Homeಕರ್ನಾಟಕಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಮಕ್ಕಳ ಮನೋವಿಕಾಸಕ್ಕಾಗಿಯೇ ಸ್ಥಾಪಿತವಾದ ‘ಎಲ್ಲರ ಪುಸ್ತಕ’ ಪ್ರಕಾಶನದಿಂದ ವಿನೂತನ ಪ್ರಯೋಗ

ಮಕ್ಕಳಿಗಾಗಿಯೇ ಪುಸ್ತಕಗಳನ್ನು ಹೊರತರಲು ಸ್ಥಾಪಿತವಾಗಿರುವ ‘ಎಲ್ಲರ ಪುಸ್ತಕ’ ಪ್ರಕಾಶನ| ಮಕ್ಕಳ ದಿನಾಚರಣೆಯ ವಿಶೇಷ ವರದಿ

- Advertisement -
- Advertisement -

“ನನ್ನ ಮಗಳು ಸುರಗಿಗಾಗಿ ಕನ್ನಡದಲ್ಲಿ ಚಿತ್ರಪುಸ್ತಕಗಳನ್ನು ಹುಡುಕಲಾರಂಭಿಸಿದೆ. ಇಂಗ್ಲಿಷ್‌ನಲ್ಲಿ ಮಕ್ಕಳಿಗಾಗಿ ಚಿತ್ರ ಪುಸ್ತಕಗಳು ಸಿಗುತ್ತಿದ್ದವು. ಆದರೆ ಕನ್ನಡದಲ್ಲಿ ಇಲ್ಲದಿರುವುದನ್ನು ಗಮನಿಸಿದೆ. ನನ್ನ ಮಗಳಿಗಾಗಿ ಚಿತ್ರ ಪುಸ್ತಕವನ್ನು ಬರೆದೆ. ಇದೇ ಪುಸ್ತಕವನ್ನು ನನ್ನಲ್ಲಿ ಕಲಿಯುತ್ತಿದ್ದ ಮಕ್ಕಳಿಗೂ ತೋರಿಸಿದಾಗ ಆ ಮಕ್ಕಳು ಬಹಳ ಖುಷಿಪಡುತ್ತಿದ್ದರು. ಹೀಗಾಗಿ ಇಂತಹ ಪುಸ್ತಕಗಳನ್ನು ಹೊರತರಬೇಕೆಂದು ನಿರ್ಧರಿಸಿ, ‘ಎಲ್ಲರ ಪುಸ್ತಕ’ ಎಂಬ ಪ್ರಕಾಶನ ಆರಂಭಿಸಲಾಯಿತು” ಎನ್ನುತ್ತಾರೆ ಚಿತ್ರ ಕಲಾವಿದೆ, ಶಿಕ್ಷಕಿ ವನಿತಾ ಅಣ್ಣಯ್ಯ ಯಾಜಿ.

ಮೂಲತಃ ಹೊನ್ನಾವರದವರಾದ ವನಿತಾ ಯಾಜಿಯವರು ನೀನಾಸಂ ವಿದ್ಯಾರ್ಥಿಯೂ ಹೌದು.  ನೀನಾಸಂ ಮತ್ತು ಶಾಂತಿನಿಕೇತನದಲ್ಲಿ ಕಲೆ ಮತ್ತು ನಟನೆಯನ್ನು ಅಭ್ಯಾಸ ಮಾಡಿರುವ ಅವರು ತಮ್ಮ ಪತಿ ಕೈಲಾಶ್‌ ತಿಪಟೂರು ಅವರೊಂದಿಗೆ ಸೇರಿ ‘ಎಲ್ಲರ ಪುಸ್ತಕ’ ಎಂಬ ಪ್ರಕಾಶನವನ್ನು ಆರಂಭಿಸಿ ಮಕ್ಕಳಿಗಾಗಿ ಚಿತ್ರಪುಸ್ತಕಗಳನ್ನು ಹೊರತರುತ್ತಿದ್ದಾರೆ.

‘ಟೊಮೊಟೋ ಫಿಶ್‌’, ‘ಮೊದಲ ಓದು’, ‘ರುಚಿ’, ‘ನವಿಲೂರ ಸಂತೆ’, ‘ಏಕೆ ಬೇಕು ಕನ್ನಡ’, ‘ಬೀಜ’, ‘ಚಿಟ್ಟೆ’ ಎಂಬ ಚಿತ್ರಪುಸ್ತಕಗಳನ್ನು ಹೊರತರಲಾಗಿದ್ದು, ಅದರಲ್ಲಿ ‘ಚಿಟ್ಟೆ’ ಚಿತ್ರಪುಸ್ತಕವು ಮೂರನೇ ತರಗತಿಯ ಪುಟಾಣಿ ಕಾವೇರಿ ಬರೆದದ್ದಾಗಿದೆ. ಕಳೆದ ಮಾರ್ಚ್‌‌ನಲ್ಲಿ ಪ್ರಕಾಶನ ಆರಂಭವಾಗಿದ್ದು, ಹೊಸ ಪ್ರಯೋಗಗಳ ಮೂಲಕ ಮಕ್ಕಳ ಮನೋವಿಕಾಸಕ್ಕೆ ಪ್ರೋತ್ಸಾಹಿಸುತ್ತಿದೆ. ಡಿಜಿಟಲ್‌ ಕಲೆಯನ್ನು ಬಳಸದೆ ಕೈಯಲ್ಲೇ ಚಿತ್ರಗಳನ್ನು ಬರೆದು ಪ್ರಕಟಿಸುತ್ತಿರುವುದು ಮತ್ತೊಂದು ವಿಶೇಷ. ಮಕ್ಕಳಿಗೆ ಚಿತ್ರಕಲೆಯ ಮೂಲ ಪರಿಚಯವೂ ಆಗಬೇಕೆಂಬುದು ವನಿತಾ ದಂಪತಿಯ ಆಶಯ.

“ಚಿಟ್ಟೆ ಪುಸ್ತಕದ ಕರ್ತೃ ಕಾವೇರಿ, ಪೂರ್ಣ ಶಾಲೆಯಲ್ಲಿ ನನ್ನ ವಿದ್ಯಾರ್ಥಿ ಆಗಿದ್ದಳು. ಪುಟ್ಟ ಮಕ್ಕಳಿಗೆ ಪೇಪರ್, ಪೇಂಟ್ ಕೊಟ್ಟು ಇಷ್ಟಪಟ್ಟದ್ದನ್ನು ಚಿತ್ರಿಸಲು ಬಿಡುತ್ತಿದ್ದೆವು. ಏಳು ವರ್ಷದ ಮಗು ಕಾವೇರಿ ಮೂವತ್ತು ನಿಮಿಷಗಳ ತರಗತಿಯಲ್ಲಿ 15ರಿಂದ 20 ಪೇಂಟಿಂಗ್ ಮಾಡಿರುತ್ತಿದ್ದಳು. ಕಾವೇರಿಗೆ 8 ವರ್ಷವಾಗುವ ಹೊತ್ತಿಗೆ ಹೆಚ್ಚು ನಿಖರವಾಗಿ ಪೇಂಟಿಂಗ್ ಮಾಡಿ, ವಸ್ತು ವಿಷಯವನ್ನು ಒಳಗೊಂಡು ಚಿತ್ರಿಸಲು ಶುರುಮಾಡಿದಳು. ಈ ಪುಸ್ತಕ ಆಕೆ ಮೂರನೇ ತರಗತಿಯಲ್ಲಿದ್ದಾಗ ಚಿತ್ರಿಸಿದ್ದು” ಎನ್ನುತ್ತಾರೆ ವನಿತಾ ಯಾಜಿ.

ಇದನ್ನೂ ಓದಿರಿ: ಲಾಠಿ ಹಿಡಿದ ಪ್ರಧಾನಿ ನೆಹರೂ ಹಿಂಸಾನಿರತ ಗುಂಪು ಚದುರಿಸಿದ್ದನ್ನು ಮರೆಯಲಾಗದು: ಅಡ್ಮಿರಲ್ ರಾಮದಾಸ್

ಆನ್‌ಲೈನ್‌ ಮೂಲಕ ಮಕ್ಕಳಿಗೆ ತರಗತಿಗಳನ್ನು ವನಿತಾ ನಡೆಸಿಕೊಡುತ್ತಿದ್ದಾರೆ. ಕೇರಳಾ, ದೆಹಲಿಯ ಮಕ್ಕಳೂ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಇವರ ಚಿತ್ರಪುಸ್ತಕ ಪ್ರಯೋಗಕ್ಕೆ ಉತ್ತಮ ಪ್ರತಿಕ್ರಿಯೆಗಳೂ ವ್ಯಕ್ತವಾಗುತ್ತಿವೆ. ಈವರೆಗೆ ನಾಲ್ಕು ಪುಸ್ತಕಗಳನ್ನು ಹೊರತಂದಿದ್ದು, ಮಕ್ಕಳ ದಿನಾಚರಣೆಯಂದು (ಭಾನುವಾರ, ನವೆಂಬರ್‌‌ 14, 2021) ಮತ್ತೆ ಮೂರು ಪುಸ್ತಕಗಳನ್ನು ಎಲ್ಲರ ಪುಸ್ತಕ ಪ್ರಕಾಶನ ಪ್ರಕಟಿಸಿದೆ.

‘ಏಕೆ ಬೇಕು ಕನ್ನಡ!?’ ಪುಸ್ತಕವು ಕನ್ನಡ ಭಾಷೆಯ ಬೆಡಗು, ಕರ್ನಾಟಕದ ವೈವಿಧ್ಯತೆಯನ್ನು ಸರಳವಾಗಿ ಮಕ್ಕಳಿಗೆ ಪರಿಚಯಿಸುವ ಪುಸ್ತಕವಾಗಿದೆ. ‘ಟೊಮಾಟೊ ಫಿಶ್’ ಪ್ರಕಾಶನದ ಮೊದಲ ಕತೆ-ಚಿತ್ರ ಪುಸ್ತಕ. ‘ಚಿಟ್ಟೆ’ ಮಕ್ಕಳಲ್ಲಿ ಕಥೆಕಟ್ಟುವ, ಚಿತ್ರ ಬರೆಯುವ ಕೌಶಲವನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರಕಟವಾದ ಪುಸ್ತಕ.

“ನಮ್ಮ ಮೊದಲ ಎರಡು ಪುಸ್ತಕಗಳಿಂದಲೂ ಈವರೆಗೆ ಹೊಸತನ, ಗುಣಮಟ್ಟವನ್ನು ಹೆಚ್ಚಿಸಲು ಪರಿಶ್ರಮ ಪಡುತ್ತಿದ್ದೇವೆ. ನಮ್ಮ ಪುಸ್ತಕಗಳ ಪುಟವಿನ್ಯಾಸ ಮಾಡುತ್ತಿರುವ ಮನೋಜ್ ಹಾಗೂ ಎಲ್ಲಾ ಮುದ್ರಕರ ಶ್ರಮವನ್ನು ನಾವು ಇಲ್ಲಿ ನೆನೆಯಬಯಸುತ್ತೇವೆ. ಪ್ರಕಾಶನ ಪ್ರಾರಂಭವಾದ ಮೇಲೆ ನಮ್ಮ ಕಪಾಟಿನಲ್ಲಿ ಪುಸ್ತಕಗಳು ದ್ವಿಗುಣಗೊಂಡಿವೆ. ಹಲವು ಪ್ರಕಾಶಕರ ಅದ್ಭುತ ಪುಸ್ತಕಗಳು ನಮ್ಮನ್ನು ಬೆರಗುಗೊಳಿಸಿವೆ. ಕನ್ನಡದಲ್ಲಿ ಇಂಥ ಹತ್ತಾರು ಪುಸ್ತಕಗಳನ್ನು ರೂಪಿಸಬೇಕು ಎಂಬ ಉತ್ಸಾಹಕ್ಕೆ ಸ್ಫೂರ್ತಿ ನೀಡಿವೆ. ಇದರ ಫಲವಾಗಿ ಈ ಸಲದ ನಮ್ಮ ಪುಸ್ತಕಗಳು ಸುಂದರವಾಗಿ ಮೂಡಿಬಂದಿವೆ” ಎಂಬುದು ವನಿತಾ ದಂಪತಿಯ ಸಂತೃಪ್ತಿ.

ಮಕ್ಕಳಿಗಾಗಿ ಚಿತ್ರಪುಸ್ತಕಗಳನ್ನು ಪ್ರಕಟಿಸುತ್ತಿರುವ ವನಿತಾ ಯಾಜಿ, ಕೈಲಾಶ್‌ ತಿಪಟೂರು ಅವರು ತಮ್ಮ ಮಗು ಸುರಗಿಯೊಂದಿಗೆ.

“ಭಾಷೆಗೆ ಮೊದಲು ಮನುಷ್ಯ ಸಂವಹನಕ್ಕಾಗಿ ಚಿತ್ರಗಳನ್ನು ಬಿಡಿಸುತ್ತಿದ್ದ. ಬೇಟೆಯ ಸೊಗಸನ್ನು, ರೋಚಕತೆಯನ್ನು ಅಭಿನಯಿಸಿ ತೋರಿಸುತ್ತಿದ್ದ, ಚಪ್ಪಾಳೆ ಗಿಟ್ಟಿಸುತ್ತಿದ್ದ. ಪುರಾತನ ನಾಗರಿಕತೆಗಳ ಪುರಾವೆಯಂತೆ ಭೂಮಿಯ ತುಂಬ ಹಲವು ಚಿತ್ರ, ನಕಾಶೆಗಳು ಉಳಿದು ಹೋಗಿವೆ. ಚಿತ್ರ ಬರೆಯುವುದು ಆಡುವುದಕ್ಕೆ ಮೊದಲು ಮನುಷ್ಯ ಕಂಡುಕೊಂಡ ಅಭಿವ್ಯಕ್ತಿ. ಇಂದಿಗೆ ಚಿತ್ರಕಲೆಯನ್ನು ಆಡಲಾಗದ ಭಾವಗಳ ಅಭಿವ್ಯಕ್ತಿಗೆ ಬಳಸಿ ಚಿಕಿತ್ಸೆ ನೀಡುವುದಿದೆ. ಸಂತೋಷಕ್ಕೆ, ಏಕಾಗ್ರತೆಗೆ, ಕಾಲ ಕಳೆಯಲು, ಮಕ್ಕಳ ಬೆರಳುಗಳ ಸರಾಗ ಚಲನೆಗೆ, ಏನೂ ಕಾರಣವೇ ಇಲ್ಲದೆ ಚಿತ್ರ ಬರೆಯುವುದು ಎಲ್ಲಾ ವಯಸ್ಸಿನವರಿಗೂ ಅಚ್ಚು ಮೆಚ್ಚು. ಪ್ರತಿಯೊಬ್ಬ ವ್ಯಕ್ತಿಯೂ ಕಲಾವಿದನೇ. ಸರಿಯಾದ ಮಾರ್ಗದರ್ಶನವಿಲ್ಲದೆ, ಮುಜುಗರಕ್ಕೆ ಒಳಗಾಗಿ, ಬರೀ ಕೌಶಲವನ್ನು ಕಲೆಯೆಂದು ತಪ್ಪು ಗ್ರಹಿಸಿ ಚಿತ್ರಿಸುವುದ ಬಿಟ್ಟಿರುವ ಬಹುತೇಕ ಮಂದಿ ತಮ್ಮಗನಿಸಿದ್ದನ್ನು, ತಮ್ಮತನವನ್ನು ಚಿತ್ರಿಸಿದರೆ ನಿರಾಳವಾಗಿ ಬಿಡುತ್ತಾರೆ” ಎಂದು ಚಿತ್ರಕಲೆಯ ಮಹತ್ವವನ್ನು ವಿವರಿಸುತ್ತಾರೆ ವನಿತಾ ಯಾಜಿ.

(‘ಎಲ್ಲರ ಪುಸ್ತಕ’ ಪ್ರಕಾಶನದ ಚಿತ್ರಪುಸ್ತಕಗಳಿಗಾಗಿ ಮೊ.ಸಂ. 9141184535, ಇಮೇಲ್‌- [email protected] ಸಂಪರ್ಕಿಸಬಹುದು)


ಇದನ್ನೂ ಓದಿರಿ: ಕಿತ್ತೂರು ಕರ್ನಾಟಕಕ್ಕೆ ಉತ್ತರ ಕನ್ನಡ ಸೇರ್ಪಡೆ; ಜಿಲ್ಲೆಯಲ್ಲಿ ಗೊಂದಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...