Homeಮುಖಪುಟ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ - #CrocodileTears ಟ್ರೆಂಡ್‌!

‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿ ಶುಕ್ರವಾರದಂದು ತಾವು ಲೋಕಸಭೆಯಲ್ಲಿ ಪ್ರತಿನಿಧಿಸುವ ವಾರಣಾಸಿಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರೊಂದಿಗೆ ವಿಡಿಯೊ ಕಾನ್ಪರೆನ್ಸ್‌ ಮೂಲಕ ಮಾತನಾಡಿದ್ದಾರೆ. ಈ ವೇಳೆ ಸಾಂಕ್ರಮಿಕದಿಂದ ಮೃತಪಟ್ಟವರನ್ನು ನೆನೆದು ಭಾವುಕರಾಗಿದ್ದು, ನೆಟ್ಟಿಗರು ಇದನ್ನು ಮೊಸಲೆ ಕಣ್ಣೀರು ಎಂದು ಬಣ್ಣಿಸಿದ್ದು ಟ್ವಿಟರ್‌ನಲ್ಲಿ #CrocodileTears ಹ್ಯಾಶ್‌‌ಟ್ಯಾಗ್‌ ಟ್ರೆಂಡ್ ಆಗಿದೆ.

ಇಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಮೋದಿ, ‘ಕೊರೊನಾ ನಮ್ಮಿಂದ ಹಲವು ಪ್ರೀತಿಪಾತ್ರರನ್ನು ಕಸಿದುಕೊಂಡಿದೆ. ಕೊರೊನಾದಿಂದ ನಿಧನರಾದವರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬದವರಿಗೆ ನನ್ನ ಸಂತಾಪಗಳನ್ನೂ ಸೂಚಿಸುತ್ತೇನೆ’ ಎಂದು ಹೇಳಿದ್ದಾರೆ. ಈ ಮಾತಿನ ವೇಳೆ ಭಾವುಕರಾದ ಮೋದಿ, ಅಳುತಡೆಯಲು ಪ್ರಯತ್ನಿಸಿದಂತೆ ಕಂಡು ಬಂದರು.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಆದರೆ ನೆಟ್ಟಿಗರು ಪ್ರಧಾನಿಯನ್ನು ಟೀಕಿಸಿದ್ದು, ಇದನ್ನು ಮೊಸಲೆ ಕಣ್ಣೀರು ಎಂದಿದ್ದಾರೆ. ದೇಶದಲ್ಲಿ ಕೊರೊನಾ ಹೆಚ್ಚಿರುವಾಗ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರಕ್ಕೆ ತೆರಳಿ, ‘ದೀದಿ ಓ ದೀದಿ’ ಎಂದವರು, ಕೊರೊನಾ ಹೆಚ್ಚಿದ್ದರೂ ಸಮಾವೇಶದಲ್ಲಿ ನೆರೆದ ಲಕ್ಷಾಂತರ ಜನರನ್ನು ನೋಡಿ ಖುಷಿ ಪಟ್ಟವರು ಇದೀಗ ಕೊರೊನಾ ಪ್ರಕರಣ ಇಳಿಮುಖವಾಗುತ್ತಿದ್ದಂತೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಚುನಾವಣಾ ಸಮೀಕ್ಷಾ ಸಂಸ್ಥೆ ಸಿವೊಟರ್ ಮೋದಿಯ ಜನಪ್ರಿಯತೆ ಒಂದು ವರ್ಷದಿಂದ ಸುಮಾರು 65% ರಿಂದ 37% ಕ್ಕೆ ಇಳಿದಿದೆ ಎಂದು ಕಂಡುಹಿಡಿದಿದೆ. ಈ ಮೊಸಳೆ ಕಣ್ಣೀರಿನಿಂದ ಅದನ್ನು ಹೆಚ್ಚಿಸಲು ಮೋದಿ ಬಯಸುತ್ತಿದ್ದಾರೆ ಎಂದು ಟ್ವಿಟರ್‌ ಬಳಕೆದಾದರಾದ @sk_traza98 ಅವರು ಹೇಳಿದ್ದಾರೆ.

ರಾಷ್ಟ್ರೀಯ ಟಿವಿಯಲ್ಲಿ ಭಾವುಕರಾವುದು 20 ದಿನಗಳ ಹಿಂದೆಯೆ ತಪ್ಪಿ ಹೋಗಿದೆಯೆ? ಎಂದು ನೀರಜ್ ಭಾಟಿಯ ಅವರು ಟ್ವೀಟ್ ಮಾಡಿದ್ದು, ದಿ ಟೆಲೆಗ್ರಾಫ್ ಪತ್ರಿಕೆಯ ಪೇಪರ್‌ ಕಟ್ಟಿಂಗ್‌ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಮೋದಿ ತನಗೆ ನೋವಾಗಿದೆ ಎಂದು ಹೇಳಿಕೊಂಡಿರುವ ಹೇಳಿಕೆಗೆ, ಟೆಲಿಗ್ರಾಫ್‌ ಪತ್ರಿಕೆಯು, ಇದನ್ನು ನೋವು ಎನ್ನುವುದಾದರೆ, ಸೋಂಕಿನಿಂದಾಗಿ ತಮ್ಮವರ ಕಳೆದುಕೊಂಡು ಅಳುತ್ತಿರುವ ಚಿತ್ರವನ್ನು ಹಾಕಿ ಈ ನೋವಿಗೆ ಏನನ್ನನ್ನುತ್ತೀರಿ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ಕೊಳದಲ್ಲಿ ಚೆಂಡನ್ನು ತೆಗೆದುಕೊಳ್ಳಲು ಹೋದಾಗ ಆ ಮೊಸಳೆಯಿಂದ ಮಗು ನರೇಂದ್ರ ಅಳುವುದನ್ನು ಕಲಿತನು. ಮೊಸಳೆ ಕಣ್ಣೀರು, ನಾಟಕ ಎಂದು ಮೊಹಮ್ಮದ್‌ ಅಝರ್‌ ಅವರು ಟ್ವೀಟ್ ಮಾಡಿದ್ದಾರೆ. ನದಿಯಲ್ಲಿ ಶವ ತೇಲುತ್ತಿರುವಾಗ ಮೊಸಳೆಯೊಂದು ಅಳುತ್ತಿರುವುದನ್ನು ಫೋಟೋಗ್ರಾಫರುಗಳು ಕ್ಲಿಕ್ ಮಾಡುತ್ತಿರುವಂತೆ ಇರುವ ವ್ಯಂಗ್ಯ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ.

‘ಮುಗ್ಧ ಜನರ ರಕ್ತವನ್ನು ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ ಎಂದು ಜಾವೀದ್‌ ಟ್ವೀಟ್ ಮಾಡಿದ್ದಾರೆ.

ಜನರು ಸಾಯುತ್ತಿರುವಾಗ “ದೀದಿ ಒ ದೀದಿ” ಎಂದು ಜಪಿಸುವುದರಲ್ಲಿ ನಿರತರಾಗಿದ್ದ ಅದೇ ವ್ಯಕ್ತಿ ಈಗ ನಮ್ಮ ಸಹಾನುಭೂತಿಯನ್ನು ಪಡೆಯುತ್ತಿದ್ದಾನೆ? ಪಶ್ಚಾತ್ತಾಪ ಪಡುತ್ತಿರವುದು ತುಂಬಾ ತಡವಾಗಿದೆ ಎಂದು ಆನಂದ್ ಟ್ವೀಟ್ ಮಾಡಿದ್ದಾರೆ.

ಕೆಲವರು, ಮೋದಿಗೆ ನೌಟಂಕಿ ಮತ್ತು ನಾಟಕ ಮಾಡಿದ್ದಕ್ಕೆ ಆಸ್ಕರ್‌ ಕೊಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ 19 ವರ್ಷದವರಾಗಿದ್ದಾಗ ತಂದೆಯ ಮನೆ ಬಿಟ್ಟು ಓಡಿ ಗುಜರಾತಿ ನಾಟಕ ಕಂಪನಿ ಸೇರಿ ತಬಲಾ ವಾದಕ ಮತ್ತು ಜೂನಿಯರ್ ನಟರಾಗಿ 15 ವರ್ಷ ಕೆಲಸ ಮಾಡಿದ್ದಾರೆ. ಆ ನಾಟಕ ಕಂಪನಿಯ ದೀರ್ಘ ನಟನೆಯ ಅನುಭವ ಈಗ ಪ್ರಧಾನಿಯಾದ ಮೇಲೆ ಮೋದಿಗೆ ತುಂಬಾ ಉಪಯೋಗಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....