Homeಕರ್ನಾಟಕಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಮಕ್ಕಳಿಗಾಗಿಯೇ ಪುಸ್ತಕಗಳನ್ನು ಹೊರತರಲು ಸ್ಥಾಪಿತವಾಗಿರುವ ‘ಎಲ್ಲರ ಪುಸ್ತಕ’ ಪ್ರಕಾಶನ| ಮಕ್ಕಳ ದಿನಾಚರಣೆಯ ವಿಶೇಷ ವರದಿ

- Advertisement -
- Advertisement -

“ನನ್ನ ಮಗಳು ಸುರಗಿಗಾಗಿ ಕನ್ನಡದಲ್ಲಿ ಚಿತ್ರಪುಸ್ತಕಗಳನ್ನು ಹುಡುಕಲಾರಂಭಿಸಿದೆ. ಇಂಗ್ಲಿಷ್‌ನಲ್ಲಿ ಮಕ್ಕಳಿಗಾಗಿ ಚಿತ್ರ ಪುಸ್ತಕಗಳು ಸಿಗುತ್ತಿದ್ದವು. ಆದರೆ ಕನ್ನಡದಲ್ಲಿ ಇಲ್ಲದಿರುವುದನ್ನು ಗಮನಿಸಿದೆ. ನನ್ನ ಮಗಳಿಗಾಗಿ ಚಿತ್ರ ಪುಸ್ತಕವನ್ನು ಬರೆದೆ. ಇದೇ ಪುಸ್ತಕವನ್ನು ನನ್ನಲ್ಲಿ ಕಲಿಯುತ್ತಿದ್ದ ಮಕ್ಕಳಿಗೂ ತೋರಿಸಿದಾಗ ಆ ಮಕ್ಕಳು ಬಹಳ ಖುಷಿಪಡುತ್ತಿದ್ದರು. ಹೀಗಾಗಿ ಇಂತಹ ಪುಸ್ತಕಗಳನ್ನು ಹೊರತರಬೇಕೆಂದು ನಿರ್ಧರಿಸಿ, ‘ಎಲ್ಲರ ಪುಸ್ತಕ’ ಎಂಬ ಪ್ರಕಾಶನ ಆರಂಭಿಸಲಾಯಿತು” ಎನ್ನುತ್ತಾರೆ ಚಿತ್ರ ಕಲಾವಿದೆ, ಶಿಕ್ಷಕಿ ವನಿತಾ ಅಣ್ಣಯ್ಯ ಯಾಜಿ.

ಮೂಲತಃ ಹೊನ್ನಾವರದವರಾದ ವನಿತಾ ಯಾಜಿಯವರು ನೀನಾಸಂ ವಿದ್ಯಾರ್ಥಿಯೂ ಹೌದು.  ನೀನಾಸಂ ಮತ್ತು ಶಾಂತಿನಿಕೇತನದಲ್ಲಿ ಕಲೆ ಮತ್ತು ನಟನೆಯನ್ನು ಅಭ್ಯಾಸ ಮಾಡಿರುವ ಅವರು ತಮ್ಮ ಪತಿ ಕೈಲಾಶ್‌ ತಿಪಟೂರು ಅವರೊಂದಿಗೆ ಸೇರಿ ‘ಎಲ್ಲರ ಪುಸ್ತಕ’ ಎಂಬ ಪ್ರಕಾಶನವನ್ನು ಆರಂಭಿಸಿ ಮಕ್ಕಳಿಗಾಗಿ ಚಿತ್ರಪುಸ್ತಕಗಳನ್ನು ಹೊರತರುತ್ತಿದ್ದಾರೆ.

‘ಟೊಮೊಟೋ ಫಿಶ್‌’, ‘ಮೊದಲ ಓದು’, ‘ರುಚಿ’, ‘ನವಿಲೂರ ಸಂತೆ’, ‘ಏಕೆ ಬೇಕು ಕನ್ನಡ’, ‘ಬೀಜ’, ‘ಚಿಟ್ಟೆ’ ಎಂಬ ಚಿತ್ರಪುಸ್ತಕಗಳನ್ನು ಹೊರತರಲಾಗಿದ್ದು, ಅದರಲ್ಲಿ ‘ಚಿಟ್ಟೆ’ ಚಿತ್ರಪುಸ್ತಕವು ಮೂರನೇ ತರಗತಿಯ ಪುಟಾಣಿ ಕಾವೇರಿ ಬರೆದದ್ದಾಗಿದೆ. ಕಳೆದ ಮಾರ್ಚ್‌‌ನಲ್ಲಿ ಪ್ರಕಾಶನ ಆರಂಭವಾಗಿದ್ದು, ಹೊಸ ಪ್ರಯೋಗಗಳ ಮೂಲಕ ಮಕ್ಕಳ ಮನೋವಿಕಾಸಕ್ಕೆ ಪ್ರೋತ್ಸಾಹಿಸುತ್ತಿದೆ. ಡಿಜಿಟಲ್‌ ಕಲೆಯನ್ನು ಬಳಸದೆ ಕೈಯಲ್ಲೇ ಚಿತ್ರಗಳನ್ನು ಬರೆದು ಪ್ರಕಟಿಸುತ್ತಿರುವುದು ಮತ್ತೊಂದು ವಿಶೇಷ. ಮಕ್ಕಳಿಗೆ ಚಿತ್ರಕಲೆಯ ಮೂಲ ಪರಿಚಯವೂ ಆಗಬೇಕೆಂಬುದು ವನಿತಾ ದಂಪತಿಯ ಆಶಯ.

“ಚಿಟ್ಟೆ ಪುಸ್ತಕದ ಕರ್ತೃ ಕಾವೇರಿ, ಪೂರ್ಣ ಶಾಲೆಯಲ್ಲಿ ನನ್ನ ವಿದ್ಯಾರ್ಥಿ ಆಗಿದ್ದಳು. ಪುಟ್ಟ ಮಕ್ಕಳಿಗೆ ಪೇಪರ್, ಪೇಂಟ್ ಕೊಟ್ಟು ಇಷ್ಟಪಟ್ಟದ್ದನ್ನು ಚಿತ್ರಿಸಲು ಬಿಡುತ್ತಿದ್ದೆವು. ಏಳು ವರ್ಷದ ಮಗು ಕಾವೇರಿ ಮೂವತ್ತು ನಿಮಿಷಗಳ ತರಗತಿಯಲ್ಲಿ 15ರಿಂದ 20 ಪೇಂಟಿಂಗ್ ಮಾಡಿರುತ್ತಿದ್ದಳು. ಕಾವೇರಿಗೆ 8 ವರ್ಷವಾಗುವ ಹೊತ್ತಿಗೆ ಹೆಚ್ಚು ನಿಖರವಾಗಿ ಪೇಂಟಿಂಗ್ ಮಾಡಿ, ವಸ್ತು ವಿಷಯವನ್ನು ಒಳಗೊಂಡು ಚಿತ್ರಿಸಲು ಶುರುಮಾಡಿದಳು. ಈ ಪುಸ್ತಕ ಆಕೆ ಮೂರನೇ ತರಗತಿಯಲ್ಲಿದ್ದಾಗ ಚಿತ್ರಿಸಿದ್ದು” ಎನ್ನುತ್ತಾರೆ ವನಿತಾ ಯಾಜಿ.

ಇದನ್ನೂ ಓದಿರಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಆನ್‌ಲೈನ್‌ ಮೂಲಕ ಮಕ್ಕಳಿಗೆ ತರಗತಿಗಳನ್ನು ವನಿತಾ ನಡೆಸಿಕೊಡುತ್ತಿದ್ದಾರೆ. ಕೇರಳಾ, ದೆಹಲಿಯ ಮಕ್ಕಳೂ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇವರ ಚಿತ್ರಪುಸ್ತಕ ಪ್ರಯೋಗಕ್ಕೆ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ. ಈವರೆಗೆ ನಾಲ್ಕು ಪುಸ್ತಕಗಳನ್ನು ಹೊರತಂದಿದ್ದು, ಮಕ್ಕಳ ದಿನಾಚರಣೆಯಂದು (ಭಾನುವಾರ, ನವೆಂಬರ್‌‌ 14, 2021) ಮತ್ತೆ ಮೂರು ಪುಸ್ತಕಗಳನ್ನು ಎಲ್ಲರ ಪುಸ್ತಕ ಪ್ರಕಾಶನ ಪ್ರಕಟಿಸಿದೆ.

‘ಏಕೆ ಬೇಕು ಕನ್ನಡ!?’ ಪುಸ್ತಕವು ಕನ್ನಡ ಭಾಷೆಯ ಬೆಡಗು, ಕರ್ನಾಟಕದ ವೈವಿಧ್ಯತೆಯನ್ನು ಸರಳವಾಗಿ ಮಕ್ಕಳಿಗೆ ಪರಿಚಯಿಸುವ ಪುಸ್ತಕವಾಗಿದೆ. ‘ಟೊಮಾಟೊ ಫಿಶ್’ ಪ್ರಕಾಶನದ ಮೊದಲ ಕತೆ-ಚಿತ್ರ ಪುಸ್ತಕ. ‘ಚಿಟ್ಟೆ’ ಮಕ್ಕಳಲ್ಲಿ ಕಥೆಕಟ್ಟುವ, ಚಿತ್ರ ಬರೆಯುವ ಕೌಶಲವನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರಕಟವಾದ ಪುಸ್ತಕ.

“ನಮ್ಮ ಮೊದಲ ಎರಡು ಪುಸ್ತಕಗಳಿಂದಲೂ ಈವರೆಗೆ ಹೊಸತನ, ಗುಣಮಟ್ಟವನ್ನು ಹೆಚ್ಚಿಸಲು ಪರಿಶ್ರಮ ಪಡುತ್ತಿದ್ದೇವೆ. ನಮ್ಮ ಪುಸ್ತಕಗಳ ಪುಟವಿನ್ಯಾಸ ಮಾಡುತ್ತಿರುವ ಮನೋಜ್ ಹಾಗೂ ಎಲ್ಲಾ ಮುದ್ರಕರ ಶ್ರಮವನ್ನು ನಾವು ಇಲ್ಲಿ ನೆನೆಯಬಯಸುತ್ತೇವೆ. ಪ್ರಕಾಶನ ಪ್ರಾರಂಭವಾದ ಮೇಲೆ ನಮ್ಮ ಕಪಾಟಿನಲ್ಲಿ ಪುಸ್ತಕಗಳು ದ್ವಿಗುಣಗೊಂಡಿವೆ. ಹಲವು ಪ್ರಕಾಶಕರ ಅದ್ಭುತ ಪುಸ್ತಕಗಳು ನಮ್ಮನ್ನು ಬೆರಗುಗೊಳಿಸಿವೆ. ಕನ್ನಡದಲ್ಲಿ ಇಂಥ ಹತ್ತಾರು ಪುಸ್ತಕಗಳನ್ನು ರೂಪಿಸಬೇಕು ಎಂಬ ಉತ್ಸಾಹಕ್ಕೆ ಸ್ಫೂರ್ತಿ ನೀಡಿವೆ. ಇದರ ಫಲವಾಗಿ ಈ ಸಲದ ನಮ್ಮ ಪುಸ್ತಕಗಳು ಸುಂದರವಾಗಿ ಮೂಡಿಬಂದಿವೆ” ಎಂಬುದು ವನಿತಾ ದಂಪತಿಯ ಸಂತೃಪ್ತಿ.

ಮಕ್ಕಳಿಗಾಗಿ ಚಿತ್ರಪುಸ್ತಕಗಳನ್ನು ಪ್ರಕಟಿಸುತ್ತಿರುವ ವನಿತಾ ಯಾಜಿ, ಕೈಲಾಶ್‌ ತಿಪಟೂರು ಅವರು ತಮ್ಮ ಮಗು ಸುರಗಿಯೊಂದಿಗೆ.

“ಭಾಷೆಗೆ ಮೊದಲು ಮನುಷ್ಯ ಸಂವಹನಕ್ಕಾಗಿ ಚಿತ್ರಗಳನ್ನು ಬಿಡಿಸುತ್ತಿದ್ದ. ಬೇಟೆಯ ಸೊಗಸನ್ನು, ರೋಚಕತೆಯನ್ನು ಅಭಿನಯಿಸಿ ತೋರಿಸುತ್ತಿದ್ದ, ಚಪ್ಪಾಳೆ ಗಿಟ್ಟಿಸುತ್ತಿದ್ದ. ಪುರಾತನ ನಾಗರಿಕತೆಗಳ ಪುರಾವೆಯಂತೆ ಭೂಮಿಯ ತುಂಬ ಹಲವು ಚಿತ್ರ, ನಕಾಶೆಗಳು ಉಳಿದು ಹೋಗಿವೆ. ಚಿತ್ರ ಬರೆಯುವುದು ಆಡುವುದಕ್ಕೆ ಮೊದಲು ಮನುಷ್ಯ ಕಂಡುಕೊಂಡ ಅಭಿವ್ಯಕ್ತಿ. ಇಂದಿಗೆ ಚಿತ್ರಕಲೆಯನ್ನು ಆಡಲಾಗದ ಭಾವಗಳ ಅಭಿವ್ಯಕ್ತಿಗೆ ಬಳಸಿ ಚಿಕಿತ್ಸೆ ನೀಡುವುದಿದೆ. ಸಂತೋಷಕ್ಕೆ, ಏಕಾಗ್ರತೆಗೆ, ಕಾಲ ಕಳೆಯಲು, ಮಕ್ಕಳ ಬೆರಳುಗಳ ಸರಾಗ ಚಲನೆಗೆ, ಏನೂ ಕಾರಣವೇ ಇಲ್ಲದೆ ಚಿತ್ರ ಬರೆಯುವುದು ಎಲ್ಲಾ ವಯಸ್ಸಿನವರಿಗೂ ಅಚ್ಚು ಮೆಚ್ಚು. ಪ್ರತಿಯೊಬ್ಬ ವ್ಯಕ್ತಿಯೂ ಕಲಾವಿದನೇ. ಸರಿಯಾದ ಮಾರ್ಗದರ್ಶನವಿಲ್ಲದೆ, ಮುಜುಗರಕ್ಕೆ ಒಳಗಾಗಿ, ಬರೀ ಕೌಶಲವನ್ನು ಕಲೆಯೆಂದು ತಪ್ಪು ಗ್ರಹಿಸಿ ಚಿತ್ರಿಸುವುದ ಬಿಟ್ಟಿರುವ ಬಹುತೇಕ ಮಂದಿ ತಮ್ಮಗನಿಸಿದ್ದನ್ನು, ತಮ್ಮತನವನ್ನು ಚಿತ್ರಿಸಿದರೆ ನಿರಾಳವಾಗಿ ಬಿಡುತ್ತಾರೆ” ಎಂದು ಚಿತ್ರಕಲೆಯ ಮಹತ್ವವನ್ನು ವಿವರಿಸುತ್ತಾರೆ ವನಿತಾ ಯಾಜಿ.

(‘ಎಲ್ಲರ ಪುಸ್ತಕ’ ಪ್ರಕಾಶನದ ಚಿತ್ರಪುಸ್ತಕಗಳಿಗಾಗಿ ಮೊ.ಸಂ. 9141184535, ಇಮೇಲ್‌- [email protected] ಸಂಪರ್ಕಿಸಬಹುದು)


ಇದನ್ನೂ ಓದಿರಿ: ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...