Homeಕರ್ನಾಟಕಅಮಾಯಕ ಇದ್ರೀಶ್ ಕೊಲೆ: ಸಂಘಪರಿವಾರದ ಗೂಂಡಾಗಿರಿ ವಿರುದ್ಧ ಜನಾಕ್ರೋಶ

ಅಮಾಯಕ ಇದ್ರೀಶ್ ಕೊಲೆ: ಸಂಘಪರಿವಾರದ ಗೂಂಡಾಗಿರಿ ವಿರುದ್ಧ ಜನಾಕ್ರೋಶ

- Advertisement -
- Advertisement -

ರಾಮನಗರ ಜಿಲ್ಲೆ, ಕನಕಪುರ ತಾಲ್ಲೂಕಿನ ಸಾತನೂರು ಬಳಿ ಶುಕ್ರವಾರ ಮಧ್ಯರಾತ್ರಿ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದ ಇದ್ರೀಶ್‌ ಪಾಷ ಅವರ ಹತ್ಯೆಯಾಗಿರುವುದಾಗಿ ವರದಿಯಾಗಿದೆ. ಗೋರಕ್ಷಣೆ ಹೆಸರಲ್ಲಿ ಸಂಘಪರಿವಾರದ ಮುಖಂಡ ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕೊಲೆ ಮಾಡಿದ್ದಾರೆಂದು ಪ್ರಕರಣ ದಾಖಲಾಗಿದೆ.

ಗೋರಕ್ಷಣೆಯ ಹೆಸರಿನಲ್ಲಿ ‌ಇದ್ರೀಶ್ ಅವರನ್ನು ಕೊಲ್ಲಲಾಗಿದೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಹಬ್ಬಿದ ಬಳಿಕ ಜನಾಕ್ರೋಶ ವ್ಯಕ್ತವಾಗುತ್ತಿದೆ. ಹಿಂದುತ್ವ ಗೂಂಡಾಗಿರಿಯನ್ನು ಸಾರ್ವಜನಿಕರು ಖಂಡಿಸಿದ್ದಾರೆ.

ರಕ್ಷಾ ರಾಮಯ್ಯ ಬ್ರಿಗೇಡ್‌ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೊವೊಂದು ಹಂಚಿಕೊಳ್ಳಲಾಗಿದೆ. ಅದರಲ್ಲಿ ಪುನೀತ್‌ ಕೆರೆಹಳ್ಳಿ ಬ್ಯಾಟ್‌ವೊಂದನ್ನು ಹಿಡಿದು ರಸ್ತೆಯಲ್ಲಿ ತಿರುಗುತ್ತಿರುವುದನ್ನು ಕಾಣಬಹುದು. “ಇದೊಂದೇ ಪ್ರೈಮರಿ ಸಾಕ್ಷಿ ಸಾಕು, ಈ ರೀತಿ ರಸ್ತೆಯಲ್ಲಿ ಬ್ಯಾಟ್ ಹಿಡಿದು ನಿಲ್ಲಲು ಇವನು ಪೊಲೀಸಾ? ರಾಮನಗರ ಜಿಲ್ಲೆಯ ಸಾತನೂರಿನಲ್ಲಿ ರೌಡಿ ಪುನೀತ್ ಕೆರೆಹಳ್ಳಿ ಮತ್ತು ಸಹಚರರಿಂದ ನೈತಿಕ ಪೊಲೀಸ್ ಗಿರಿ, ಮಸ್ಲಿಮ್ ಯುವಕ ಬಲಿ” ಎಂದು ಆಕ್ರೋಶವನ್ನು ವ್ಯಕ್ತಪಡಿಸಲಾಗಿದೆ.

ಸಿಪಿಐಎಂ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಕೃಷ್ಣೇಗೌಡ ಟಿ.ಎಲ್. ಅವರು ಪ್ರತಿಕ್ರಿಯಿಸಿ, “ಸಂಘ ಪರಿವಾರದ ಗೋರಕ್ಷಕ ಗೂಂಡಾಗಳಿಂದ ಹತ್ಯೆಯಾದ ಮಂಡ್ಯದ ಗುತ್ತಲು ನಿವಾಸಿ ಇದ್ರಿಶ್ ಪಾಶಾ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಮತ್ತು ಆತನ ಅವಲಂಬಿತರಿಗೆ ಸರ್ಕಾರಿ ಉದ್ಯೋಗ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

“ಆರೆಸ್ಸೆಸ್ ಸಂಘ ಪರಿವಾರದ ಗೂಂಡಾ ಪಡೆ ಗೋರಕ್ಷಣೆ ಹೆಸರಿನಲ್ಲಿ ಕಾನೂನನ್ನು ಕೈಗೆತ್ತಿಕೊಳ್ಳುವ, ಬಡ ಮುಸಲ್ಮಾನರನ್ನು ಕೊಲ್ಲುವ‌ ಕ್ರಿಮಿನಲ್ ಕೃತ್ಯದಲ್ಲಿ ನಿರತವಾಗಿದೆ. ರಾಜ್ಯದ ಬಿಜೆಪಿ ಸರ್ಕಾರ ಇಂತಹ ಗೂಂಡಾಗಳಿಗೆ ಮುಕ್ತ ಸ್ವಾತಂತ್ರ್ಯ ನೀಡಿದೆ. ಇದರಿಂದ ಅಮಾಯಕ ಜನತೆ ಪ್ರಾಣ ಕಳೆದುಕೊಂಡು ಅವರ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಇಂತಹ ಆರೋಪಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಪಿಐಎಂ ಒತ್ತಾಯಿಸುತ್ತದೆ” ಎಂದಿದ್ದಾರೆ.

“ಕನಕಪುರ ತಾಲೂಕಿನ ಸಾತನೂರು ಬಳಿ ಗೋರಕ್ಷಕ ಗೂಂಡಾ ಪಡೆ ಇದ್ರಿಶ್ ಪಾಷಾ ಅವರನ್ನು ಕಾಂಪೌಂಡ್ ಒಳಗೆ ಸೇರಿಸಿಕೊಂಡು ವಿದ್ಯುತ್ ಶಾಕ್ ನೀಡುವ ಮೂಲಕ ಚಿತ್ರಹಿಂಸೆ ನೀಡಿ ಕೊಲೆ ಮಾಡಿದೆ. ಮೇಲ್ನೋಟಕ್ಕೆ ಈ ಕೊಲೆ ನಡೆಸಿರುವುದು ಆರೆಸ್ಸೆಸ್ ಸಂಘಟನೆಗೆ ಸೇರಿದ ರಾಷ್ಟ್ರ ರಕ್ಷಣಾ ಪಡೆಯ ಪುನಿತ್ ಕೆರೆಹಳ್ಳಿ ನೇತೃತ್ವದ ಗೂಂಡಾಪಡೆ ಎಂದು ಕಾಣುತ್ತಿದೆ. ಇದ್ರಿಶ್ ಪಾಷಾ ಜೊತೆ ಇದ್ದ ಇನ್ನಿಬ್ಬರು ಹೇಗೋ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ. ಇಲ್ಲದಿದ್ದರೆ ಅವರೂ ಕೊಲೆಯಾಗುತ್ತಿದ್ದರು. ಇದಕ್ಕೆ ಕಾರಣವಾದ ಕ್ರಿಮಿನಲ್‌ಗಳ ರಕ್ಷಣೆಗೆ ಬೊಮ್ಮಾಯಿ ಸರ್ಕಾರ ಮುಂದಾಗಬಾರದು” ಎಂದು ಒತ್ತಾಯಿಸಿದ್ದಾರೆ.

“ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅದರಲ್ಲೂ ರೈತ ವಿರೋಧಿ ಕೃಷಿ ವಿರೋಧಿ ಗೋ ಹತ್ಯೆ ನಿಷೇಧ ಕಾನೂನನ್ನು ಜಾರಿಗೆ ತಂದ ನಂತರ ದನದ ವ್ಯಾಪಾರಿಗಳ ಮೇಲೆ ದಾಳಿಗಳು ವಿಪರೀತ ಹೆಚ್ಚಾಗಿವೆ. ಗೋರಕ್ಷಕರ ಹೆಸರಿನ ಗೂಂಡಾಗಳು ದಾಳಿ ಮಾಡಿ ಹಲ್ಲೆ ನಡೆಸುವಾಗ ರಾಜ್ಯ ಸರ್ಕಾರದ ಪೊಲೀಸರು ಒಂದೋ ಮೂಕ ಪ್ರೇಕ್ಷಕರಾಗುವುದು ಇಲ್ಲವೇ ದಾಳಿಕೋರರ ಜೊತೆ ಕೈಜೋಡಿಸುವುದು ನಡೆದಿದೆ. ಇದರಿಂದಾಗಿ ದಾಳಿ, ಹಲ್ಲೆ ನಡೆಸುವವರಿಗೆ ಹೆಚ್ಚಿನ ಬಲ ಬಂದಂತಾಗಿದೆ. ಇಂತಹ ವ್ಯಕ್ತಿಗಳು ಮತ್ತು ಶಕ್ತಿಗಳ ಮೇಲೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ಕರೆಂಟ್ ಶಾಕ್ ನೀಡಿ ಕೊಂದಿದ್ದಾರೆಂಬ ಆರೋಪ ಬಂದಿರುವ ಹಿನ್ನೆಲೆಯಲ್ಲಿ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅದನ್ನು ಸಾಮಾಜಿಕ ಹೋರಾಟಗಾರ ದೀಪು  ಅವರು ಹಂಚಿಕೊಂಡಿದ್ದು, “ಗೋರಕ್ಷಣೆ ಹೆಸರಿನಲ್ಲಿ ನೈತಿಕ ಪೊಲೀಸ್‌ಗಿರಿ ಮಾಡಿಕೊಂಡು ಅಲ್ಪಸಂಖ್ಯಾತರನ್ನು ಕೊಂದ ಪುನೀತ್ ಕೆರೆಹಳ್ಳಿ ಎಂಬ ವಿಕೃತ ಕರೆಂಟ್ ಶಾಕ್ ಕೊಡುತ್ತಿರುವ ದೌರ್ಜನ್ಯದ ವಿಡಿಯೋವಿದು” ಎಂದು ತಿಳಿಸಿದ್ದಾರೆ.

ಲೇಖಕ, ಬರಹಗಾರ ರಾ.ಚಿಂತನ್‌ ಪ್ರತಿಕ್ರಿಯಿಸಿ, “ಈ ಧರ್ಮ ರಕ್ಷಣೆಯ ‘ತೀವ್ರ’ವಾದ ಕಡೆಗೆ ಇಲ್ಲಿಗೆ ಹೋಗಿ ಮುಟ್ಟುತ್ತದೆ. ಇವರನ್ನು ಹಿಂಬಾಲಿಸೋ, ಬೆಂಬಲಿಸೋ, ಎಲ್ಲರೂ ಕೊಲೆಗಡುಕರೇ. ಗೋಮಾಂಸ ರಫ್ತು ಮಾಡುತ್ತಿರುವ ಬಿಜೆಪಿಗೆ ಬಹುಪರಾಕ್ ಹಾಕುವ ಈ ಕಟುಕರೇ ಅದೇ ಗೋಮಾಂಸದ ವಿಚಾರದಲ್ಲಿ ಕೊಲೆಗಳನ್ನು ಮಾಡುತ್ತಿದ್ದಾರೆ. ಇದನ್ನು ತಿಳಿಹೇಳುವ ನಮ್ಮ ಮಾತು ಇವರಿಗೆ ಅಪಥ್ಯವಾಗುತ್ತದೆ. ಮುಸಲ್ಮಾನ ಸಮಾಜ ಇಂತಹ ಪುಂಡರ ಬೆನ್ನುಮೂಳೆ ಮುರಿಯದಿದ್ದರೇ ವಿನಾಕಾರಣ ಹೀಗೆ ಕೊಲೆಯಾಗಬೇಕಾದೀತು. ಅಹಿಂಸೆ ನಮ್ಮ ಮಂತ್ರವಾಗಲಿ, ಆದರೆ ಆತ್ಮರಕ್ಷಣೆಗೆ ಹೆದರಬೇಡಿ. ಇದ್ರಿಸ್ ಸಾವಿಗೆ ಸಂತಾಪಗಳನ್ನು ಸೂಚಿಸುತ್ತೇನೆ, ಪೊಲೀಸರು ತಾರತಮ್ಯ ಮಾಡದೇ ಆರೋಪಿಗಳ ಹೆಡೆಮುರಿ ಕಟ್ಟಲಿ” ಎಂದು ಆಶಿಸಿದ್ದಾರೆ.

ಡಿವೈಎಫ್‌ಐ ರಾಜ್ಯಾಧ್ಯಕ್ಷರಾದ ಮುನೀರ್‌ ಕಾಟಿಪಳ್ಳ ಅವರು ಪ್ರತಿಕ್ರಿಯಿಸಿ, “ಪುನೀತ್ ಕೆರೆಹಳ್ಳಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿ. ಸದ್ಯದ ಕರ್ನಾಟಕದ ರಾಜಕೀಯ, ಸಾಮಾಜಿಕ ಸಂದರ್ಭಕ್ಕೆ ಅದುವೇ ಸರಿಯಾದದ್ದು. ಬಿಜೆಪಿಯ ರಾಜಕಾರಣದ ಸಮರ್ಥ ಪ್ರತಿನಿಧಿ, ನೈಜ ಮುಖ ಆತ. ಇದಕ್ಕಿಂತ ಹೆಚ್ಚು ಏನು ಹೇಳಲು ಸಾಧ್ಯ? ಇಂಥವನನ್ನು ವರ್ಷಗಳಿಂದ ಸಹಿಸಿಕೊಂಡದ್ದಕ್ಕೆ ಪೊಲೀಸ್ ಇಲಾಖೆಯ ಮರ್ಯಾದಸ್ಥರು ನಿವೃತ್ತರಾಗುವುದು ಲೇಸು” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...