Homeಮುಖಪುಟ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ - #CrocodileTears ಟ್ರೆಂಡ್‌!

‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿ ಶುಕ್ರವಾರದಂದು ತಾವು ಲೋಕಸಭೆಯಲ್ಲಿ ಪ್ರತಿನಿಧಿಸುವ ವಾರಣಾಸಿಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರೊಂದಿಗೆ ವಿಡಿಯೊ ಕಾನ್ಪರೆನ್ಸ್‌ ಮೂಲಕ ಮಾತನಾಡಿದ್ದಾರೆ. ಈ ವೇಳೆ ಸಾಂಕ್ರಮಿಕದಿಂದ ಮೃತಪಟ್ಟವರನ್ನು ನೆನೆದು ಭಾವುಕರಾಗಿದ್ದು, ನೆಟ್ಟಿಗರು ಇದನ್ನು ಮೊಸಲೆ ಕಣ್ಣೀರು ಎಂದು ಬಣ್ಣಿಸಿದ್ದು ಟ್ವಿಟರ್‌ನಲ್ಲಿ #CrocodileTears ಹ್ಯಾಶ್‌‌ಟ್ಯಾಗ್‌ ಟ್ರೆಂಡ್ ಆಗಿದೆ.

ಇಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಮೋದಿ, ‘ಕೊರೊನಾ ನಮ್ಮಿಂದ ಹಲವು ಪ್ರೀತಿಪಾತ್ರರನ್ನು ಕಸಿದುಕೊಂಡಿದೆ. ಕೊರೊನಾದಿಂದ ನಿಧನರಾದವರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬದವರಿಗೆ ನನ್ನ ಸಂತಾಪಗಳನ್ನೂ ಸೂಚಿಸುತ್ತೇನೆ’ ಎಂದು ಹೇಳಿದ್ದಾರೆ. ಈ ಮಾತಿನ ವೇಳೆ ಭಾವುಕರಾದ ಮೋದಿ, ಅಳುತಡೆಯಲು ಪ್ರಯತ್ನಿಸಿದಂತೆ ಕಂಡು ಬಂದರು.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಆದರೆ ನೆಟ್ಟಿಗರು ಪ್ರಧಾನಿಯನ್ನು ಟೀಕಿಸಿದ್ದು, ಇದನ್ನು ಮೊಸಲೆ ಕಣ್ಣೀರು ಎಂದಿದ್ದಾರೆ. ದೇಶದಲ್ಲಿ ಕೊರೊನಾ ಹೆಚ್ಚಿರುವಾಗ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರಕ್ಕೆ ತೆರಳಿ, ‘ದೀದಿ ಓ ದೀದಿ’ ಎಂದವರು, ಕೊರೊನಾ ಹೆಚ್ಚಿದ್ದರೂ ಸಮಾವೇಶದಲ್ಲಿ ನೆರೆದ ಲಕ್ಷಾಂತರ ಜನರನ್ನು ನೋಡಿ ಖುಷಿ ಪಟ್ಟವರು ಇದೀಗ ಕೊರೊನಾ ಪ್ರಕರಣ ಇಳಿಮುಖವಾಗುತ್ತಿದ್ದಂತೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಚುನಾವಣಾ ಸಮೀಕ್ಷಾ ಸಂಸ್ಥೆ ಸಿವೊಟರ್ ಮೋದಿಯ ಜನಪ್ರಿಯತೆ ಒಂದು ವರ್ಷದಿಂದ ಸುಮಾರು 65% ರಿಂದ 37% ಕ್ಕೆ ಇಳಿದಿದೆ ಎಂದು ಕಂಡುಹಿಡಿದಿದೆ. ಈ ಮೊಸಳೆ ಕಣ್ಣೀರಿನಿಂದ ಅದನ್ನು ಹೆಚ್ಚಿಸಲು ಮೋದಿ ಬಯಸುತ್ತಿದ್ದಾರೆ ಎಂದು ಟ್ವಿಟರ್‌ ಬಳಕೆದಾದರಾದ @sk_traza98 ಅವರು ಹೇಳಿದ್ದಾರೆ.

ರಾಷ್ಟ್ರೀಯ ಟಿವಿಯಲ್ಲಿ ಭಾವುಕರಾವುದು 20 ದಿನಗಳ ಹಿಂದೆಯೆ ತಪ್ಪಿ ಹೋಗಿದೆಯೆ? ಎಂದು ನೀರಜ್ ಭಾಟಿಯ ಅವರು ಟ್ವೀಟ್ ಮಾಡಿದ್ದು, ದಿ ಟೆಲೆಗ್ರಾಫ್ ಪತ್ರಿಕೆಯ ಪೇಪರ್‌ ಕಟ್ಟಿಂಗ್‌ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಮೋದಿ ತನಗೆ ನೋವಾಗಿದೆ ಎಂದು ಹೇಳಿಕೊಂಡಿರುವ ಹೇಳಿಕೆಗೆ, ಟೆಲಿಗ್ರಾಫ್‌ ಪತ್ರಿಕೆಯು, ಇದನ್ನು ನೋವು ಎನ್ನುವುದಾದರೆ, ಸೋಂಕಿನಿಂದಾಗಿ ತಮ್ಮವರ ಕಳೆದುಕೊಂಡು ಅಳುತ್ತಿರುವ ಚಿತ್ರವನ್ನು ಹಾಕಿ ಈ ನೋವಿಗೆ ಏನನ್ನನ್ನುತ್ತೀರಿ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ಕೊಳದಲ್ಲಿ ಚೆಂಡನ್ನು ತೆಗೆದುಕೊಳ್ಳಲು ಹೋದಾಗ ಆ ಮೊಸಳೆಯಿಂದ ಮಗು ನರೇಂದ್ರ ಅಳುವುದನ್ನು ಕಲಿತನು. ಮೊಸಳೆ ಕಣ್ಣೀರು, ನಾಟಕ ಎಂದು ಮೊಹಮ್ಮದ್‌ ಅಝರ್‌ ಅವರು ಟ್ವೀಟ್ ಮಾಡಿದ್ದಾರೆ. ನದಿಯಲ್ಲಿ ಶವ ತೇಲುತ್ತಿರುವಾಗ ಮೊಸಳೆಯೊಂದು ಅಳುತ್ತಿರುವುದನ್ನು ಫೋಟೋಗ್ರಾಫರುಗಳು ಕ್ಲಿಕ್ ಮಾಡುತ್ತಿರುವಂತೆ ಇರುವ ವ್ಯಂಗ್ಯ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ.

‘ಮುಗ್ಧ ಜನರ ರಕ್ತವನ್ನು ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ ಎಂದು ಜಾವೀದ್‌ ಟ್ವೀಟ್ ಮಾಡಿದ್ದಾರೆ.

ಜನರು ಸಾಯುತ್ತಿರುವಾಗ “ದೀದಿ ಒ ದೀದಿ” ಎಂದು ಜಪಿಸುವುದರಲ್ಲಿ ನಿರತರಾಗಿದ್ದ ಅದೇ ವ್ಯಕ್ತಿ ಈಗ ನಮ್ಮ ಸಹಾನುಭೂತಿಯನ್ನು ಪಡೆಯುತ್ತಿದ್ದಾನೆ? ಪಶ್ಚಾತ್ತಾಪ ಪಡುತ್ತಿರವುದು ತುಂಬಾ ತಡವಾಗಿದೆ ಎಂದು ಆನಂದ್ ಟ್ವೀಟ್ ಮಾಡಿದ್ದಾರೆ.

ಕೆಲವರು, ಮೋದಿಗೆ ನೌಟಂಕಿ ಮತ್ತು ನಾಟಕ ಮಾಡಿದ್ದಕ್ಕೆ ಆಸ್ಕರ್‌ ಕೊಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ 19 ವರ್ಷದವರಾಗಿದ್ದಾಗ ತಂದೆಯ ಮನೆ ಬಿಟ್ಟು ಓಡಿ ಗುಜರಾತಿ ನಾಟಕ ಕಂಪನಿ ಸೇರಿ ತಬಲಾ ವಾದಕ ಮತ್ತು ಜೂನಿಯರ್ ನಟರಾಗಿ 15 ವರ್ಷ ಕೆಲಸ ಮಾಡಿದ್ದಾರೆ. ಆ ನಾಟಕ ಕಂಪನಿಯ ದೀರ್ಘ ನಟನೆಯ ಅನುಭವ ಈಗ ಪ್ರಧಾನಿಯಾದ ಮೇಲೆ ಮೋದಿಗೆ ತುಂಬಾ ಉಪಯೋಗಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...