Homeಮುಖಪುಟ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ - #CrocodileTears ಟ್ರೆಂಡ್‌!

‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

- Advertisement -
- Advertisement -

ಪ್ರಧಾನಿ ಮೋದಿ ಶುಕ್ರವಾರದಂದು ತಾವು ಲೋಕಸಭೆಯಲ್ಲಿ ಪ್ರತಿನಿಧಿಸುವ ವಾರಣಾಸಿಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರೊಂದಿಗೆ ವಿಡಿಯೊ ಕಾನ್ಪರೆನ್ಸ್‌ ಮೂಲಕ ಮಾತನಾಡಿದ್ದಾರೆ. ಈ ವೇಳೆ ಸಾಂಕ್ರಮಿಕದಿಂದ ಮೃತಪಟ್ಟವರನ್ನು ನೆನೆದು ಭಾವುಕರಾಗಿದ್ದು, ನೆಟ್ಟಿಗರು ಇದನ್ನು ಮೊಸಲೆ ಕಣ್ಣೀರು ಎಂದು ಬಣ್ಣಿಸಿದ್ದು ಟ್ವಿಟರ್‌ನಲ್ಲಿ #CrocodileTears ಹ್ಯಾಶ್‌‌ಟ್ಯಾಗ್‌ ಟ್ರೆಂಡ್ ಆಗಿದೆ.

ಇಂದು ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಮೋದಿ, ‘ಕೊರೊನಾ ನಮ್ಮಿಂದ ಹಲವು ಪ್ರೀತಿಪಾತ್ರರನ್ನು ಕಸಿದುಕೊಂಡಿದೆ. ಕೊರೊನಾದಿಂದ ನಿಧನರಾದವರಿಗೆ ಗೌರವ ಸಲ್ಲಿಸುತ್ತೇನೆ ಮತ್ತು ಅವರ ಕುಟುಂಬದವರಿಗೆ ನನ್ನ ಸಂತಾಪಗಳನ್ನೂ ಸೂಚಿಸುತ್ತೇನೆ’ ಎಂದು ಹೇಳಿದ್ದಾರೆ. ಈ ಮಾತಿನ ವೇಳೆ ಭಾವುಕರಾದ ಮೋದಿ, ಅಳುತಡೆಯಲು ಪ್ರಯತ್ನಿಸಿದಂತೆ ಕಂಡು ಬಂದರು.

ಇದನ್ನೂ ಓದಿ: ‘56 ಇಂಚಿನ ಎದೆಯ ಧೈರ್ಯ ಎಂದರೆ ಇದೇನಾ?’- ಸಿದ್ದರಾಮಯ್ಯ ಆಕ್ರೋಶ

ಆದರೆ ನೆಟ್ಟಿಗರು ಪ್ರಧಾನಿಯನ್ನು ಟೀಕಿಸಿದ್ದು, ಇದನ್ನು ಮೊಸಲೆ ಕಣ್ಣೀರು ಎಂದಿದ್ದಾರೆ. ದೇಶದಲ್ಲಿ ಕೊರೊನಾ ಹೆಚ್ಚಿರುವಾಗ ಪಶ್ಚಿಮ ಬಂಗಾಳದ ಚುನಾವಣಾ ಪ್ರಚಾರಕ್ಕೆ ತೆರಳಿ, ‘ದೀದಿ ಓ ದೀದಿ’ ಎಂದವರು, ಕೊರೊನಾ ಹೆಚ್ಚಿದ್ದರೂ ಸಮಾವೇಶದಲ್ಲಿ ನೆರೆದ ಲಕ್ಷಾಂತರ ಜನರನ್ನು ನೋಡಿ ಖುಷಿ ಪಟ್ಟವರು ಇದೀಗ ಕೊರೊನಾ ಪ್ರಕರಣ ಇಳಿಮುಖವಾಗುತ್ತಿದ್ದಂತೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತದ ಚುನಾವಣಾ ಸಮೀಕ್ಷಾ ಸಂಸ್ಥೆ ಸಿವೊಟರ್ ಮೋದಿಯ ಜನಪ್ರಿಯತೆ ಒಂದು ವರ್ಷದಿಂದ ಸುಮಾರು 65% ರಿಂದ 37% ಕ್ಕೆ ಇಳಿದಿದೆ ಎಂದು ಕಂಡುಹಿಡಿದಿದೆ. ಈ ಮೊಸಳೆ ಕಣ್ಣೀರಿನಿಂದ ಅದನ್ನು ಹೆಚ್ಚಿಸಲು ಮೋದಿ ಬಯಸುತ್ತಿದ್ದಾರೆ ಎಂದು ಟ್ವಿಟರ್‌ ಬಳಕೆದಾದರಾದ @sk_traza98 ಅವರು ಹೇಳಿದ್ದಾರೆ.

ರಾಷ್ಟ್ರೀಯ ಟಿವಿಯಲ್ಲಿ ಭಾವುಕರಾವುದು 20 ದಿನಗಳ ಹಿಂದೆಯೆ ತಪ್ಪಿ ಹೋಗಿದೆಯೆ? ಎಂದು ನೀರಜ್ ಭಾಟಿಯ ಅವರು ಟ್ವೀಟ್ ಮಾಡಿದ್ದು, ದಿ ಟೆಲೆಗ್ರಾಫ್ ಪತ್ರಿಕೆಯ ಪೇಪರ್‌ ಕಟ್ಟಿಂಗ್‌ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಮೋದಿ ತನಗೆ ನೋವಾಗಿದೆ ಎಂದು ಹೇಳಿಕೊಂಡಿರುವ ಹೇಳಿಕೆಗೆ, ಟೆಲಿಗ್ರಾಫ್‌ ಪತ್ರಿಕೆಯು, ಇದನ್ನು ನೋವು ಎನ್ನುವುದಾದರೆ, ಸೋಂಕಿನಿಂದಾಗಿ ತಮ್ಮವರ ಕಳೆದುಕೊಂಡು ಅಳುತ್ತಿರುವ ಚಿತ್ರವನ್ನು ಹಾಕಿ ಈ ನೋವಿಗೆ ಏನನ್ನನ್ನುತ್ತೀರಿ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಬಿಕ್ಕಟ್ಟಿನ ಸಮಯದಲ್ಲಿ ಸರ್ಕಾರಗಳ ಮತ್ತು ಕೆಲವು ಮುಖಂಡರ ನಡೆ ಕೇಡುಗಾಲಕ್ಕೆ ಕುದುರೆ ಮೊಟ್ಟೆ ಇಟ್ಟಂತಿದೆ

ಕೊಳದಲ್ಲಿ ಚೆಂಡನ್ನು ತೆಗೆದುಕೊಳ್ಳಲು ಹೋದಾಗ ಆ ಮೊಸಳೆಯಿಂದ ಮಗು ನರೇಂದ್ರ ಅಳುವುದನ್ನು ಕಲಿತನು. ಮೊಸಳೆ ಕಣ್ಣೀರು, ನಾಟಕ ಎಂದು ಮೊಹಮ್ಮದ್‌ ಅಝರ್‌ ಅವರು ಟ್ವೀಟ್ ಮಾಡಿದ್ದಾರೆ. ನದಿಯಲ್ಲಿ ಶವ ತೇಲುತ್ತಿರುವಾಗ ಮೊಸಳೆಯೊಂದು ಅಳುತ್ತಿರುವುದನ್ನು ಫೋಟೋಗ್ರಾಫರುಗಳು ಕ್ಲಿಕ್ ಮಾಡುತ್ತಿರುವಂತೆ ಇರುವ ವ್ಯಂಗ್ಯ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ.

‘ಮುಗ್ಧ ಜನರ ರಕ್ತವನ್ನು ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ ಎಂದು ಜಾವೀದ್‌ ಟ್ವೀಟ್ ಮಾಡಿದ್ದಾರೆ.

ಜನರು ಸಾಯುತ್ತಿರುವಾಗ “ದೀದಿ ಒ ದೀದಿ” ಎಂದು ಜಪಿಸುವುದರಲ್ಲಿ ನಿರತರಾಗಿದ್ದ ಅದೇ ವ್ಯಕ್ತಿ ಈಗ ನಮ್ಮ ಸಹಾನುಭೂತಿಯನ್ನು ಪಡೆಯುತ್ತಿದ್ದಾನೆ? ಪಶ್ಚಾತ್ತಾಪ ಪಡುತ್ತಿರವುದು ತುಂಬಾ ತಡವಾಗಿದೆ ಎಂದು ಆನಂದ್ ಟ್ವೀಟ್ ಮಾಡಿದ್ದಾರೆ.

ಕೆಲವರು, ಮೋದಿಗೆ ನೌಟಂಕಿ ಮತ್ತು ನಾಟಕ ಮಾಡಿದ್ದಕ್ಕೆ ಆಸ್ಕರ್‌ ಕೊಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ವಿರುದ್ಧ ‘ಟೂಲ್‌ಕಿಟ್’ ಆರೋಪ ಸುಳ್ಳು: ಬಿಜೆಪಿಗೆ ಭಾರೀ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ 19 ವರ್ಷದವರಾಗಿದ್ದಾಗ ತಂದೆಯ ಮನೆ ಬಿಟ್ಟು ಓಡಿ ಗುಜರಾತಿ ನಾಟಕ ಕಂಪನಿ ಸೇರಿ ತಬಲಾ ವಾದಕ ಮತ್ತು ಜೂನಿಯರ್ ನಟರಾಗಿ 15 ವರ್ಷ ಕೆಲಸ ಮಾಡಿದ್ದಾರೆ. ಆ ನಾಟಕ ಕಂಪನಿಯ ದೀರ್ಘ ನಟನೆಯ ಅನುಭವ ಈಗ ಪ್ರಧಾನಿಯಾದ ಮೇಲೆ ಮೋದಿಗೆ ತುಂಬಾ ಉಪಯೋಗಕ್ಕೆ ಬರುತ್ತಿದೆ.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...