Homeಕರ್ನಾಟಕಅಮಾಯಕ ಇದ್ರೀಶ್ ಕೊಲೆ: ಸಂಘಪರಿವಾರದ ಗೂಂಡಾಗಿರಿ ವಿರುದ್ಧ ಜನಾಕ್ರೋಶ

ಅಮಾಯಕ ಇದ್ರೀಶ್ ಕೊಲೆ: ಸಂಘಪರಿವಾರದ ಗೂಂಡಾಗಿರಿ ವಿರುದ್ಧ ಜನಾಕ್ರೋಶ

- Advertisement -
- Advertisement -

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಇದ್ರೀಶ್‌ ಪಾಷ ಅವರ ಹತ್ಯೆಯಾಗಿರುವುದಾಗಿ ವರದಿಯಾಗಿದೆ. ಗೋರಕ್ಷಣೆ ಹೆಸರಲ್ಲಿ ಸಂಘಪರಿವಾರದ ಮುಖಂಡ ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ‌ಇದ್ರೀಶ್ ಅವರನ್ನು ಕೊಲ್ಲಲಾಗಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಬ್ಬಿದ ಬಳಿಕ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹಿಂದುತ್ವ ಗೂಂಡಾಗಿರಿಯನ್ನು ಸಾರ್ವಜನಿಕರು ಖಂಡಿಸಿದ್ದಾರೆ.

ರಕ್ಷಾ ರಾಮಯ್ಯ ಬ್ರಿಗೇಡ್‌ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊವೊಂದು ಹಂಚಿಕೊಳ್ಳಲಾಗಿದೆ. ಅದರಲ್ಲಿ ಪುನೀತ್‌ ಕೆರೆಹಳ್ಳಿ ಬ್ಯಾಟ್‌ವೊಂದನ್ನು ಹಿಡಿದು ರಸ್ತೆಯಲ್ಲಿ ತಿರುಗುತ್ತಿರುವುದನ್ನು ಕಾಣಬಹುದು. “ಇದೊಂದೇ ಪ್ರೈಮರಿ ಸಾಕ್ಷಿ ಸಾಕು, ಈ ರೀತಿ ರಸ್ತೆಯಲ್ಲಿ ಬ್ಯಾಟ್ ಹಿಡಿದು ನಿಲ್ಲಲು ಇವನು ಪೊಲೀಸಾ? ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ರೌಡಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರಿಂದ ನೈತಿಕ ಪೊಲೀಸ್ ಗಿರಿ, ಮಸ್ಲಿಮ್ ಯುವಕ ಬಲಿ” ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಗಿದೆ.

ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು ಪ್ರತಿಕ್ರಿಯಿಸಿ, “ಸಂಘ ಪರಿವಾರದ ಗೋರಕ್ಷಕ ಗೂಂಡಾಗಳಿಂದ ಹತ್ಯೆಯಾದ ಮಂಡ್ಯದ ಗುತ್ತಲು ನಿವಾಸಿ ಇದ್ರಿಶ್ ಪಾಶಾ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಮತ್ತು ಆತನ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಆರೆಸ್ಸೆಸ್ ಸಂಘ ಪರಿವಾರದ ಗೂಂಡಾ ಪಡೆ ಗೋರಕ್ಷಣೆ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ, ಬಡ ಮುಸಲ್ಮಾನರನ್ನು ಕೊಲ್ಲುವ‌ ಕ್ರಿಮಿನಲ್ ಕೃತ್ಯದಲ್ಲಿ ನಿರತವಾಗಿದೆ. ರಾಜ್ಯದ ಬಿಜೆಪಿ ಸರ್ಕಾರ ಇಂತಹ ಗೂಂಡಾಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದೆ. ಇದರಿಂದ ಅಮಾಯಕ ಜನತೆ ಪ್ರಾಣ ಕಳೆದುಕೊಂಡು ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಇಂತಹ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ ಒತ್ತಾಯಿಸುತ್ತದೆ” ಎಂದಿದ್ದಾರೆ.

“ಕನಕಪುರ ತಾಲೂಕಿನ ಸಾತನೂರು ಬಳಿ ಗೋರಕ್ಷಕ ಗೂಂಡಾ ಪಡೆ ಇದ್ರಿಶ್ ಪಾಷಾ ಅವರನ್ನು ಕಾಂಪೌಂಡ್ ಒಳಗೆ ಸೇರಿಸಿಕೊಂಡು ವಿದ್ಯುತ್ ಶಾಕ್ ನೀಡುವ ಮೂಲಕ ಚಿತ್ರಹಿಂಸೆ ನೀಡಿ ಕೊಲೆ ಮಾಡಿದೆ. ಮೇಲ್ನೋಟಕ್ಕೆ ಈ ಕೊಲೆ ನಡೆಸಿರುವುದು ಆರೆಸ್ಸೆಸ್ ಸಂಘಟನೆಗೆ ಸೇರಿದ ರಾಷ್ಟ್ರ ರಕ್ಷಣಾ ಪಡೆಯ ಪುನಿತ್ ಕೆರೆಹಳ್ಳಿ ನೇತೃತ್ವದ ಗೂಂಡಾಪಡೆ ಎಂದು ಕಾಣುತ್ತಿದೆ. ಇದ್ರಿಶ್ ಪಾಷಾ ಜೊತೆ ಇದ್ದ ಇನ್ನಿಬ್ಬರು ಹೇಗೋ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಇಲ್ಲದಿದ್ದರೆ ಅವರೂ ಕೊಲೆಯಾಗುತ್ತಿದ್ದರು. ಇದಕ್ಕೆ ಕಾರಣವಾದ ಕ್ರಿಮಿನಲ್‌ಗಳ ರಕ್ಷಣೆಗೆ ಬೊಮ್ಮಾಯಿ ಸರ್ಕಾರ ಮುಂದಾಗಬಾರದು” ಎಂದು ಒತ್ತಾಯಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅದರಲ್ಲೂ ರೈತ ವಿರೋಧಿ ಕೃಷಿ ವಿರೋಧಿ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದ ನಂತರ ದನದ ವ್ಯಾಪಾರಿಗಳ ಮೇಲೆ ದಾಳಿಗಳು ವಿಪರೀತ ಹೆಚ್ಚಾಗಿವೆ. ಗೋರಕ್ಷಕರ ಹೆಸರಿನ ಗೂಂಡಾಗಳು ದಾಳಿ ಮಾಡಿ ಹಲ್ಲೆ ನಡೆಸುವಾಗ ರಾಜ್ಯ ಸರ್ಕಾರದ ಪೊಲೀಸರು ಒಂದೋ ಮೂಕ ಪ್ರೇಕ್ಷಕರಾಗುವುದು ಇಲ್ಲವೇ ದಾಳಿಕೋರರ ಜೊತೆ ಕೈಜೋಡಿಸುವುದು ನಡೆದಿದೆ. ಇದರಿಂದಾಗಿ ದಾಳಿ, ಹಲ್ಲೆ ನಡೆಸುವವರಿಗೆ ಹೆಚ್ಚಿನ ಬಲ ಬಂದಂತಾಗಿದೆ. ಇಂತಹ ವ್ಯಕ್ತಿಗಳು ಮತ್ತು ಶಕ್ತಿಗಳ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕರೆಂಟ್ ಶಾಕ್ ನೀಡಿ ಕೊಂದಿದ್ದಾರೆಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅದನ್ನು ಸಾಮಾಜಿಕ ಹೋರಾಟಗಾರ ದೀಪು  ಅವರು ಹಂಚಿಕೊಂಡಿದ್ದು, “ಗೋರಕ್ಷಣೆ ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿಕೊಂಡು ಅಲ್ಪಸಂಖ್ಯಾತರನ್ನು ಕೊಂದ ಪುನೀತ್ ಕೆರೆಹಳ್ಳಿ ಎಂಬ ವಿಕೃತ ಕರೆಂಟ್ ಶಾಕ್ ಕೊಡುತ್ತಿರುವ ದೌರ್ಜನ್ಯದ ವಿಡಿಯೋವಿದು” ಎಂದು ತಿಳಿಸಿದ್ದಾರೆ.

ಲೇಖಕ, ಬರಹಗಾರ ರಾ.ಚಿಂತನ್‌ ಪ್ರತಿಕ್ರಿಯಿಸಿ, “ಈ ಧರ್ಮ ರಕ್ಷಣೆಯ ‘ತೀವ್ರ’ವಾದ ಕಡೆಗೆ ಇಲ್ಲಿಗೆ ಹೋಗಿ ಮುಟ್ಟುತ್ತದೆ. ಇವರನ್ನು ಹಿಂಬಾಲಿಸೋ, ಬೆಂಬಲಿಸೋ, ಎಲ್ಲರೂ ಕೊಲೆಗಡುಕರೇ. ಗೋಮಾಂಸ ರಫ್ತು ಮಾಡುತ್ತಿರುವ ಬಿಜೆಪಿಗೆ ಬಹುಪರಾಕ್ ಹಾಕುವ ಈ ಕಟುಕರೇ ಅದೇ ಗೋಮಾಂಸದ ವಿಚಾರದಲ್ಲಿ ಕೊಲೆಗಳನ್ನು ಮಾಡುತ್ತಿದ್ದಾರೆ. ಇದನ್ನು ತಿಳಿಹೇಳುವ ನಮ್ಮ ಮಾತು ಇವರಿಗೆ ಅಪಥ್ಯವಾಗುತ್ತದೆ. ಮುಸಲ್ಮಾನ ಸಮಾಜ ಇಂತಹ ಪುಂಡರ ಬೆನ್ನುಮೂಳೆ ಮುರಿಯದಿದ್ದರೇ ವಿನಾಕಾರಣ ಹೀಗೆ ಕೊಲೆಯಾಗಬೇಕಾದೀತು. ಅಹಿಂಸೆ ನಮ್ಮ ಮಂತ್ರವಾಗಲಿ, ಆದರೆ ಆತ್ಮರಕ್ಷಣೆಗೆ ಹೆದರಬೇಡಿ. ಇದ್ರಿಸ್ ಸಾವಿಗೆ ಸಂತಾಪಗಳನ್ನು ಸೂಚಿಸುತ್ತೇನೆ, ಪೊಲೀಸರು ತಾರತಮ್ಯ ಮಾಡದೇ ಆರೋಪಿಗಳ ಹೆಡೆಮುರಿ ಕಟ್ಟಲಿ” ಎಂದು ಆಶಿಸಿದ್ದಾರೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್‌ ಕಾಟಿಪಳ್ಳ ಅವರು ಪ್ರತಿಕ್ರಿಯಿಸಿ, “ಪುನೀತ್ ಕೆರೆಹಳ್ಳಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿ. ಸದ್ಯದ ಕರ್ನಾಟಕದ ರಾಜಕೀಯ, ಸಾಮಾಜಿಕ ಸಂದರ್ಭಕ್ಕೆ ಅದುವೇ ಸರಿಯಾದದ್ದು. ಬಿಜೆಪಿಯ ರಾಜಕಾರಣದ ಸಮರ್ಥ ಪ್ರತಿನಿಧಿ, ನೈಜ ಮುಖ ಆತ. ಇದಕ್ಕಿಂತ ಹೆಚ್ಚು ಏನು ಹೇಳಲು ಸಾಧ್ಯ? ಇಂಥವನನ್ನು ವರ್ಷಗಳಿಂದ ಸಹಿಸಿಕೊಂಡದ್ದಕ್ಕೆ ಪೊಲೀಸ್ ಇಲಾಖೆಯ ಮರ್ಯಾದಸ್ಥರು ನಿವೃತ್ತರಾಗುವುದು ಲೇಸು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...