Homeಕರ್ನಾಟಕಅಮಾಯಕ ಇದ್ರೀಶ್ ಕೊಲೆ: ಸಂಘಪರಿವಾರದ ಗೂಂಡಾಗಿರಿ ವಿರುದ್ಧ ಜನಾಕ್ರೋಶ

ಅಮಾಯಕ ಇದ್ರೀಶ್ ಕೊಲೆ: ಸಂಘಪರಿವಾರದ ಗೂಂಡಾಗಿರಿ ವಿರುದ್ಧ ಜನಾಕ್ರೋಶ

- Advertisement -
- Advertisement -

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಇದ್ರೀಶ್‌ ಪಾಷ ಅವರ ಹತ್ಯೆಯಾಗಿರುವುದಾಗಿ ವರದಿಯಾಗಿದೆ. ಗೋರಕ್ಷಣೆ ಹೆಸರಲ್ಲಿ ಸಂಘಪರಿವಾರದ ಮುಖಂಡ ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ‌ಇದ್ರೀಶ್ ಅವರನ್ನು ಕೊಲ್ಲಲಾಗಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಬ್ಬಿದ ಬಳಿಕ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹಿಂದುತ್ವ ಗೂಂಡಾಗಿರಿಯನ್ನು ಸಾರ್ವಜನಿಕರು ಖಂಡಿಸಿದ್ದಾರೆ.

ರಕ್ಷಾ ರಾಮಯ್ಯ ಬ್ರಿಗೇಡ್‌ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊವೊಂದು ಹಂಚಿಕೊಳ್ಳಲಾಗಿದೆ. ಅದರಲ್ಲಿ ಪುನೀತ್‌ ಕೆರೆಹಳ್ಳಿ ಬ್ಯಾಟ್‌ವೊಂದನ್ನು ಹಿಡಿದು ರಸ್ತೆಯಲ್ಲಿ ತಿರುಗುತ್ತಿರುವುದನ್ನು ಕಾಣಬಹುದು. “ಇದೊಂದೇ ಪ್ರೈಮರಿ ಸಾಕ್ಷಿ ಸಾಕು, ಈ ರೀತಿ ರಸ್ತೆಯಲ್ಲಿ ಬ್ಯಾಟ್ ಹಿಡಿದು ನಿಲ್ಲಲು ಇವನು ಪೊಲೀಸಾ? ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ರೌಡಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರಿಂದ ನೈತಿಕ ಪೊಲೀಸ್ ಗಿರಿ, ಮಸ್ಲಿಮ್ ಯುವಕ ಬಲಿ” ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಗಿದೆ.

ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು ಪ್ರತಿಕ್ರಿಯಿಸಿ, “ಸಂಘ ಪರಿವಾರದ ಗೋರಕ್ಷಕ ಗೂಂಡಾಗಳಿಂದ ಹತ್ಯೆಯಾದ ಮಂಡ್ಯದ ಗುತ್ತಲು ನಿವಾಸಿ ಇದ್ರಿಶ್ ಪಾಶಾ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಮತ್ತು ಆತನ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಆರೆಸ್ಸೆಸ್ ಸಂಘ ಪರಿವಾರದ ಗೂಂಡಾ ಪಡೆ ಗೋರಕ್ಷಣೆ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ, ಬಡ ಮುಸಲ್ಮಾನರನ್ನು ಕೊಲ್ಲುವ‌ ಕ್ರಿಮಿನಲ್ ಕೃತ್ಯದಲ್ಲಿ ನಿರತವಾಗಿದೆ. ರಾಜ್ಯದ ಬಿಜೆಪಿ ಸರ್ಕಾರ ಇಂತಹ ಗೂಂಡಾಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದೆ. ಇದರಿಂದ ಅಮಾಯಕ ಜನತೆ ಪ್ರಾಣ ಕಳೆದುಕೊಂಡು ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಇಂತಹ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ ಒತ್ತಾಯಿಸುತ್ತದೆ” ಎಂದಿದ್ದಾರೆ.

“ಕನಕಪುರ ತಾಲೂಕಿನ ಸಾತನೂರು ಬಳಿ ಗೋರಕ್ಷಕ ಗೂಂಡಾ ಪಡೆ ಇದ್ರಿಶ್ ಪಾಷಾ ಅವರನ್ನು ಕಾಂಪೌಂಡ್ ಒಳಗೆ ಸೇರಿಸಿಕೊಂಡು ವಿದ್ಯುತ್ ಶಾಕ್ ನೀಡುವ ಮೂಲಕ ಚಿತ್ರಹಿಂಸೆ ನೀಡಿ ಕೊಲೆ ಮಾಡಿದೆ. ಮೇಲ್ನೋಟಕ್ಕೆ ಈ ಕೊಲೆ ನಡೆಸಿರುವುದು ಆರೆಸ್ಸೆಸ್ ಸಂಘಟನೆಗೆ ಸೇರಿದ ರಾಷ್ಟ್ರ ರಕ್ಷಣಾ ಪಡೆಯ ಪುನಿತ್ ಕೆರೆಹಳ್ಳಿ ನೇತೃತ್ವದ ಗೂಂಡಾಪಡೆ ಎಂದು ಕಾಣುತ್ತಿದೆ. ಇದ್ರಿಶ್ ಪಾಷಾ ಜೊತೆ ಇದ್ದ ಇನ್ನಿಬ್ಬರು ಹೇಗೋ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಇಲ್ಲದಿದ್ದರೆ ಅವರೂ ಕೊಲೆಯಾಗುತ್ತಿದ್ದರು. ಇದಕ್ಕೆ ಕಾರಣವಾದ ಕ್ರಿಮಿನಲ್‌ಗಳ ರಕ್ಷಣೆಗೆ ಬೊಮ್ಮಾಯಿ ಸರ್ಕಾರ ಮುಂದಾಗಬಾರದು” ಎಂದು ಒತ್ತಾಯಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅದರಲ್ಲೂ ರೈತ ವಿರೋಧಿ ಕೃಷಿ ವಿರೋಧಿ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದ ನಂತರ ದನದ ವ್ಯಾಪಾರಿಗಳ ಮೇಲೆ ದಾಳಿಗಳು ವಿಪರೀತ ಹೆಚ್ಚಾಗಿವೆ. ಗೋರಕ್ಷಕರ ಹೆಸರಿನ ಗೂಂಡಾಗಳು ದಾಳಿ ಮಾಡಿ ಹಲ್ಲೆ ನಡೆಸುವಾಗ ರಾಜ್ಯ ಸರ್ಕಾರದ ಪೊಲೀಸರು ಒಂದೋ ಮೂಕ ಪ್ರೇಕ್ಷಕರಾಗುವುದು ಇಲ್ಲವೇ ದಾಳಿಕೋರರ ಜೊತೆ ಕೈಜೋಡಿಸುವುದು ನಡೆದಿದೆ. ಇದರಿಂದಾಗಿ ದಾಳಿ, ಹಲ್ಲೆ ನಡೆಸುವವರಿಗೆ ಹೆಚ್ಚಿನ ಬಲ ಬಂದಂತಾಗಿದೆ. ಇಂತಹ ವ್ಯಕ್ತಿಗಳು ಮತ್ತು ಶಕ್ತಿಗಳ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕರೆಂಟ್ ಶಾಕ್ ನೀಡಿ ಕೊಂದಿದ್ದಾರೆಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅದನ್ನು ಸಾಮಾಜಿಕ ಹೋರಾಟಗಾರ ದೀಪು  ಅವರು ಹಂಚಿಕೊಂಡಿದ್ದು, “ಗೋರಕ್ಷಣೆ ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿಕೊಂಡು ಅಲ್ಪಸಂಖ್ಯಾತರನ್ನು ಕೊಂದ ಪುನೀತ್ ಕೆರೆಹಳ್ಳಿ ಎಂಬ ವಿಕೃತ ಕರೆಂಟ್ ಶಾಕ್ ಕೊಡುತ್ತಿರುವ ದೌರ್ಜನ್ಯದ ವಿಡಿಯೋವಿದು” ಎಂದು ತಿಳಿಸಿದ್ದಾರೆ.

ಲೇಖಕ, ಬರಹಗಾರ ರಾ.ಚಿಂತನ್‌ ಪ್ರತಿಕ್ರಿಯಿಸಿ, “ಈ ಧರ್ಮ ರಕ್ಷಣೆಯ ‘ತೀವ್ರ’ವಾದ ಕಡೆಗೆ ಇಲ್ಲಿಗೆ ಹೋಗಿ ಮುಟ್ಟುತ್ತದೆ. ಇವರನ್ನು ಹಿಂಬಾಲಿಸೋ, ಬೆಂಬಲಿಸೋ, ಎಲ್ಲರೂ ಕೊಲೆಗಡುಕರೇ. ಗೋಮಾಂಸ ರಫ್ತು ಮಾಡುತ್ತಿರುವ ಬಿಜೆಪಿಗೆ ಬಹುಪರಾಕ್ ಹಾಕುವ ಈ ಕಟುಕರೇ ಅದೇ ಗೋಮಾಂಸದ ವಿಚಾರದಲ್ಲಿ ಕೊಲೆಗಳನ್ನು ಮಾಡುತ್ತಿದ್ದಾರೆ. ಇದನ್ನು ತಿಳಿಹೇಳುವ ನಮ್ಮ ಮಾತು ಇವರಿಗೆ ಅಪಥ್ಯವಾಗುತ್ತದೆ. ಮುಸಲ್ಮಾನ ಸಮಾಜ ಇಂತಹ ಪುಂಡರ ಬೆನ್ನುಮೂಳೆ ಮುರಿಯದಿದ್ದರೇ ವಿನಾಕಾರಣ ಹೀಗೆ ಕೊಲೆಯಾಗಬೇಕಾದೀತು. ಅಹಿಂಸೆ ನಮ್ಮ ಮಂತ್ರವಾಗಲಿ, ಆದರೆ ಆತ್ಮರಕ್ಷಣೆಗೆ ಹೆದರಬೇಡಿ. ಇದ್ರಿಸ್ ಸಾವಿಗೆ ಸಂತಾಪಗಳನ್ನು ಸೂಚಿಸುತ್ತೇನೆ, ಪೊಲೀಸರು ತಾರತಮ್ಯ ಮಾಡದೇ ಆರೋಪಿಗಳ ಹೆಡೆಮುರಿ ಕಟ್ಟಲಿ” ಎಂದು ಆಶಿಸಿದ್ದಾರೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್‌ ಕಾಟಿಪಳ್ಳ ಅವರು ಪ್ರತಿಕ್ರಿಯಿಸಿ, “ಪುನೀತ್ ಕೆರೆಹಳ್ಳಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿ. ಸದ್ಯದ ಕರ್ನಾಟಕದ ರಾಜಕೀಯ, ಸಾಮಾಜಿಕ ಸಂದರ್ಭಕ್ಕೆ ಅದುವೇ ಸರಿಯಾದದ್ದು. ಬಿಜೆಪಿಯ ರಾಜಕಾರಣದ ಸಮರ್ಥ ಪ್ರತಿನಿಧಿ, ನೈಜ ಮುಖ ಆತ. ಇದಕ್ಕಿಂತ ಹೆಚ್ಚು ಏನು ಹೇಳಲು ಸಾಧ್ಯ? ಇಂಥವನನ್ನು ವರ್ಷಗಳಿಂದ ಸಹಿಸಿಕೊಂಡದ್ದಕ್ಕೆ ಪೊಲೀಸ್ ಇಲಾಖೆಯ ಮರ್ಯಾದಸ್ಥರು ನಿವೃತ್ತರಾಗುವುದು ಲೇಸು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...