Homeಎಕಾನಮಿಗಂಡಸರ ಒಳಚಡ್ಡಿ ಬನೀನಿನ ಮಾರಾಟ ಕ್ಷೀಣಗೊಂಡಿದ್ದು ಇದು ದೇಶದ ಆರ್ಥಿಕತೆ ದುರ್ಬಲಗೊಳ್ಳುತ್ತಿರುವುದರ ಲಕ್ಷಣ

ಗಂಡಸರ ಒಳಚಡ್ಡಿ ಬನೀನಿನ ಮಾರಾಟ ಕ್ಷೀಣಗೊಂಡಿದ್ದು ಇದು ದೇಶದ ಆರ್ಥಿಕತೆ ದುರ್ಬಲಗೊಳ್ಳುತ್ತಿರುವುದರ ಲಕ್ಷಣ

- Advertisement -
- Advertisement -

ಇದು ಬಹುಕಾಲ ಅಮೇರಿಕದ ಫೆಡರಲ್ ರಿಜರ್ವ್ ಮುಖ್ಯಸ್ಥರಾಗಿದ್ದ ಆಲನ್ ಗ್ರೀನ್-ಸ್ಪ್ಯಾನ್ ಅವರು 1970ರಲ್ಲಿ ನೀಡಿದ ಹೇಳಿಕೆ ಮತ್ತು ಅವರ ಪ್ರಕಾರ ಇದೊಂದು ಮುಖ್ಯ ಆರ್ಥಿಕ ಸೂಚ್ಯಾಂಕ ಎಂದು ತಿಳಿಸುತ್ತಾ, ಪ್ರತಿಷ್ಠಿತ ಗುಲಾಬಿ ಪತ್ರಿಕೆ ದಿ ಎಕನಾಮಿಕ್ ಟೈಂಸ್ ಇಂದು ವರದಿಮಾಡಿದೆ. ಜೂನ್ ತಿಂಗಳಿಗೆ ಮುಗಿದ ಈ ವರ್ಷದ ಎರಡನೆಯ ತ್ರೈಮಾಸಿಕ ಅಂಕಿ-ಅಂಶಗಳ ಪ್ರಕಾರ ಪೇಜ್ ಇಂಡಸ್ಟ್ರೀಸ್ ಅವರ ಜಾಕಿ ಬ್ರ್ಯಾಂಡಿನ ಮಾರಾಟ ಕೇವಲ 2% ವೃದ್ಧಿ ಕಂಡಿದ್ದರೆ, ಡಾಲರ್ ಮತ್ತು ವಿಐಪಿ ಅವರ ಮಾರಾಟ ತಲಾ 4% ಮತ್ತು 20% ಕಡಿಮೆ ಆಗಿದೆ ಹಾಗೂ ಲಕ್ಸ್ ಅವರ ಮಾರಾಟ ಮಂಕಾಗಿದೆ. “ಮಾರುಕಟ್ಟೆಯ ಈ ಕ್ಷೇತ್ರದ ಅತ್ಯಂತ ಒಳ್ಳೆಯ ಸಮಯವಂತೂ ಇದಲ್ಲ” ಎಂದು ಪೇಜ್ ಇಂಡಸ್ಟ್ರೀಸ್ ಅವರ ಸಿಇಒ ವೇದ್ಜಿ ಟಿಕು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಹಾಗಾದರೆ ಗಂಡಸರು ಕಾಚಾ ಹಾಕುವುದನ್ನು ಬಿಟ್ಟಿದ್ದಾರೆಯೇ? ಎಂಬುದು ಹಲವರ ಆಶ್ಚರ್ಯಚಕಿತವಾದ ಪ್ರಶ್ನೆ ಆಗಿರಬಹುದು. ಜನರ ಬಳಿ ಖರ್ಚು ಮಾಡಲು ಹಣದ ಕೊರತೆಯಿಂದಾಗಿ ಇಂತಹ ವಸ್ತುಗಳ ಖರೀದಿಯನ್ನು ಅವರು ಮುಂದೂಡುತ್ತಿದ್ದಾರೆ ಎಂಬುದು ದೇಶದ ಆರ್ಥಿಕ ತಜ್ಞರ ಅಭಿಪ್ರಾಯ. ಹಾಗಾದರೆ ಬಹುತೇಕ ಲಾಂಡ್ರಿ ಬದಿಯಲ್ಲಿರುವ ರಫೂ ಅಂಗಡಿಯ ವ್ಯಾಪಾರವಾದರೂ ಜೋರಾಗಿರಬೇಕಲ್ಲ, ಇಲ್ಲವಾದರೆ ಹರಿದ ಕಾಚಾಗಳನ್ನೇ ಧರಿಸಿಕೊಂಡು ಜನರು ಓಡಾಡುತ್ತಿದ್ದಾರೆಯೇ ಎಂಬುದು ನಿಮ್ಮ ಮುಂದಿನ ಪ್ರಶ್ನೆ ಆಗಿರಬಹುದು.  ಆದರೆ ಹೇಗೆ ತನಿಖೆ ಮಾಡುವುದು? ಪೋಲಿಸ್ ಮುಖ್ಯಸ್ಥರನ್ನು ಕೇಳಿದರೆ ಹೇಗೆ?

ಡಾಲರ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ವಿನೋದ್ ಗುಪ್ತಾ ಅವರು ಈ ಪರಿಸ್ಥಿತಿಗೆ ಮುಖ್ಯ ಕಾರಣ ಗ್ರಾಮೀಣ ದುಃಸ್ಥಿತಿ, ಎಲ್ಲೂ ಸಾಲ ಸಿಗದಂತಾಗಿರುವ ಪರಿಸ್ಥಿತಿ, ಬ್ಯಾಂಕುಗಳಲ್ಲಿ ಹೆಚ್ಚಾಗಿರುವ ಎನ್.ಪಿ.ಎ., ಹಾಗೂ ನಾನ್-ಬ್ಯಾಂಕಿಂಗ್ ಫೈನಾನ್ಶಿಯಲ್ ಇನ್ಸ್ಟಿಟ್ಯೂಷನ್ ಅವರ ಅನಾರೋಗ್ಯ ಎನ್ನುತ್ತಾರೆ. ಹೌದು, ಕಾಚಾ ಖರೀದಿಸಲು ಯಾವ ಬ್ಯಾಂಕ್ ತಾನೇ ಸಾಲ ಕೊಡುತ್ತದೆ ಹೇಳಿ. ಅಥವಾ ಬ್ಯಾಂಕುಗಳು ಎನಾದರೂ ಸಾಲಗಾರರ ಚಡ್ಡಿ-ಬನೀನನ್ನೂ ಕಿತ್ತುಕೊಂಡು ತಮ್ಮ ಸಾಲ ವಸೂಲು ಮಾಡುವ ಯೋಜನೆ ಹಾಕುತ್ತಿದ್ದಾರೇನೋ ಗೊತ್ತಿಲ್ಲ. ಹಾಗೇನಾದರೂ ಇದ್ದಲ್ಲಿ ಹರಾಜು ಹಾಕಿದ ಚಡ್ಡಿ-ಬನೀನು ನಮ್ಮ ಜನ ಕೊಂಡುಕೊಳ್ಳುತಾರೆಯೇ ಎಂಬುದೂ ಸಹ ಯಕ್ಷ ಪ್ರಶ್ನೆ.

ಈ ಚಡ್ಡಿ-ಬನೀನಿನ ವಾರ್ಷಿಕ (ಅಂದಾಜು) ಮಾರಾಟ ರೂ. 27,931 ಕೋಟಿ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಅಷ್ಟೇ ಅಲ್ಲ ಇದು ಪ್ರತಿವರ್ಷ 10% ವೃದ್ಧಿಗೊಳ್ಳುತ್ತಿದ್ದ ಕ್ಷೇತ್ರವಾಗಿದ್ದು ಮುಂದಿನ ದಶಕದಲ್ಲಿ ಇದು ರೂ. 74,258 ಕೋಟಿ ತಲುಪಬಹುದಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ. ಮುಂದಿನ ನಾಲ್ಕೂವರೆ ವರ್ಷಗಳಲ್ಲಿ ದೇಶದ ಜಿಡಿಪಿ ಐದು ಲಕ್ಷ ಕೋಟಿ ತಲುಪುತ್ತದೆ ಎಂದು ಪ್ರಧಾನ ಮಂತ್ರಿಗಳು ಭವಿಷ್ಯವಾಣಿ ನುಡಿದಿರುವಾಗ ಈ ಕುಸಿದಿರುವ ಮಾರಾಟ ಅಂಕಿ-ಅಂಶ ನಿಜಕ್ಕೂ ಆಘಾತಕಾರಿ ಎಂದೆನಿಸುತ್ತದೆ. ಇನ್ನು ಮುಂದೆ ಎಲ್ಲರೂ ಕನಿಷ್ಠ ಎರಡೆರಡು ಜೊತೆ ಚಡ್ಡಿ-ಬನೀನು ತೊಡಬೇಕೆಂಬ ಆದೇಶವೇನಾದರೂ ಹೊರಬಂದಲ್ಲಿ ಏನುಮಾಡುವುದು?

ಹಾಗಿರಲಾರದು ಏಕೆಂದರೆ ಆರ್ಥಿಕ ಒಳನೋಟ ಇರುವ ಸಂಸ್ಥೆ ಕ್ರೆಡಿಟ್-ಸ್ವಿಸ್ ಪೇಜ್ ಇಂಡಸ್ಟ್ರೀಸ್ ಅವರ ಲಾಭಾದಾಯವನ್ನು 9-11% ಕಡಿಮೆ ಮಾಡಿದೆ ಮತ್ತು ಕೋಟಕ್ ಇಕ್ವಿಟೀಸ್ ಅವರು ಕ್ಷೀಣಗೊಂಡಿರುವ ಕಂಪನಿಯ ಆದಾಯದ ಮೇರೆಗೆ ಶೇರು ಬೆಲೆಯನ್ನು 5-6%  ಕಡಿತಗೊಳಿಸಿದೆ.

ನಾನಾದರೂ ಇವೆಲ್ಲವನ್ನು ತಪ್ಪು ಮಾಹಿತಿ ಮತ್ತು ದೇಶದ ನಾಯಕತ್ವವನ್ನು ಕೆಟ್ಟದಾಗಿ ಬಿಂಬಿಸುವ ಹುನ್ನಾರ ಎಂದು ಭಾವಿಸುತ್ತೇನೆ ಏಕೆಂದರೆ ನೆನ್ನೆ ತಾನೇ ನಾನು ಅರ್ಧ ಡಜನ್ ಒಳಚಡ್ಡಿ ಬನೀನು ಕೊಂಡುಕೊಂಡಿದ್ದೇನೆ. ದೇಶದ ಆರ್ಥಿಕ ಸಂರಕ್ಷಣೆಯಲ್ಲಿ ನಿಮ್ಮ ಯೋಗದಾನವೂ ಇರಲಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...