Homeಎಕಾನಮಿಗಂಡಸರ ಒಳಚಡ್ಡಿ ಬನೀನಿನ ಮಾರಾಟ ಕ್ಷೀಣಗೊಂಡಿದ್ದು ಇದು ದೇಶದ ಆರ್ಥಿಕತೆ ದುರ್ಬಲಗೊಳ್ಳುತ್ತಿರುವುದರ ಲಕ್ಷಣ

ಗಂಡಸರ ಒಳಚಡ್ಡಿ ಬನೀನಿನ ಮಾರಾಟ ಕ್ಷೀಣಗೊಂಡಿದ್ದು ಇದು ದೇಶದ ಆರ್ಥಿಕತೆ ದುರ್ಬಲಗೊಳ್ಳುತ್ತಿರುವುದರ ಲಕ್ಷಣ

- Advertisement -
- Advertisement -

ಇದು ಬಹುಕಾಲ ಅಮೇರಿಕದ ಫೆಡರಲ್ ರಿಜರ್ವ್ ಮುಖ್ಯಸ್ಥರಾಗಿದ್ದ ಆಲನ್ ಗ್ರೀನ್-ಸ್ಪ್ಯಾನ್ ಅವರು 1970ರಲ್ಲಿ ನೀಡಿದ ಹೇಳಿಕೆ ಮತ್ತು ಅವರ ಪ್ರಕಾರ ಇದೊಂದು ಮುಖ್ಯ ಆರ್ಥಿಕ ಸೂಚ್ಯಾಂಕ ಎಂದು ತಿಳಿಸುತ್ತಾ, ಪ್ರತಿಷ್ಠಿತ ಗುಲಾಬಿ ಪತ್ರಿಕೆ ದಿ ಎಕನಾಮಿಕ್ ಟೈಂಸ್ ಇಂದು ವರದಿಮಾಡಿದೆ. ಜೂನ್ ತಿಂಗಳಿಗೆ ಮುಗಿದ ಈ ವರ್ಷದ ಎರಡನೆಯ ತ್ರೈಮಾಸಿಕ ಅಂಕಿ-ಅಂಶಗಳ ಪ್ರಕಾರ ಪೇಜ್ ಇಂಡಸ್ಟ್ರೀಸ್ ಅವರ ಜಾಕಿ ಬ್ರ್ಯಾಂಡಿನ ಮಾರಾಟ ಕೇವಲ 2% ವೃದ್ಧಿ ಕಂಡಿದ್ದರೆ, ಡಾಲರ್ ಮತ್ತು ವಿಐಪಿ ಅವರ ಮಾರಾಟ ತಲಾ 4% ಮತ್ತು 20% ಕಡಿಮೆ ಆಗಿದೆ ಹಾಗೂ ಲಕ್ಸ್ ಅವರ ಮಾರಾಟ ಮಂಕಾಗಿದೆ. “ಮಾರುಕಟ್ಟೆಯ ಈ ಕ್ಷೇತ್ರದ ಅತ್ಯಂತ ಒಳ್ಳೆಯ ಸಮಯವಂತೂ ಇದಲ್ಲ” ಎಂದು ಪೇಜ್ ಇಂಡಸ್ಟ್ರೀಸ್ ಅವರ ಸಿಇಒ ವೇದ್ಜಿ ಟಿಕು ತಿಳಿಸಿರುವುದಾಗಿ ಪತ್ರಿಕೆ ವರದಿ ಮಾಡಿದೆ.

ಹಾಗಾದರೆ ಗಂಡಸರು ಕಾಚಾ ಹಾಕುವುದನ್ನು ಬಿಟ್ಟಿದ್ದಾರೆಯೇ? ಎಂಬುದು ಹಲವರ ಆಶ್ಚರ್ಯಚಕಿತವಾದ ಪ್ರಶ್ನೆ ಆಗಿರಬಹುದು. ಜನರ ಬಳಿ ಖರ್ಚು ಮಾಡಲು ಹಣದ ಕೊರತೆಯಿಂದಾಗಿ ಇಂತಹ ವಸ್ತುಗಳ ಖರೀದಿಯನ್ನು ಅವರು ಮುಂದೂಡುತ್ತಿದ್ದಾರೆ ಎಂಬುದು ದೇಶದ ಆರ್ಥಿಕ ತಜ್ಞರ ಅಭಿಪ್ರಾಯ. ಹಾಗಾದರೆ ಬಹುತೇಕ ಲಾಂಡ್ರಿ ಬದಿಯಲ್ಲಿರುವ ರಫೂ ಅಂಗಡಿಯ ವ್ಯಾಪಾರವಾದರೂ ಜೋರಾಗಿರಬೇಕಲ್ಲ, ಇಲ್ಲವಾದರೆ ಹರಿದ ಕಾಚಾಗಳನ್ನೇ ಧರಿಸಿಕೊಂಡು ಜನರು ಓಡಾಡುತ್ತಿದ್ದಾರೆಯೇ ಎಂಬುದು ನಿಮ್ಮ ಮುಂದಿನ ಪ್ರಶ್ನೆ ಆಗಿರಬಹುದು.  ಆದರೆ ಹೇಗೆ ತನಿಖೆ ಮಾಡುವುದು? ಪೋಲಿಸ್ ಮುಖ್ಯಸ್ಥರನ್ನು ಕೇಳಿದರೆ ಹೇಗೆ?

ಡಾಲರ್ ಇಂಡಸ್ಟ್ರೀಸ್ ಮ್ಯಾನೇಜಿಂಗ್ ಡೈರೆಕ್ಟರ್ ವಿನೋದ್ ಗುಪ್ತಾ ಅವರು ಈ ಪರಿಸ್ಥಿತಿಗೆ ಮುಖ್ಯ ಕಾರಣ ಗ್ರಾಮೀಣ ದುಃಸ್ಥಿತಿ, ಎಲ್ಲೂ ಸಾಲ ಸಿಗದಂತಾಗಿರುವ ಪರಿಸ್ಥಿತಿ, ಬ್ಯಾಂಕುಗಳಲ್ಲಿ ಹೆಚ್ಚಾಗಿರುವ ಎನ್.ಪಿ.ಎ., ಹಾಗೂ ನಾನ್-ಬ್ಯಾಂಕಿಂಗ್ ಫೈನಾನ್ಶಿಯಲ್ ಇನ್ಸ್ಟಿಟ್ಯೂಷನ್ ಅವರ ಅನಾರೋಗ್ಯ ಎನ್ನುತ್ತಾರೆ. ಹೌದು, ಕಾಚಾ ಖರೀದಿಸಲು ಯಾವ ಬ್ಯಾಂಕ್ ತಾನೇ ಸಾಲ ಕೊಡುತ್ತದೆ ಹೇಳಿ. ಅಥವಾ ಬ್ಯಾಂಕುಗಳು ಎನಾದರೂ ಸಾಲಗಾರರ ಚಡ್ಡಿ-ಬನೀನನ್ನೂ ಕಿತ್ತುಕೊಂಡು ತಮ್ಮ ಸಾಲ ವಸೂಲು ಮಾಡುವ ಯೋಜನೆ ಹಾಕುತ್ತಿದ್ದಾರೇನೋ ಗೊತ್ತಿಲ್ಲ. ಹಾಗೇನಾದರೂ ಇದ್ದಲ್ಲಿ ಹರಾಜು ಹಾಕಿದ ಚಡ್ಡಿ-ಬನೀನು ನಮ್ಮ ಜನ ಕೊಂಡುಕೊಳ್ಳುತಾರೆಯೇ ಎಂಬುದೂ ಸಹ ಯಕ್ಷ ಪ್ರಶ್ನೆ.

ಈ ಚಡ್ಡಿ-ಬನೀನಿನ ವಾರ್ಷಿಕ (ಅಂದಾಜು) ಮಾರಾಟ ರೂ. 27,931 ಕೋಟಿ ಎಂದರೆ ನಿಮಗೆ ಆಶ್ಚರ್ಯವಾಗಬಹುದು. ಅಷ್ಟೇ ಅಲ್ಲ ಇದು ಪ್ರತಿವರ್ಷ 10% ವೃದ್ಧಿಗೊಳ್ಳುತ್ತಿದ್ದ ಕ್ಷೇತ್ರವಾಗಿದ್ದು ಮುಂದಿನ ದಶಕದಲ್ಲಿ ಇದು ರೂ. 74,258 ಕೋಟಿ ತಲುಪಬಹುದಾಗಿದೆ ಎಂದು ಪತ್ರಿಕೆ ವರದಿ ಮಾಡಿದೆ. ಮುಂದಿನ ನಾಲ್ಕೂವರೆ ವರ್ಷಗಳಲ್ಲಿ ದೇಶದ ಜಿಡಿಪಿ ಐದು ಲಕ್ಷ ಕೋಟಿ ತಲುಪುತ್ತದೆ ಎಂದು ಪ್ರಧಾನ ಮಂತ್ರಿಗಳು ಭವಿಷ್ಯವಾಣಿ ನುಡಿದಿರುವಾಗ ಈ ಕುಸಿದಿರುವ ಮಾರಾಟ ಅಂಕಿ-ಅಂಶ ನಿಜಕ್ಕೂ ಆಘಾತಕಾರಿ ಎಂದೆನಿಸುತ್ತದೆ. ಇನ್ನು ಮುಂದೆ ಎಲ್ಲರೂ ಕನಿಷ್ಠ ಎರಡೆರಡು ಜೊತೆ ಚಡ್ಡಿ-ಬನೀನು ತೊಡಬೇಕೆಂಬ ಆದೇಶವೇನಾದರೂ ಹೊರಬಂದಲ್ಲಿ ಏನುಮಾಡುವುದು?

ಹಾಗಿರಲಾರದು ಏಕೆಂದರೆ ಆರ್ಥಿಕ ಒಳನೋಟ ಇರುವ ಸಂಸ್ಥೆ ಕ್ರೆಡಿಟ್-ಸ್ವಿಸ್ ಪೇಜ್ ಇಂಡಸ್ಟ್ರೀಸ್ ಅವರ ಲಾಭಾದಾಯವನ್ನು 9-11% ಕಡಿಮೆ ಮಾಡಿದೆ ಮತ್ತು ಕೋಟಕ್ ಇಕ್ವಿಟೀಸ್ ಅವರು ಕ್ಷೀಣಗೊಂಡಿರುವ ಕಂಪನಿಯ ಆದಾಯದ ಮೇರೆಗೆ ಶೇರು ಬೆಲೆಯನ್ನು 5-6%  ಕಡಿತಗೊಳಿಸಿದೆ.

ನಾನಾದರೂ ಇವೆಲ್ಲವನ್ನು ತಪ್ಪು ಮಾಹಿತಿ ಮತ್ತು ದೇಶದ ನಾಯಕತ್ವವನ್ನು ಕೆಟ್ಟದಾಗಿ ಬಿಂಬಿಸುವ ಹುನ್ನಾರ ಎಂದು ಭಾವಿಸುತ್ತೇನೆ ಏಕೆಂದರೆ ನೆನ್ನೆ ತಾನೇ ನಾನು ಅರ್ಧ ಡಜನ್ ಒಳಚಡ್ಡಿ ಬನೀನು ಕೊಂಡುಕೊಂಡಿದ್ದೇನೆ. ದೇಶದ ಆರ್ಥಿಕ ಸಂರಕ್ಷಣೆಯಲ್ಲಿ ನಿಮ್ಮ ಯೋಗದಾನವೂ ಇರಲಿ.

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...