Homeಮುಖಪುಟ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ - #CrocodileTears ಟ್ರೆಂಡ್‌!

‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿ ಶುಕ್ರವಾರದಂದು ತಾವು ಲೋಕಸಭೆಯಲ್ಲಿ ಪ್ರತಿನಿಧಿಸುವ ವಾರಣಾಸಿಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರೊಂದಿಗೆ ವಿಡಿಯೊ ಕಾನ್ಪರೆನ್ಸ್‌ ಮೂಲಕ ಮಾತನಾಡಿದ್ದಾರೆ. ಈ ವೇಳೆ ಸಾಂಕ್ರಮಿಕದಿಂದ ಮೃತಪಟ್ಟವರನ್ನು ನೆನೆದು ಭಾವುಕರಾಗಿದ್ದು, ನೆಟ್ಟಿಗರು ಇದನ್ನು ಮೊಸಲೆ ಕಣ್ಣೀರು ಎಂದು ಬಣ್ಣಿಸಿದ್ದು ಟ್ವಿಟರ್‌ನಲ್ಲಿ #CrocodileTears ಹ್ಯಾಶ್‌‌ಟ್ಯಾಗ್‌ ಟ್ರೆಂಡ್ ಆಗಿದೆ.

ಇಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಮೋದಿ, ‘ಕೊರೊನಾ ನಮ್ಮಿಂದ ಹಲವು ಪ್ರೀತಿಪಾತ್ರರನ್ನು ಕಸಿದುಕೊಂಡಿದೆ. ಕೊರೊನಾದಿಂದ ನಿಧನರಾದವರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬದವರಿಗೆ ನನ್ನ ಸಂತಾಪಗಳನ್ನೂ ಸೂಚಿಸುತ್ತೇನೆ’ ಎಂದು ಹೇಳಿದ್ದಾರೆ. ಈ ಮಾತಿನ ವೇಳೆ ಭಾವುಕರಾದ ಮೋದಿ, ಅಳುತಡೆಯಲು ಪ್ರಯತ್ನಿಸಿದಂತೆ ಕಂಡು ಬಂದರು.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಆದರೆ ನೆಟ್ಟಿಗರು ಪ್ರಧಾನಿಯನ್ನು ಟೀಕಿಸಿದ್ದು, ಇದನ್ನು ಮೊಸಲೆ ಕಣ್ಣೀರು ಎಂದಿದ್ದಾರೆ. ದೇಶದಲ್ಲಿ ಕೊರೊನಾ ಹೆಚ್ಚಿರುವಾಗ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರಕ್ಕೆ ತೆರಳಿ, ‘ದೀದಿ ಓ ದೀದಿ’ ಎಂದವರು, ಕೊರೊನಾ ಹೆಚ್ಚಿದ್ದರೂ ಸಮಾವೇಶದಲ್ಲಿ ನೆರೆದ ಲಕ್ಷಾಂತರ ಜನರನ್ನು ನೋಡಿ ಖುಷಿ ಪಟ್ಟವರು ಇದೀಗ ಕೊರೊನಾ ಪ್ರಕರಣ ಇಳಿಮುಖವಾಗುತ್ತಿದ್ದಂತೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಚುನಾವಣಾ ಸಮೀಕ್ಷಾ ಸಂಸ್ಥೆ ಸಿವೊಟರ್ ಮೋದಿಯ ಜನಪ್ರಿಯತೆ ಒಂದು ವರ್ಷದಿಂದ ಸುಮಾರು 65% ರಿಂದ 37% ಕ್ಕೆ ಇಳಿದಿದೆ ಎಂದು ಕಂಡುಹಿಡಿದಿದೆ. ಈ ಮೊಸಳೆ ಕಣ್ಣೀರಿನಿಂದ ಅದನ್ನು ಹೆಚ್ಚಿಸಲು ಮೋದಿ ಬಯಸುತ್ತಿದ್ದಾರೆ ಎಂದು ಟ್ವಿಟರ್‌ ಬಳಕೆದಾದರಾದ @sk_traza98 ಅವರು ಹೇಳಿದ್ದಾರೆ.

ರಾಷ್ಟ್ರೀಯ ಟಿವಿಯಲ್ಲಿ ಭಾವುಕರಾವುದು 20 ದಿನಗಳ ಹಿಂದೆಯೆ ತಪ್ಪಿ ಹೋಗಿದೆಯೆ? ಎಂದು ನೀರಜ್ ಭಾಟಿಯ ಅವರು ಟ್ವೀಟ್ ಮಾಡಿದ್ದು, ದಿ ಟೆಲೆಗ್ರಾಫ್ ಪತ್ರಿಕೆಯ ಪೇಪರ್‌ ಕಟ್ಟಿಂಗ್‌ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಮೋದಿ ತನಗೆ ನೋವಾಗಿದೆ ಎಂದು ಹೇಳಿಕೊಂಡಿರುವ ಹೇಳಿಕೆಗೆ, ಟೆಲಿಗ್ರಾಫ್‌ ಪತ್ರಿಕೆಯು, ಇದನ್ನು ನೋವು ಎನ್ನುವುದಾದರೆ, ಸೋಂಕಿನಿಂದಾಗಿ ತಮ್ಮವರ ಕಳೆದುಕೊಂಡು ಅಳುತ್ತಿರುವ ಚಿತ್ರವನ್ನು ಹಾಕಿ ಈ ನೋವಿಗೆ ಏನನ್ನನ್ನುತ್ತೀರಿ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ಕೊಳದಲ್ಲಿ ಚೆಂಡನ್ನು ತೆಗೆದುಕೊಳ್ಳಲು ಹೋದಾಗ ಆ ಮೊಸಳೆಯಿಂದ ಮಗು ನರೇಂದ್ರ ಅಳುವುದನ್ನು ಕಲಿತನು. ಮೊಸಳೆ ಕಣ್ಣೀರು, ನಾಟಕ ಎಂದು ಮೊಹಮ್ಮದ್‌ ಅಝರ್‌ ಅವರು ಟ್ವೀಟ್ ಮಾಡಿದ್ದಾರೆ. ನದಿಯಲ್ಲಿ ಶವ ತೇಲುತ್ತಿರುವಾಗ ಮೊಸಳೆಯೊಂದು ಅಳುತ್ತಿರುವುದನ್ನು ಫೋಟೋಗ್ರಾಫರುಗಳು ಕ್ಲಿಕ್ ಮಾಡುತ್ತಿರುವಂತೆ ಇರುವ ವ್ಯಂಗ್ಯ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ.

‘ಮುಗ್ಧ ಜನರ ರಕ್ತವನ್ನು ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ ಎಂದು ಜಾವೀದ್‌ ಟ್ವೀಟ್ ಮಾಡಿದ್ದಾರೆ.

ಜನರು ಸಾಯುತ್ತಿರುವಾಗ “ದೀದಿ ಒ ದೀದಿ” ಎಂದು ಜಪಿಸುವುದರಲ್ಲಿ ನಿರತರಾಗಿದ್ದ ಅದೇ ವ್ಯಕ್ತಿ ಈಗ ನಮ್ಮ ಸಹಾನುಭೂತಿಯನ್ನು ಪಡೆಯುತ್ತಿದ್ದಾನೆ? ಪಶ್ಚಾತ್ತಾಪ ಪಡುತ್ತಿರವುದು ತುಂಬಾ ತಡವಾಗಿದೆ ಎಂದು ಆನಂದ್ ಟ್ವೀಟ್ ಮಾಡಿದ್ದಾರೆ.

ಕೆಲವರು, ಮೋದಿಗೆ ನೌಟಂಕಿ ಮತ್ತು ನಾಟಕ ಮಾಡಿದ್ದಕ್ಕೆ ಆಸ್ಕರ್‌ ಕೊಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ 19 ವರ್ಷದವರಾಗಿದ್ದಾಗ ತಂದೆಯ ಮನೆ ಬಿಟ್ಟು ಓಡಿ ಗುಜರಾತಿ ನಾಟಕ ಕಂಪನಿ ಸೇರಿ ತಬಲಾ ವಾದಕ ಮತ್ತು ಜೂನಿಯರ್ ನಟರಾಗಿ 15 ವರ್ಷ ಕೆಲಸ ಮಾಡಿದ್ದಾರೆ. ಆ ನಾಟಕ ಕಂಪನಿಯ ದೀರ್ಘ ನಟನೆಯ ಅನುಭವ ಈಗ ಪ್ರಧಾನಿಯಾದ ಮೇಲೆ ಮೋದಿಗೆ ತುಂಬಾ ಉಪಯೋಗಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...