Homeಎಕಾನಮಿಗಂಡಸರ ಒಳಚಡ್ಡಿ ಬನೀನಿನ ಮಾರಾಟ ಕ್ಷೀಣಗೊಂಡಿದ್ದು ಇದು ದೇಶದ ಆರ್ಥಿಕತೆ ದುರ್ಬಲಗೊಳ್ಳುತ್ತಿರುವುದರ ಲಕ್ಷಣ

ಗಂಡಸರ ಒಳಚಡ್ಡಿ ಬನೀನಿನ ಮಾರಾಟ ಕ್ಷೀಣಗೊಂಡಿದ್ದು ಇದು ದೇಶದ ಆರ್ಥಿಕತೆ ದುರ್ಬಲಗೊಳ್ಳುತ್ತಿರುವುದರ ಲಕ್ಷಣ

- Advertisement -
- Advertisement -

ಇದು ಬಹುಕಾಲ ಅಮೇರಿಕದ ಫೆಡರಲ್ ರಿಜರ್ವ್ ಮುಖ್ಯಸ್ಥರಾಗಿದ್ದ ಆಲನ್ ಗ್ರೀನ್-ಸ್ಪ್ಯಾನ್ ಅವರು 1970ರಲ್ಲಿ ನೀಡಿದ ಹೇಳಿಕೆ ಮತ್ತು ಅವರ ಪ್ರಕಾರ ಇದೊಂದು ಮುಖ್ಯ ಆರ್ಥಿಕ ಸೂಚ್ಯಾಂಕ ಎಂದು ತಿಳಿಸುತ್ತಾ, ಪ್ರತಿಷ್ಠಿತ ಗುಲಾಬಿ ಪತ್ರಿಕೆ ದಿ ಎಕನಾಮಿಕ್ ಟೈಂಸ್ ಇಂದು ವರದಿಮಾಡಿದೆ. ಜೂನ್ ತಿಂಗಳಿಗೆ ಮುಗಿದ ಈ ವರ್ಷದ ಎರಡನೆಯ ತ್ರೈಮಾಸಿಕ ಅಂಕಿ-ಅಂಶಗಳ ಪ್ರಕಾರ ಪೇಜ್ ಇಂಡಸ್ಟ್ರೀಸ್ ಅವರ ಜಾಕಿ ಬ್ರ್ಯಾಂಡಿನ ಮಾರಾಟ ಕೇವಲ 2% ವೃದ್ಧಿ ಕಂಡಿದ್ದರೆ, ಡಾಲರ್ ಮತ್ತು ವಿಐಪಿ ಅವರ ಮಾರಾಟ ತಲಾ 4% ಮತ್ತು 20% ಕಡಿಮೆ ಆಗಿದೆ ಹಾಗೂ ಲಕ್ಸ್ ಅವರ ಮಾರಾಟ ಮಂಕಾಗಿದೆ. “ಮಾರುಕಟ್ಟೆಯ ಈ ಕ್ಷೇತ್ರದ ಅತ್ಯಂತ ಒಳ್ಳೆಯ ಸಮಯವಂತೂ ಇದಲ್ಲ” ಎಂದು ಪೇಜ್ ಇಂಡಸ್ಟ್ರೀಸ್ ಅವರ ಸಿಇಒ ವೇದ್ಜಿ ಟಿಕು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಹಾಗಾದರೆ ಗಂಡಸರು ಕಾಚಾ ಹಾಕುವುದನ್ನು ಬಿಟ್ಟಿದ್ದಾರೆಯೇ? ಎಂಬುದು ಹಲವರ ಆಶ್ಚರ್ಯಚಕಿತವಾದ ಪ್ರಶ್ನೆ ಆಗಿರಬಹುದು. ಜನರ ಬಳಿ ಖರ್ಚು ಮಾಡಲು ಹಣದ ಕೊರತೆಯಿಂದಾಗಿ ಇಂತಹ ವಸ್ತುಗಳ ಖರೀದಿಯನ್ನು ಅವರು ಮುಂದೂಡುತ್ತಿದ್ದಾರೆ ಎಂಬುದು ದೇಶದ ಆರ್ಥಿಕ ತಜ್ಞರ ಅಭಿಪ್ರಾಯ. ಹಾಗಾದರೆ ಬಹುತೇಕ ಲಾಂಡ್ರಿ ಬದಿಯಲ್ಲಿರುವ ರಫೂ ಅಂಗಡಿಯ ವ್ಯಾಪಾರವಾದರೂ ಜೋರಾಗಿರಬೇಕಲ್ಲ, ಇಲ್ಲವಾದರೆ ಹರಿದ ಕಾಚಾಗಳನ್ನೇ ಧರಿಸಿಕೊಂಡು ಜನರು ಓಡಾಡುತ್ತಿದ್ದಾರೆಯೇ ಎಂಬುದು ನಿಮ್ಮ ಮುಂದಿನ ಪ್ರಶ್ನೆ ಆಗಿರಬಹುದು.  ಆದರೆ ಹೇಗೆ ತನಿಖೆ ಮಾಡುವುದು? ಪೋಲಿಸ್ ಮುಖ್ಯಸ್ಥರನ್ನು ಕೇಳಿದರೆ ಹೇಗೆ?

ಡಾಲರ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ವಿನೋದ್ ಗುಪ್ತಾ ಅವರು ಈ ಪರಿಸ್ಥಿತಿಗೆ ಮುಖ್ಯ ಕಾರಣ ಗ್ರಾಮೀಣ ದುಃಸ್ಥಿತಿ, ಎಲ್ಲೂ ಸಾಲ ಸಿಗದಂತಾಗಿರುವ ಪರಿಸ್ಥಿತಿ, ಬ್ಯಾಂಕುಗಳಲ್ಲಿ ಹೆಚ್ಚಾಗಿರುವ ಎನ್.ಪಿ.ಎ., ಹಾಗೂ ನಾನ್-ಬ್ಯಾಂಕಿಂಗ್ ಫೈನಾನ್ಶಿಯಲ್ ಇನ್ಸ್ಟಿಟ್ಯೂಷನ್ ಅವರ ಅನಾರೋಗ್ಯ ಎನ್ನುತ್ತಾರೆ. ಹೌದು, ಕಾಚಾ ಖರೀದಿಸಲು ಯಾವ ಬ್ಯಾಂಕ್ ತಾನೇ ಸಾಲ ಕೊಡುತ್ತದೆ ಹೇಳಿ. ಅಥವಾ ಬ್ಯಾಂಕುಗಳು ಎನಾದರೂ ಸಾಲಗಾರರ ಚಡ್ಡಿ-ಬನೀನನ್ನೂ ಕಿತ್ತುಕೊಂಡು ತಮ್ಮ ಸಾಲ ವಸೂಲು ಮಾಡುವ ಯೋಜನೆ ಹಾಕುತ್ತಿದ್ದಾರೇನೋ ಗೊತ್ತಿಲ್ಲ. ಹಾಗೇನಾದರೂ ಇದ್ದಲ್ಲಿ ಹರಾಜು ಹಾಕಿದ ಚಡ್ಡಿ-ಬನೀನು ನಮ್ಮ ಜನ ಕೊಂಡುಕೊಳ್ಳುತಾರೆಯೇ ಎಂಬುದೂ ಸಹ ಯಕ್ಷ ಪ್ರಶ್ನೆ.

ಈ ಚಡ್ಡಿ-ಬನೀನಿನ ವಾರ್ಷಿಕ (ಅಂದಾಜು) ಮಾರಾಟ ರೂ. 27,931 ಕೋಟಿ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಅಷ್ಟೇ ಅಲ್ಲ ಇದು ಪ್ರತಿವರ್ಷ 10% ವೃದ್ಧಿಗೊಳ್ಳುತ್ತಿದ್ದ ಕ್ಷೇತ್ರವಾಗಿದ್ದು ಮುಂದಿನ ದಶಕದಲ್ಲಿ ಇದು ರೂ. 74,258 ಕೋಟಿ ತಲುಪಬಹುದಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ. ಮುಂದಿನ ನಾಲ್ಕೂವರೆ ವರ್ಷಗಳಲ್ಲಿ ದೇಶದ ಜಿಡಿಪಿ ಐದು ಲಕ್ಷ ಕೋಟಿ ತಲುಪುತ್ತದೆ ಎಂದು ಪ್ರಧಾನ ಮಂತ್ರಿಗಳು ಭವಿಷ್ಯವಾಣಿ ನುಡಿದಿರುವಾಗ ಈ ಕುಸಿದಿರುವ ಮಾರಾಟ ಅಂಕಿ-ಅಂಶ ನಿಜಕ್ಕೂ ಆಘಾತಕಾರಿ ಎಂದೆನಿಸುತ್ತದೆ. ಇನ್ನು ಮುಂದೆ ಎಲ್ಲರೂ ಕನಿಷ್ಠ ಎರಡೆರಡು ಜೊತೆ ಚಡ್ಡಿ-ಬನೀನು ತೊಡಬೇಕೆಂಬ ಆದೇಶವೇನಾದರೂ ಹೊರಬಂದಲ್ಲಿ ಏನುಮಾಡುವುದು?

ಹಾಗಿರಲಾರದು ಏಕೆಂದರೆ ಆರ್ಥಿಕ ಒಳನೋಟ ಇರುವ ಸಂಸ್ಥೆ ಕ್ರೆಡಿಟ್-ಸ್ವಿಸ್ ಪೇಜ್ ಇಂಡಸ್ಟ್ರೀಸ್ ಅವರ ಲಾಭಾದಾಯವನ್ನು 9-11% ಕಡಿಮೆ ಮಾಡಿದೆ ಮತ್ತು ಕೋಟಕ್ ಇಕ್ವಿಟೀಸ್ ಅವರು ಕ್ಷೀಣಗೊಂಡಿರುವ ಕಂಪನಿಯ ಆದಾಯದ ಮೇರೆಗೆ ಶೇರು ಬೆಲೆಯನ್ನು 5-6%  ಕಡಿತಗೊಳಿಸಿದೆ.

ನಾನಾದರೂ ಇವೆಲ್ಲವನ್ನು ತಪ್ಪು ಮಾಹಿತಿ ಮತ್ತು ದೇಶದ ನಾಯಕತ್ವವನ್ನು ಕೆಟ್ಟದಾಗಿ ಬಿಂಬಿಸುವ ಹುನ್ನಾರ ಎಂದು ಭಾವಿಸುತ್ತೇನೆ ಏಕೆಂದರೆ ನೆನ್ನೆ ತಾನೇ ನಾನು ಅರ್ಧ ಡಜನ್ ಒಳಚಡ್ಡಿ ಬನೀನು ಕೊಂಡುಕೊಂಡಿದ್ದೇನೆ. ದೇಶದ ಆರ್ಥಿಕ ಸಂರಕ್ಷಣೆಯಲ್ಲಿ ನಿಮ್ಮ ಯೋಗದಾನವೂ ಇರಲಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....