಕರ್, ಇದು ಅಂತಿಮ ಯುದ್ಧ ಎಂದು ಘೋಷಿಸಿದರು.

ಎಲ್ಲರೂ ಈ ಹೋರಾಟದಲ್ಲಿ ಸೈನಿಕರಂತೆ ಭಾಗವಹಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸಬೇಕು. ಆದರೆ, ಅನಗತ್ಯ ವಾದ-ವಿವಾದಗಳಲ್ಲಿ ತೊಡಗಬಾರದು. ಜಾಲತಾಣಿಗರ ಯಾವುದೇ ಪ್ರಚೋದನೆಗಳಿಗೆ ಕಿವಿಗೊಡದೆ ತಮ್ಮ ಕೆಲಸವನ್ನು ಮಾಡಬೇಕು ಎಂದು ಅವರು ಸಲಹೆ ನೀಡಿದರು.

“ನಮ್ಮ ಮನವಿ ಮತ್ತೊಂದು ಏನೂ ಇಲ್ಲ. ಸಾವಿರಕ್ಕೂ ಹೆಚ್ಚಿರುವ ಸಮಗ್ರ ಒಳಮೀಸಲಾತಿ ವರದಿ ಜಾರಿ ಮಾಡಬೇಕೆಂಬುದೇ ನಮ್ಮ ಬೇಡಿಕೆಯಾಗಿದೆ” ಎಂದರು. ಯಾವುದೇ ರಾಜಕಾರಣಿಗಳು ಟೆಂಟ್‌ಗೆ ಬರುವುದಾದರೆ, ಒಳಮೀಸಲಾತಿಯನ್ನು ಅಂಗೀಕಾರ ಮಾಡುವ ಆದೇಶ ಪತ್ರದೊಂದಿಗೆ ಬರಬೇಕು ಎಂದು ಸ್ಪಷ್ಟಪಡಿಸಿದರು. ಹೋರಾಟಕ್ಕೆ ಬೆಂಬಲವಾಗಿ ರಾತ್ರಿ 8 ಗಂಟೆಗೆ ಸಾಂಸ್ಕೃತಿಕ ಪ್ರತಿರೋಧ ಆರಂಭವಾಗುತ್ತದೆ ಎಂದು ತಿಳಿಸಿ, “ಜೈ ಭೀಮ್” ಎಂದು ಘೋಷಿಸಿದರು.

ಸರ್ಕಾರಕ್ಕೆ ಎಚ್ಚರಿಕೆ ಮತ್ತು ಬೆಂಬಲದ ಮಾತುಗಳು

ಇಂತಹ ಹೋರಾಟಕ್ಕೆ ಸರ್ಕಾರ ಅವಕಾಶ ನೀಡಬಾರದಿತ್ತು ಎಂದು ಜಾಗೃತ ಕರ್ನಾಟಕದ ಮುತ್ತುರಾಜ್ ಹೇಳಿದ್ದಾರೆ. ಇಷ್ಟು ದಿನ ಹಸಿವಿನಿಂದ ಬಳಲಿದವರು ಮತ್ತೊಮ್ಮೆ ಉಪವಾಸ ಸತ್ಯಾಗ್ರಹ ನಡೆಸುವುದನ್ನು ನೋಡಿ ನೋವಾಗುತ್ತಿದೆ ಎಂದ ಅವರು, ಸರ್ಕಾರವು ಹೋರಾಟಗಾರರನ್ನು ಕರೆದು ಮಾತನಾಡಿ, ಉಪವಾಸ ಕೈಬಿಡುವಂತೆ ಮನವಿ ಮಾಡುವ ಮೂಲಕ ತನ್ನ ದೊಡ್ಡತನ ತೋರಬೇಕು ಎಂದು ಆಶಿಸಿದರು.

ಸಾಮಾಜಿಕ ಅನ್ಯಾಯದ ವಿರುದ್ಧ ಹೋರಾಟದಲ್ಲಿ ಎಲ್ಲರಿಗೂ ಶಕ್ತಿ ತುಂಬುವ ಕೆಲಸ ಮಾಡೋಣ ಎಂದು ಕರೆ ನೀಡಿದರು.

ಒಳಮೀಸಲಾತಿ ಹೋರಾಟಗಾರ ಪ್ರಶಾಂತ್ ದಾನಪ್ಪ ಅವರು, “ಸಾಮಾಜಿಕ ಅನ್ಯಾಯದ ಜಿಡ್ಡುಗಟ್ಟಿದ ಮೌಲ್ಯಗಳಿಂದ ಸ್ವಾತಂತ್ರ್ಯವು ವಂಚಿತ ದುರ್ಬಲ ಸಮುದಾಯಗಳಿಗೆಲ್ಲಾ ಸಿಗಲಿ… ಬಾಬಾಸಾಹೇಬರ ಸಂವಿಧಾನದ ಆಶಯಗಳು ಚಿರಾಯುವಾಗಲಿ” ಎಂದು ಹಾರೈಸಿದರು.

“ನನ್ನ ಸಮುದಾಯವನ್ನು ಅತ್ಯಂತ ನಿಕೃಷ್ಟವಾಗಿ ಬೀದಿಗೆ ಬರುವಂತೆ ಮಾಡಿಬಿಟ್ಟರು, ನಾವು ಯಾವುದನ್ನು ನಂಬಿದ್ದೆವೋ ಅದೆಲ್ಲವೂ ಉರುಳುತ್ತಿದೆ, ಸಂವಿಧಾನದ ಕಣ್ಣುಮುಚ್ಚುವ ಪ್ರಯತ್ನ ಮಾಡುತ್ತಿದ್ದಾರೆ, ಅದರೂ ನನ್ನ ಸಮುದಾಯದ ಸ್ಥಿತಿಯನ್ನು ನೆನಸಿಕೊಂಡರೆ ನಿಜಕ್ಕೂ ಬಹಳ ದುಃಖವೆನಿಸುತ್ತದೆ” ಎಂದು ಅವರು ತಮ್ಮ ಅಂತರಾಳದ ನೋವನ್ನು ಹಂಚಿಕೊಂಡರು.

ಒಳಮೀಸಲಾತಿ ತಕ್ಷಣ ಜಾರಿಗೆ ಆಗ್ರಹ: ಮುಖ್ಯಮಂತ್ರಿಯವರಿಗೆ ದೇವನೂರು ಮಹಾದೇವ ಬಹಿರಂಗ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...