Homeಕರ್ನಾಟಕಅಮಾಯಕ ಇದ್ರೀಶ್ ಕೊಲೆ: ಸಂಘಪರಿವಾರದ ಗೂಂಡಾಗಿರಿ ವಿರುದ್ಧ ಜನಾಕ್ರೋಶ

ಅಮಾಯಕ ಇದ್ರೀಶ್ ಕೊಲೆ: ಸಂಘಪರಿವಾರದ ಗೂಂಡಾಗಿರಿ ವಿರುದ್ಧ ಜನಾಕ್ರೋಶ

- Advertisement -
- Advertisement -

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಇದ್ರೀಶ್‌ ಪಾಷ ಅವರ ಹತ್ಯೆಯಾಗಿರುವುದಾಗಿ ವರದಿಯಾಗಿದೆ. ಗೋರಕ್ಷಣೆ ಹೆಸರಲ್ಲಿ ಸಂಘಪರಿವಾರದ ಮುಖಂಡ ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ‌ಇದ್ರೀಶ್ ಅವರನ್ನು ಕೊಲ್ಲಲಾಗಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಬ್ಬಿದ ಬಳಿಕ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹಿಂದುತ್ವ ಗೂಂಡಾಗಿರಿಯನ್ನು ಸಾರ್ವಜನಿಕರು ಖಂಡಿಸಿದ್ದಾರೆ.

ರಕ್ಷಾ ರಾಮಯ್ಯ ಬ್ರಿಗೇಡ್‌ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊವೊಂದು ಹಂಚಿಕೊಳ್ಳಲಾಗಿದೆ. ಅದರಲ್ಲಿ ಪುನೀತ್‌ ಕೆರೆಹಳ್ಳಿ ಬ್ಯಾಟ್‌ವೊಂದನ್ನು ಹಿಡಿದು ರಸ್ತೆಯಲ್ಲಿ ತಿರುಗುತ್ತಿರುವುದನ್ನು ಕಾಣಬಹುದು. “ಇದೊಂದೇ ಪ್ರೈಮರಿ ಸಾಕ್ಷಿ ಸಾಕು, ಈ ರೀತಿ ರಸ್ತೆಯಲ್ಲಿ ಬ್ಯಾಟ್ ಹಿಡಿದು ನಿಲ್ಲಲು ಇವನು ಪೊಲೀಸಾ? ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ರೌಡಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರಿಂದ ನೈತಿಕ ಪೊಲೀಸ್ ಗಿರಿ, ಮಸ್ಲಿಮ್ ಯುವಕ ಬಲಿ” ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಗಿದೆ.

ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು ಪ್ರತಿಕ್ರಿಯಿಸಿ, “ಸಂಘ ಪರಿವಾರದ ಗೋರಕ್ಷಕ ಗೂಂಡಾಗಳಿಂದ ಹತ್ಯೆಯಾದ ಮಂಡ್ಯದ ಗುತ್ತಲು ನಿವಾಸಿ ಇದ್ರಿಶ್ ಪಾಶಾ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಮತ್ತು ಆತನ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಆರೆಸ್ಸೆಸ್ ಸಂಘ ಪರಿವಾರದ ಗೂಂಡಾ ಪಡೆ ಗೋರಕ್ಷಣೆ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ, ಬಡ ಮುಸಲ್ಮಾನರನ್ನು ಕೊಲ್ಲುವ‌ ಕ್ರಿಮಿನಲ್ ಕೃತ್ಯದಲ್ಲಿ ನಿರತವಾಗಿದೆ. ರಾಜ್ಯದ ಬಿಜೆಪಿ ಸರ್ಕಾರ ಇಂತಹ ಗೂಂಡಾಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದೆ. ಇದರಿಂದ ಅಮಾಯಕ ಜನತೆ ಪ್ರಾಣ ಕಳೆದುಕೊಂಡು ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಇಂತಹ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ ಒತ್ತಾಯಿಸುತ್ತದೆ” ಎಂದಿದ್ದಾರೆ.

“ಕನಕಪುರ ತಾಲೂಕಿನ ಸಾತನೂರು ಬಳಿ ಗೋರಕ್ಷಕ ಗೂಂಡಾ ಪಡೆ ಇದ್ರಿಶ್ ಪಾಷಾ ಅವರನ್ನು ಕಾಂಪೌಂಡ್ ಒಳಗೆ ಸೇರಿಸಿಕೊಂಡು ವಿದ್ಯುತ್ ಶಾಕ್ ನೀಡುವ ಮೂಲಕ ಚಿತ್ರಹಿಂಸೆ ನೀಡಿ ಕೊಲೆ ಮಾಡಿದೆ. ಮೇಲ್ನೋಟಕ್ಕೆ ಈ ಕೊಲೆ ನಡೆಸಿರುವುದು ಆರೆಸ್ಸೆಸ್ ಸಂಘಟನೆಗೆ ಸೇರಿದ ರಾಷ್ಟ್ರ ರಕ್ಷಣಾ ಪಡೆಯ ಪುನಿತ್ ಕೆರೆಹಳ್ಳಿ ನೇತೃತ್ವದ ಗೂಂಡಾಪಡೆ ಎಂದು ಕಾಣುತ್ತಿದೆ. ಇದ್ರಿಶ್ ಪಾಷಾ ಜೊತೆ ಇದ್ದ ಇನ್ನಿಬ್ಬರು ಹೇಗೋ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಇಲ್ಲದಿದ್ದರೆ ಅವರೂ ಕೊಲೆಯಾಗುತ್ತಿದ್ದರು. ಇದಕ್ಕೆ ಕಾರಣವಾದ ಕ್ರಿಮಿನಲ್‌ಗಳ ರಕ್ಷಣೆಗೆ ಬೊಮ್ಮಾಯಿ ಸರ್ಕಾರ ಮುಂದಾಗಬಾರದು” ಎಂದು ಒತ್ತಾಯಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅದರಲ್ಲೂ ರೈತ ವಿರೋಧಿ ಕೃಷಿ ವಿರೋಧಿ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದ ನಂತರ ದನದ ವ್ಯಾಪಾರಿಗಳ ಮೇಲೆ ದಾಳಿಗಳು ವಿಪರೀತ ಹೆಚ್ಚಾಗಿವೆ. ಗೋರಕ್ಷಕರ ಹೆಸರಿನ ಗೂಂಡಾಗಳು ದಾಳಿ ಮಾಡಿ ಹಲ್ಲೆ ನಡೆಸುವಾಗ ರಾಜ್ಯ ಸರ್ಕಾರದ ಪೊಲೀಸರು ಒಂದೋ ಮೂಕ ಪ್ರೇಕ್ಷಕರಾಗುವುದು ಇಲ್ಲವೇ ದಾಳಿಕೋರರ ಜೊತೆ ಕೈಜೋಡಿಸುವುದು ನಡೆದಿದೆ. ಇದರಿಂದಾಗಿ ದಾಳಿ, ಹಲ್ಲೆ ನಡೆಸುವವರಿಗೆ ಹೆಚ್ಚಿನ ಬಲ ಬಂದಂತಾಗಿದೆ. ಇಂತಹ ವ್ಯಕ್ತಿಗಳು ಮತ್ತು ಶಕ್ತಿಗಳ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕರೆಂಟ್ ಶಾಕ್ ನೀಡಿ ಕೊಂದಿದ್ದಾರೆಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅದನ್ನು ಸಾಮಾಜಿಕ ಹೋರಾಟಗಾರ ದೀಪು  ಅವರು ಹಂಚಿಕೊಂಡಿದ್ದು, “ಗೋರಕ್ಷಣೆ ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿಕೊಂಡು ಅಲ್ಪಸಂಖ್ಯಾತರನ್ನು ಕೊಂದ ಪುನೀತ್ ಕೆರೆಹಳ್ಳಿ ಎಂಬ ವಿಕೃತ ಕರೆಂಟ್ ಶಾಕ್ ಕೊಡುತ್ತಿರುವ ದೌರ್ಜನ್ಯದ ವಿಡಿಯೋವಿದು” ಎಂದು ತಿಳಿಸಿದ್ದಾರೆ.

ಲೇಖಕ, ಬರಹಗಾರ ರಾ.ಚಿಂತನ್‌ ಪ್ರತಿಕ್ರಿಯಿಸಿ, “ಈ ಧರ್ಮ ರಕ್ಷಣೆಯ ‘ತೀವ್ರ’ವಾದ ಕಡೆಗೆ ಇಲ್ಲಿಗೆ ಹೋಗಿ ಮುಟ್ಟುತ್ತದೆ. ಇವರನ್ನು ಹಿಂಬಾಲಿಸೋ, ಬೆಂಬಲಿಸೋ, ಎಲ್ಲರೂ ಕೊಲೆಗಡುಕರೇ. ಗೋಮಾಂಸ ರಫ್ತು ಮಾಡುತ್ತಿರುವ ಬಿಜೆಪಿಗೆ ಬಹುಪರಾಕ್ ಹಾಕುವ ಈ ಕಟುಕರೇ ಅದೇ ಗೋಮಾಂಸದ ವಿಚಾರದಲ್ಲಿ ಕೊಲೆಗಳನ್ನು ಮಾಡುತ್ತಿದ್ದಾರೆ. ಇದನ್ನು ತಿಳಿಹೇಳುವ ನಮ್ಮ ಮಾತು ಇವರಿಗೆ ಅಪಥ್ಯವಾಗುತ್ತದೆ. ಮುಸಲ್ಮಾನ ಸಮಾಜ ಇಂತಹ ಪುಂಡರ ಬೆನ್ನುಮೂಳೆ ಮುರಿಯದಿದ್ದರೇ ವಿನಾಕಾರಣ ಹೀಗೆ ಕೊಲೆಯಾಗಬೇಕಾದೀತು. ಅಹಿಂಸೆ ನಮ್ಮ ಮಂತ್ರವಾಗಲಿ, ಆದರೆ ಆತ್ಮರಕ್ಷಣೆಗೆ ಹೆದರಬೇಡಿ. ಇದ್ರಿಸ್ ಸಾವಿಗೆ ಸಂತಾಪಗಳನ್ನು ಸೂಚಿಸುತ್ತೇನೆ, ಪೊಲೀಸರು ತಾರತಮ್ಯ ಮಾಡದೇ ಆರೋಪಿಗಳ ಹೆಡೆಮುರಿ ಕಟ್ಟಲಿ” ಎಂದು ಆಶಿಸಿದ್ದಾರೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್‌ ಕಾಟಿಪಳ್ಳ ಅವರು ಪ್ರತಿಕ್ರಿಯಿಸಿ, “ಪುನೀತ್ ಕೆರೆಹಳ್ಳಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿ. ಸದ್ಯದ ಕರ್ನಾಟಕದ ರಾಜಕೀಯ, ಸಾಮಾಜಿಕ ಸಂದರ್ಭಕ್ಕೆ ಅದುವೇ ಸರಿಯಾದದ್ದು. ಬಿಜೆಪಿಯ ರಾಜಕಾರಣದ ಸಮರ್ಥ ಪ್ರತಿನಿಧಿ, ನೈಜ ಮುಖ ಆತ. ಇದಕ್ಕಿಂತ ಹೆಚ್ಚು ಏನು ಹೇಳಲು ಸಾಧ್ಯ? ಇಂಥವನನ್ನು ವರ್ಷಗಳಿಂದ ಸಹಿಸಿಕೊಂಡದ್ದಕ್ಕೆ ಪೊಲೀಸ್ ಇಲಾಖೆಯ ಮರ್ಯಾದಸ್ಥರು ನಿವೃತ್ತರಾಗುವುದು ಲೇಸು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...