Homeಎಕಾನಮಿಗಂಡಸರ ಒಳಚಡ್ಡಿ ಬನೀನಿನ ಮಾರಾಟ ಕ್ಷೀಣಗೊಂಡಿದ್ದು ಇದು ದೇಶದ ಆರ್ಥಿಕತೆ ದುರ್ಬಲಗೊಳ್ಳುತ್ತಿರುವುದರ ಲಕ್ಷಣ

ಗಂಡಸರ ಒಳಚಡ್ಡಿ ಬನೀನಿನ ಮಾರಾಟ ಕ್ಷೀಣಗೊಂಡಿದ್ದು ಇದು ದೇಶದ ಆರ್ಥಿಕತೆ ದುರ್ಬಲಗೊಳ್ಳುತ್ತಿರುವುದರ ಲಕ್ಷಣ

- Advertisement -
- Advertisement -

ಇದು ಬಹುಕಾಲ ಅಮೇರಿಕದ ಫೆಡರಲ್ ರಿಜರ್ವ್ ಮುಖ್ಯಸ್ಥರಾಗಿದ್ದ ಆಲನ್ ಗ್ರೀನ್-ಸ್ಪ್ಯಾನ್ ಅವರು 1970ರಲ್ಲಿ ನೀಡಿದ ಹೇಳಿಕೆ ಮತ್ತು ಅವರ ಪ್ರಕಾರ ಇದೊಂದು ಮುಖ್ಯ ಆರ್ಥಿಕ ಸೂಚ್ಯಾಂಕ ಎಂದು ತಿಳಿಸುತ್ತಾ, ಪ್ರತಿಷ್ಠಿತ ಗುಲಾಬಿ ಪತ್ರಿಕೆ ದಿ ಎಕನಾಮಿಕ್ ಟೈಂಸ್ ಇಂದು ವರದಿಮಾಡಿದೆ. ಜೂನ್ ತಿಂಗಳಿಗೆ ಮುಗಿದ ಈ ವರ್ಷದ ಎರಡನೆಯ ತ್ರೈಮಾಸಿಕ ಅಂಕಿ-ಅಂಶಗಳ ಪ್ರಕಾರ ಪೇಜ್ ಇಂಡಸ್ಟ್ರೀಸ್ ಅವರ ಜಾಕಿ ಬ್ರ್ಯಾಂಡಿನ ಮಾರಾಟ ಕೇವಲ 2% ವೃದ್ಧಿ ಕಂಡಿದ್ದರೆ, ಡಾಲರ್ ಮತ್ತು ವಿಐಪಿ ಅವರ ಮಾರಾಟ ತಲಾ 4% ಮತ್ತು 20% ಕಡಿಮೆ ಆಗಿದೆ ಹಾಗೂ ಲಕ್ಸ್ ಅವರ ಮಾರಾಟ ಮಂಕಾಗಿದೆ. “ಮಾರುಕಟ್ಟೆಯ ಈ ಕ್ಷೇತ್ರದ ಅತ್ಯಂತ ಒಳ್ಳೆಯ ಸಮಯವಂತೂ ಇದಲ್ಲ” ಎಂದು ಪೇಜ್ ಇಂಡಸ್ಟ್ರೀಸ್ ಅವರ ಸಿಇಒ ವೇದ್ಜಿ ಟಿಕು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಹಾಗಾದರೆ ಗಂಡಸರು ಕಾಚಾ ಹಾಕುವುದನ್ನು ಬಿಟ್ಟಿದ್ದಾರೆಯೇ? ಎಂಬುದು ಹಲವರ ಆಶ್ಚರ್ಯಚಕಿತವಾದ ಪ್ರಶ್ನೆ ಆಗಿರಬಹುದು. ಜನರ ಬಳಿ ಖರ್ಚು ಮಾಡಲು ಹಣದ ಕೊರತೆಯಿಂದಾಗಿ ಇಂತಹ ವಸ್ತುಗಳ ಖರೀದಿಯನ್ನು ಅವರು ಮುಂದೂಡುತ್ತಿದ್ದಾರೆ ಎಂಬುದು ದೇಶದ ಆರ್ಥಿಕ ತಜ್ಞರ ಅಭಿಪ್ರಾಯ. ಹಾಗಾದರೆ ಬಹುತೇಕ ಲಾಂಡ್ರಿ ಬದಿಯಲ್ಲಿರುವ ರಫೂ ಅಂಗಡಿಯ ವ್ಯಾಪಾರವಾದರೂ ಜೋರಾಗಿರಬೇಕಲ್ಲ, ಇಲ್ಲವಾದರೆ ಹರಿದ ಕಾಚಾಗಳನ್ನೇ ಧರಿಸಿಕೊಂಡು ಜನರು ಓಡಾಡುತ್ತಿದ್ದಾರೆಯೇ ಎಂಬುದು ನಿಮ್ಮ ಮುಂದಿನ ಪ್ರಶ್ನೆ ಆಗಿರಬಹುದು.  ಆದರೆ ಹೇಗೆ ತನಿಖೆ ಮಾಡುವುದು? ಪೋಲಿಸ್ ಮುಖ್ಯಸ್ಥರನ್ನು ಕೇಳಿದರೆ ಹೇಗೆ?

ಡಾಲರ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ವಿನೋದ್ ಗುಪ್ತಾ ಅವರು ಈ ಪರಿಸ್ಥಿತಿಗೆ ಮುಖ್ಯ ಕಾರಣ ಗ್ರಾಮೀಣ ದುಃಸ್ಥಿತಿ, ಎಲ್ಲೂ ಸಾಲ ಸಿಗದಂತಾಗಿರುವ ಪರಿಸ್ಥಿತಿ, ಬ್ಯಾಂಕುಗಳಲ್ಲಿ ಹೆಚ್ಚಾಗಿರುವ ಎನ್.ಪಿ.ಎ., ಹಾಗೂ ನಾನ್-ಬ್ಯಾಂಕಿಂಗ್ ಫೈನಾನ್ಶಿಯಲ್ ಇನ್ಸ್ಟಿಟ್ಯೂಷನ್ ಅವರ ಅನಾರೋಗ್ಯ ಎನ್ನುತ್ತಾರೆ. ಹೌದು, ಕಾಚಾ ಖರೀದಿಸಲು ಯಾವ ಬ್ಯಾಂಕ್ ತಾನೇ ಸಾಲ ಕೊಡುತ್ತದೆ ಹೇಳಿ. ಅಥವಾ ಬ್ಯಾಂಕುಗಳು ಎನಾದರೂ ಸಾಲಗಾರರ ಚಡ್ಡಿ-ಬನೀನನ್ನೂ ಕಿತ್ತುಕೊಂಡು ತಮ್ಮ ಸಾಲ ವಸೂಲು ಮಾಡುವ ಯೋಜನೆ ಹಾಕುತ್ತಿದ್ದಾರೇನೋ ಗೊತ್ತಿಲ್ಲ. ಹಾಗೇನಾದರೂ ಇದ್ದಲ್ಲಿ ಹರಾಜು ಹಾಕಿದ ಚಡ್ಡಿ-ಬನೀನು ನಮ್ಮ ಜನ ಕೊಂಡುಕೊಳ್ಳುತಾರೆಯೇ ಎಂಬುದೂ ಸಹ ಯಕ್ಷ ಪ್ರಶ್ನೆ.

ಈ ಚಡ್ಡಿ-ಬನೀನಿನ ವಾರ್ಷಿಕ (ಅಂದಾಜು) ಮಾರಾಟ ರೂ. 27,931 ಕೋಟಿ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಅಷ್ಟೇ ಅಲ್ಲ ಇದು ಪ್ರತಿವರ್ಷ 10% ವೃದ್ಧಿಗೊಳ್ಳುತ್ತಿದ್ದ ಕ್ಷೇತ್ರವಾಗಿದ್ದು ಮುಂದಿನ ದಶಕದಲ್ಲಿ ಇದು ರೂ. 74,258 ಕೋಟಿ ತಲುಪಬಹುದಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ. ಮುಂದಿನ ನಾಲ್ಕೂವರೆ ವರ್ಷಗಳಲ್ಲಿ ದೇಶದ ಜಿಡಿಪಿ ಐದು ಲಕ್ಷ ಕೋಟಿ ತಲುಪುತ್ತದೆ ಎಂದು ಪ್ರಧಾನ ಮಂತ್ರಿಗಳು ಭವಿಷ್ಯವಾಣಿ ನುಡಿದಿರುವಾಗ ಈ ಕುಸಿದಿರುವ ಮಾರಾಟ ಅಂಕಿ-ಅಂಶ ನಿಜಕ್ಕೂ ಆಘಾತಕಾರಿ ಎಂದೆನಿಸುತ್ತದೆ. ಇನ್ನು ಮುಂದೆ ಎಲ್ಲರೂ ಕನಿಷ್ಠ ಎರಡೆರಡು ಜೊತೆ ಚಡ್ಡಿ-ಬನೀನು ತೊಡಬೇಕೆಂಬ ಆದೇಶವೇನಾದರೂ ಹೊರಬಂದಲ್ಲಿ ಏನುಮಾಡುವುದು?

ಹಾಗಿರಲಾರದು ಏಕೆಂದರೆ ಆರ್ಥಿಕ ಒಳನೋಟ ಇರುವ ಸಂಸ್ಥೆ ಕ್ರೆಡಿಟ್-ಸ್ವಿಸ್ ಪೇಜ್ ಇಂಡಸ್ಟ್ರೀಸ್ ಅವರ ಲಾಭಾದಾಯವನ್ನು 9-11% ಕಡಿಮೆ ಮಾಡಿದೆ ಮತ್ತು ಕೋಟಕ್ ಇಕ್ವಿಟೀಸ್ ಅವರು ಕ್ಷೀಣಗೊಂಡಿರುವ ಕಂಪನಿಯ ಆದಾಯದ ಮೇರೆಗೆ ಶೇರು ಬೆಲೆಯನ್ನು 5-6%  ಕಡಿತಗೊಳಿಸಿದೆ.

ನಾನಾದರೂ ಇವೆಲ್ಲವನ್ನು ತಪ್ಪು ಮಾಹಿತಿ ಮತ್ತು ದೇಶದ ನಾಯಕತ್ವವನ್ನು ಕೆಟ್ಟದಾಗಿ ಬಿಂಬಿಸುವ ಹುನ್ನಾರ ಎಂದು ಭಾವಿಸುತ್ತೇನೆ ಏಕೆಂದರೆ ನೆನ್ನೆ ತಾನೇ ನಾನು ಅರ್ಧ ಡಜನ್ ಒಳಚಡ್ಡಿ ಬನೀನು ಕೊಂಡುಕೊಂಡಿದ್ದೇನೆ. ದೇಶದ ಆರ್ಥಿಕ ಸಂರಕ್ಷಣೆಯಲ್ಲಿ ನಿಮ್ಮ ಯೋಗದಾನವೂ ಇರಲಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...